Homeಮುಖಪುಟ‘ನಮ್ಮದು ಕೊರೊನಾ ವಿರೋಧಿ ಸರ್ಕಾರವೇ ಹೊರತು, ಹಿಂದೂ ವಿರೋಧಿಯಲ್ಲ’ - BJP ಗೆ ತಿರುಗೇಟು ನೀಡಿದ...

‘ನಮ್ಮದು ಕೊರೊನಾ ವಿರೋಧಿ ಸರ್ಕಾರವೇ ಹೊರತು, ಹಿಂದೂ ವಿರೋಧಿಯಲ್ಲ’ – BJP ಗೆ ತಿರುಗೇಟು ನೀಡಿದ ಉದ್ದವ್‌ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೊನಾ ಮೂರನೆ ಅಲೆಯ ಆತಂಕದ ನಡುವೆ, ಬಿಜೆಪಿ ಮತ್ತು ರಾಜ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವನಿರ್ಮಾಣ ಸೇನೆ, ‘‘ದೇವಸ್ಥಾನಗಳನ್ನು ಪುನಃ ತೆರೆಯುವಂತೆ ಮತ್ತು ‘ದಹಿ ಹಂಡಿ’ ಉತ್ಸವ”ಗಳಿಗೆ ಅನುಮತಿ ನೀಡುವಂತೆ ಅಭಿಯಾನ ನಡೆಸುತ್ತಿದೆ. ಇದರ ವಿರುದ್ದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದು, ‘‘ನಾವು ಹಿಂದೂ ವಿರೋಧಿಗಳಲ್ಲ, ಕೊರೊನಾ ವಿರೋಧಿಗಳು” ಎಂದು ಹೇಳಿದ್ದಾರೆ.

“ಇದು ಸ್ವಾತಂತ್ರ್ಯ ಹೋರಾಟವಲ್ಲ … ಕೆಲವರು ದಹಿ ಹಂಡಿ ಉತ್ಸವಗಳನ್ನು ಸಂಘಟಿಸಿ ಹೀರೋಗಳಾಗಲು ಪ್ರಯತ್ನಿಸುತ್ತಿದ್ದಾರೆ. ನೀವು ಹೋರಾಡಲು ಬಯಸಿದರೆ, ಕೊರೊನಾ ವಿರುದ್ಧ ಹೋರಾಡಿ” ಎಂದು ಉದ್ದವ್‌ ಠಾಕ್ರೆ ಮಂಗಳವಾರ ಥಾಣೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕದ ಆನ್‌ಲೈನ್‌ ಉದ್ಘಾಟನಾ ಸಮಾರಂಭದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮತ್ತೆ ಹೊಂದಾಣಿಕೆಗೆ ಪ್ರಯತ್ನಿಸುತ್ತಿದೆ: ಶಿವಸೇನೆಯ ಹಿರಿಯ ನಾಯಕ

“ಅವರು ನಮ್ಮನ್ನು ‘ಹಿಂದೂ ವಿರೋಧಿ ಸರ್ಕಾರ’ ಎಂದು ಕರೆಯುತ್ತಾರೆ…ಇದು ಮುಂದುವರೆಯಬಾರದು. ನಾನು ಅವರಿಗೆ ಒಕ್ಕೂಟ ಸರ್ಕಾರದ ಪತ್ರವನ್ನು ತೋರಿಸಲು ಬಯಸುತ್ತೇನೆ. ಪತ್ರದಲ್ಲಿ ಅವರು ದಹಿ ಹಂಡಿ ಮತ್ತು ಗಣೇಶ ಉತ್ಸವದ ಸಮಯದಲ್ಲಿ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಹೇಳಿದ್ದಾರೆ… ಹಾಗಾದರೆ ಅವರು ಯಾರು” ಎಂದು ಅವರು ಪ್ರಶ್ನಿಸಿದ್ದಾರೆ.

“ನಮ್ಮ ಸರ್ಕಾರ ಕೊರೊನಾ ವಿರೋಧಿಯೆ ಹೊರತು, ಯಾವುದೇ ಧರ್ಮದ ವಿರೋಧಿಯಲ್ಲ. ಅದಕ್ಕಾಗಿಯೇ, ಹೋರಾಟ ಮಾಡಲು ಬಯಸುವವರು ವೈರಸ್ ವಿರುದ್ಧ ಹೋರಾಡಿ ನಾನು ಹೇಳಲು ಬಯಸುತ್ತೇವೆ… ಆಮ್ಲಜನಕ ಉತ್ಪಾದನಾ ಘಟಕ ಹೆಚ್ಚಿಸುವ ಬಗ್ಗೆ ಖಚಿತಪಡಿಸುತ್ತೇನೆ. ಆದರೆ ಬಿಜೆಪಿಗೆ ಇವುಗಳ ಬಗ್ಗೆ ಇಚ್ಛೆಯಾಗಲಿ ಅಥವಾ ಉದ್ದೇಶವಾಗಲಿ ಇಲ್ಲ, ಅವರು ಬೀದಿಗಿಳಿದು ಗೊಂದಲ ಸೃಷ್ಟಿಸಲು ಮಾತ್ರ ಬಯಸುತ್ತಾರೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

‘ಕನ್ನಡಿಗರು ನಿಮ್ಮ ಗುಲಾಮರಲ್ಲ, ಸ್ವಾಭಿಮಾನಿಗಳು’- ಹಿಂದಿ ಬ್ಯಾನರ್‌ಗೆ ಮಸಿ ಬಳಿದ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ 

ಒಂದು ದಿನದ ಹಿಂದಯಷ್ಟೇ, ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ತಮ್ಮ ಪಕ್ಷದ ಕಾರ್ಯಕರ್ತರಿಗೆ ಕೋವಿಡ್‌‌ ನಿರ್ಬಂಧಗಳನ್ನು ಧಿಕ್ಕರಿಸಿ ಉತ್ಸವಗಳನ್ನು ಆಚರಿಸಲು ನಿರ್ದೇಶನ ನೀಡಿದ್ದಾರೆ.

ಸೋಮವಾರದಂದು, ಬೀದಿಗಿಳಿದು ಹೋರಾಟ ಮಾಡಿದ್ದ ಬಿಜೆಪಿ ದೇವಸ್ಥಾನಗಳನ್ನು ಪುನಃ ತೆರೆಯಬೇಕು ಮತ್ತು ದಹಿ ಹಂಡಿ ಉತ್ಸವಗಳನ್ನು ಆಚರಿಸಲು ಅನುಮತಿಸಬೇಕು ಎಂದು ಒತ್ತಾಯಿಸಿದೆ. ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ದಹಿ ಹಂಡಿ ಆಯೋಜಿಸುವಲ್ಲಿ ನಿರತರಾಗಿದ್ದ ನವನಿರ್ಮಾಣ ಸೇನೆಯ ನಾಯಕ ಬಾಲ ನಂದಗಾಂವ್ಕರ್ ಅವರನ್ನು ಸೆಂಟ್ರಲ್ ಮುಂಬೈನಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ನಿರ್ದಿಷ್ಟವಾಗಿ ಈ ಸಮಯದಲ್ಲಿ, ದಹಿ ಹಂಡಿ ಮತ್ತು ಗಣಪತಿ ಹಬ್ಬಗಳನ್ನು ಒಳಗೊಂಡಂತೆ ನಿರ್ಬಂಧಗಳನ್ನು ಜಾರಿಗೊಳಿಸಬೇಕು ಎಂದು ಸಲಹೆ ನೀಡಿದ್ದರು.

ಸಾಂಕ್ರಮಿಕವನ್ನು ಅನ್ನು ನಿಯಂತ್ರಣಕ್ಕೆ ತರುವವರೆಗೂ ಮಹಾರಾಷ್ಟ್ರ ಭಾರತದ ಕೊರೊನಾದ ಕೇಂದ್ರಬಿಂದುವಾಗಿತ್ತು. ರಾಜ್ಯದಲ್ಲಿ ಸುಮಾರು 55,000 ಸಕ್ರಿಯ ಕೊರೊನಾ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು ಕೊರೊನಾ ಮೂರನೆಯ ಅಲೆ ಅಪ್ಪಳಿಸಬಹುದು ಎಂದು ತಜ್ಞರು ಎಚ್ಚರಿಕೆ ನೀಡುವುದರೊಂದಿಗೆ, ರಾಜ್ಯದಲ್ಲಿ ಮತ್ತೊಮ್ಮೆ ಆತಂಕ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಒಕ್ಕೂಟ ಸರ್ಕಾರದ ಆರೋಗ್ಯ ಸಚಿವಾಲಯ ಪತ್ರ ಬರೆದಿತ್ತು. ಪ್ರಸ್ತುತ ದೇಶದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣವಿರುವ ಕೇರಳದಲ್ಲಿ ಹಬ್ಬಗಳ ಆಚರಣೆಯ ನಂತರ ಏರಿಕೆ ಕಂಡಿತ್ತು.

ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿನ ‘ಅದಾನಿ ಏರ್‌ಪೋರ್ಟ್’ ಬೋರ್ಡ್‌ಗಳನ್ನು ಕಿತ್ತೆಸೆದ ಶಿವಸೇನೆ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....