Homeಮುಖಪುಟಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಸುಮಾರು 3,000 ಟನ್‌ಗಳಷ್ಟು ಮತ್ತು 12 ಲಕ್ಷ ಕೋಟಿ ರೂ.ಗಳ ಚಿನ್ನದ ನಿಕ್ಷೇಪವನ್ನು ಪತ್ತೆ ಮಾಡಿದೆ, ಇದು ಭಾರತದ ಪ್ರಸ್ತುತ ಇರುವ ಅಮೂಲ್ಯ ಲೋಹಕ್ಕಿಂತ ಐದು ಪಟ್ಟು ಹೆಚ್ಚಾಗಿದೆ ಎಂಬುದು ಸುಳ್ಳು ಸುದ್ದಿಯೆಂದು ತಿಳಿದುಬಂದಿದೆ.

ಇಲ್ಲಿನ ಸೋನ್ ಪಹಡಿ ಮತ್ತು ಹಾರ್ಡಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಜಿಲ್ಲಾ ಗಣಿಗಾರಿಕೆ ಅಧಿಕಾರಿ ಕೆ.ಕೆ.ರೈ ಶುಕ್ರವಾರ ತಿಳಿಸಿದ್ದರು. ಅದನ್ನು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ತಿರಸ್ಕರಿಸಿದ್ದು ಅಂದಾಜು ಎಂದರೆ ಸಾಧಾರಣ ಗುಣಮಟ್ಟದ ಸುಮಾರು 160 ಕೆಜಿ ಚಿನ್ನ ಮಾತ್ರ ಲಭ್ಯವಾಗಲಿದೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಈ ಮೊದಲು “1992-93ರಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆಯಿಂದ ಸೋನ್‌ಭದ್ರದಲ್ಲಿ ಚಿನ್ನದ ನಿಕ್ಷೇಪವನ್ನು ಕಂಡುಹಿಡಿಯುವ ಕೆಲಸವನ್ನು ಪ್ರಾರಂಭಿಸಲಾಯಿತು. ಈಗ ಸೋನ್ ಪಹಡಿಯಲ್ಲಿ ಸುಮಾರು 2,943.26 ಟನ್ ಹಾಗೂ ಹಾರ್ಡಿ ಬ್ಲಾಕ್‌ನಲ್ಲಿ ಸುಮಾರು 646.16 ಕಿಲೋಗ್ರಾಂಗಳಷ್ಟು ಚಿನ್ನ ಪತ್ತೆಯಾಗಿದೆ. ಇ-ಟೆಂಡರಿಂಗ್ ಮೂಲಕ ಈ ಬ್ಲಾಕ್‌ಗಳ ಹರಾಜು ಶೀಘ್ರದಲ್ಲೇ ಪ್ರಾರಂಭವಾಗಲಿದೆ” ಎಂದು ಅಧಿಕಾರಿಗಳು ಹೇಳಿದ್ದರು.

ಆದರೆ ಕಳೆದ ಒಂದು ವಾರದಿಂದ ಚಾಲ್ತಿಯಲ್ಲಿದ್ದ ಈ ವಿಷಯವನ್ನು ಜಿಎಸ್‌ಐನ ಕೋಲ್ಕತ್ತಾದ ಪ್ರಧಾನ ಕಚೇರಿಯು ಸ್ಪಷ್ಟವಾಗಿ ತಿರಸ್ಕರಿಸಿದೆ. ಉತ್ತರ ಪ್ರದೇಶದ ಗಣಿಗಾರಿಕೆ ಇಲಾಖೆ ಮತ್ತು ಸೋನ್‌ಭದ್ರದ ಸಂಗ್ರಾಹಕ ನಡುವೆ ಕೆಲವು ಪತ್ರವ್ಯವಹಾರಗಳು ಸೋರಿಕೆಯಾದ ನಂತರ ಈ ಗೊಂದಲ ಆರಂಭವಾಗಿದೆ. ಉತ್ತರ ಪ್ರದೇಶದ ಗಣಿ ಮತ್ತು ಖನಿಜಗಳ ನಿರ್ದೇಶನಾಲಯದಿಂದ (ಗಣಿಗಾರಿಕೆ ನಿರ್ದೇಶನಾಲಯ) ಈ ವರ್ಷದ ಜನವರಿ 31ರ ಪತ್ರವೊಂದು ಈ ಸುಳ್ಳು ಸುದ್ದಿ ಹರಡುವಿಕೆಗೆ ಕಾರಣವಾಗಿದೆ ಎಂದು ಜಿಎಸ್‌ಐ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಜನವರಿ 31ರ ಈ ಪತ್ರವು ಫೆಬ್ರವರಿ 19 ರಂದು ಸೋನ್‌ಭದ್ರದ ಸ್ಥಳೀಯ ಮಾಧ್ಯಮಗಳಿಗೆ ಸೋರಿಕೆಯಾದಾಗ ಸೋನ್‌ಭದ್ರ ಚಿನ್ನದಿಂದ ತುಂಬಿದೆ ಎಂಬ ಸುದ್ದಿ ದೇಶಾದ್ಯಂತ ಹರಡಿತು. ಈ ಜಿಲ್ಲೆಯಲ್ಲಿ 3000 ಟನ್ ಚಿನ್ನ ಸಿಗುತ್ತದೆ ಎಂಬ ಸುದ್ದಿಯ ನಂತರ, ಟಿವಿ ಚಾನೆಲ್‌ಗಳು ಭಾರತ ಮತ್ತೆ ಚಿನ್ನದ ಹಕ್ಕಿಯಾಗಲಿದೆ ಎಂಬಂತಹ ವಾತಾವರಣವನ್ನು ಸೃಷ್ಟಿಸಲು ಪ್ರಾರಂಭಿಸಿದ್ದರು.

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಕೂಡ ಇದನ್ನು ದೇವರ ಆಶೀರ್ವಾದ ಎಂದು ಕರೆದಿದ್ದರು. ಆದರೆ ಇದು ಸುಳ್ಳು ಸುದ್ದಿಯೆಂದು ಜಿಎಸ್‌ಐನ ಕೋಲ್ಕತಾ ಕೇಂದ್ರ ಕಚೇರಿ ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದೆ.

ಉತ್ತರ ಪ್ರದೇಶದ ಎರಡನೇ ಅತಿದೊಡ್ಡ ಜಿಲ್ಲೆ ಸೋನ್‌ಭದ್ರ – ನಾಲ್ಕು ರಾಜ್ಯಗಳೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿರುವ ಏಕೈಕ ಜಿಲ್ಲೆಯಾಗಿದೆ. ಪಶ್ಚಿಮಕ್ಕೆ ಮಧ್ಯಪ್ರದೇಶ, ದಕ್ಷಿಣಕ್ಕೆ ಚತ್ತೀಸ್‌ಘಡ, ಆಗ್ನೇಯಕ್ಕೆ ಜಾರ್ಖಂಡ್ ಮತ್ತು ಪೂರ್ವಕ್ಕೆ ಬಿಹಾರವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...