Homeಮುಖಪುಟಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಸುಮಾರು 3,000 ಟನ್‌ಗಳಷ್ಟು ಮತ್ತು 12 ಲಕ್ಷ ಕೋಟಿ ರೂ.ಗಳ ಚಿನ್ನದ ನಿಕ್ಷೇಪವನ್ನು ಪತ್ತೆ ಮಾಡಿದೆ, ಇದು ಭಾರತದ ಪ್ರಸ್ತುತ ಇರುವ ಅಮೂಲ್ಯ ಲೋಹಕ್ಕಿಂತ ಐದು ಪಟ್ಟು ಹೆಚ್ಚಾಗಿದೆ ಎಂಬುದು ಸುಳ್ಳು ಸುದ್ದಿಯೆಂದು ತಿಳಿದುಬಂದಿದೆ.

ಇಲ್ಲಿನ ಸೋನ್ ಪಹಡಿ ಮತ್ತು ಹಾರ್ಡಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಜಿಲ್ಲಾ ಗಣಿಗಾರಿಕೆ ಅಧಿಕಾರಿ ಕೆ.ಕೆ.ರೈ ಶುಕ್ರವಾರ ತಿಳಿಸಿದ್ದರು. ಅದನ್ನು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ತಿರಸ್ಕರಿಸಿದ್ದು ಅಂದಾಜು ಎಂದರೆ ಸಾಧಾರಣ ಗುಣಮಟ್ಟದ ಸುಮಾರು 160 ಕೆಜಿ ಚಿನ್ನ ಮಾತ್ರ ಲಭ್ಯವಾಗಲಿದೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಈ ಮೊದಲು “1992-93ರಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆಯಿಂದ ಸೋನ್‌ಭದ್ರದಲ್ಲಿ ಚಿನ್ನದ ನಿಕ್ಷೇಪವನ್ನು ಕಂಡುಹಿಡಿಯುವ ಕೆಲಸವನ್ನು ಪ್ರಾರಂಭಿಸಲಾಯಿತು. ಈಗ ಸೋನ್ ಪಹಡಿಯಲ್ಲಿ ಸುಮಾರು 2,943.26 ಟನ್ ಹಾಗೂ ಹಾರ್ಡಿ ಬ್ಲಾಕ್‌ನಲ್ಲಿ ಸುಮಾರು 646.16 ಕಿಲೋಗ್ರಾಂಗಳಷ್ಟು ಚಿನ್ನ ಪತ್ತೆಯಾಗಿದೆ. ಇ-ಟೆಂಡರಿಂಗ್ ಮೂಲಕ ಈ ಬ್ಲಾಕ್‌ಗಳ ಹರಾಜು ಶೀಘ್ರದಲ್ಲೇ ಪ್ರಾರಂಭವಾಗಲಿದೆ” ಎಂದು ಅಧಿಕಾರಿಗಳು ಹೇಳಿದ್ದರು.

ಆದರೆ ಕಳೆದ ಒಂದು ವಾರದಿಂದ ಚಾಲ್ತಿಯಲ್ಲಿದ್ದ ಈ ವಿಷಯವನ್ನು ಜಿಎಸ್‌ಐನ ಕೋಲ್ಕತ್ತಾದ ಪ್ರಧಾನ ಕಚೇರಿಯು ಸ್ಪಷ್ಟವಾಗಿ ತಿರಸ್ಕರಿಸಿದೆ. ಉತ್ತರ ಪ್ರದೇಶದ ಗಣಿಗಾರಿಕೆ ಇಲಾಖೆ ಮತ್ತು ಸೋನ್‌ಭದ್ರದ ಸಂಗ್ರಾಹಕ ನಡುವೆ ಕೆಲವು ಪತ್ರವ್ಯವಹಾರಗಳು ಸೋರಿಕೆಯಾದ ನಂತರ ಈ ಗೊಂದಲ ಆರಂಭವಾಗಿದೆ. ಉತ್ತರ ಪ್ರದೇಶದ ಗಣಿ ಮತ್ತು ಖನಿಜಗಳ ನಿರ್ದೇಶನಾಲಯದಿಂದ (ಗಣಿಗಾರಿಕೆ ನಿರ್ದೇಶನಾಲಯ) ಈ ವರ್ಷದ ಜನವರಿ 31ರ ಪತ್ರವೊಂದು ಈ ಸುಳ್ಳು ಸುದ್ದಿ ಹರಡುವಿಕೆಗೆ ಕಾರಣವಾಗಿದೆ ಎಂದು ಜಿಎಸ್‌ಐ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಜನವರಿ 31ರ ಈ ಪತ್ರವು ಫೆಬ್ರವರಿ 19 ರಂದು ಸೋನ್‌ಭದ್ರದ ಸ್ಥಳೀಯ ಮಾಧ್ಯಮಗಳಿಗೆ ಸೋರಿಕೆಯಾದಾಗ ಸೋನ್‌ಭದ್ರ ಚಿನ್ನದಿಂದ ತುಂಬಿದೆ ಎಂಬ ಸುದ್ದಿ ದೇಶಾದ್ಯಂತ ಹರಡಿತು. ಈ ಜಿಲ್ಲೆಯಲ್ಲಿ 3000 ಟನ್ ಚಿನ್ನ ಸಿಗುತ್ತದೆ ಎಂಬ ಸುದ್ದಿಯ ನಂತರ, ಟಿವಿ ಚಾನೆಲ್‌ಗಳು ಭಾರತ ಮತ್ತೆ ಚಿನ್ನದ ಹಕ್ಕಿಯಾಗಲಿದೆ ಎಂಬಂತಹ ವಾತಾವರಣವನ್ನು ಸೃಷ್ಟಿಸಲು ಪ್ರಾರಂಭಿಸಿದ್ದರು.

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಕೂಡ ಇದನ್ನು ದೇವರ ಆಶೀರ್ವಾದ ಎಂದು ಕರೆದಿದ್ದರು. ಆದರೆ ಇದು ಸುಳ್ಳು ಸುದ್ದಿಯೆಂದು ಜಿಎಸ್‌ಐನ ಕೋಲ್ಕತಾ ಕೇಂದ್ರ ಕಚೇರಿ ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದೆ.

ಉತ್ತರ ಪ್ರದೇಶದ ಎರಡನೇ ಅತಿದೊಡ್ಡ ಜಿಲ್ಲೆ ಸೋನ್‌ಭದ್ರ – ನಾಲ್ಕು ರಾಜ್ಯಗಳೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿರುವ ಏಕೈಕ ಜಿಲ್ಲೆಯಾಗಿದೆ. ಪಶ್ಚಿಮಕ್ಕೆ ಮಧ್ಯಪ್ರದೇಶ, ದಕ್ಷಿಣಕ್ಕೆ ಚತ್ತೀಸ್‌ಘಡ, ಆಗ್ನೇಯಕ್ಕೆ ಜಾರ್ಖಂಡ್ ಮತ್ತು ಪೂರ್ವಕ್ಕೆ ಬಿಹಾರವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...