Homeಮುಖಪುಟಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಸುಮಾರು 3,000 ಟನ್‌ಗಳಷ್ಟು ಮತ್ತು 12 ಲಕ್ಷ ಕೋಟಿ ರೂ.ಗಳ ಚಿನ್ನದ ನಿಕ್ಷೇಪವನ್ನು ಪತ್ತೆ ಮಾಡಿದೆ, ಇದು ಭಾರತದ ಪ್ರಸ್ತುತ ಇರುವ ಅಮೂಲ್ಯ ಲೋಹಕ್ಕಿಂತ ಐದು ಪಟ್ಟು ಹೆಚ್ಚಾಗಿದೆ ಎಂಬುದು ಸುಳ್ಳು ಸುದ್ದಿಯೆಂದು ತಿಳಿದುಬಂದಿದೆ.

ಇಲ್ಲಿನ ಸೋನ್ ಪಹಡಿ ಮತ್ತು ಹಾರ್ಡಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಜಿಲ್ಲಾ ಗಣಿಗಾರಿಕೆ ಅಧಿಕಾರಿ ಕೆ.ಕೆ.ರೈ ಶುಕ್ರವಾರ ತಿಳಿಸಿದ್ದರು. ಅದನ್ನು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ತಿರಸ್ಕರಿಸಿದ್ದು ಅಂದಾಜು ಎಂದರೆ ಸಾಧಾರಣ ಗುಣಮಟ್ಟದ ಸುಮಾರು 160 ಕೆಜಿ ಚಿನ್ನ ಮಾತ್ರ ಲಭ್ಯವಾಗಲಿದೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಈ ಮೊದಲು “1992-93ರಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆಯಿಂದ ಸೋನ್‌ಭದ್ರದಲ್ಲಿ ಚಿನ್ನದ ನಿಕ್ಷೇಪವನ್ನು ಕಂಡುಹಿಡಿಯುವ ಕೆಲಸವನ್ನು ಪ್ರಾರಂಭಿಸಲಾಯಿತು. ಈಗ ಸೋನ್ ಪಹಡಿಯಲ್ಲಿ ಸುಮಾರು 2,943.26 ಟನ್ ಹಾಗೂ ಹಾರ್ಡಿ ಬ್ಲಾಕ್‌ನಲ್ಲಿ ಸುಮಾರು 646.16 ಕಿಲೋಗ್ರಾಂಗಳಷ್ಟು ಚಿನ್ನ ಪತ್ತೆಯಾಗಿದೆ. ಇ-ಟೆಂಡರಿಂಗ್ ಮೂಲಕ ಈ ಬ್ಲಾಕ್‌ಗಳ ಹರಾಜು ಶೀಘ್ರದಲ್ಲೇ ಪ್ರಾರಂಭವಾಗಲಿದೆ” ಎಂದು ಅಧಿಕಾರಿಗಳು ಹೇಳಿದ್ದರು.

ಆದರೆ ಕಳೆದ ಒಂದು ವಾರದಿಂದ ಚಾಲ್ತಿಯಲ್ಲಿದ್ದ ಈ ವಿಷಯವನ್ನು ಜಿಎಸ್‌ಐನ ಕೋಲ್ಕತ್ತಾದ ಪ್ರಧಾನ ಕಚೇರಿಯು ಸ್ಪಷ್ಟವಾಗಿ ತಿರಸ್ಕರಿಸಿದೆ. ಉತ್ತರ ಪ್ರದೇಶದ ಗಣಿಗಾರಿಕೆ ಇಲಾಖೆ ಮತ್ತು ಸೋನ್‌ಭದ್ರದ ಸಂಗ್ರಾಹಕ ನಡುವೆ ಕೆಲವು ಪತ್ರವ್ಯವಹಾರಗಳು ಸೋರಿಕೆಯಾದ ನಂತರ ಈ ಗೊಂದಲ ಆರಂಭವಾಗಿದೆ. ಉತ್ತರ ಪ್ರದೇಶದ ಗಣಿ ಮತ್ತು ಖನಿಜಗಳ ನಿರ್ದೇಶನಾಲಯದಿಂದ (ಗಣಿಗಾರಿಕೆ ನಿರ್ದೇಶನಾಲಯ) ಈ ವರ್ಷದ ಜನವರಿ 31ರ ಪತ್ರವೊಂದು ಈ ಸುಳ್ಳು ಸುದ್ದಿ ಹರಡುವಿಕೆಗೆ ಕಾರಣವಾಗಿದೆ ಎಂದು ಜಿಎಸ್‌ಐ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಜನವರಿ 31ರ ಈ ಪತ್ರವು ಫೆಬ್ರವರಿ 19 ರಂದು ಸೋನ್‌ಭದ್ರದ ಸ್ಥಳೀಯ ಮಾಧ್ಯಮಗಳಿಗೆ ಸೋರಿಕೆಯಾದಾಗ ಸೋನ್‌ಭದ್ರ ಚಿನ್ನದಿಂದ ತುಂಬಿದೆ ಎಂಬ ಸುದ್ದಿ ದೇಶಾದ್ಯಂತ ಹರಡಿತು. ಈ ಜಿಲ್ಲೆಯಲ್ಲಿ 3000 ಟನ್ ಚಿನ್ನ ಸಿಗುತ್ತದೆ ಎಂಬ ಸುದ್ದಿಯ ನಂತರ, ಟಿವಿ ಚಾನೆಲ್‌ಗಳು ಭಾರತ ಮತ್ತೆ ಚಿನ್ನದ ಹಕ್ಕಿಯಾಗಲಿದೆ ಎಂಬಂತಹ ವಾತಾವರಣವನ್ನು ಸೃಷ್ಟಿಸಲು ಪ್ರಾರಂಭಿಸಿದ್ದರು.

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಕೂಡ ಇದನ್ನು ದೇವರ ಆಶೀರ್ವಾದ ಎಂದು ಕರೆದಿದ್ದರು. ಆದರೆ ಇದು ಸುಳ್ಳು ಸುದ್ದಿಯೆಂದು ಜಿಎಸ್‌ಐನ ಕೋಲ್ಕತಾ ಕೇಂದ್ರ ಕಚೇರಿ ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದೆ.

ಉತ್ತರ ಪ್ರದೇಶದ ಎರಡನೇ ಅತಿದೊಡ್ಡ ಜಿಲ್ಲೆ ಸೋನ್‌ಭದ್ರ – ನಾಲ್ಕು ರಾಜ್ಯಗಳೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿರುವ ಏಕೈಕ ಜಿಲ್ಲೆಯಾಗಿದೆ. ಪಶ್ಚಿಮಕ್ಕೆ ಮಧ್ಯಪ್ರದೇಶ, ದಕ್ಷಿಣಕ್ಕೆ ಚತ್ತೀಸ್‌ಘಡ, ಆಗ್ನೇಯಕ್ಕೆ ಜಾರ್ಖಂಡ್ ಮತ್ತು ಪೂರ್ವಕ್ಕೆ ಬಿಹಾರವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...