Homeಮುಖಪುಟಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕೋವಿಡ್‌ ಲಸಿಕೆ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆಯುವುದು ಅಪಾಯಕಾರಿ ಎಂದು ಹೇಳಿರುವ ಕೇರಳ ಹೈಕೋರ್ಟ್, “ಇಂದು ಮೋದಿ ಫೋಟೋ ತೆಗೆಯಿರಿ ಎಂದು ಕೇಳುತ್ತಾರೆ. ನಾಳೆ ಮಹಾತ್ಮಗಾಂಧಿಯವರ ಫೋಟೋವನ್ನು ಕರೆನ್ಸಿ ನೋಟಿನಿಂದ ತೆಗೆಯಿರಿ ಎಂದು ಯಾರಾದರೂ ಬಂದರೆ?” ಎಂದು ಕೇಳಿದೆ.

“ಮೋದಿಯವರ ಫೋಟೋವನ್ನು ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಹಾಕಿರುವುದು ಸರಿಯೇ” ಎಂದು ಪ್ರಶ್ನಿಸಿ ನಾಗರಿಕರೊಬ್ಬರು ಅರ್ಜಿ ಸಲ್ಲಿಸಿದ್ದರು. “ನಾನು ಎರಡು ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಯಿಂದ ತೆಗೆದುಕೊಂಡು ಹಣ ಪಾವತಿಸಿದ್ದೇನೆ. ಮೋದಿ ಫೋಟೋವನ್ನು ದೃಢೀಕರಣ ಪತ್ರದ ಮೇಲೆ ಹಾಕುವುದು ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತೆ” ಎಂದು ಅರ್ಜಿದಾರರು ವಾದಿಸಿದ್ದರು ಎಂದು ಲೈವ್‌ಲಾ ವರದಿ ಮಾಡಿದೆ.

ವಿಚಾರಣೆ ಕೈಗೆತ್ತಿಕೊಂಡ ಜಸ್ಟೀಸ್‌ ಎನ್‌.ನಗರೇಶ್‌‌ ಅವರಿದ್ದ ಪೀಠವು, “ಲಸಿಕೆ ಸರ್ಟಿಫಿಕೇಟ್‌ನಿಂದ ಮೋದಿ ಫೋಟೋವನ್ನು ತೆಗೆಯುವುದು ಅಪಾಯಕಾರಿ ಪ್ರತಿಪಾದನೆ” ಎಂದು ಅಭಿಪ್ರಾಯಪಟ್ಟಿದೆ.

“ಇದು ಅತ್ಯಂತ ಅಪಾಯಕಾರಿ ಪ್ರತಿಪಾದನೆ. ನಾಳೆ ಮತ್ತೊಬ್ಬ ಬಂದು ಪ್ರತಿಭಟನೆ ನಡೆಸಿ, ನನಗೆ ಮಹಾತ್ಮ ಗಾಂಧಿಯವರನ್ನು ಕಂಡರೆ ಇಷ್ಟವಿಲ್ಲ. ನನ್ನ ಬೆವರು ಮತ್ತು ರಕ್ತದಿಂದ ಸಂಪಾದಿಸಿದ ಹಣದಲ್ಲಿ ಗಾಂಧೀಜಿಯರ ಫೋಟೋವನ್ನು ಹಾಕಬೇಡಿ. ಅದನ್ನು ತೆಗೆಯಿರಿ ಎಂದರೆ ಏನು ಮಾಡುವುದು?” ಎಂದು ಕೋರ್ಟ್ ಕೇಳಿದೆ. ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ಅರ್ಜಿದಾರರ ವಕೀಲ ಅಜಿತ್ ರಾಯ್ ಪ್ರತಿಕ್ರಿಯಿಸಿ, “ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಾವಳಿಗಳ ಪ್ರಕಾರ ಕರೆನ್ಸಿಯಲ್ಲಿ ಗಾಂಧಿಯವರ ಮುಖವನ್ನು ಮುದ್ರಿಸಲಾಗಿದೆ. ಆದರೆ ಲಸಿಕೆ ಪ್ರಮಾಣಪತ್ರಗಳಲ್ಲಿ ಮೋದಿಯವರ ಮುಖದ ಅಗತ್ಯವಿರುವ ಯಾವುದೇ ರೀತಿಯ ಶಾಸನಬದ್ಧ ನಿಬಂಧನೆಗಳಿಲ್ಲ” ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಲು ನ್ಯಾಯಾಲಯ ಹೆಚ್ಚಿನ ಸಮಯವನ್ನು ನೀಡಬೇಕು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೋರಿದರು. ಹೀಗಾಗಿ ಪೀಠವು ನವೆಂಬರ್ 23ಕ್ಕೆ ಪ್ರಕರಣವನ್ನು ಮುಂದೂಡಿತು.

ದಿ ವೈರ್ ವಿಶ್ಲೇಷಿಸಿದಂತೆ, “ತನ್ನದೇ ಆದ ರಾಜಕೀಯ ಮತ್ತು ವ್ಯಕ್ತಿತ್ವದ ಆರಾಧನೆಯನ್ನು ಉತ್ತೇಜಿಸಲು” ಒಬ್ಬ ನಾಯಕ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಬಳಸುತ್ತಿರುವ ಏಕೈಕ ದೇಶ ಬಹುಶಃ ಭಾರತ ಮಾತ್ರ. ಯುಎಸ್, ಇಸ್ರೇಲ್ ಮತ್ತು ಇತರ ಕೆಲವು ದೇಶಗಳು ಲಸಿಕೆ ಸ್ವೀಕರಿಸಿದವರಿಗೆ ನೀಡಿದ ಪ್ರಮಾಣಪತ್ರ ಅಥವಾ ಕಾರ್ಡ್‌ಗಳಿಗೆ ಹೋಲಿಸಿದರೆ ಭಾರತದ ಪ್ರಮಾಣಪತ್ರ ಸಂಪೂರ್ಣ ಭಿನ್ನವಾಗಿದೆ.

ಕೇಂದ್ರ ಸರ್ಕಾರವು ದೇಶದಾದ್ಯಂತ ಬೀದಿಗಳಲ್ಲಿ, ಭಾರತದ ಸಾಮೂಹಿಕ ಲಸಿಕೆ ಅಭಿಯಾನಕ್ಕಾಗಿ ಮೋದಿಯವರಿಗೆ “ಧನ್ಯವಾದ” ಸಲ್ಲಿಸುವ ಪೋಸ್ಟರ್‌ಗಳನ್ನು ಹಾಕಿದೆ. ವಿದೇಶಗಳಿಗೆ ತೆರಳಿದ ಭಾರತೀಯರು  ಆ ದೇಶಗಳಿಗೆ ಸಲ್ಲಿಸುವ ವ್ಯಾಕ್ಸಿನೇಷನ್ ಸರ್ಟಿಫಿಕೇಟ್‌ ನೋಡಿ ಅಲ್ಲಿನ ಆಡಳಿತ ಸಿಬ್ಬಂದಿ ಗೊಂದಲಕ್ಕೊಳಗಾಗುತ್ತಿದ್ದಾರೆ ಎಂಬ ವರದಿಗಳಾಗಿವೆ.

ಹೈಕೋರ್ಟ್ ನಿಲುವನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿದ್ದಾರೆ.”ನ್ಯಾಯಾಧೀಶರು ಲಸಿಕೆ ಪ್ರಮಾಣಪತ್ರ ಮತ್ತು ಸರ್ಕಾರ ನೀಡಿದ ಕರೆನ್ಸಿ ನೋಟುಗಳ ನಡುವೆ ವ್ಯತ್ಯಾಸವನ್ನು ಮಾಡಲು ಸಾಧ್ಯವಾಗದಿರುವುದು ದುಃಖಕರವಾಗಿದೆ. ಯಾವ ನಿಯಮಗಳ ಪ್ರಕಾರ ಪ್ರಮಾಣಪತ್ರದಲ್ಲಿ ಪ್ರಧಾನ ಮಂತ್ರಿಯ ಫೋಟೋ ಇದೆ..” ಎಂದು ಕೆ.ಎಸ್.ನರೇಂದ್ರನ್‌ ಎಂಬವರು ಕೇಳಿದ್ದಾರೆ.


ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...