Homeಮುಖಪುಟಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಸುಮಾರು 3,000 ಟನ್‌ಗಳಷ್ಟು ಮತ್ತು 12 ಲಕ್ಷ ಕೋಟಿ ರೂ.ಗಳ ಚಿನ್ನದ ನಿಕ್ಷೇಪವನ್ನು ಪತ್ತೆ ಮಾಡಿದೆ, ಇದು ಭಾರತದ ಪ್ರಸ್ತುತ ಇರುವ ಅಮೂಲ್ಯ ಲೋಹಕ್ಕಿಂತ ಐದು ಪಟ್ಟು ಹೆಚ್ಚಾಗಿದೆ ಎಂಬುದು ಸುಳ್ಳು ಸುದ್ದಿಯೆಂದು ತಿಳಿದುಬಂದಿದೆ.

ಇಲ್ಲಿನ ಸೋನ್ ಪಹಡಿ ಮತ್ತು ಹಾರ್ಡಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಜಿಲ್ಲಾ ಗಣಿಗಾರಿಕೆ ಅಧಿಕಾರಿ ಕೆ.ಕೆ.ರೈ ಶುಕ್ರವಾರ ತಿಳಿಸಿದ್ದರು. ಅದನ್ನು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ತಿರಸ್ಕರಿಸಿದ್ದು ಅಂದಾಜು ಎಂದರೆ ಸಾಧಾರಣ ಗುಣಮಟ್ಟದ ಸುಮಾರು 160 ಕೆಜಿ ಚಿನ್ನ ಮಾತ್ರ ಲಭ್ಯವಾಗಲಿದೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಈ ಮೊದಲು “1992-93ರಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆಯಿಂದ ಸೋನ್‌ಭದ್ರದಲ್ಲಿ ಚಿನ್ನದ ನಿಕ್ಷೇಪವನ್ನು ಕಂಡುಹಿಡಿಯುವ ಕೆಲಸವನ್ನು ಪ್ರಾರಂಭಿಸಲಾಯಿತು. ಈಗ ಸೋನ್ ಪಹಡಿಯಲ್ಲಿ ಸುಮಾರು 2,943.26 ಟನ್ ಹಾಗೂ ಹಾರ್ಡಿ ಬ್ಲಾಕ್‌ನಲ್ಲಿ ಸುಮಾರು 646.16 ಕಿಲೋಗ್ರಾಂಗಳಷ್ಟು ಚಿನ್ನ ಪತ್ತೆಯಾಗಿದೆ. ಇ-ಟೆಂಡರಿಂಗ್ ಮೂಲಕ ಈ ಬ್ಲಾಕ್‌ಗಳ ಹರಾಜು ಶೀಘ್ರದಲ್ಲೇ ಪ್ರಾರಂಭವಾಗಲಿದೆ” ಎಂದು ಅಧಿಕಾರಿಗಳು ಹೇಳಿದ್ದರು.

ಆದರೆ ಕಳೆದ ಒಂದು ವಾರದಿಂದ ಚಾಲ್ತಿಯಲ್ಲಿದ್ದ ಈ ವಿಷಯವನ್ನು ಜಿಎಸ್‌ಐನ ಕೋಲ್ಕತ್ತಾದ ಪ್ರಧಾನ ಕಚೇರಿಯು ಸ್ಪಷ್ಟವಾಗಿ ತಿರಸ್ಕರಿಸಿದೆ. ಉತ್ತರ ಪ್ರದೇಶದ ಗಣಿಗಾರಿಕೆ ಇಲಾಖೆ ಮತ್ತು ಸೋನ್‌ಭದ್ರದ ಸಂಗ್ರಾಹಕ ನಡುವೆ ಕೆಲವು ಪತ್ರವ್ಯವಹಾರಗಳು ಸೋರಿಕೆಯಾದ ನಂತರ ಈ ಗೊಂದಲ ಆರಂಭವಾಗಿದೆ. ಉತ್ತರ ಪ್ರದೇಶದ ಗಣಿ ಮತ್ತು ಖನಿಜಗಳ ನಿರ್ದೇಶನಾಲಯದಿಂದ (ಗಣಿಗಾರಿಕೆ ನಿರ್ದೇಶನಾಲಯ) ಈ ವರ್ಷದ ಜನವರಿ 31ರ ಪತ್ರವೊಂದು ಈ ಸುಳ್ಳು ಸುದ್ದಿ ಹರಡುವಿಕೆಗೆ ಕಾರಣವಾಗಿದೆ ಎಂದು ಜಿಎಸ್‌ಐ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಜನವರಿ 31ರ ಈ ಪತ್ರವು ಫೆಬ್ರವರಿ 19 ರಂದು ಸೋನ್‌ಭದ್ರದ ಸ್ಥಳೀಯ ಮಾಧ್ಯಮಗಳಿಗೆ ಸೋರಿಕೆಯಾದಾಗ ಸೋನ್‌ಭದ್ರ ಚಿನ್ನದಿಂದ ತುಂಬಿದೆ ಎಂಬ ಸುದ್ದಿ ದೇಶಾದ್ಯಂತ ಹರಡಿತು. ಈ ಜಿಲ್ಲೆಯಲ್ಲಿ 3000 ಟನ್ ಚಿನ್ನ ಸಿಗುತ್ತದೆ ಎಂಬ ಸುದ್ದಿಯ ನಂತರ, ಟಿವಿ ಚಾನೆಲ್‌ಗಳು ಭಾರತ ಮತ್ತೆ ಚಿನ್ನದ ಹಕ್ಕಿಯಾಗಲಿದೆ ಎಂಬಂತಹ ವಾತಾವರಣವನ್ನು ಸೃಷ್ಟಿಸಲು ಪ್ರಾರಂಭಿಸಿದ್ದರು.

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಕೂಡ ಇದನ್ನು ದೇವರ ಆಶೀರ್ವಾದ ಎಂದು ಕರೆದಿದ್ದರು. ಆದರೆ ಇದು ಸುಳ್ಳು ಸುದ್ದಿಯೆಂದು ಜಿಎಸ್‌ಐನ ಕೋಲ್ಕತಾ ಕೇಂದ್ರ ಕಚೇರಿ ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದೆ.

ಉತ್ತರ ಪ್ರದೇಶದ ಎರಡನೇ ಅತಿದೊಡ್ಡ ಜಿಲ್ಲೆ ಸೋನ್‌ಭದ್ರ – ನಾಲ್ಕು ರಾಜ್ಯಗಳೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿರುವ ಏಕೈಕ ಜಿಲ್ಲೆಯಾಗಿದೆ. ಪಶ್ಚಿಮಕ್ಕೆ ಮಧ್ಯಪ್ರದೇಶ, ದಕ್ಷಿಣಕ್ಕೆ ಚತ್ತೀಸ್‌ಘಡ, ಆಗ್ನೇಯಕ್ಕೆ ಜಾರ್ಖಂಡ್ ಮತ್ತು ಪೂರ್ವಕ್ಕೆ ಬಿಹಾರವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...