Homeಕರ್ನಾಟಕಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

- Advertisement -
- Advertisement -

‘ಸಂವಿಧಾನವನ್ನು ಸಹಿಸಲಾಗದ ಮನುವಾದಿಗಳು ಸಂವಿಧಾನ ಬದಲಿಸುವುದೇ ತಮ್ಮ ಕರ್ತವ್ಯ ಎಂದರು; ಸಂವಿಧಾನ ಸುಟ್ಟರು. ಇಂತಹ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವುದು ಅತ್ಯಗತ್ಯ’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಹೇಳಿದರು.

ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಭಾಗವಹಿಸಿ ಮಾತನಾಡಿ, “ದೇಶದಲ್ಲಿ ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ;  ಬಾಬಾಸಾಹೇಬರು ಈ ಸಂವಿಧಾನ ನೀಡಿದ್ದರಿಂದ ನಾವೆಲ್ಲರೂ ಇಂದು ಒಳ್ಳೆ ಬಟ್ಟೆ ಹಾಕಿದ್ದೇವೆ, ಒಂದಷ್ಟು ಓದಿಕೊಂಡು ಒಳ್ಳೆ ಬದುಕು ಮಾಡುತ್ತಿದ್ದೇವೆ. ನಮ್ಮ ತಾತ ಮುತ್ತಾತರ ಕಾಲಕ್ಕೆ ಹೋಲಿಸಿದರೆ ಇಂದು ನಾವು ಬಹಳಷ್ಟು ಬದಲಾಗಿದ್ದೇವೆ. ಎಲ್ಲ ಜಾತಿಗಳ ಬಡವರು ಹಿಂದೆ ಹೇಗಿದ್ದರು? ಈಗ ಹೇಗಿದ್ದೇವೆ ಎಂದು ನೋಡಿದರೆ, ಸಂವಿಧಾನದ ಕಾರಣಕ್ಕೆ ಸಾಕಷ್ಟು ಬದಲಾವಣೆ ಆಗಿದೆ. ಸಂವಿಧಾನದಲ್ಲಿರುವ ಎಲ್ಲ ಆಶಯಗಳೂ ಈಡೇರಿದರೆ ಇನ್ನೂ ಎಷ್ಟೆಲ್ಲ ಬದಲಾಗಬಹುದು ಯೋಚಿಸಿ” ಎಂದರು.

“ಸಂವಿಧಾನವನ್ನು ಸಹಿಸಲಾಗದ ಮನುವಾದಿಗಳು ಸಂವಿಧಾನ ಬದಲಿಸುವುದೇ ತಮ್ಮ ಕರ್ತವ್ಯ ಎಂದು ಸಂವಿಧಾನ ಸುಟ್ಟರು, ಇಂತಹ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವುದು ಅತ್ಯಗತ್ಯ ಎಂದು ಹೇಳುತ್ತೇನೆ” ಎಂದು ಪ್ರತಿಪಾದಿಸಿದರು.

“ಇಲ್ಲಿ ಎಲ್ಲ ಸಂಘಟನೆಗಳೂ ಇದ್ದೇವೆ. ಆದರೆ, ಬಿಡಿಬಿಡಿ ಹೋರಾಟಮಾಡುತ್ತಿದ್ದೇವೆ. ತ್ಯಾಗಿಯವರು (ದಲಿತ ಸಂಘರ್ಷ ಸಮಿತಿ ಸಂಸ್ಥಾಪಕರಲ್ಲಿ ಒಬ್ಬರು) ಒಂದು ಮಾತು ಹೇಳುತ್ತಿದ್ದರು, ‘ನಾವು ಆ ಕಾಲದಲ್ಲಿ ಜನ ಎದ್ದೇಳಿ ಎನ್ನುತ್ತಿದ್ದೆವು, ಈಗ ಜನ ಎದ್ದು ದಿಕ್ಕಾಪಾಲಾಗಿ ಹೋಗುತ್ತಿದ್ದಾರೆ’ ಎನ್ನುತ್ತಿದ್ದರು. ಈಗ ಬಹುಶಃ ನಮ್ಮ ಸಂಘಟನೆಗಳ ಪರಿಸ್ಥಿತಿಯೂ ಅದೇ ಆಗಿದೆ, ನಾವೆಲ್ಲ ಒಂದೇ ದಿಕ್ಕಿನಲ್ಲಿ ಸಾಗುವುದಾದರೆ ಬಹುಶಃ ನಮ್ಮ ಆಶಯ ಈಡೇರಬಹುದು. ಆ ನಿಟ್ಟಿನಲ್ಲಿ, ಸಂವಿಧಾನ ಸಂರಕ್ಷಣಾ ಪಡೆಯನ್ನು ಕಟ್ಟುವ ಕೆಲಸವನ್ನು ದಸಂಸ ಸಂಪೂರ್ಣವಾಗಿ ಬೆಂಬಲಿಸುತ್ತದೆ” ಎಂದು ಹೇಳಿದರು.

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವವರೇ ನೈಜ ದೇಶಪ್ರೇಮಿಗಳು: ಪ್ರೊ. ಬರಗೂರು ರಾಮಚಂದ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...