Homeಮುಖಪುಟ'ಮಕ್ಕಳಾಟ ಆಡುವವರನ್ನು ಮನೆಗೆ ಕಳಿಸುವುದು ನಿಶ್ಚಿತ..'; ತೇಜಸ್ವಿ ಸೂರ್ಯನನ್ನು 'ಎಳೆಕೂಸು' ಎಂದ ಕಾಂಗ್ರೆಸ್

‘ಮಕ್ಕಳಾಟ ಆಡುವವರನ್ನು ಮನೆಗೆ ಕಳಿಸುವುದು ನಿಶ್ಚಿತ..’; ತೇಜಸ್ವಿ ಸೂರ್ಯನನ್ನು ‘ಎಳೆಕೂಸು’ ಎಂದ ಕಾಂಗ್ರೆಸ್

- Advertisement -
- Advertisement -

ನಗರ್ತಪೇಟೆ ಅಂಗಡಿ ಗಲಾಟೆ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಎಳೆ ಕೂಸು ಎಂದು ಬಿಜೆಪಿ ಸಂಸದ್ನ್ನು ಲೇವಡಿ ಮಾಡಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ‘ಈ ತೇಜಥೆಸ್ವಿ ಸೂರ್ಯ ಎಂಬ ಎಳೆ ಕೂಸಿನಂತಹ ಸಂಸದ, ಕೋವಿಡ್ ಬಂದಾಗ ಫುಟ್ಬಾಲ್ ಆಡೋಕೆ ಹೋಗಿದ್ದರು! ನೆರೆ ಬಂದಾಗ ದೋಸೆ ತಿನ್ನೋಕೆ ಹೋಗಿದ್ದರು, ಕನ್ನಡಿಗರಿಗೆ ಅನ್ಯಾಯವಾದಾಗ ಎಮರ್ಜೆನ್ಸಿ ಎಕ್ಸಿಟ್ ನಲ್ಲಿ ಹಾರೋಕೆ ಹೋಗಿದ್ದರು, ಕನ್ನಡಿಗ ಯುವಕರು ಉದ್ಯೋಗ ಕೇಳುತ್ತಿದ್ದಾಗ ನಾಪತ್ತೆಯಾಗಿದ್ದರು. ಆದರೆ, ಈಗ ಬೀದಿ ಜಗಳದ ವಿಷಯಕ್ಕೆ ಮಾತ್ರ ಓಡೋಡಿ ಬಂದಿದ್ದಾರೆ. ಸಂಸದನಾಗಿ ತನ್ನ ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರನ್ನು ಈ ಬಾರಿ ಜನತೆ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ’ ಎಂದು ಕಿಡಿ ಕಾರಿದೆ.

‘ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನಗರ್ತಪೇಟೆಯ ಶಾಸಕರು ಬಿಜೆಪಿಯವರೇ, ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರು ಬಿಜೆಪಿಯ ಪ್ರಾಪಗಾಂಡಾಗಳಿಗೆ ತಪರಾಕಿ ನೀಡಿದ್ದಾರೆ. ಇದು ಬಿಜೆಪಿಯವರು ಚುನಾವಣೆಗಾಗಿ ಹಚ್ಚಿದ ಕೋಮು ಬೆಂಕಿ ಎನ್ನುವುದಕ್ಕೆ ಪುಷ್ಟಿ ನೀಡಿದ್ದಾರೆ. ತೇಜಸ್ವಿ ಸೂರ್ಯ ಎಂಬ ಅವಿವೇಕಿ ಶಿಶುವಿಗೆ ಈ ಗಲಾಟೆಯ ವಿಷಯದಲ್ಲಿ ರಾಜಕೀಯ ಬೇಳೆ ಬೇಯಿಸಬೇಡ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದರೂ ಕೋಮು ಸಂಘರ್ಷ ಉಂಟುಮಾಡಲು ಮುಂದಾಗಿದ್ದಾರೆ. ಇಷ್ಟು ದಿನ ಕಣ್ಮರೆಯಾಗಿದ್ದ ತೇಜಸ್ವಿ ಸೂರ್ಯನಿಗೆ ತನ್ನ ಸಾಧನೆ ಹೇಳಿ ಮತ ಕೇಳುವ ಯೋಗ್ಯತೆ ಅರ್ಹತೆ ಇಲ್ಲದಿರುವುದೇ ಈ ಎಲ್ಲಾ ನಾಟಕಗಳ ಮೂಲ ಕಾರಣ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

‘ವಯಕ್ತಿಕ ಕಾರಣಗಳಿಗಾಗಿ ನಡೆದ ಗಲಾಟೆಯನ್ನು ಹಿಡಿದುಕೊಂಡು ಕೋಮು ಸಂಘರ್ಷ ಉಂಟುಮಾಡಲು ಹವಣಿಸಿದ ತೇಜಸ್ವಿ ಸೂರ್ಯ ಚುನಾವಣಾ ನೀತಿ ಸಂಹಿತೆಯ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಕ್ರಮ ಕೈಗೊಳ್ಳಬೇಕು,
ಈತನ ಉಮೇದುವಾರಿಕೆಯನ್ನು ಮಾನ್ಯ ಮಾಡಬಾರದು ಹಾಗೂ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸಬೇಕು. ನಿಸ್ಪಕ್ಷಪಾತ ಹಾಗೂ ಪಾರದರ್ಶಕ ಚುನಾವಣೆಗಾಗಿ ಚುನಾವಣಾ ಆಯೋಗ ಈ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭಾವಿಸಿದ್ದೇವೆ’ ಎಂದು ಕಾಂಗ್ರೆಸ್ ಹೇಳಿದೆ.

 

ಇದನ್ನೂ ಒದಿ; “ತಮಿಳುನಾಡಿನಿಂದ ಬಂದು ಬಾಂಬ್ ಹಾಕ್ತಾರೆ” ಎಂದ ಶೋಭಾ ಕರಂದ್ಲಾಜೆ: ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...