Homeಮುಖಪುಟಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕೋವಿಡ್‌ ಲಸಿಕೆ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆಯುವುದು ಅಪಾಯಕಾರಿ ಎಂದು ಹೇಳಿರುವ ಕೇರಳ ಹೈಕೋರ್ಟ್, “ಇಂದು ಮೋದಿ ಫೋಟೋ ತೆಗೆಯಿರಿ ಎಂದು ಕೇಳುತ್ತಾರೆ. ನಾಳೆ ಮಹಾತ್ಮಗಾಂಧಿಯವರ ಫೋಟೋವನ್ನು ಕರೆನ್ಸಿ ನೋಟಿನಿಂದ ತೆಗೆಯಿರಿ ಎಂದು ಯಾರಾದರೂ ಬಂದರೆ?” ಎಂದು ಕೇಳಿದೆ.

“ಮೋದಿಯವರ ಫೋಟೋವನ್ನು ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಹಾಕಿರುವುದು ಸರಿಯೇ” ಎಂದು ಪ್ರಶ್ನಿಸಿ ನಾಗರಿಕರೊಬ್ಬರು ಅರ್ಜಿ ಸಲ್ಲಿಸಿದ್ದರು. “ನಾನು ಎರಡು ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಯಿಂದ ತೆಗೆದುಕೊಂಡು ಹಣ ಪಾವತಿಸಿದ್ದೇನೆ. ಮೋದಿ ಫೋಟೋವನ್ನು ದೃಢೀಕರಣ ಪತ್ರದ ಮೇಲೆ ಹಾಕುವುದು ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತೆ” ಎಂದು ಅರ್ಜಿದಾರರು ವಾದಿಸಿದ್ದರು ಎಂದು ಲೈವ್‌ಲಾ ವರದಿ ಮಾಡಿದೆ.

ವಿಚಾರಣೆ ಕೈಗೆತ್ತಿಕೊಂಡ ಜಸ್ಟೀಸ್‌ ಎನ್‌.ನಗರೇಶ್‌‌ ಅವರಿದ್ದ ಪೀಠವು, “ಲಸಿಕೆ ಸರ್ಟಿಫಿಕೇಟ್‌ನಿಂದ ಮೋದಿ ಫೋಟೋವನ್ನು ತೆಗೆಯುವುದು ಅಪಾಯಕಾರಿ ಪ್ರತಿಪಾದನೆ” ಎಂದು ಅಭಿಪ್ರಾಯಪಟ್ಟಿದೆ.

“ಇದು ಅತ್ಯಂತ ಅಪಾಯಕಾರಿ ಪ್ರತಿಪಾದನೆ. ನಾಳೆ ಮತ್ತೊಬ್ಬ ಬಂದು ಪ್ರತಿಭಟನೆ ನಡೆಸಿ, ನನಗೆ ಮಹಾತ್ಮ ಗಾಂಧಿಯವರನ್ನು ಕಂಡರೆ ಇಷ್ಟವಿಲ್ಲ. ನನ್ನ ಬೆವರು ಮತ್ತು ರಕ್ತದಿಂದ ಸಂಪಾದಿಸಿದ ಹಣದಲ್ಲಿ ಗಾಂಧೀಜಿಯರ ಫೋಟೋವನ್ನು ಹಾಕಬೇಡಿ. ಅದನ್ನು ತೆಗೆಯಿರಿ ಎಂದರೆ ಏನು ಮಾಡುವುದು?” ಎಂದು ಕೋರ್ಟ್ ಕೇಳಿದೆ. ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ಅರ್ಜಿದಾರರ ವಕೀಲ ಅಜಿತ್ ರಾಯ್ ಪ್ರತಿಕ್ರಿಯಿಸಿ, “ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಾವಳಿಗಳ ಪ್ರಕಾರ ಕರೆನ್ಸಿಯಲ್ಲಿ ಗಾಂಧಿಯವರ ಮುಖವನ್ನು ಮುದ್ರಿಸಲಾಗಿದೆ. ಆದರೆ ಲಸಿಕೆ ಪ್ರಮಾಣಪತ್ರಗಳಲ್ಲಿ ಮೋದಿಯವರ ಮುಖದ ಅಗತ್ಯವಿರುವ ಯಾವುದೇ ರೀತಿಯ ಶಾಸನಬದ್ಧ ನಿಬಂಧನೆಗಳಿಲ್ಲ” ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಲು ನ್ಯಾಯಾಲಯ ಹೆಚ್ಚಿನ ಸಮಯವನ್ನು ನೀಡಬೇಕು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೋರಿದರು. ಹೀಗಾಗಿ ಪೀಠವು ನವೆಂಬರ್ 23ಕ್ಕೆ ಪ್ರಕರಣವನ್ನು ಮುಂದೂಡಿತು.

ದಿ ವೈರ್ ವಿಶ್ಲೇಷಿಸಿದಂತೆ, “ತನ್ನದೇ ಆದ ರಾಜಕೀಯ ಮತ್ತು ವ್ಯಕ್ತಿತ್ವದ ಆರಾಧನೆಯನ್ನು ಉತ್ತೇಜಿಸಲು” ಒಬ್ಬ ನಾಯಕ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಬಳಸುತ್ತಿರುವ ಏಕೈಕ ದೇಶ ಬಹುಶಃ ಭಾರತ ಮಾತ್ರ. ಯುಎಸ್, ಇಸ್ರೇಲ್ ಮತ್ತು ಇತರ ಕೆಲವು ದೇಶಗಳು ಲಸಿಕೆ ಸ್ವೀಕರಿಸಿದವರಿಗೆ ನೀಡಿದ ಪ್ರಮಾಣಪತ್ರ ಅಥವಾ ಕಾರ್ಡ್‌ಗಳಿಗೆ ಹೋಲಿಸಿದರೆ ಭಾರತದ ಪ್ರಮಾಣಪತ್ರ ಸಂಪೂರ್ಣ ಭಿನ್ನವಾಗಿದೆ.

ಕೇಂದ್ರ ಸರ್ಕಾರವು ದೇಶದಾದ್ಯಂತ ಬೀದಿಗಳಲ್ಲಿ, ಭಾರತದ ಸಾಮೂಹಿಕ ಲಸಿಕೆ ಅಭಿಯಾನಕ್ಕಾಗಿ ಮೋದಿಯವರಿಗೆ “ಧನ್ಯವಾದ” ಸಲ್ಲಿಸುವ ಪೋಸ್ಟರ್‌ಗಳನ್ನು ಹಾಕಿದೆ. ವಿದೇಶಗಳಿಗೆ ತೆರಳಿದ ಭಾರತೀಯರು  ಆ ದೇಶಗಳಿಗೆ ಸಲ್ಲಿಸುವ ವ್ಯಾಕ್ಸಿನೇಷನ್ ಸರ್ಟಿಫಿಕೇಟ್‌ ನೋಡಿ ಅಲ್ಲಿನ ಆಡಳಿತ ಸಿಬ್ಬಂದಿ ಗೊಂದಲಕ್ಕೊಳಗಾಗುತ್ತಿದ್ದಾರೆ ಎಂಬ ವರದಿಗಳಾಗಿವೆ.

ಹೈಕೋರ್ಟ್ ನಿಲುವನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿದ್ದಾರೆ.”ನ್ಯಾಯಾಧೀಶರು ಲಸಿಕೆ ಪ್ರಮಾಣಪತ್ರ ಮತ್ತು ಸರ್ಕಾರ ನೀಡಿದ ಕರೆನ್ಸಿ ನೋಟುಗಳ ನಡುವೆ ವ್ಯತ್ಯಾಸವನ್ನು ಮಾಡಲು ಸಾಧ್ಯವಾಗದಿರುವುದು ದುಃಖಕರವಾಗಿದೆ. ಯಾವ ನಿಯಮಗಳ ಪ್ರಕಾರ ಪ್ರಮಾಣಪತ್ರದಲ್ಲಿ ಪ್ರಧಾನ ಮಂತ್ರಿಯ ಫೋಟೋ ಇದೆ..” ಎಂದು ಕೆ.ಎಸ್.ನರೇಂದ್ರನ್‌ ಎಂಬವರು ಕೇಳಿದ್ದಾರೆ.


ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....