Homeಮುಖಪುಟಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಸುಮಾರು 3,000 ಟನ್‌ಗಳಷ್ಟು ಮತ್ತು 12 ಲಕ್ಷ ಕೋಟಿ ರೂ.ಗಳ ಚಿನ್ನದ ನಿಕ್ಷೇಪವನ್ನು ಪತ್ತೆ ಮಾಡಿದೆ, ಇದು ಭಾರತದ ಪ್ರಸ್ತುತ ಇರುವ ಅಮೂಲ್ಯ ಲೋಹಕ್ಕಿಂತ ಐದು ಪಟ್ಟು ಹೆಚ್ಚಾಗಿದೆ ಎಂಬುದು ಸುಳ್ಳು ಸುದ್ದಿಯೆಂದು ತಿಳಿದುಬಂದಿದೆ.

ಇಲ್ಲಿನ ಸೋನ್ ಪಹಡಿ ಮತ್ತು ಹಾರ್ಡಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಜಿಲ್ಲಾ ಗಣಿಗಾರಿಕೆ ಅಧಿಕಾರಿ ಕೆ.ಕೆ.ರೈ ಶುಕ್ರವಾರ ತಿಳಿಸಿದ್ದರು. ಅದನ್ನು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ತಿರಸ್ಕರಿಸಿದ್ದು ಅಂದಾಜು ಎಂದರೆ ಸಾಧಾರಣ ಗುಣಮಟ್ಟದ ಸುಮಾರು 160 ಕೆಜಿ ಚಿನ್ನ ಮಾತ್ರ ಲಭ್ಯವಾಗಲಿದೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಈ ಮೊದಲು “1992-93ರಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆಯಿಂದ ಸೋನ್‌ಭದ್ರದಲ್ಲಿ ಚಿನ್ನದ ನಿಕ್ಷೇಪವನ್ನು ಕಂಡುಹಿಡಿಯುವ ಕೆಲಸವನ್ನು ಪ್ರಾರಂಭಿಸಲಾಯಿತು. ಈಗ ಸೋನ್ ಪಹಡಿಯಲ್ಲಿ ಸುಮಾರು 2,943.26 ಟನ್ ಹಾಗೂ ಹಾರ್ಡಿ ಬ್ಲಾಕ್‌ನಲ್ಲಿ ಸುಮಾರು 646.16 ಕಿಲೋಗ್ರಾಂಗಳಷ್ಟು ಚಿನ್ನ ಪತ್ತೆಯಾಗಿದೆ. ಇ-ಟೆಂಡರಿಂಗ್ ಮೂಲಕ ಈ ಬ್ಲಾಕ್‌ಗಳ ಹರಾಜು ಶೀಘ್ರದಲ್ಲೇ ಪ್ರಾರಂಭವಾಗಲಿದೆ” ಎಂದು ಅಧಿಕಾರಿಗಳು ಹೇಳಿದ್ದರು.

ಆದರೆ ಕಳೆದ ಒಂದು ವಾರದಿಂದ ಚಾಲ್ತಿಯಲ್ಲಿದ್ದ ಈ ವಿಷಯವನ್ನು ಜಿಎಸ್‌ಐನ ಕೋಲ್ಕತ್ತಾದ ಪ್ರಧಾನ ಕಚೇರಿಯು ಸ್ಪಷ್ಟವಾಗಿ ತಿರಸ್ಕರಿಸಿದೆ. ಉತ್ತರ ಪ್ರದೇಶದ ಗಣಿಗಾರಿಕೆ ಇಲಾಖೆ ಮತ್ತು ಸೋನ್‌ಭದ್ರದ ಸಂಗ್ರಾಹಕ ನಡುವೆ ಕೆಲವು ಪತ್ರವ್ಯವಹಾರಗಳು ಸೋರಿಕೆಯಾದ ನಂತರ ಈ ಗೊಂದಲ ಆರಂಭವಾಗಿದೆ. ಉತ್ತರ ಪ್ರದೇಶದ ಗಣಿ ಮತ್ತು ಖನಿಜಗಳ ನಿರ್ದೇಶನಾಲಯದಿಂದ (ಗಣಿಗಾರಿಕೆ ನಿರ್ದೇಶನಾಲಯ) ಈ ವರ್ಷದ ಜನವರಿ 31ರ ಪತ್ರವೊಂದು ಈ ಸುಳ್ಳು ಸುದ್ದಿ ಹರಡುವಿಕೆಗೆ ಕಾರಣವಾಗಿದೆ ಎಂದು ಜಿಎಸ್‌ಐ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಜನವರಿ 31ರ ಈ ಪತ್ರವು ಫೆಬ್ರವರಿ 19 ರಂದು ಸೋನ್‌ಭದ್ರದ ಸ್ಥಳೀಯ ಮಾಧ್ಯಮಗಳಿಗೆ ಸೋರಿಕೆಯಾದಾಗ ಸೋನ್‌ಭದ್ರ ಚಿನ್ನದಿಂದ ತುಂಬಿದೆ ಎಂಬ ಸುದ್ದಿ ದೇಶಾದ್ಯಂತ ಹರಡಿತು. ಈ ಜಿಲ್ಲೆಯಲ್ಲಿ 3000 ಟನ್ ಚಿನ್ನ ಸಿಗುತ್ತದೆ ಎಂಬ ಸುದ್ದಿಯ ನಂತರ, ಟಿವಿ ಚಾನೆಲ್‌ಗಳು ಭಾರತ ಮತ್ತೆ ಚಿನ್ನದ ಹಕ್ಕಿಯಾಗಲಿದೆ ಎಂಬಂತಹ ವಾತಾವರಣವನ್ನು ಸೃಷ್ಟಿಸಲು ಪ್ರಾರಂಭಿಸಿದ್ದರು.

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಕೂಡ ಇದನ್ನು ದೇವರ ಆಶೀರ್ವಾದ ಎಂದು ಕರೆದಿದ್ದರು. ಆದರೆ ಇದು ಸುಳ್ಳು ಸುದ್ದಿಯೆಂದು ಜಿಎಸ್‌ಐನ ಕೋಲ್ಕತಾ ಕೇಂದ್ರ ಕಚೇರಿ ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದೆ.

ಉತ್ತರ ಪ್ರದೇಶದ ಎರಡನೇ ಅತಿದೊಡ್ಡ ಜಿಲ್ಲೆ ಸೋನ್‌ಭದ್ರ – ನಾಲ್ಕು ರಾಜ್ಯಗಳೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿರುವ ಏಕೈಕ ಜಿಲ್ಲೆಯಾಗಿದೆ. ಪಶ್ಚಿಮಕ್ಕೆ ಮಧ್ಯಪ್ರದೇಶ, ದಕ್ಷಿಣಕ್ಕೆ ಚತ್ತೀಸ್‌ಘಡ, ಆಗ್ನೇಯಕ್ಕೆ ಜಾರ್ಖಂಡ್ ಮತ್ತು ಪೂರ್ವಕ್ಕೆ ಬಿಹಾರವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...