Homeಮುಖಪುಟಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಲಸಿಕೆ ಸರ್ಟಿಫಿಕೇಟ್‌ನಲ್ಲಿ ಮೋದಿ ಫೋಟೋ ತೆಗೆಯಿರಿ ಎಂದು ಕೇಳುವುದು ಅಪಾಯಕಾರಿ: ಕೇರಳ ಹೈಕೋರ್ಟ್

ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯವರ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕೋವಿಡ್‌ ಲಸಿಕೆ ಸರ್ಟಿಫಿಕೇಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆಯುವುದು ಅಪಾಯಕಾರಿ ಎಂದು ಹೇಳಿರುವ ಕೇರಳ ಹೈಕೋರ್ಟ್, “ಇಂದು ಮೋದಿ ಫೋಟೋ ತೆಗೆಯಿರಿ ಎಂದು ಕೇಳುತ್ತಾರೆ. ನಾಳೆ ಮಹಾತ್ಮಗಾಂಧಿಯವರ ಫೋಟೋವನ್ನು ಕರೆನ್ಸಿ ನೋಟಿನಿಂದ ತೆಗೆಯಿರಿ ಎಂದು ಯಾರಾದರೂ ಬಂದರೆ?” ಎಂದು ಕೇಳಿದೆ.

“ಮೋದಿಯವರ ಫೋಟೋವನ್ನು ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಹಾಕಿರುವುದು ಸರಿಯೇ” ಎಂದು ಪ್ರಶ್ನಿಸಿ ನಾಗರಿಕರೊಬ್ಬರು ಅರ್ಜಿ ಸಲ್ಲಿಸಿದ್ದರು. “ನಾನು ಎರಡು ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಯಿಂದ ತೆಗೆದುಕೊಂಡು ಹಣ ಪಾವತಿಸಿದ್ದೇನೆ. ಮೋದಿ ಫೋಟೋವನ್ನು ದೃಢೀಕರಣ ಪತ್ರದ ಮೇಲೆ ಹಾಕುವುದು ಮೂಲಭೂತ ಹಕ್ಕನ್ನು ಉಲ್ಲಂಘಿಸಿದಂತೆ” ಎಂದು ಅರ್ಜಿದಾರರು ವಾದಿಸಿದ್ದರು ಎಂದು ಲೈವ್‌ಲಾ ವರದಿ ಮಾಡಿದೆ.

ವಿಚಾರಣೆ ಕೈಗೆತ್ತಿಕೊಂಡ ಜಸ್ಟೀಸ್‌ ಎನ್‌.ನಗರೇಶ್‌‌ ಅವರಿದ್ದ ಪೀಠವು, “ಲಸಿಕೆ ಸರ್ಟಿಫಿಕೇಟ್‌ನಿಂದ ಮೋದಿ ಫೋಟೋವನ್ನು ತೆಗೆಯುವುದು ಅಪಾಯಕಾರಿ ಪ್ರತಿಪಾದನೆ” ಎಂದು ಅಭಿಪ್ರಾಯಪಟ್ಟಿದೆ.

“ಇದು ಅತ್ಯಂತ ಅಪಾಯಕಾರಿ ಪ್ರತಿಪಾದನೆ. ನಾಳೆ ಮತ್ತೊಬ್ಬ ಬಂದು ಪ್ರತಿಭಟನೆ ನಡೆಸಿ, ನನಗೆ ಮಹಾತ್ಮ ಗಾಂಧಿಯವರನ್ನು ಕಂಡರೆ ಇಷ್ಟವಿಲ್ಲ. ನನ್ನ ಬೆವರು ಮತ್ತು ರಕ್ತದಿಂದ ಸಂಪಾದಿಸಿದ ಹಣದಲ್ಲಿ ಗಾಂಧೀಜಿಯರ ಫೋಟೋವನ್ನು ಹಾಕಬೇಡಿ. ಅದನ್ನು ತೆಗೆಯಿರಿ ಎಂದರೆ ಏನು ಮಾಡುವುದು?” ಎಂದು ಕೋರ್ಟ್ ಕೇಳಿದೆ. ಪ್ರಧಾನಿ ಮೋದಿಯವರ ಭಾವಚಿತ್ರದ ಸಂಬಂಧ ವಿಚಾರಿಸುವಾಗ ರಾಷ್ಟ್ರಪಿತ ಮಹಾತ್ಮಗಾಂಧಿಯ ಭಾವಚಿತ್ರದ ಕುರಿತು ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿರಿ: ಉಪಚುನಾವಣೆ ಫಲಿತಾಂಶ ಬಿಜೆಪಿಗೆ ನೀಡಿದ ಉತ್ತರವಾಗಿದೆ: ಎಸ್‌ಕೆಎಂ

ಅರ್ಜಿದಾರರ ವಕೀಲ ಅಜಿತ್ ರಾಯ್ ಪ್ರತಿಕ್ರಿಯಿಸಿ, “ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಾವಳಿಗಳ ಪ್ರಕಾರ ಕರೆನ್ಸಿಯಲ್ಲಿ ಗಾಂಧಿಯವರ ಮುಖವನ್ನು ಮುದ್ರಿಸಲಾಗಿದೆ. ಆದರೆ ಲಸಿಕೆ ಪ್ರಮಾಣಪತ್ರಗಳಲ್ಲಿ ಮೋದಿಯವರ ಮುಖದ ಅಗತ್ಯವಿರುವ ಯಾವುದೇ ರೀತಿಯ ಶಾಸನಬದ್ಧ ನಿಬಂಧನೆಗಳಿಲ್ಲ” ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಲು ನ್ಯಾಯಾಲಯ ಹೆಚ್ಚಿನ ಸಮಯವನ್ನು ನೀಡಬೇಕು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೋರಿದರು. ಹೀಗಾಗಿ ಪೀಠವು ನವೆಂಬರ್ 23ಕ್ಕೆ ಪ್ರಕರಣವನ್ನು ಮುಂದೂಡಿತು.

ದಿ ವೈರ್ ವಿಶ್ಲೇಷಿಸಿದಂತೆ, “ತನ್ನದೇ ಆದ ರಾಜಕೀಯ ಮತ್ತು ವ್ಯಕ್ತಿತ್ವದ ಆರಾಧನೆಯನ್ನು ಉತ್ತೇಜಿಸಲು” ಒಬ್ಬ ನಾಯಕ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ಬಳಸುತ್ತಿರುವ ಏಕೈಕ ದೇಶ ಬಹುಶಃ ಭಾರತ ಮಾತ್ರ. ಯುಎಸ್, ಇಸ್ರೇಲ್ ಮತ್ತು ಇತರ ಕೆಲವು ದೇಶಗಳು ಲಸಿಕೆ ಸ್ವೀಕರಿಸಿದವರಿಗೆ ನೀಡಿದ ಪ್ರಮಾಣಪತ್ರ ಅಥವಾ ಕಾರ್ಡ್‌ಗಳಿಗೆ ಹೋಲಿಸಿದರೆ ಭಾರತದ ಪ್ರಮಾಣಪತ್ರ ಸಂಪೂರ್ಣ ಭಿನ್ನವಾಗಿದೆ.

ಕೇಂದ್ರ ಸರ್ಕಾರವು ದೇಶದಾದ್ಯಂತ ಬೀದಿಗಳಲ್ಲಿ, ಭಾರತದ ಸಾಮೂಹಿಕ ಲಸಿಕೆ ಅಭಿಯಾನಕ್ಕಾಗಿ ಮೋದಿಯವರಿಗೆ “ಧನ್ಯವಾದ” ಸಲ್ಲಿಸುವ ಪೋಸ್ಟರ್‌ಗಳನ್ನು ಹಾಕಿದೆ. ವಿದೇಶಗಳಿಗೆ ತೆರಳಿದ ಭಾರತೀಯರು  ಆ ದೇಶಗಳಿಗೆ ಸಲ್ಲಿಸುವ ವ್ಯಾಕ್ಸಿನೇಷನ್ ಸರ್ಟಿಫಿಕೇಟ್‌ ನೋಡಿ ಅಲ್ಲಿನ ಆಡಳಿತ ಸಿಬ್ಬಂದಿ ಗೊಂದಲಕ್ಕೊಳಗಾಗುತ್ತಿದ್ದಾರೆ ಎಂಬ ವರದಿಗಳಾಗಿವೆ.

ಹೈಕೋರ್ಟ್ ನಿಲುವನ್ನು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿದ್ದಾರೆ.”ನ್ಯಾಯಾಧೀಶರು ಲಸಿಕೆ ಪ್ರಮಾಣಪತ್ರ ಮತ್ತು ಸರ್ಕಾರ ನೀಡಿದ ಕರೆನ್ಸಿ ನೋಟುಗಳ ನಡುವೆ ವ್ಯತ್ಯಾಸವನ್ನು ಮಾಡಲು ಸಾಧ್ಯವಾಗದಿರುವುದು ದುಃಖಕರವಾಗಿದೆ. ಯಾವ ನಿಯಮಗಳ ಪ್ರಕಾರ ಪ್ರಮಾಣಪತ್ರದಲ್ಲಿ ಪ್ರಧಾನ ಮಂತ್ರಿಯ ಫೋಟೋ ಇದೆ..” ಎಂದು ಕೆ.ಎಸ್.ನರೇಂದ್ರನ್‌ ಎಂಬವರು ಕೇಳಿದ್ದಾರೆ.


ಇದನ್ನೂ ಓದಿರಿ: ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....