Homeಫ್ಯಾಕ್ಟ್‌ಚೆಕ್Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಗುಜರಾತ್‌ನ ಅಹಮದಾಬಾದ್‌ನಲ್ಲಿ ರಾಣಿ ಕಾ ಹಜಿರಾ ಎಂಬ ಹೆಸರಿನ 1,600 ವರ್ಷಗಳಷ್ಟು ಹಳೆಯದಾದ ಭವ್ಯವಾದ ಹಿಂದೂ ಪ್ರದೇಶವನ್ನು ಮುಸ್ಲಿಮರು ವಶಪಡಿಸಿಕೊಂಡಿದ್ದರು. ನಿನ್ನೆ ಬಿಜೆಪಿ ಸರ್ಕಾರದ ಬುಲ್ಡೋಜರ್ ಅಲ್ಲಿ ತಿರುಗಾಡಿತು ಮತ್ತು ಜಿಹಾದಿಗಳನ್ನು ತೆರವುಗೊಳಿಸಿತು. ಈಗ ಮುಸಲ್ಮಾನರ ಕಪಿಮುಷ್ಠಿಯಿಂದ ಮುಕ್ತಿ ಪಡೆದಿದೆ. ಇದು ನಿಮ್ಮ ಒಂದು ಮತದ ಬೆಲೆ! ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಈ ವೈರಲ್ ವಿಡಿಯೋದಲ್ಲಿ ಭವ್ಯವಾದ ಐತಿಹಾಸಿಕ ಕಟ್ಟವೊಂದರಿಂದ ಪೊಲೀಸರು ಅಂಗಡಿಗಳನ್ನು ತೆರವುಗೊಳಿಸುತ್ತಿರುವುದನ್ನು ಕಾಣಬಹುದು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ವಿಡಿಯೋದಲ್ಲಿ ಉಲ್ಲೇಖಿಸಿರುವ ‘ರಾಣಿ ಕಾ ಹಜಿರಾ’ ಎಂಬ ಕೀ ವರ್ಡ್ ಬಳಸಿ ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವಿಕಿಪೀಡಿಯದಲ್ಲಿ ‘ರಾಣಿ ನೋ ಹಾಜಿರೋ’ ಎಂಬ ಶೀರ್ಷಿಕೆಯಲ್ಲಿ ಮಾಹಿತಿ ದೊರೆತಿದೆ. ಅದನ್ನು ಓದಿ ನೋಡಿದಾಗ, ‘ರಾಣಿ ನೋ ಹಾಜಿರೋ’ ಹಿಂದೂ ದೇವಾಲಯವಲ್ಲ. ಇದೊಂದು ಐತಿಹಾಸಿಕ ಕಟ್ಟಡ ಎಂದು ಗೊತ್ತಾಗಿದೆ. ರಾಣಿ ನೋ ಹಾಜಿರೋ ಗುಜರಾತ್‌ನ ಸುಲ್ತಾನ ಒಂದನೇ ಅಹ್ಮದ್ ಷಾ ಅವರ ಸಮಾಧಿಯ ಪೂರ್ವ ಭಾಗದ ಮಾನೆಕ್ ಚೌಕ್ ಬಳಿ ಇದೆ. ಇದು ಅಹ್ಮದ್ ಷಾ ಮತ್ತು ಆ ಕಾಲದ ಇತರ ಸುಲ್ತಾನರ ಪತ್ನಿಯರಿಗೆ ಸೇರಿವೆ. ಪ್ರವಾಸಿ ತಾಣವಾಗಿರುವ ಈ ಸ್ಥಳ ಈಗ ಪ್ರಸಿದ್ಧ ಮಾರುಕಟ್ಟೆಯಾಗಿ ಬದಲಾಗಿದ್ದು, ರಸ್ತೆಬದಿಯ ಆಹಾರಗಳಿಗೆ ಹೆಸರು ಮಾಡಿದೆ.

ವಿಡಿಯೋದಲ್ಲಿ ಕಾಣುವಂತೆ ತೆರವು ಕಾರ್ಯಾಚರಣೆಯ ಬಗ್ಗೆ ಪರಿಶೀಲಿಸಿದಾಗ, “ಮಾನೆಕ್ ಚೌಕ್‌ನ ರಾಣಿ ನೋ ಹಾಜಿರೋದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದು ಹಾಕಿದ ದೃಶ್ಯ ಅದಾಗಿದೆ ಎಂದು ತಿಳಿದು ಬಂದಿದೆ.

ಇಂಡಿಯಾ ಟುಡೇ ಮಲಯಾಳಂ ಫೆ.8,2024ರಂದು ವೈರಲ್ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್ ಮಾಡಿದ್ದು, “ಅಹ್ಮದಾಬಾದ್‌ನ ಮಾನೆಕ್ ಚೌಕ್‌ನ ರಾಣಿ ನೋ ಹಾಜಿರೋದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದುಹಾಕುತ್ತಿದೆ” ಎಂದು ವಿಡಿಯೋ ಚಿತ್ರೀಕರಿಸಿದ ವ್ಯಕ್ತಿ ಹೇಳಿದ್ದಾನೆ ಎಂದು ತಿಳಿಸಿದೆ.

ಮಲಯಾಳಂ ಸುದ್ದಿಯ ಲಿಂಕ್ ಇಲ್ಲಿದೆ 

ನಾವು ಗಮನಿಸಿದಂತೆ ವೈರಲ್ ವಿಡಿಯೋದಲ್ಲಿ ಕಟ್ಟಡದ ಕುರಿತ ಮಾಹಿತಿ ಫಲಕದಲ್ಲಿ ಬಳಿ ಗ್ರಾನೈಟ್‌ನಲ್ಲಿ ‘ರಾಣಿಯ ಸಮಾಧಿ’ ಎಂಬ ಫಲಕದಲ್ಲಿ ಈ ಕಟ್ಟಡ ಸುಲ್ತಾನ್ ಅಹ್ಮದ್ ಷಾ ಮತ್ತು ಆ ಕಾಲದ ಇತರ ಸುಲ್ತಾನರ ಪತ್ನಿಯರಿಗೆ ಸೇರಿವೆ ಎಂದು ಬರೆದಿರುವುದನ್ನು ಕಾಣಬಹುದು.

ಅಲ್ಲದೆ, ಹಳೆಯ ಅಹಮದಾಬಾದ್‌ನ ಪ್ರಸಿದ್ಧ ವೃತ್ತವಾದ ಮಾನೆಕ್ ಚೌಕ್ ಜನನಿಬೀಡ ಪ್ರದೇಶವಾಗಿದ್ದು ಇಲ್ಲಿನ ಅಕ್ರಮ ಅಂಗಡಿ-ಮುಗ್ಗಟ್ಟುಗಳಿಂದ ಜನರ ಸಂಚಾರಕ್ಕೆ ತೊಂದರೆಯಾಗುತ್ತಿತ್ತು ಮತ್ತು ಐತಿಹಾಸಿಕ ಕಟ್ಟಡಕ್ಕೂ ಸಹ ಹಾನಿ ಆಗುವ ಸಂಭವದಿಂದ ಗುಜರಾತ್‌ ಹೈಕೋರ್ಟಿನ ಆದೇಶದಂತೆ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದುಹಾಕಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

15 ನೇ ಶತಮಾನದಲ್ಲಿ ನಿರ್ಮಿಸಲಾದ ಈ ಐತಿಹಾಸಿಕ ಸ್ಮಾರಕವು ಹಿಂದೂ, ಜೈನ ಮತ್ತು ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಗಳ ಸಂಯೋಜನೆಯಾಗಿದೆ ಎಂದು ಅಹಮದಾಬಾದ್ ಪ್ರವಾಸೋದ್ಯಮ ವೆಬ್‌ಸೈಟ್‌ ಹೇಳಿಕೊಂಡಿದೆ.

ಇದನ್ನೂ ಓದಿ : Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...