Homeಮುಖಪುಟಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನಪತ್ತೆ ಎಂಬುದು ಸುಳ್ಳು ಸುದ್ದಿ: ಅಲ್ಲಿರುವುದು ಎಷ್ಟು ಗೊತ್ತೆ?

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ಸುಮಾರು 3,000 ಟನ್‌ಗಳಷ್ಟು ಮತ್ತು 12 ಲಕ್ಷ ಕೋಟಿ ರೂ.ಗಳ ಚಿನ್ನದ ನಿಕ್ಷೇಪವನ್ನು ಪತ್ತೆ ಮಾಡಿದೆ, ಇದು ಭಾರತದ ಪ್ರಸ್ತುತ ಇರುವ ಅಮೂಲ್ಯ ಲೋಹಕ್ಕಿಂತ ಐದು ಪಟ್ಟು ಹೆಚ್ಚಾಗಿದೆ ಎಂಬುದು ಸುಳ್ಳು ಸುದ್ದಿಯೆಂದು ತಿಳಿದುಬಂದಿದೆ.

ಇಲ್ಲಿನ ಸೋನ್ ಪಹಡಿ ಮತ್ತು ಹಾರ್ಡಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಚಿನ್ನದ ನಿಕ್ಷೇಪ ಪತ್ತೆಯಾಗಿದೆ ಎಂದು ಜಿಲ್ಲಾ ಗಣಿಗಾರಿಕೆ ಅಧಿಕಾರಿ ಕೆ.ಕೆ.ರೈ ಶುಕ್ರವಾರ ತಿಳಿಸಿದ್ದರು. ಅದನ್ನು ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ತಿರಸ್ಕರಿಸಿದ್ದು ಅಂದಾಜು ಎಂದರೆ ಸಾಧಾರಣ ಗುಣಮಟ್ಟದ ಸುಮಾರು 160 ಕೆಜಿ ಚಿನ್ನ ಮಾತ್ರ ಲಭ್ಯವಾಗಲಿದೆ ಎಂದು ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಈ ಮೊದಲು “1992-93ರಲ್ಲಿ ಭಾರತದ ಭೂವೈಜ್ಞಾನಿಕ ಸಮೀಕ್ಷೆಯಿಂದ ಸೋನ್‌ಭದ್ರದಲ್ಲಿ ಚಿನ್ನದ ನಿಕ್ಷೇಪವನ್ನು ಕಂಡುಹಿಡಿಯುವ ಕೆಲಸವನ್ನು ಪ್ರಾರಂಭಿಸಲಾಯಿತು. ಈಗ ಸೋನ್ ಪಹಡಿಯಲ್ಲಿ ಸುಮಾರು 2,943.26 ಟನ್ ಹಾಗೂ ಹಾರ್ಡಿ ಬ್ಲಾಕ್‌ನಲ್ಲಿ ಸುಮಾರು 646.16 ಕಿಲೋಗ್ರಾಂಗಳಷ್ಟು ಚಿನ್ನ ಪತ್ತೆಯಾಗಿದೆ. ಇ-ಟೆಂಡರಿಂಗ್ ಮೂಲಕ ಈ ಬ್ಲಾಕ್‌ಗಳ ಹರಾಜು ಶೀಘ್ರದಲ್ಲೇ ಪ್ರಾರಂಭವಾಗಲಿದೆ” ಎಂದು ಅಧಿಕಾರಿಗಳು ಹೇಳಿದ್ದರು.

ಆದರೆ ಕಳೆದ ಒಂದು ವಾರದಿಂದ ಚಾಲ್ತಿಯಲ್ಲಿದ್ದ ಈ ವಿಷಯವನ್ನು ಜಿಎಸ್‌ಐನ ಕೋಲ್ಕತ್ತಾದ ಪ್ರಧಾನ ಕಚೇರಿಯು ಸ್ಪಷ್ಟವಾಗಿ ತಿರಸ್ಕರಿಸಿದೆ. ಉತ್ತರ ಪ್ರದೇಶದ ಗಣಿಗಾರಿಕೆ ಇಲಾಖೆ ಮತ್ತು ಸೋನ್‌ಭದ್ರದ ಸಂಗ್ರಾಹಕ ನಡುವೆ ಕೆಲವು ಪತ್ರವ್ಯವಹಾರಗಳು ಸೋರಿಕೆಯಾದ ನಂತರ ಈ ಗೊಂದಲ ಆರಂಭವಾಗಿದೆ. ಉತ್ತರ ಪ್ರದೇಶದ ಗಣಿ ಮತ್ತು ಖನಿಜಗಳ ನಿರ್ದೇಶನಾಲಯದಿಂದ (ಗಣಿಗಾರಿಕೆ ನಿರ್ದೇಶನಾಲಯ) ಈ ವರ್ಷದ ಜನವರಿ 31ರ ಪತ್ರವೊಂದು ಈ ಸುಳ್ಳು ಸುದ್ದಿ ಹರಡುವಿಕೆಗೆ ಕಾರಣವಾಗಿದೆ ಎಂದು ಜಿಎಸ್‌ಐ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿದೆ.

ಜನವರಿ 31ರ ಈ ಪತ್ರವು ಫೆಬ್ರವರಿ 19 ರಂದು ಸೋನ್‌ಭದ್ರದ ಸ್ಥಳೀಯ ಮಾಧ್ಯಮಗಳಿಗೆ ಸೋರಿಕೆಯಾದಾಗ ಸೋನ್‌ಭದ್ರ ಚಿನ್ನದಿಂದ ತುಂಬಿದೆ ಎಂಬ ಸುದ್ದಿ ದೇಶಾದ್ಯಂತ ಹರಡಿತು. ಈ ಜಿಲ್ಲೆಯಲ್ಲಿ 3000 ಟನ್ ಚಿನ್ನ ಸಿಗುತ್ತದೆ ಎಂಬ ಸುದ್ದಿಯ ನಂತರ, ಟಿವಿ ಚಾನೆಲ್‌ಗಳು ಭಾರತ ಮತ್ತೆ ಚಿನ್ನದ ಹಕ್ಕಿಯಾಗಲಿದೆ ಎಂಬಂತಹ ವಾತಾವರಣವನ್ನು ಸೃಷ್ಟಿಸಲು ಪ್ರಾರಂಭಿಸಿದ್ದರು.

ವಿಶ್ವ ಚಿನ್ನದ ಮಂಡಳಿಯ ಪ್ರಕಾರ, ಭಾರತದಲ್ಲಿ ಪ್ರಸ್ತುತ 626 ಟನ್ ಚಿನ್ನದ ಸಂಗ್ರಹವಿದೆ. ಹೊಸದಾಗಿ ಸಿಕ್ಕಿರುವ ಈ ಮೀಸಲು ಚಿನ್ನ ಆ ಮೊತ್ತಕ್ಕಿಂತ ಐದು ಪಟ್ಟು ಹೆಚ್ಚು ಮತ್ತು ಸುಮಾರು 12 ಲಕ್ಷ ಕೋಟಿ ರೂ ಬೆಲೆ ಬಾಳುತ್ತದೆ ಎಂದೆಲ್ಲಾ ಅಂದಾಜಿಸಲಾಗಿತ್ತು.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಕೂಡ ಇದನ್ನು ದೇವರ ಆಶೀರ್ವಾದ ಎಂದು ಕರೆದಿದ್ದರು. ಆದರೆ ಇದು ಸುಳ್ಳು ಸುದ್ದಿಯೆಂದು ಜಿಎಸ್‌ಐನ ಕೋಲ್ಕತಾ ಕೇಂದ್ರ ಕಚೇರಿ ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದೆ.

ಉತ್ತರ ಪ್ರದೇಶದ ಎರಡನೇ ಅತಿದೊಡ್ಡ ಜಿಲ್ಲೆ ಸೋನ್‌ಭದ್ರ – ನಾಲ್ಕು ರಾಜ್ಯಗಳೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿರುವ ಏಕೈಕ ಜಿಲ್ಲೆಯಾಗಿದೆ. ಪಶ್ಚಿಮಕ್ಕೆ ಮಧ್ಯಪ್ರದೇಶ, ದಕ್ಷಿಣಕ್ಕೆ ಚತ್ತೀಸ್‌ಘಡ, ಆಗ್ನೇಯಕ್ಕೆ ಜಾರ್ಖಂಡ್ ಮತ್ತು ಪೂರ್ವಕ್ಕೆ ಬಿಹಾರವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...