Homeಫ್ಯಾಕ್ಟ್‌ಚೆಕ್Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಗುಜರಾತ್‌ನ ಅಹಮದಾಬಾದ್‌ನಲ್ಲಿ ರಾಣಿ ಕಾ ಹಜಿರಾ ಎಂಬ ಹೆಸರಿನ 1,600 ವರ್ಷಗಳಷ್ಟು ಹಳೆಯದಾದ ಭವ್ಯವಾದ ಹಿಂದೂ ಪ್ರದೇಶವನ್ನು ಮುಸ್ಲಿಮರು ವಶಪಡಿಸಿಕೊಂಡಿದ್ದರು. ನಿನ್ನೆ ಬಿಜೆಪಿ ಸರ್ಕಾರದ ಬುಲ್ಡೋಜರ್ ಅಲ್ಲಿ ತಿರುಗಾಡಿತು ಮತ್ತು ಜಿಹಾದಿಗಳನ್ನು ತೆರವುಗೊಳಿಸಿತು. ಈಗ ಮುಸಲ್ಮಾನರ ಕಪಿಮುಷ್ಠಿಯಿಂದ ಮುಕ್ತಿ ಪಡೆದಿದೆ. ಇದು ನಿಮ್ಮ ಒಂದು ಮತದ ಬೆಲೆ! ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಈ ವೈರಲ್ ವಿಡಿಯೋದಲ್ಲಿ ಭವ್ಯವಾದ ಐತಿಹಾಸಿಕ ಕಟ್ಟವೊಂದರಿಂದ ಪೊಲೀಸರು ಅಂಗಡಿಗಳನ್ನು ತೆರವುಗೊಳಿಸುತ್ತಿರುವುದನ್ನು ಕಾಣಬಹುದು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ವಿಡಿಯೋದಲ್ಲಿ ಉಲ್ಲೇಖಿಸಿರುವ ‘ರಾಣಿ ಕಾ ಹಜಿರಾ’ ಎಂಬ ಕೀ ವರ್ಡ್ ಬಳಸಿ ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವಿಕಿಪೀಡಿಯದಲ್ಲಿ ‘ರಾಣಿ ನೋ ಹಾಜಿರೋ’ ಎಂಬ ಶೀರ್ಷಿಕೆಯಲ್ಲಿ ಮಾಹಿತಿ ದೊರೆತಿದೆ. ಅದನ್ನು ಓದಿ ನೋಡಿದಾಗ, ‘ರಾಣಿ ನೋ ಹಾಜಿರೋ’ ಹಿಂದೂ ದೇವಾಲಯವಲ್ಲ. ಇದೊಂದು ಐತಿಹಾಸಿಕ ಕಟ್ಟಡ ಎಂದು ಗೊತ್ತಾಗಿದೆ. ರಾಣಿ ನೋ ಹಾಜಿರೋ ಗುಜರಾತ್‌ನ ಸುಲ್ತಾನ ಒಂದನೇ ಅಹ್ಮದ್ ಷಾ ಅವರ ಸಮಾಧಿಯ ಪೂರ್ವ ಭಾಗದ ಮಾನೆಕ್ ಚೌಕ್ ಬಳಿ ಇದೆ. ಇದು ಅಹ್ಮದ್ ಷಾ ಮತ್ತು ಆ ಕಾಲದ ಇತರ ಸುಲ್ತಾನರ ಪತ್ನಿಯರಿಗೆ ಸೇರಿವೆ. ಪ್ರವಾಸಿ ತಾಣವಾಗಿರುವ ಈ ಸ್ಥಳ ಈಗ ಪ್ರಸಿದ್ಧ ಮಾರುಕಟ್ಟೆಯಾಗಿ ಬದಲಾಗಿದ್ದು, ರಸ್ತೆಬದಿಯ ಆಹಾರಗಳಿಗೆ ಹೆಸರು ಮಾಡಿದೆ.

ವಿಡಿಯೋದಲ್ಲಿ ಕಾಣುವಂತೆ ತೆರವು ಕಾರ್ಯಾಚರಣೆಯ ಬಗ್ಗೆ ಪರಿಶೀಲಿಸಿದಾಗ, “ಮಾನೆಕ್ ಚೌಕ್‌ನ ರಾಣಿ ನೋ ಹಾಜಿರೋದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದು ಹಾಕಿದ ದೃಶ್ಯ ಅದಾಗಿದೆ ಎಂದು ತಿಳಿದು ಬಂದಿದೆ.

ಇಂಡಿಯಾ ಟುಡೇ ಮಲಯಾಳಂ ಫೆ.8,2024ರಂದು ವೈರಲ್ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್ ಮಾಡಿದ್ದು, “ಅಹ್ಮದಾಬಾದ್‌ನ ಮಾನೆಕ್ ಚೌಕ್‌ನ ರಾಣಿ ನೋ ಹಾಜಿರೋದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದುಹಾಕುತ್ತಿದೆ” ಎಂದು ವಿಡಿಯೋ ಚಿತ್ರೀಕರಿಸಿದ ವ್ಯಕ್ತಿ ಹೇಳಿದ್ದಾನೆ ಎಂದು ತಿಳಿಸಿದೆ.

ಮಲಯಾಳಂ ಸುದ್ದಿಯ ಲಿಂಕ್ ಇಲ್ಲಿದೆ 

ನಾವು ಗಮನಿಸಿದಂತೆ ವೈರಲ್ ವಿಡಿಯೋದಲ್ಲಿ ಕಟ್ಟಡದ ಕುರಿತ ಮಾಹಿತಿ ಫಲಕದಲ್ಲಿ ಬಳಿ ಗ್ರಾನೈಟ್‌ನಲ್ಲಿ ‘ರಾಣಿಯ ಸಮಾಧಿ’ ಎಂಬ ಫಲಕದಲ್ಲಿ ಈ ಕಟ್ಟಡ ಸುಲ್ತಾನ್ ಅಹ್ಮದ್ ಷಾ ಮತ್ತು ಆ ಕಾಲದ ಇತರ ಸುಲ್ತಾನರ ಪತ್ನಿಯರಿಗೆ ಸೇರಿವೆ ಎಂದು ಬರೆದಿರುವುದನ್ನು ಕಾಣಬಹುದು.

ಅಲ್ಲದೆ, ಹಳೆಯ ಅಹಮದಾಬಾದ್‌ನ ಪ್ರಸಿದ್ಧ ವೃತ್ತವಾದ ಮಾನೆಕ್ ಚೌಕ್ ಜನನಿಬೀಡ ಪ್ರದೇಶವಾಗಿದ್ದು ಇಲ್ಲಿನ ಅಕ್ರಮ ಅಂಗಡಿ-ಮುಗ್ಗಟ್ಟುಗಳಿಂದ ಜನರ ಸಂಚಾರಕ್ಕೆ ತೊಂದರೆಯಾಗುತ್ತಿತ್ತು ಮತ್ತು ಐತಿಹಾಸಿಕ ಕಟ್ಟಡಕ್ಕೂ ಸಹ ಹಾನಿ ಆಗುವ ಸಂಭವದಿಂದ ಗುಜರಾತ್‌ ಹೈಕೋರ್ಟಿನ ಆದೇಶದಂತೆ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದುಹಾಕಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

15 ನೇ ಶತಮಾನದಲ್ಲಿ ನಿರ್ಮಿಸಲಾದ ಈ ಐತಿಹಾಸಿಕ ಸ್ಮಾರಕವು ಹಿಂದೂ, ಜೈನ ಮತ್ತು ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಗಳ ಸಂಯೋಜನೆಯಾಗಿದೆ ಎಂದು ಅಹಮದಾಬಾದ್ ಪ್ರವಾಸೋದ್ಯಮ ವೆಬ್‌ಸೈಟ್‌ ಹೇಳಿಕೊಂಡಿದೆ.

ಇದನ್ನೂ ಓದಿ : Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...