Homeಮುಖಪುಟಹಿಂಡೆನ್‌ಬರ್ಗ್‌ ವರದಿ| ಜೆಪಿಸಿ ತನಿಖೆಗೆ ಮೋದಿ ಹೆದರುವುದೇಕೆ ಎಂಬುವುದು ಸ್ಪಷ್ಟ : ರಾಹುಲ್ ಗಾಂಧಿ

ಹಿಂಡೆನ್‌ಬರ್ಗ್‌ ವರದಿ| ಜೆಪಿಸಿ ತನಿಖೆಗೆ ಮೋದಿ ಹೆದರುವುದೇಕೆ ಎಂಬುವುದು ಸ್ಪಷ್ಟ : ರಾಹುಲ್ ಗಾಂಧಿ

- Advertisement -
- Advertisement -

ಹಿಂಡೆನ್‌ಬರ್ಗ್‌ ವರದಿಯಲ್ಲಿನ ಆರೋಪದಿಂದ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಸಮಗ್ರತೆಗೆ ಧಕ್ಕೆಯಾಗಿದೆ ಎಂದಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಜಂಟಿ ಸದನ ಸಮಿತಿ ರಚಿಸಿ ತನಿಖೆ ನಡೆಸಲು ಮೋದಿ ಏಕೆ ಹೆದರುತ್ತಿದ್ದಾರೆ ಎಂಬುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಅಮೆರಿಕದ ಶಾರ್ಟ್‌ ಶೆಲ್ಲರ್ ಕಂಪನಿ ಹಿಂಡೆನ್‌ಬರ್ಗ್‌, ಅದಾನಿ ಷೇರು ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್‌ ಬುಚ್ ಪಾತ್ರವಿದೆ ಎಂದು ಆರೋಪಿಸಿದ ಹಿನ್ನೆಲೆ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, “ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ಸಂರಕ್ಷಿಸುವ ಹೊಣೆ ಹೊತ್ತಿರುವ ಸೆಬಿಯ ಅಧ್ಯಕ್ಷರ ವಿರುದ್ಧ ಆರೋಪ ಕೇಳಿ ಬಂದಿದೆ. ಇದರೊಂದಿಗೆ, ಸೆಬಿಯ ಸಮಗ್ರತೆಯನ್ನು ಗಂಭೀರವಾಗಿ ರಾಜಿ ಮಾಡಿಕೊಳ್ಳಲಾಗಿದೆ” ಎಂದಿದ್ದಾರೆ.

“ದೇಶದಾದ್ಯಂತ ಪ್ರಾಮಾಣಿಕ ಹೂಡಿಕೆದಾರರು ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ? ಎಂದು ಸರ್ಕಾರವನ್ನು ಕೇಳುತ್ತಿದ್ದಾರೆ. ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ, ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷೆ ಅಥವಾ ಗೌತಮ್ ಅದಾನಿ.. ಯಾರನ್ನು ಹೊಣೆಗಾರರನ್ನಾಗಿ ಮಾಡಬೇಕು?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ಹೊಸ ಮತ್ತು ಅತ್ಯಂತ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂ ಪ್ರೇರಿತವಾಗಿ ಪರಿಶೀಲಿಸಲಿದೆಯೇ? ಪ್ರಧಾನಿ ಮೋದಿಯವರು ಜಂಟಿ ಸದನ ಸಮಿತಿ ರಚಿಸಲು ಹೆದರುತ್ತಿರುವುದು ಏಕೆ? ಆ ಸಮಿತಿ ಏನನ್ನು ಬಹಿರಂಗಪಡಿಸಬಹುದು?” ಎಂದು ರಾಹುಲ್ ಗಾಂಧಿ ಕೇಳಿದ್ದಾರೆ.

ತನ್ನ ಹೇಳಿಕೆಯ ವಿಡಿಯೋವೊಂದನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, “ಭಾರತೀಯ ಷೇರು ಮಾರುಕಟ್ಟೆಯಲ್ಲಿ ‘ಗಮನಾರ್ಹ ಅಪಾಯ’ ವಿದೆ ಎಂದು ಜನರ ಗಮನಕ್ಕೆ ತರುವುದು ವಿರೋಧ ಪಕ್ಷದ ನಾಯಕನಾಗಿ ನನ್ನ ಕರ್ತವ್ಯ. ಏಕೆಂದರೆ, ಮಾರುಕಟ್ಟೆಯನ್ನು ನಿಯಂತ್ರಿಸುವ ಸಂಸ್ಥೆ ರಾಜಿ ಮಾಡಿಕೊಂಡಿದೆ” ಎಂದು ಹೇಳಿದ್ದಾರೆ.

“ನೀವು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುತ್ತಿರುವಿರಿ ಎಂದು ಊಹಿಸಿಕೊಳ್ಳಿ. ಪಂದ್ಯವನ್ನು ವೀಕ್ಷಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಗೆ ಮತ್ತು ಪಂದ್ಯವನ್ನು ಆಡುವವರಿಗೆ ಅಂಪೈರ್ ರಾಜಿ ಮಾಡಿಕೊಂಡಿದ್ದಾರೆ ಎಂದು ತಿಳಿದಿದೆ. ಹಾಗೇನಾದರು ಆದರೆ, ಪಂದ್ಯದ ನ್ಯಾಯೋಚಿತತೆಗೆ ಏನಾಗಬಹುದು, ಫಲಿತಾಂಶ ಏನಾಗಬಹುದು. ಪಂದ್ಯದಲ್ಲಿ ಭಾಗವಹಿಸುವ ವ್ಯಕ್ತಿಯಾಗಿ ನಿಮಗೆ ಹೇಗೆ ಅನಿಸುತ್ತದೆ? ಅದೇ ಈಗ ಭಾರತದ ಷೇರು ಮಾರುಕಟ್ಟೆಯಲ್ಲಿ ನಡೆಯುತ್ತಿದೆ” ಎಂದು ವಿಡಿಯೋದಲ್ಲಿ ರಾಹುಲ್ ಗಾಂಧಿ ಕೇಳಿದ್ದಾರೆ.

ಇದನ್ನೂ ಓದಿ : “ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ” : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...