Homeಫ್ಯಾಕ್ಟ್‌ಚೆಕ್Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಗುಜರಾತ್‌ನ ಅಹಮದಾಬಾದ್‌ನಲ್ಲಿ ರಾಣಿ ಕಾ ಹಜಿರಾ ಎಂಬ ಹೆಸರಿನ 1,600 ವರ್ಷಗಳಷ್ಟು ಹಳೆಯದಾದ ಭವ್ಯವಾದ ಹಿಂದೂ ಪ್ರದೇಶವನ್ನು ಮುಸ್ಲಿಮರು ವಶಪಡಿಸಿಕೊಂಡಿದ್ದರು. ನಿನ್ನೆ ಬಿಜೆಪಿ ಸರ್ಕಾರದ ಬುಲ್ಡೋಜರ್ ಅಲ್ಲಿ ತಿರುಗಾಡಿತು ಮತ್ತು ಜಿಹಾದಿಗಳನ್ನು ತೆರವುಗೊಳಿಸಿತು. ಈಗ ಮುಸಲ್ಮಾನರ ಕಪಿಮುಷ್ಠಿಯಿಂದ ಮುಕ್ತಿ ಪಡೆದಿದೆ. ಇದು ನಿಮ್ಮ ಒಂದು ಮತದ ಬೆಲೆ! ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಈ ವೈರಲ್ ವಿಡಿಯೋದಲ್ಲಿ ಭವ್ಯವಾದ ಐತಿಹಾಸಿಕ ಕಟ್ಟವೊಂದರಿಂದ ಪೊಲೀಸರು ಅಂಗಡಿಗಳನ್ನು ತೆರವುಗೊಳಿಸುತ್ತಿರುವುದನ್ನು ಕಾಣಬಹುದು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ವಿಡಿಯೋದಲ್ಲಿ ಉಲ್ಲೇಖಿಸಿರುವ ‘ರಾಣಿ ಕಾ ಹಜಿರಾ’ ಎಂಬ ಕೀ ವರ್ಡ್ ಬಳಸಿ ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವಿಕಿಪೀಡಿಯದಲ್ಲಿ ‘ರಾಣಿ ನೋ ಹಾಜಿರೋ’ ಎಂಬ ಶೀರ್ಷಿಕೆಯಲ್ಲಿ ಮಾಹಿತಿ ದೊರೆತಿದೆ. ಅದನ್ನು ಓದಿ ನೋಡಿದಾಗ, ‘ರಾಣಿ ನೋ ಹಾಜಿರೋ’ ಹಿಂದೂ ದೇವಾಲಯವಲ್ಲ. ಇದೊಂದು ಐತಿಹಾಸಿಕ ಕಟ್ಟಡ ಎಂದು ಗೊತ್ತಾಗಿದೆ. ರಾಣಿ ನೋ ಹಾಜಿರೋ ಗುಜರಾತ್‌ನ ಸುಲ್ತಾನ ಒಂದನೇ ಅಹ್ಮದ್ ಷಾ ಅವರ ಸಮಾಧಿಯ ಪೂರ್ವ ಭಾಗದ ಮಾನೆಕ್ ಚೌಕ್ ಬಳಿ ಇದೆ. ಇದು ಅಹ್ಮದ್ ಷಾ ಮತ್ತು ಆ ಕಾಲದ ಇತರ ಸುಲ್ತಾನರ ಪತ್ನಿಯರಿಗೆ ಸೇರಿವೆ. ಪ್ರವಾಸಿ ತಾಣವಾಗಿರುವ ಈ ಸ್ಥಳ ಈಗ ಪ್ರಸಿದ್ಧ ಮಾರುಕಟ್ಟೆಯಾಗಿ ಬದಲಾಗಿದ್ದು, ರಸ್ತೆಬದಿಯ ಆಹಾರಗಳಿಗೆ ಹೆಸರು ಮಾಡಿದೆ.

ವಿಡಿಯೋದಲ್ಲಿ ಕಾಣುವಂತೆ ತೆರವು ಕಾರ್ಯಾಚರಣೆಯ ಬಗ್ಗೆ ಪರಿಶೀಲಿಸಿದಾಗ, “ಮಾನೆಕ್ ಚೌಕ್‌ನ ರಾಣಿ ನೋ ಹಾಜಿರೋದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದು ಹಾಕಿದ ದೃಶ್ಯ ಅದಾಗಿದೆ ಎಂದು ತಿಳಿದು ಬಂದಿದೆ.

ಇಂಡಿಯಾ ಟುಡೇ ಮಲಯಾಳಂ ಫೆ.8,2024ರಂದು ವೈರಲ್ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್ ಮಾಡಿದ್ದು, “ಅಹ್ಮದಾಬಾದ್‌ನ ಮಾನೆಕ್ ಚೌಕ್‌ನ ರಾಣಿ ನೋ ಹಾಜಿರೋದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದುಹಾಕುತ್ತಿದೆ” ಎಂದು ವಿಡಿಯೋ ಚಿತ್ರೀಕರಿಸಿದ ವ್ಯಕ್ತಿ ಹೇಳಿದ್ದಾನೆ ಎಂದು ತಿಳಿಸಿದೆ.

ಮಲಯಾಳಂ ಸುದ್ದಿಯ ಲಿಂಕ್ ಇಲ್ಲಿದೆ 

ನಾವು ಗಮನಿಸಿದಂತೆ ವೈರಲ್ ವಿಡಿಯೋದಲ್ಲಿ ಕಟ್ಟಡದ ಕುರಿತ ಮಾಹಿತಿ ಫಲಕದಲ್ಲಿ ಬಳಿ ಗ್ರಾನೈಟ್‌ನಲ್ಲಿ ‘ರಾಣಿಯ ಸಮಾಧಿ’ ಎಂಬ ಫಲಕದಲ್ಲಿ ಈ ಕಟ್ಟಡ ಸುಲ್ತಾನ್ ಅಹ್ಮದ್ ಷಾ ಮತ್ತು ಆ ಕಾಲದ ಇತರ ಸುಲ್ತಾನರ ಪತ್ನಿಯರಿಗೆ ಸೇರಿವೆ ಎಂದು ಬರೆದಿರುವುದನ್ನು ಕಾಣಬಹುದು.

ಅಲ್ಲದೆ, ಹಳೆಯ ಅಹಮದಾಬಾದ್‌ನ ಪ್ರಸಿದ್ಧ ವೃತ್ತವಾದ ಮಾನೆಕ್ ಚೌಕ್ ಜನನಿಬೀಡ ಪ್ರದೇಶವಾಗಿದ್ದು ಇಲ್ಲಿನ ಅಕ್ರಮ ಅಂಗಡಿ-ಮುಗ್ಗಟ್ಟುಗಳಿಂದ ಜನರ ಸಂಚಾರಕ್ಕೆ ತೊಂದರೆಯಾಗುತ್ತಿತ್ತು ಮತ್ತು ಐತಿಹಾಸಿಕ ಕಟ್ಟಡಕ್ಕೂ ಸಹ ಹಾನಿ ಆಗುವ ಸಂಭವದಿಂದ ಗುಜರಾತ್‌ ಹೈಕೋರ್ಟಿನ ಆದೇಶದಂತೆ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದುಹಾಕಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

15 ನೇ ಶತಮಾನದಲ್ಲಿ ನಿರ್ಮಿಸಲಾದ ಈ ಐತಿಹಾಸಿಕ ಸ್ಮಾರಕವು ಹಿಂದೂ, ಜೈನ ಮತ್ತು ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಗಳ ಸಂಯೋಜನೆಯಾಗಿದೆ ಎಂದು ಅಹಮದಾಬಾದ್ ಪ್ರವಾಸೋದ್ಯಮ ವೆಬ್‌ಸೈಟ್‌ ಹೇಳಿಕೊಂಡಿದೆ.

ಇದನ್ನೂ ಓದಿ : Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...