Homeಫ್ಯಾಕ್ಟ್‌ಚೆಕ್Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಗುಜರಾತ್‌ನ ಅಹಮದಾಬಾದ್‌ನಲ್ಲಿ ರಾಣಿ ಕಾ ಹಜಿರಾ ಎಂಬ ಹೆಸರಿನ 1,600 ವರ್ಷಗಳಷ್ಟು ಹಳೆಯದಾದ ಭವ್ಯವಾದ ಹಿಂದೂ ಪ್ರದೇಶವನ್ನು ಮುಸ್ಲಿಮರು ವಶಪಡಿಸಿಕೊಂಡಿದ್ದರು. ನಿನ್ನೆ ಬಿಜೆಪಿ ಸರ್ಕಾರದ ಬುಲ್ಡೋಜರ್ ಅಲ್ಲಿ ತಿರುಗಾಡಿತು ಮತ್ತು ಜಿಹಾದಿಗಳನ್ನು ತೆರವುಗೊಳಿಸಿತು. ಈಗ ಮುಸಲ್ಮಾನರ ಕಪಿಮುಷ್ಠಿಯಿಂದ ಮುಕ್ತಿ ಪಡೆದಿದೆ. ಇದು ನಿಮ್ಮ ಒಂದು ಮತದ ಬೆಲೆ! ಎಂಬ ಸಂದೇಶದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ಈ ವೈರಲ್ ವಿಡಿಯೋದಲ್ಲಿ ಭವ್ಯವಾದ ಐತಿಹಾಸಿಕ ಕಟ್ಟವೊಂದರಿಂದ ಪೊಲೀಸರು ಅಂಗಡಿಗಳನ್ನು ತೆರವುಗೊಳಿಸುತ್ತಿರುವುದನ್ನು ಕಾಣಬಹುದು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ವಿಡಿಯೋದಲ್ಲಿ ಉಲ್ಲೇಖಿಸಿರುವ ‘ರಾಣಿ ಕಾ ಹಜಿರಾ’ ಎಂಬ ಕೀ ವರ್ಡ್ ಬಳಸಿ ಗೂಗಲ್ ಸರ್ಚ್ ಮಾಡಿದ್ದೇವೆ. ಈ ವೇಳೆ ವಿಕಿಪೀಡಿಯದಲ್ಲಿ ‘ರಾಣಿ ನೋ ಹಾಜಿರೋ’ ಎಂಬ ಶೀರ್ಷಿಕೆಯಲ್ಲಿ ಮಾಹಿತಿ ದೊರೆತಿದೆ. ಅದನ್ನು ಓದಿ ನೋಡಿದಾಗ, ‘ರಾಣಿ ನೋ ಹಾಜಿರೋ’ ಹಿಂದೂ ದೇವಾಲಯವಲ್ಲ. ಇದೊಂದು ಐತಿಹಾಸಿಕ ಕಟ್ಟಡ ಎಂದು ಗೊತ್ತಾಗಿದೆ. ರಾಣಿ ನೋ ಹಾಜಿರೋ ಗುಜರಾತ್‌ನ ಸುಲ್ತಾನ ಒಂದನೇ ಅಹ್ಮದ್ ಷಾ ಅವರ ಸಮಾಧಿಯ ಪೂರ್ವ ಭಾಗದ ಮಾನೆಕ್ ಚೌಕ್ ಬಳಿ ಇದೆ. ಇದು ಅಹ್ಮದ್ ಷಾ ಮತ್ತು ಆ ಕಾಲದ ಇತರ ಸುಲ್ತಾನರ ಪತ್ನಿಯರಿಗೆ ಸೇರಿವೆ. ಪ್ರವಾಸಿ ತಾಣವಾಗಿರುವ ಈ ಸ್ಥಳ ಈಗ ಪ್ರಸಿದ್ಧ ಮಾರುಕಟ್ಟೆಯಾಗಿ ಬದಲಾಗಿದ್ದು, ರಸ್ತೆಬದಿಯ ಆಹಾರಗಳಿಗೆ ಹೆಸರು ಮಾಡಿದೆ.

ವಿಡಿಯೋದಲ್ಲಿ ಕಾಣುವಂತೆ ತೆರವು ಕಾರ್ಯಾಚರಣೆಯ ಬಗ್ಗೆ ಪರಿಶೀಲಿಸಿದಾಗ, “ಮಾನೆಕ್ ಚೌಕ್‌ನ ರಾಣಿ ನೋ ಹಾಜಿರೋದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದು ಹಾಕಿದ ದೃಶ್ಯ ಅದಾಗಿದೆ ಎಂದು ತಿಳಿದು ಬಂದಿದೆ.

ಇಂಡಿಯಾ ಟುಡೇ ಮಲಯಾಳಂ ಫೆ.8,2024ರಂದು ವೈರಲ್ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್ ಮಾಡಿದ್ದು, “ಅಹ್ಮದಾಬಾದ್‌ನ ಮಾನೆಕ್ ಚೌಕ್‌ನ ರಾಣಿ ನೋ ಹಾಜಿರೋದಲ್ಲಿ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದುಹಾಕುತ್ತಿದೆ” ಎಂದು ವಿಡಿಯೋ ಚಿತ್ರೀಕರಿಸಿದ ವ್ಯಕ್ತಿ ಹೇಳಿದ್ದಾನೆ ಎಂದು ತಿಳಿಸಿದೆ.

ಮಲಯಾಳಂ ಸುದ್ದಿಯ ಲಿಂಕ್ ಇಲ್ಲಿದೆ 

ನಾವು ಗಮನಿಸಿದಂತೆ ವೈರಲ್ ವಿಡಿಯೋದಲ್ಲಿ ಕಟ್ಟಡದ ಕುರಿತ ಮಾಹಿತಿ ಫಲಕದಲ್ಲಿ ಬಳಿ ಗ್ರಾನೈಟ್‌ನಲ್ಲಿ ‘ರಾಣಿಯ ಸಮಾಧಿ’ ಎಂಬ ಫಲಕದಲ್ಲಿ ಈ ಕಟ್ಟಡ ಸುಲ್ತಾನ್ ಅಹ್ಮದ್ ಷಾ ಮತ್ತು ಆ ಕಾಲದ ಇತರ ಸುಲ್ತಾನರ ಪತ್ನಿಯರಿಗೆ ಸೇರಿವೆ ಎಂದು ಬರೆದಿರುವುದನ್ನು ಕಾಣಬಹುದು.

ಅಲ್ಲದೆ, ಹಳೆಯ ಅಹಮದಾಬಾದ್‌ನ ಪ್ರಸಿದ್ಧ ವೃತ್ತವಾದ ಮಾನೆಕ್ ಚೌಕ್ ಜನನಿಬೀಡ ಪ್ರದೇಶವಾಗಿದ್ದು ಇಲ್ಲಿನ ಅಕ್ರಮ ಅಂಗಡಿ-ಮುಗ್ಗಟ್ಟುಗಳಿಂದ ಜನರ ಸಂಚಾರಕ್ಕೆ ತೊಂದರೆಯಾಗುತ್ತಿತ್ತು ಮತ್ತು ಐತಿಹಾಸಿಕ ಕಟ್ಟಡಕ್ಕೂ ಸಹ ಹಾನಿ ಆಗುವ ಸಂಭವದಿಂದ ಗುಜರಾತ್‌ ಹೈಕೋರ್ಟಿನ ಆದೇಶದಂತೆ ಅಕ್ರಮವಾಗಿ ನಿರ್ಮಿಸಲಾದ ಅಂಗಡಿಗಳನ್ನು ಮುನ್ಸಿಪಲ್ ಕಾರ್ಪೊರೇಷನ್ ತೆಗೆದುಹಾಕಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.

15 ನೇ ಶತಮಾನದಲ್ಲಿ ನಿರ್ಮಿಸಲಾದ ಈ ಐತಿಹಾಸಿಕ ಸ್ಮಾರಕವು ಹಿಂದೂ, ಜೈನ ಮತ್ತು ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಗಳ ಸಂಯೋಜನೆಯಾಗಿದೆ ಎಂದು ಅಹಮದಾಬಾದ್ ಪ್ರವಾಸೋದ್ಯಮ ವೆಬ್‌ಸೈಟ್‌ ಹೇಳಿಕೊಂಡಿದೆ.

ಇದನ್ನೂ ಓದಿ : Fact Check: ತುಮಕೂರಿನ ಪುರದಲ್ಲಿ ರಥಕ್ಕೆ ಬೆಂಕಿ ಇಟ್ಟ ಆರೋಪಿ ಮುಸ್ಲಿಂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...