Homeಮುಖಪುಟಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕೋವಿಡ್‌ ಲಸಿಕೆ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆಯುವುದು ಅಪಾಯಕಾರಿ ಎಂದು ಹೇಳಿರುವ ಕೇರಳ ಹೈಕೋರ್ಟ್, “ಇಂದು ಮೋದಿ ಫೋಟೋ ತೆಗೆಯಿರಿ ಎಂದು ಕೇಳುತ್ತಾರೆ. ನಾಳೆ ಮಹಾತ್ಮಗಾಂಧಿಯವರ ಫೋಟೋವನ್ನು ಕರೆನ್ಸಿ ನೋಟಿನಿಂದ ತೆಗೆಯಿರಿ ಎಂದು ಯಾರಾದರೂ ಬಂದರೆ?” ಎಂದು ಕೇಳಿದೆ.

“ಮೋದಿಯವರ ಫೋಟೋವನ್ನು ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಹಾಕಿರುವುದು ಸರಿಯೇ” ಎಂದು ಪ್ರಶ್ನಿಸಿ ನಾಗರಿಕರೊಬ್ಬರು ಅರ್ಜಿ ಸಲ್ಲಿಸಿದ್ದರು. “ನಾನು ಎರಡು ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಯಿಂದ ತೆಗೆದುಕೊಂಡು ಹಣ ಪಾವತಿಸಿದ್ದೇನೆ. ಮೋದಿ ಫೋಟೋವನ್ನು ದೃಢೀಕರಣ ಪತ್ರದ ಮೇಲೆ ಹಾಕುವುದು ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತೆ” ಎಂದು ಅರ್ಜಿದಾರರು ವಾದಿಸಿದ್ದರು ಎಂದು ಲೈವ್‌ಲಾ ವರದಿ ಮಾಡಿದೆ.

ವಿಚಾರಣೆ ಕೈಗೆತ್ತಿಕೊಂಡ ಜಸ್ಟೀಸ್‌ ಎನ್‌.ನಗರೇಶ್‌‌ ಅವರಿದ್ದ ಪೀಠವು, “ಲಸಿಕೆ ಸರ್ಟಿಫಿಕೇಟ್‌ನಿಂದ ಮೋದಿ ಫೋಟೋವನ್ನು ತೆಗೆಯುವುದು ಅಪಾಯಕಾರಿ ಪ್ರತಿಪಾದನೆ” ಎಂದು ಅಭಿಪ್ರಾಯಪಟ್ಟಿದೆ.

“ಇದು ಅತ್ಯಂತ ಅಪಾಯಕಾರಿ ಪ್ರತಿಪಾದನೆ. ನಾಳೆ ಮತ್ತೊಬ್ಬ ಬಂದು ಪ್ರತಿಭಟನೆ ನಡೆಸಿ, ನನಗೆ ಮಹಾತ್ಮ ಗಾಂಧಿಯವರನ್ನು ಕಂಡರೆ ಇಷ್ಟವಿಲ್ಲ. ನನ್ನ ಬೆವರು ಮತ್ತು ರಕ್ತದಿಂದ ಸಂಪಾದಿಸಿದ ಹಣದಲ್ಲಿ ಗಾಂಧೀಜಿಯರ ಫೋಟೋವನ್ನು ಹಾಕಬೇಡಿ. ಅದನ್ನು ತೆಗೆಯಿರಿ ಎಂದರೆ ಏನು ಮಾಡುವುದು?” ಎಂದು ಕೋರ್ಟ್ ಕೇಳಿದೆ. ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ಅರ್ಜಿದಾರರ ವಕೀಲ ಅಜಿತ್ ರಾಯ್ ಪ್ರತಿಕ್ರಿಯಿಸಿ, “ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಾವಳಿಗಳ ಪ್ರಕಾರ ಕರೆನ್ಸಿಯಲ್ಲಿ ಗಾಂಧಿಯವರ ಮುಖವನ್ನು ಮುದ್ರಿಸಲಾಗಿದೆ. ಆದರೆ ಲಸಿಕೆ ಪ್ರಮಾಣಪತ್ರಗಳಲ್ಲಿ ಮೋದಿಯವರ ಮುಖದ ಅಗತ್ಯವಿರುವ ಯಾವುದೇ ರೀತಿಯ ಶಾಸನಬದ್ಧ ನಿಬಂಧನೆಗಳಿಲ್ಲ” ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಲು ನ್ಯಾಯಾಲಯ ಹೆಚ್ಚಿನ ಸಮಯವನ್ನು ನೀಡಬೇಕು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೋರಿದರು. ಹೀಗಾಗಿ ಪೀಠವು ನವೆಂಬರ್ 23ಕ್ಕೆ ಪ್ರಕರಣವನ್ನು ಮುಂದೂಡಿತು.

ದಿ ವೈರ್ ವಿಶ್ಲೇಷಿಸಿದಂತೆ, “ತನ್ನದೇ ಆದ ರಾಜಕೀಯ ಮತ್ತು ವ್ಯಕ್ತಿತ್ವದ ಆರಾಧನೆಯನ್ನು ಉತ್ತೇಜಿಸಲು” ಒಬ್ಬ ನಾಯಕ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಬಳಸುತ್ತಿರುವ ಏಕೈಕ ದೇಶ ಬಹುಶಃ ಭಾರತ ಮಾತ್ರ. ಯುಎಸ್, ಇಸ್ರೇಲ್ ಮತ್ತು ಇತರ ಕೆಲವು ದೇಶಗಳು ಲಸಿಕೆ ಸ್ವೀಕರಿಸಿದವರಿಗೆ ನೀಡಿದ ಪ್ರಮಾಣಪತ್ರ ಅಥವಾ ಕಾರ್ಡ್‌ಗಳಿಗೆ ಹೋಲಿಸಿದರೆ ಭಾರತದ ಪ್ರಮಾಣಪತ್ರ ಸಂಪೂರ್ಣ ಭಿನ್ನವಾಗಿದೆ.

ಕೇಂದ್ರ ಸರ್ಕಾರವು ದೇಶದಾದ್ಯಂತ ಬೀದಿಗಳಲ್ಲಿ, ಭಾರತದ ಸಾಮೂಹಿಕ ಲಸಿಕೆ ಅಭಿಯಾನಕ್ಕಾಗಿ ಮೋದಿಯವರಿಗೆ “ಧನ್ಯವಾದ” ಸಲ್ಲಿಸುವ ಪೋಸ್ಟರ್‌ಗಳನ್ನು ಹಾಕಿದೆ. ವಿದೇಶಗಳಿಗೆ ತೆರಳಿದ ಭಾರತೀಯರು  ಆ ದೇಶಗಳಿಗೆ ಸಲ್ಲಿಸುವ ವ್ಯಾಕ್ಸಿನೇಷನ್ ಸರ್ಟಿಫಿಕೇಟ್‌ ನೋಡಿ ಅಲ್ಲಿನ ಆಡಳಿತ ಸಿಬ್ಬಂದಿ ಗೊಂದಲಕ್ಕೊಳಗಾಗುತ್ತಿದ್ದಾರೆ ಎಂಬ ವರದಿಗಳಾಗಿವೆ.

ಹೈಕೋರ್ಟ್ ನಿಲುವನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿದ್ದಾರೆ.”ನ್ಯಾಯಾಧೀಶರು ಲಸಿಕೆ ಪ್ರಮಾಣಪತ್ರ ಮತ್ತು ಸರ್ಕಾರ ನೀಡಿದ ಕರೆನ್ಸಿ ನೋಟುಗಳ ನಡುವೆ ವ್ಯತ್ಯಾಸವನ್ನು ಮಾಡಲು ಸಾಧ್ಯವಾಗದಿರುವುದು ದುಃಖಕರವಾಗಿದೆ. ಯಾವ ನಿಯಮಗಳ ಪ್ರಕಾರ ಪ್ರಮಾಣಪತ್ರದಲ್ಲಿ ಪ್ರಧಾನ ಮಂತ್ರಿಯ ಫೋಟೋ ಇದೆ..” ಎಂದು ಕೆ.ಎಸ್.ನರೇಂದ್ರನ್‌ ಎಂಬವರು ಕೇಳಿದ್ದಾರೆ.


ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...