Homeಕರೋನಾ ತಲ್ಲಣಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ನಾವು ಪ್ರತಿಭಟಿಸುತ್ತಿದ್ದೇವೆ ನಿಜ.  ಆದರೆ ಅದು ಕೊರೊನಾ ರೋಗಿಗಳು, ಕೊರೊನಾ ವಾರಿಯರ್ಸ್ ಅಥವಾ ಸಾಮಾನ್ಯ ನಾಗರಿಕರ ವಿರುದ್ಧ ಅಲ್ಲ- ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಕೊರೊನಾ ಸೋಂಕಿತರಿಗಾಗಿ ಬರುತ್ತಿದ್ದ ಆಮ್ಲಜನಕದ ವಾಹನಗಳನ್ನು ರೈತರು ದೆಹಲಿಯ ಗಡಿಗಳಲ್ಲಿ ತಡೆ ಹಿಡಿಯುತ್ತಿದ್ದಾರೆ ಎಂಬ ಬಿಜೆಪಿ ಸಂಸದನ ಆರೋಪಕ್ಕೆ ಬ್ಯಾರಿಕೇಡ್ ಹಾಕಿರುವುದು ಸರ್ಕಾರ, ರೈತರಲ್ಲ ಎನ್ನುವ ಮೂಲಕ ಪ್ರತಿಭಟನಾ ನಿರತ ರೈತರು ತಿರುಗೇಟು ನೀಡಿದ್ದಾರೆ.

ಕೇಂದ್ರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರಿಂದ ದೆಹಲಿಗೆ ವೈದ್ಯಕೀಯ ಬಳಕೆಯ ಆಮ್ಲಜನಕದ ಸಾಗಣೆಗೆ ತೊಂದರೆಯಾಗಿದೆ ಎಂದು ಬಿಜೆಪಿ ಸಂಸದ ಪರ್ವೇಶ್ ವರ್ಮಾ ಮಂಗಳವಾರ ಆರೋಪಿಸಿದ್ದರು.

ಸಂಸದ ಪವೇಶ್ ವರ್ಮಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ರೈತರು, ’ಪ್ರತಿಭಟನೆ ನಡೆಸುತ್ತಿರುವ ರೈತರು ವೈದ್ಯಕೀಯ ಆಮ್ಲಜನಕ ವಾಹಕಗಳನ್ನು ದೆಹಲಿಗೆ ಬಿಡುತ್ತಿಲ್ಲ ಎಂದು ಅಪ್ರಪ್ರಚಾರ ಮಾಡಲಾಗುತ್ತಿದೆ. ನಾವು ಯಾವುದೇ ಅಗತ್ಯ ಸೇವೆಗೆ ಅಡ್ಡಿಪಡಿಸಿಲ್ಲ’ ಎಂದು ರೈತರು ಆರೋಪಗಳನ್ನು ತಿರಸ್ಕರಿಸಿದರು.

ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮೇ 10 ರಂದು `ರೈತರ ರಾಷ್ಟ್ರೀಯ ಸಮಾವೇಶ’

 

ರೈತ ಸಂಘಗಳ ಪ್ರತಿನಿಧಿ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಬುಧವಾರ, ತಮ್ಮ ಆಂದೋಲನ ಆರಂಭವಾದಾಗಿನಿಂದ ತುರ್ತು ಸೇವೆಗಳಿಗೆ ಒಂದು ರಸ್ತೆಯನ್ನು ತೆರೆದಿಟ್ಟಿದೆ ಎಂದು ಹೇಳಿದೆ.

“ಒಂದೇ ಒಂದು ಆಂಬ್ಯುಲೆನ್ಸ್ ಅಥವಾ ಅಗತ್ಯ ಸರಕುಗಳ ಸೇವೆಯನ್ನು ನಿಲ್ಲಿಸಲಾಗಿಲ್ಲ. ಸರ್ಕಾರವೇ ಬಲವಾದ ಮತ್ತು ಬಹುಪದರದ ಬ್ಯಾರಿಕೇಡ್‌ಗಳನ್ನು ರಸ್ತೆಗಳಲ್ಲಿ ಹಾಕಿದೆ, ರೈತರಲ್ಲ. ರೈತರು ಮಾನವ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ಪ್ರತಿಯೊಬ್ಬರು ಮಾನವ ಹಕ್ಕುಗಳನ್ನು ಬೆಂಬಲಿಸುತ್ತಾರೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

’ಸರ್ಕಾರವೇ ರಸ್ತೆಗಳನ್ನು ನಿರ್ಬಂಧಿಸಿದ್ದಾರೆ. ಆದರೆ ದೆಹಲಿಗೆ ಆಮ್ಲಜನಕವನ್ನು ಬಿಡುವುದಿಲ್ಲ ಎಂದು ರೈತರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸಂಪೂರ್ಣವಾಗಿ ಸುಳ್ಳು ಸುದ್ದಿ. ನಾವು ಪ್ರತಿಭಟಿಸುತ್ತಿದ್ದೇವೆ ನಿಜ.  ಆದರೆ  ಅದು ಕೊರೊನಾ ರೋಗಿಗಳು, ಕೊರೊನಾ ವಾರಿಯರ್ಸ್ ಅಥವಾ ಸಾಮಾನ್ಯ ನಾಗರಿಕರ ವಿರುದ್ಧ ಅಲ್ಲ. ಕೃಷಿಯ ಬಗ್ಗೆ ಸರ್ಕಾರದ ತಾರತಮ್ಯ ನೀತಿಯ ವಿರೋಧಿ ಪ್ರತಿಭಟಿಸುತ್ತಿದ್ದೇವೆ” ಎಂದು ರೈತ ಸಂಘಟನೆ ಹೇಳಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ ಒಕ್ಕೂಟ ಸರ್ಕಾರ ಜಾರಿ ಮಾಡಿದ ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳ ಲಕ್ಷಾಂತರ ರೈತರು ಕಳೆದ ನವೆಂಬರ್‌ನಿಂದ ದೆಹಲಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ:  ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...