Homeಮುಖಪುಟಹಿಂಡೆನ್‌ಬರ್ಗ್‌ ವರದಿ| ಜೆಪಿಸಿ ತನಿಖೆಗೆ ಮೋದಿ ಹೆದರುವುದೇಕೆ ಎಂಬುವುದು ಸ್ಪಷ್ಟ : ರಾಹುಲ್ ಗಾಂಧಿ

ಹಿಂಡೆನ್‌ಬರ್ಗ್‌ ವರದಿ| ಜೆಪಿಸಿ ತನಿಖೆಗೆ ಮೋದಿ ಹೆದರುವುದೇಕೆ ಎಂಬುವುದು ಸ್ಪಷ್ಟ : ರಾಹುಲ್ ಗಾಂಧಿ

- Advertisement -
- Advertisement -

ಹಿಂಡೆನ್‌ಬರ್ಗ್‌ ವರದಿಯಲ್ಲಿನ ಆರೋಪದಿಂದ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಸಮಗ್ರತೆಗೆ ಧಕ್ಕೆಯಾಗಿದೆ ಎಂದಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಜಂಟಿ ಸದನ ಸಮಿತಿ ರಚಿಸಿ ತನಿಖೆ ನಡೆಸಲು ಮೋದಿ ಏಕೆ ಹೆದರುತ್ತಿದ್ದಾರೆ ಎಂಬುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಅಮೆರಿಕದ ಶಾರ್ಟ್‌ ಶೆಲ್ಲರ್ ಕಂಪನಿ ಹಿಂಡೆನ್‌ಬರ್ಗ್‌, ಅದಾನಿ ಷೇರು ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್‌ ಬುಚ್ ಪಾತ್ರವಿದೆ ಎಂದು ಆರೋಪಿಸಿದ ಹಿನ್ನೆಲೆ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, “ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ಸಂರಕ್ಷಿಸುವ ಹೊಣೆ ಹೊತ್ತಿರುವ ಸೆಬಿಯ ಅಧ್ಯಕ್ಷರ ವಿರುದ್ಧ ಆರೋಪ ಕೇಳಿ ಬಂದಿದೆ. ಇದರೊಂದಿಗೆ, ಸೆಬಿಯ ಸಮಗ್ರತೆಯನ್ನು ಗಂಭೀರವಾಗಿ ರಾಜಿ ಮಾಡಿಕೊಳ್ಳಲಾಗಿದೆ” ಎಂದಿದ್ದಾರೆ.

“ದೇಶದಾದ್ಯಂತ ಪ್ರಾಮಾಣಿಕ ಹೂಡಿಕೆದಾರರು ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ? ಎಂದು ಸರ್ಕಾರವನ್ನು ಕೇಳುತ್ತಿದ್ದಾರೆ. ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ, ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷೆ ಅಥವಾ ಗೌತಮ್ ಅದಾನಿ.. ಯಾರನ್ನು ಹೊಣೆಗಾರರನ್ನಾಗಿ ಮಾಡಬೇಕು?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ಹೊಸ ಮತ್ತು ಅತ್ಯಂತ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂ ಪ್ರೇರಿತವಾಗಿ ಪರಿಶೀಲಿಸಲಿದೆಯೇ? ಪ್ರಧಾನಿ ಮೋದಿಯವರು ಜಂಟಿ ಸದನ ಸಮಿತಿ ರಚಿಸಲು ಹೆದರುತ್ತಿರುವುದು ಏಕೆ? ಆ ಸಮಿತಿ ಏನನ್ನು ಬಹಿರಂಗಪಡಿಸಬಹುದು?” ಎಂದು ರಾಹುಲ್ ಗಾಂಧಿ ಕೇಳಿದ್ದಾರೆ.

ತನ್ನ ಹೇಳಿಕೆಯ ವಿಡಿಯೋವೊಂದನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, “ಭಾರತೀಯ ಷೇರು ಮಾರುಕಟ್ಟೆಯಲ್ಲಿ ‘ಗಮನಾರ್ಹ ಅಪಾಯ’ ವಿದೆ ಎಂದು ಜನರ ಗಮನಕ್ಕೆ ತರುವುದು ವಿರೋಧ ಪಕ್ಷದ ನಾಯಕನಾಗಿ ನನ್ನ ಕರ್ತವ್ಯ. ಏಕೆಂದರೆ, ಮಾರುಕಟ್ಟೆಯನ್ನು ನಿಯಂತ್ರಿಸುವ ಸಂಸ್ಥೆ ರಾಜಿ ಮಾಡಿಕೊಂಡಿದೆ” ಎಂದು ಹೇಳಿದ್ದಾರೆ.

“ನೀವು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುತ್ತಿರುವಿರಿ ಎಂದು ಊಹಿಸಿಕೊಳ್ಳಿ. ಪಂದ್ಯವನ್ನು ವೀಕ್ಷಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಗೆ ಮತ್ತು ಪಂದ್ಯವನ್ನು ಆಡುವವರಿಗೆ ಅಂಪೈರ್ ರಾಜಿ ಮಾಡಿಕೊಂಡಿದ್ದಾರೆ ಎಂದು ತಿಳಿದಿದೆ. ಹಾಗೇನಾದರು ಆದರೆ, ಪಂದ್ಯದ ನ್ಯಾಯೋಚಿತತೆಗೆ ಏನಾಗಬಹುದು, ಫಲಿತಾಂಶ ಏನಾಗಬಹುದು. ಪಂದ್ಯದಲ್ಲಿ ಭಾಗವಹಿಸುವ ವ್ಯಕ್ತಿಯಾಗಿ ನಿಮಗೆ ಹೇಗೆ ಅನಿಸುತ್ತದೆ? ಅದೇ ಈಗ ಭಾರತದ ಷೇರು ಮಾರುಕಟ್ಟೆಯಲ್ಲಿ ನಡೆಯುತ್ತಿದೆ” ಎಂದು ವಿಡಿಯೋದಲ್ಲಿ ರಾಹುಲ್ ಗಾಂಧಿ ಕೇಳಿದ್ದಾರೆ.

ಇದನ್ನೂ ಓದಿ : “ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ” : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...