Homeಮುಖಪುಟಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕೋವಿಡ್‌ ಲಸಿಕೆ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆಯುವುದು ಅಪಾಯಕಾರಿ ಎಂದು ಹೇಳಿರುವ ಕೇರಳ ಹೈಕೋರ್ಟ್, “ಇಂದು ಮೋದಿ ಫೋಟೋ ತೆಗೆಯಿರಿ ಎಂದು ಕೇಳುತ್ತಾರೆ. ನಾಳೆ ಮಹಾತ್ಮಗಾಂಧಿಯವರ ಫೋಟೋವನ್ನು ಕರೆನ್ಸಿ ನೋಟಿನಿಂದ ತೆಗೆಯಿರಿ ಎಂದು ಯಾರಾದರೂ ಬಂದರೆ?” ಎಂದು ಕೇಳಿದೆ.

“ಮೋದಿಯವರ ಫೋಟೋವನ್ನು ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಹಾಕಿರುವುದು ಸರಿಯೇ” ಎಂದು ಪ್ರಶ್ನಿಸಿ ನಾಗರಿಕರೊಬ್ಬರು ಅರ್ಜಿ ಸಲ್ಲಿಸಿದ್ದರು. “ನಾನು ಎರಡು ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಯಿಂದ ತೆಗೆದುಕೊಂಡು ಹಣ ಪಾವತಿಸಿದ್ದೇನೆ. ಮೋದಿ ಫೋಟೋವನ್ನು ದೃಢೀಕರಣ ಪತ್ರದ ಮೇಲೆ ಹಾಕುವುದು ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತೆ” ಎಂದು ಅರ್ಜಿದಾರರು ವಾದಿಸಿದ್ದರು ಎಂದು ಲೈವ್‌ಲಾ ವರದಿ ಮಾಡಿದೆ.

ವಿಚಾರಣೆ ಕೈಗೆತ್ತಿಕೊಂಡ ಜಸ್ಟೀಸ್‌ ಎನ್‌.ನಗರೇಶ್‌‌ ಅವರಿದ್ದ ಪೀಠವು, “ಲಸಿಕೆ ಸರ್ಟಿಫಿಕೇಟ್‌ನಿಂದ ಮೋದಿ ಫೋಟೋವನ್ನು ತೆಗೆಯುವುದು ಅಪಾಯಕಾರಿ ಪ್ರತಿಪಾದನೆ” ಎಂದು ಅಭಿಪ್ರಾಯಪಟ್ಟಿದೆ.

“ಇದು ಅತ್ಯಂತ ಅಪಾಯಕಾರಿ ಪ್ರತಿಪಾದನೆ. ನಾಳೆ ಮತ್ತೊಬ್ಬ ಬಂದು ಪ್ರತಿಭಟನೆ ನಡೆಸಿ, ನನಗೆ ಮಹಾತ್ಮ ಗಾಂಧಿಯವರನ್ನು ಕಂಡರೆ ಇಷ್ಟವಿಲ್ಲ. ನನ್ನ ಬೆವರು ಮತ್ತು ರಕ್ತದಿಂದ ಸಂಪಾದಿಸಿದ ಹಣದಲ್ಲಿ ಗಾಂಧೀಜಿಯರ ಫೋಟೋವನ್ನು ಹಾಕಬೇಡಿ. ಅದನ್ನು ತೆಗೆಯಿರಿ ಎಂದರೆ ಏನು ಮಾಡುವುದು?” ಎಂದು ಕೋರ್ಟ್ ಕೇಳಿದೆ. ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ಅರ್ಜಿದಾರರ ವಕೀಲ ಅಜಿತ್ ರಾಯ್ ಪ್ರತಿಕ್ರಿಯಿಸಿ, “ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಾವಳಿಗಳ ಪ್ರಕಾರ ಕರೆನ್ಸಿಯಲ್ಲಿ ಗಾಂಧಿಯವರ ಮುಖವನ್ನು ಮುದ್ರಿಸಲಾಗಿದೆ. ಆದರೆ ಲಸಿಕೆ ಪ್ರಮಾಣಪತ್ರಗಳಲ್ಲಿ ಮೋದಿಯವರ ಮುಖದ ಅಗತ್ಯವಿರುವ ಯಾವುದೇ ರೀತಿಯ ಶಾಸನಬದ್ಧ ನಿಬಂಧನೆಗಳಿಲ್ಲ” ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಲು ನ್ಯಾಯಾಲಯ ಹೆಚ್ಚಿನ ಸಮಯವನ್ನು ನೀಡಬೇಕು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೋರಿದರು. ಹೀಗಾಗಿ ಪೀಠವು ನವೆಂಬರ್ 23ಕ್ಕೆ ಪ್ರಕರಣವನ್ನು ಮುಂದೂಡಿತು.

ದಿ ವೈರ್ ವಿಶ್ಲೇಷಿಸಿದಂತೆ, “ತನ್ನದೇ ಆದ ರಾಜಕೀಯ ಮತ್ತು ವ್ಯಕ್ತಿತ್ವದ ಆರಾಧನೆಯನ್ನು ಉತ್ತೇಜಿಸಲು” ಒಬ್ಬ ನಾಯಕ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಬಳಸುತ್ತಿರುವ ಏಕೈಕ ದೇಶ ಬಹುಶಃ ಭಾರತ ಮಾತ್ರ. ಯುಎಸ್, ಇಸ್ರೇಲ್ ಮತ್ತು ಇತರ ಕೆಲವು ದೇಶಗಳು ಲಸಿಕೆ ಸ್ವೀಕರಿಸಿದವರಿಗೆ ನೀಡಿದ ಪ್ರಮಾಣಪತ್ರ ಅಥವಾ ಕಾರ್ಡ್‌ಗಳಿಗೆ ಹೋಲಿಸಿದರೆ ಭಾರತದ ಪ್ರಮಾಣಪತ್ರ ಸಂಪೂರ್ಣ ಭಿನ್ನವಾಗಿದೆ.

ಕೇಂದ್ರ ಸರ್ಕಾರವು ದೇಶದಾದ್ಯಂತ ಬೀದಿಗಳಲ್ಲಿ, ಭಾರತದ ಸಾಮೂಹಿಕ ಲಸಿಕೆ ಅಭಿಯಾನಕ್ಕಾಗಿ ಮೋದಿಯವರಿಗೆ “ಧನ್ಯವಾದ” ಸಲ್ಲಿಸುವ ಪೋಸ್ಟರ್‌ಗಳನ್ನು ಹಾಕಿದೆ. ವಿದೇಶಗಳಿಗೆ ತೆರಳಿದ ಭಾರತೀಯರು  ಆ ದೇಶಗಳಿಗೆ ಸಲ್ಲಿಸುವ ವ್ಯಾಕ್ಸಿನೇಷನ್ ಸರ್ಟಿಫಿಕೇಟ್‌ ನೋಡಿ ಅಲ್ಲಿನ ಆಡಳಿತ ಸಿಬ್ಬಂದಿ ಗೊಂದಲಕ್ಕೊಳಗಾಗುತ್ತಿದ್ದಾರೆ ಎಂಬ ವರದಿಗಳಾಗಿವೆ.

ಹೈಕೋರ್ಟ್ ನಿಲುವನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿದ್ದಾರೆ.”ನ್ಯಾಯಾಧೀಶರು ಲಸಿಕೆ ಪ್ರಮಾಣಪತ್ರ ಮತ್ತು ಸರ್ಕಾರ ನೀಡಿದ ಕರೆನ್ಸಿ ನೋಟುಗಳ ನಡುವೆ ವ್ಯತ್ಯಾಸವನ್ನು ಮಾಡಲು ಸಾಧ್ಯವಾಗದಿರುವುದು ದುಃಖಕರವಾಗಿದೆ. ಯಾವ ನಿಯಮಗಳ ಪ್ರಕಾರ ಪ್ರಮಾಣಪತ್ರದಲ್ಲಿ ಪ್ರಧಾನ ಮಂತ್ರಿಯ ಫೋಟೋ ಇದೆ..” ಎಂದು ಕೆ.ಎಸ್.ನರೇಂದ್ರನ್‌ ಎಂಬವರು ಕೇಳಿದ್ದಾರೆ.


ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...