Homeಮುಖಪುಟಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಸುಮಾರು 3,000 ಟನ್‌ಗಳಷ್ಟು ಮತ್ತು 12 ಲಕ್ಷ ಕೋಟಿ ರೂ.ಗಳ ಚಿನ್ನದ ನಿಕ್ಷೇಪವನ್ನು ಪತ್ತೆ ಮಾಡಿದೆ, ಇದು ಭಾರತದ ಪ್ರಸ್ತುತ ಇರುವ ಅಮೂಲ್ಯ ಲೋಹಕ್ಕಿಂತ ಐದು ಪಟ್ಟು ಹೆಚ್ಚಾಗಿದೆ ಎಂಬುದು ಸುಳ್ಳು ಸುದ್ದಿಯೆಂದು ತಿಳಿದುಬಂದಿದೆ.

ಇಲ್ಲಿನ ಸೋನ್ ಪಹಡಿ ಮತ್ತು ಹಾರ್ಡಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಜಿಲ್ಲಾ ಗಣಿಗಾರಿಕೆ ಅಧಿಕಾರಿ ಕೆ.ಕೆ.ರೈ ಶುಕ್ರವಾರ ತಿಳಿಸಿದ್ದರು. ಅದನ್ನು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ತಿರಸ್ಕರಿಸಿದ್ದು ಅಂದಾಜು ಎಂದರೆ ಸಾಧಾರಣ ಗುಣಮಟ್ಟದ ಸುಮಾರು 160 ಕೆಜಿ ಚಿನ್ನ ಮಾತ್ರ ಲಭ್ಯವಾಗಲಿದೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಈ ಮೊದಲು “1992-93ರಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆಯಿಂದ ಸೋನ್‌ಭದ್ರದಲ್ಲಿ ಚಿನ್ನದ ನಿಕ್ಷೇಪವನ್ನು ಕಂಡುಹಿಡಿಯುವ ಕೆಲಸವನ್ನು ಪ್ರಾರಂಭಿಸಲಾಯಿತು. ಈಗ ಸೋನ್ ಪಹಡಿಯಲ್ಲಿ ಸುಮಾರು 2,943.26 ಟನ್ ಹಾಗೂ ಹಾರ್ಡಿ ಬ್ಲಾಕ್‌ನಲ್ಲಿ ಸುಮಾರು 646.16 ಕಿಲೋಗ್ರಾಂಗಳಷ್ಟು ಚಿನ್ನ ಪತ್ತೆಯಾಗಿದೆ. ಇ-ಟೆಂಡರಿಂಗ್ ಮೂಲಕ ಈ ಬ್ಲಾಕ್‌ಗಳ ಹರಾಜು ಶೀಘ್ರದಲ್ಲೇ ಪ್ರಾರಂಭವಾಗಲಿದೆ” ಎಂದು ಅಧಿಕಾರಿಗಳು ಹೇಳಿದ್ದರು.

ಆದರೆ ಕಳೆದ ಒಂದು ವಾರದಿಂದ ಚಾಲ್ತಿಯಲ್ಲಿದ್ದ ಈ ವಿಷಯವನ್ನು ಜಿಎಸ್‌ಐನ ಕೋಲ್ಕತ್ತಾದ ಪ್ರಧಾನ ಕಚೇರಿಯು ಸ್ಪಷ್ಟವಾಗಿ ತಿರಸ್ಕರಿಸಿದೆ. ಉತ್ತರ ಪ್ರದೇಶದ ಗಣಿಗಾರಿಕೆ ಇಲಾಖೆ ಮತ್ತು ಸೋನ್‌ಭದ್ರದ ಸಂಗ್ರಾಹಕ ನಡುವೆ ಕೆಲವು ಪತ್ರವ್ಯವಹಾರಗಳು ಸೋರಿಕೆಯಾದ ನಂತರ ಈ ಗೊಂದಲ ಆರಂಭವಾಗಿದೆ. ಉತ್ತರ ಪ್ರದೇಶದ ಗಣಿ ಮತ್ತು ಖನಿಜಗಳ ನಿರ್ದೇಶನಾಲಯದಿಂದ (ಗಣಿಗಾರಿಕೆ ನಿರ್ದೇಶನಾಲಯ) ಈ ವರ್ಷದ ಜನವರಿ 31ರ ಪತ್ರವೊಂದು ಈ ಸುಳ್ಳು ಸುದ್ದಿ ಹರಡುವಿಕೆಗೆ ಕಾರಣವಾಗಿದೆ ಎಂದು ಜಿಎಸ್‌ಐ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಜನವರಿ 31ರ ಈ ಪತ್ರವು ಫೆಬ್ರವರಿ 19 ರಂದು ಸೋನ್‌ಭದ್ರದ ಸ್ಥಳೀಯ ಮಾಧ್ಯಮಗಳಿಗೆ ಸೋರಿಕೆಯಾದಾಗ ಸೋನ್‌ಭದ್ರ ಚಿನ್ನದಿಂದ ತುಂಬಿದೆ ಎಂಬ ಸುದ್ದಿ ದೇಶಾದ್ಯಂತ ಹರಡಿತು. ಈ ಜಿಲ್ಲೆಯಲ್ಲಿ 3000 ಟನ್ ಚಿನ್ನ ಸಿಗುತ್ತದೆ ಎಂಬ ಸುದ್ದಿಯ ನಂತರ, ಟಿವಿ ಚಾನೆಲ್‌ಗಳು ಭಾರತ ಮತ್ತೆ ಚಿನ್ನದ ಹಕ್ಕಿಯಾಗಲಿದೆ ಎಂಬಂತಹ ವಾತಾವರಣವನ್ನು ಸೃಷ್ಟಿಸಲು ಪ್ರಾರಂಭಿಸಿದ್ದರು.

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಕೂಡ ಇದನ್ನು ದೇವರ ಆಶೀರ್ವಾದ ಎಂದು ಕರೆದಿದ್ದರು. ಆದರೆ ಇದು ಸುಳ್ಳು ಸುದ್ದಿಯೆಂದು ಜಿಎಸ್‌ಐನ ಕೋಲ್ಕತಾ ಕೇಂದ್ರ ಕಚೇರಿ ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದೆ.

ಉತ್ತರ ಪ್ರದೇಶದ ಎರಡನೇ ಅತಿದೊಡ್ಡ ಜಿಲ್ಲೆ ಸೋನ್‌ಭದ್ರ – ನಾಲ್ಕು ರಾಜ್ಯಗಳೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿರುವ ಏಕೈಕ ಜಿಲ್ಲೆಯಾಗಿದೆ. ಪಶ್ಚಿಮಕ್ಕೆ ಮಧ್ಯಪ್ರದೇಶ, ದಕ್ಷಿಣಕ್ಕೆ ಚತ್ತೀಸ್‌ಘಡ, ಆಗ್ನೇಯಕ್ಕೆ ಜಾರ್ಖಂಡ್ ಮತ್ತು ಪೂರ್ವಕ್ಕೆ ಬಿಹಾರವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...