Homeಮುಖಪುಟಹಿಂಡೆನ್‌ಬರ್ಗ್‌ ವರದಿ| ಜೆಪಿಸಿ ತನಿಖೆಗೆ ಮೋದಿ ಹೆದರುವುದೇಕೆ ಎಂಬುವುದು ಸ್ಪಷ್ಟ : ರಾಹುಲ್ ಗಾಂಧಿ

ಹಿಂಡೆನ್‌ಬರ್ಗ್‌ ವರದಿ| ಜೆಪಿಸಿ ತನಿಖೆಗೆ ಮೋದಿ ಹೆದರುವುದೇಕೆ ಎಂಬುವುದು ಸ್ಪಷ್ಟ : ರಾಹುಲ್ ಗಾಂಧಿ

- Advertisement -
- Advertisement -

ಹಿಂಡೆನ್‌ಬರ್ಗ್‌ ವರದಿಯಲ್ಲಿನ ಆರೋಪದಿಂದ ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಸಮಗ್ರತೆಗೆ ಧಕ್ಕೆಯಾಗಿದೆ ಎಂದಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಜಂಟಿ ಸದನ ಸಮಿತಿ ರಚಿಸಿ ತನಿಖೆ ನಡೆಸಲು ಮೋದಿ ಏಕೆ ಹೆದರುತ್ತಿದ್ದಾರೆ ಎಂಬುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಅಮೆರಿಕದ ಶಾರ್ಟ್‌ ಶೆಲ್ಲರ್ ಕಂಪನಿ ಹಿಂಡೆನ್‌ಬರ್ಗ್‌, ಅದಾನಿ ಷೇರು ಹಗರಣದಲ್ಲಿ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್‌ ಬುಚ್ ಪಾತ್ರವಿದೆ ಎಂದು ಆರೋಪಿಸಿದ ಹಿನ್ನೆಲೆ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, “ಸಣ್ಣ ಚಿಲ್ಲರೆ ಹೂಡಿಕೆದಾರರ ಸಂಪತ್ತನ್ನು ಸಂರಕ್ಷಿಸುವ ಹೊಣೆ ಹೊತ್ತಿರುವ ಸೆಬಿಯ ಅಧ್ಯಕ್ಷರ ವಿರುದ್ಧ ಆರೋಪ ಕೇಳಿ ಬಂದಿದೆ. ಇದರೊಂದಿಗೆ, ಸೆಬಿಯ ಸಮಗ್ರತೆಯನ್ನು ಗಂಭೀರವಾಗಿ ರಾಜಿ ಮಾಡಿಕೊಳ್ಳಲಾಗಿದೆ” ಎಂದಿದ್ದಾರೆ.

“ದೇಶದಾದ್ಯಂತ ಪ್ರಾಮಾಣಿಕ ಹೂಡಿಕೆದಾರರು ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ? ಎಂದು ಸರ್ಕಾರವನ್ನು ಕೇಳುತ್ತಿದ್ದಾರೆ. ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ, ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷೆ ಅಥವಾ ಗೌತಮ್ ಅದಾನಿ.. ಯಾರನ್ನು ಹೊಣೆಗಾರರನ್ನಾಗಿ ಮಾಡಬೇಕು?” ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

“ಹೊಸ ಮತ್ತು ಅತ್ಯಂತ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂ ಪ್ರೇರಿತವಾಗಿ ಪರಿಶೀಲಿಸಲಿದೆಯೇ? ಪ್ರಧಾನಿ ಮೋದಿಯವರು ಜಂಟಿ ಸದನ ಸಮಿತಿ ರಚಿಸಲು ಹೆದರುತ್ತಿರುವುದು ಏಕೆ? ಆ ಸಮಿತಿ ಏನನ್ನು ಬಹಿರಂಗಪಡಿಸಬಹುದು?” ಎಂದು ರಾಹುಲ್ ಗಾಂಧಿ ಕೇಳಿದ್ದಾರೆ.

ತನ್ನ ಹೇಳಿಕೆಯ ವಿಡಿಯೋವೊಂದನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್ ಗಾಂಧಿ, “ಭಾರತೀಯ ಷೇರು ಮಾರುಕಟ್ಟೆಯಲ್ಲಿ ‘ಗಮನಾರ್ಹ ಅಪಾಯ’ ವಿದೆ ಎಂದು ಜನರ ಗಮನಕ್ಕೆ ತರುವುದು ವಿರೋಧ ಪಕ್ಷದ ನಾಯಕನಾಗಿ ನನ್ನ ಕರ್ತವ್ಯ. ಏಕೆಂದರೆ, ಮಾರುಕಟ್ಟೆಯನ್ನು ನಿಯಂತ್ರಿಸುವ ಸಂಸ್ಥೆ ರಾಜಿ ಮಾಡಿಕೊಂಡಿದೆ” ಎಂದು ಹೇಳಿದ್ದಾರೆ.

“ನೀವು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುತ್ತಿರುವಿರಿ ಎಂದು ಊಹಿಸಿಕೊಳ್ಳಿ. ಪಂದ್ಯವನ್ನು ವೀಕ್ಷಿಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಗೆ ಮತ್ತು ಪಂದ್ಯವನ್ನು ಆಡುವವರಿಗೆ ಅಂಪೈರ್ ರಾಜಿ ಮಾಡಿಕೊಂಡಿದ್ದಾರೆ ಎಂದು ತಿಳಿದಿದೆ. ಹಾಗೇನಾದರು ಆದರೆ, ಪಂದ್ಯದ ನ್ಯಾಯೋಚಿತತೆಗೆ ಏನಾಗಬಹುದು, ಫಲಿತಾಂಶ ಏನಾಗಬಹುದು. ಪಂದ್ಯದಲ್ಲಿ ಭಾಗವಹಿಸುವ ವ್ಯಕ್ತಿಯಾಗಿ ನಿಮಗೆ ಹೇಗೆ ಅನಿಸುತ್ತದೆ? ಅದೇ ಈಗ ಭಾರತದ ಷೇರು ಮಾರುಕಟ್ಟೆಯಲ್ಲಿ ನಡೆಯುತ್ತಿದೆ” ಎಂದು ವಿಡಿಯೋದಲ್ಲಿ ರಾಹುಲ್ ಗಾಂಧಿ ಕೇಳಿದ್ದಾರೆ.

ಇದನ್ನೂ ಓದಿ : “ಜಾತಿ ಭಾರತವನ್ನು ಒಗ್ಗೂಡಿಸುವ ಅಂಶ” : ಜಾತಿ ವ್ಯವಸ್ಥೆಯನ್ನು ಸಮರ್ಥಿಸಿಕೊಂಡ ಆರ್‌ಎಸ್‌ಎಸ್‌ ಮುಖವಾಣಿ ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...