Homeಮುಖಪುಟಹಿಂಡೆನ್‌ಬರ್ಗ್‌ ವರದಿ| ಜೆಪಿಸಿ ತನಿಖೆಗೆ ಮೋದಿ ಹೆದರುವುದೇಕೆ ಎಂಬುವುದು ಸ್ಪಷ್ಟ : ರಾಹುಲ್ ಗಾಂಧಿ

ಹಿಂಡೆನ್‌ಬರ್ಗ್‌ ವರದಿ| ಜೆಪಿಸಿ ತನಿಖೆಗೆ ಮೋದಿ ಹೆದರುವುದೇಕೆ ಎಂಬುವುದು ಸ್ಪಷ್ಟ : ರಾಹುಲ್ ಗಾಂಧಿ

- Advertisement -
- Advertisement -

ಹಿಂಡೆನ್‌ಬರ್ಗ್‌ ವರದಿಯಲ್ಲಿನ ಆರೋಪದಿಂದ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಸಮಗ್ರತೆಗೆ ಧಕ್ಕೆಯಾಗಿದೆ ಎಂದಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಜಂಟಿ ಸದನ ಸಮಿತಿ ರಚಿಸಿ ತನಿಖೆ ನಡೆಸಲು ಮೋದಿ ಏಕೆ ಹೆದರುತ್ತಿದ್ದಾರೆ ಎಂಬುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಅಮೆರಿಕದ ಶಾರ್ಟ್‌ ಶೆಲ್ಲರ್ ಕಂಪನಿ ಹಿಂಡೆನ್‌ಬರ್ಗ್‌, ಅದಾನಿ ಷೇರು ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್‌ ಬುಚ್ ಪಾತ್ರವಿದೆ ಎಂದು ಆರೋಪಿಸಿದ ಹಿನ್ನೆಲೆ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, “ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ಸಂರಕ್ಷಿಸುವ ಹೊಣೆ ಹೊತ್ತಿರುವ ಸೆಬಿಯ ಅಧ್ಯಕ್ಷರ ವಿರುದ್ಧ ಆರೋಪ ಕೇಳಿ ಬಂದಿದೆ. ಇದರೊಂದಿಗೆ, ಸೆಬಿಯ ಸಮಗ್ರತೆಯನ್ನು ಗಂಭೀರವಾಗಿ ರಾಜಿ ಮಾಡಿಕೊಳ್ಳಲಾಗಿದೆ” ಎಂದಿದ್ದಾರೆ.

“ದೇಶದಾದ್ಯಂತ ಪ್ರಾಮಾಣಿಕ ಹೂಡಿಕೆದಾರರು ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ? ಎಂದು ಸರ್ಕಾರವನ್ನು ಕೇಳುತ್ತಿದ್ದಾರೆ. ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ, ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷೆ ಅಥವಾ ಗೌತಮ್ ಅದಾನಿ.. ಯಾರನ್ನು ಹೊಣೆಗಾರರನ್ನಾಗಿ ಮಾಡಬೇಕು?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ಹೊಸ ಮತ್ತು ಅತ್ಯಂತ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂ ಪ್ರೇರಿತವಾಗಿ ಪರಿಶೀಲಿಸಲಿದೆಯೇ? ಪ್ರಧಾನಿ ಮೋದಿಯವರು ಜಂಟಿ ಸದನ ಸಮಿತಿ ರಚಿಸಲು ಹೆದರುತ್ತಿರುವುದು ಏಕೆ? ಆ ಸಮಿತಿ ಏನನ್ನು ಬಹಿರಂಗಪಡಿಸಬಹುದು?” ಎಂದು ರಾಹುಲ್ ಗಾಂಧಿ ಕೇಳಿದ್ದಾರೆ.

ತನ್ನ ಹೇಳಿಕೆಯ ವಿಡಿಯೋವೊಂದನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, “ಭಾರತೀಯ ಷೇರು ಮಾರುಕಟ್ಟೆಯಲ್ಲಿ ‘ಗಮನಾರ್ಹ ಅಪಾಯ’ ವಿದೆ ಎಂದು ಜನರ ಗಮನಕ್ಕೆ ತರುವುದು ವಿರೋಧ ಪಕ್ಷದ ನಾಯಕನಾಗಿ ನನ್ನ ಕರ್ತವ್ಯ. ಏಕೆಂದರೆ, ಮಾರುಕಟ್ಟೆಯನ್ನು ನಿಯಂತ್ರಿಸುವ ಸಂಸ್ಥೆ ರಾಜಿ ಮಾಡಿಕೊಂಡಿದೆ” ಎಂದು ಹೇಳಿದ್ದಾರೆ.

“ನೀವು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುತ್ತಿರುವಿರಿ ಎಂದು ಊಹಿಸಿಕೊಳ್ಳಿ. ಪಂದ್ಯವನ್ನು ವೀಕ್ಷಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಗೆ ಮತ್ತು ಪಂದ್ಯವನ್ನು ಆಡುವವರಿಗೆ ಅಂಪೈರ್ ರಾಜಿ ಮಾಡಿಕೊಂಡಿದ್ದಾರೆ ಎಂದು ತಿಳಿದಿದೆ. ಹಾಗೇನಾದರು ಆದರೆ, ಪಂದ್ಯದ ನ್ಯಾಯೋಚಿತತೆಗೆ ಏನಾಗಬಹುದು, ಫಲಿತಾಂಶ ಏನಾಗಬಹುದು. ಪಂದ್ಯದಲ್ಲಿ ಭಾಗವಹಿಸುವ ವ್ಯಕ್ತಿಯಾಗಿ ನಿಮಗೆ ಹೇಗೆ ಅನಿಸುತ್ತದೆ? ಅದೇ ಈಗ ಭಾರತದ ಷೇರು ಮಾರುಕಟ್ಟೆಯಲ್ಲಿ ನಡೆಯುತ್ತಿದೆ” ಎಂದು ವಿಡಿಯೋದಲ್ಲಿ ರಾಹುಲ್ ಗಾಂಧಿ ಕೇಳಿದ್ದಾರೆ.

ಇದನ್ನೂ ಓದಿ : “ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ” : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...