Homeಫ್ಯಾಕ್ಟ್‌ಚೆಕ್Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಗುಜರಾತ್‌ನ ಅಹಮದಾಬಾದ್‌ನಲ್ಲಿ ರಾಣಿ ಕಾ ಹಜಿರಾ ಎಂಬ ಹೆಸರಿನ 1,600 ವರ್ಷಗಳಷ್ಟು ಹಳೆಯದಾದ ಭವ್ಯವಾದ ಹಿಂದೂ ಪ್ರದೇಶವನ್ನು ಮುಸ್ಲಿಮರು ವಶಪಡಿಸಿಕೊಂಡಿದ್ದರು. ನಿನ್ನೆ ಬಿಜೆಪಿ ಸರ್ಕಾರದ ಬುಲ್ಡೋಜರ್ ಅಲ್ಲಿ ತಿರುಗಾಡಿತು ಮತ್ತು ಜಿಹಾದಿಗಳನ್ನು ತೆರವುಗೊಳಿಸಿತು. ಈಗ ಮುಸಲ್ಮಾನರ ಕಪಿಮುಷ್ಠಿಯಿಂದ ಮುಕ್ತಿ ಪಡೆದಿದೆ. ಇದು ನಿಮ್ಮ ಒಂದು ಮತದ ಬೆಲೆ! ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಈ ವೈರಲ್ ವಿಡಿಯೋದಲ್ಲಿ ಭವ್ಯವಾದ ಐತಿಹಾಸಿಕ ಕಟ್ಟವೊಂದರಿಂದ ಪೊಲೀಸರು ಅಂಗಡಿಗಳನ್ನು ತೆರವುಗೊಳಿಸುತ್ತಿರುವುದನ್ನು ಕಾಣಬಹುದು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ವಿಡಿಯೋದಲ್ಲಿ ಉಲ್ಲೇಖಿಸಿರುವ ‘ರಾಣಿ ಕಾ ಹಜಿರಾ’ ಎಂಬ ಕೀ ವರ್ಡ್ ಬಳಸಿ ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವಿಕಿಪೀಡಿಯದಲ್ಲಿ ‘ರಾಣಿ ನೋ ಹಾಜಿರೋ’ ಎಂಬ ಶೀರ್ಷಿಕೆಯಲ್ಲಿ ಮಾಹಿತಿ ದೊರೆತಿದೆ. ಅದನ್ನು ಓದಿ ನೋಡಿದಾಗ, ‘ರಾಣಿ ನೋ ಹಾಜಿರೋ’ ಹಿಂದೂ ದೇವಾಲಯವಲ್ಲ. ಇದೊಂದು ಐತಿಹಾಸಿಕ ಕಟ್ಟಡ ಎಂದು ಗೊತ್ತಾಗಿದೆ. ರಾಣಿ ನೋ ಹಾಜಿರೋ ಗುಜರಾತ್‌ನ ಸುಲ್ತಾನ ಒಂದನೇ ಅಹ್ಮದ್ ಷಾ ಅವರ ಸಮಾಧಿಯ ಪೂರ್ವ ಭಾಗದ ಮಾನೆಕ್ ಚೌಕ್ ಬಳಿ ಇದೆ. ಇದು ಅಹ್ಮದ್ ಷಾ ಮತ್ತು ಆ ಕಾಲದ ಇತರ ಸುಲ್ತಾನರ ಪತ್ನಿಯರಿಗೆ ಸೇರಿವೆ. ಪ್ರವಾಸಿ ತಾಣವಾಗಿರುವ ಈ ಸ್ಥಳ ಈಗ ಪ್ರಸಿದ್ಧ ಮಾರುಕಟ್ಟೆಯಾಗಿ ಬದಲಾಗಿದ್ದು, ರಸ್ತೆಬದಿಯ ಆಹಾರಗಳಿಗೆ ಹೆಸರು ಮಾಡಿದೆ.

ವಿಡಿಯೋದಲ್ಲಿ ಕಾಣುವಂತೆ ತೆರವು ಕಾರ್ಯಾಚರಣೆಯ ಬಗ್ಗೆ ಪರಿಶೀಲಿಸಿದಾಗ, “ಮಾನೆಕ್ ಚೌಕ್‌ನ ರಾಣಿ ನೋ ಹಾಜಿರೋದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದು ಹಾಕಿದ ದೃಶ್ಯ ಅದಾಗಿದೆ ಎಂದು ತಿಳಿದು ಬಂದಿದೆ.

ಇಂಡಿಯಾ ಟುಡೇ ಮಲಯಾಳಂ ಫೆ.8,2024ರಂದು ವೈರಲ್ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್ ಮಾಡಿದ್ದು, “ಅಹ್ಮದಾಬಾದ್‌ನ ಮಾನೆಕ್ ಚೌಕ್‌ನ ರಾಣಿ ನೋ ಹಾಜಿರೋದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದುಹಾಕುತ್ತಿದೆ” ಎಂದು ವಿಡಿಯೋ ಚಿತ್ರೀಕರಿಸಿದ ವ್ಯಕ್ತಿ ಹೇಳಿದ್ದಾನೆ ಎಂದು ತಿಳಿಸಿದೆ.

ಮಲಯಾಳಂ ಸುದ್ದಿಯ ಲಿಂಕ್ ಇಲ್ಲಿದೆ 

ನಾವು ಗಮನಿಸಿದಂತೆ ವೈರಲ್ ವಿಡಿಯೋದಲ್ಲಿ ಕಟ್ಟಡದ ಕುರಿತ ಮಾಹಿತಿ ಫಲಕದಲ್ಲಿ ಬಳಿ ಗ್ರಾನೈಟ್‌ನಲ್ಲಿ ‘ರಾಣಿಯ ಸಮಾಧಿ’ ಎಂಬ ಫಲಕದಲ್ಲಿ ಈ ಕಟ್ಟಡ ಸುಲ್ತಾನ್ ಅಹ್ಮದ್ ಷಾ ಮತ್ತು ಆ ಕಾಲದ ಇತರ ಸುಲ್ತಾನರ ಪತ್ನಿಯರಿಗೆ ಸೇರಿವೆ ಎಂದು ಬರೆದಿರುವುದನ್ನು ಕಾಣಬಹುದು.

ಅಲ್ಲದೆ, ಹಳೆಯ ಅಹಮದಾಬಾದ್‌ನ ಪ್ರಸಿದ್ಧ ವೃತ್ತವಾದ ಮಾನೆಕ್ ಚೌಕ್ ಜನನಿಬೀಡ ಪ್ರದೇಶವಾಗಿದ್ದು ಇಲ್ಲಿನ ಅಕ್ರಮ ಅಂಗಡಿ-ಮುಗ್ಗಟ್ಟುಗಳಿಂದ ಜನರ ಸಂಚಾರಕ್ಕೆ ತೊಂದರೆಯಾಗುತ್ತಿತ್ತು ಮತ್ತು ಐತಿಹಾಸಿಕ ಕಟ್ಟಡಕ್ಕೂ ಸಹ ಹಾನಿ ಆಗುವ ಸಂಭವದಿಂದ ಗುಜರಾತ್‌ ಹೈಕೋರ್ಟಿನ ಆದೇಶದಂತೆ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದುಹಾಕಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

15 ನೇ ಶತಮಾನದಲ್ಲಿ ನಿರ್ಮಿಸಲಾದ ಈ ಐತಿಹಾಸಿಕ ಸ್ಮಾರಕವು ಹಿಂದೂ, ಜೈನ ಮತ್ತು ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಗಳ ಸಂಯೋಜನೆಯಾಗಿದೆ ಎಂದು ಅಹಮದಾಬಾದ್ ಪ್ರವಾಸೋದ್ಯಮ ವೆಬ್‌ಸೈಟ್‌ ಹೇಳಿಕೊಂಡಿದೆ.

ಇದನ್ನೂ ಓದಿ : Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...