Homeಕರೋನಾ ತಲ್ಲಣಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ನಾವು ಪ್ರತಿಭಟಿಸುತ್ತಿದ್ದೇವೆ ನಿಜ.  ಆದರೆ ಅದು ಕೊರೊನಾ ರೋಗಿಗಳು, ಕೊರೊನಾ ವಾರಿಯರ್ಸ್ ಅಥವಾ ಸಾಮಾನ್ಯ ನಾಗರಿಕರ ವಿರುದ್ಧ ಅಲ್ಲ- ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಕೊರೊನಾ ಸೋಂಕಿತರಿಗಾಗಿ ಬರುತ್ತಿದ್ದ ಆಮ್ಲಜನಕದ ವಾಹನಗಳನ್ನು ರೈತರು ದೆಹಲಿಯ ಗಡಿಗಳಲ್ಲಿ ತಡೆ ಹಿಡಿಯುತ್ತಿದ್ದಾರೆ ಎಂಬ ಬಿಜೆಪಿ ಸಂಸದನ ಆರೋಪಕ್ಕೆ ಬ್ಯಾರಿಕೇಡ್ ಹಾಕಿರುವುದು ಸರ್ಕಾರ, ರೈತರಲ್ಲ ಎನ್ನುವ ಮೂಲಕ ಪ್ರತಿಭಟನಾ ನಿರತ ರೈತರು ತಿರುಗೇಟು ನೀಡಿದ್ದಾರೆ.

ಕೇಂದ್ರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರಿಂದ ದೆಹಲಿಗೆ ವೈದ್ಯಕೀಯ ಬಳಕೆಯ ಆಮ್ಲಜನಕದ ಸಾಗಣೆಗೆ ತೊಂದರೆಯಾಗಿದೆ ಎಂದು ಬಿಜೆಪಿ ಸಂಸದ ಪರ್ವೇಶ್ ವರ್ಮಾ ಮಂಗಳವಾರ ಆರೋಪಿಸಿದ್ದರು.

ಸಂಸದ ಪವೇಶ್ ವರ್ಮಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ರೈತರು, ’ಪ್ರತಿಭಟನೆ ನಡೆಸುತ್ತಿರುವ ರೈತರು ವೈದ್ಯಕೀಯ ಆಮ್ಲಜನಕ ವಾಹಕಗಳನ್ನು ದೆಹಲಿಗೆ ಬಿಡುತ್ತಿಲ್ಲ ಎಂದು ಅಪ್ರಪ್ರಚಾರ ಮಾಡಲಾಗುತ್ತಿದೆ. ನಾವು ಯಾವುದೇ ಅಗತ್ಯ ಸೇವೆಗೆ ಅಡ್ಡಿಪಡಿಸಿಲ್ಲ’ ಎಂದು ರೈತರು ಆರೋಪಗಳನ್ನು ತಿರಸ್ಕರಿಸಿದರು.

ಇದನ್ನೂ ಓದಿ: ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ಮೇ 10 ರಂದು `ರೈತರ ರಾಷ್ಟ್ರೀಯ ಸಮಾವೇಶ’

 

ರೈತ ಸಂಘಗಳ ಪ್ರತಿನಿಧಿ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಬುಧವಾರ, ತಮ್ಮ ಆಂದೋಲನ ಆರಂಭವಾದಾಗಿನಿಂದ ತುರ್ತು ಸೇವೆಗಳಿಗೆ ಒಂದು ರಸ್ತೆಯನ್ನು ತೆರೆದಿಟ್ಟಿದೆ ಎಂದು ಹೇಳಿದೆ.

“ಒಂದೇ ಒಂದು ಆಂಬ್ಯುಲೆನ್ಸ್ ಅಥವಾ ಅಗತ್ಯ ಸರಕುಗಳ ಸೇವೆಯನ್ನು ನಿಲ್ಲಿಸಲಾಗಿಲ್ಲ. ಸರ್ಕಾರವೇ ಬಲವಾದ ಮತ್ತು ಬಹುಪದರದ ಬ್ಯಾರಿಕೇಡ್‌ಗಳನ್ನು ರಸ್ತೆಗಳಲ್ಲಿ ಹಾಕಿದೆ, ರೈತರಲ್ಲ. ರೈತರು ಮಾನವ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ಪ್ರತಿಯೊಬ್ಬರು ಮಾನವ ಹಕ್ಕುಗಳನ್ನು ಬೆಂಬಲಿಸುತ್ತಾರೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.

’ಸರ್ಕಾರವೇ ರಸ್ತೆಗಳನ್ನು ನಿರ್ಬಂಧಿಸಿದ್ದಾರೆ. ಆದರೆ ದೆಹಲಿಗೆ ಆಮ್ಲಜನಕವನ್ನು ಬಿಡುವುದಿಲ್ಲ ಎಂದು ರೈತರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸಂಪೂರ್ಣವಾಗಿ ಸುಳ್ಳು ಸುದ್ದಿ. ನಾವು ಪ್ರತಿಭಟಿಸುತ್ತಿದ್ದೇವೆ ನಿಜ.  ಆದರೆ  ಅದು ಕೊರೊನಾ ರೋಗಿಗಳು, ಕೊರೊನಾ ವಾರಿಯರ್ಸ್ ಅಥವಾ ಸಾಮಾನ್ಯ ನಾಗರಿಕರ ವಿರುದ್ಧ ಅಲ್ಲ. ಕೃಷಿಯ ಬಗ್ಗೆ ಸರ್ಕಾರದ ತಾರತಮ್ಯ ನೀತಿಯ ವಿರೋಧಿ ಪ್ರತಿಭಟಿಸುತ್ತಿದ್ದೇವೆ” ಎಂದು ರೈತ ಸಂಘಟನೆ ಹೇಳಿದೆ.

ಕಳೆದ ಸೆಪ್ಟೆಂಬರ್‌ನಲ್ಲಿ ಒಕ್ಕೂಟ ಸರ್ಕಾರ ಜಾರಿ ಮಾಡಿದ ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳ ಲಕ್ಷಾಂತರ ರೈತರು ಕಳೆದ ನವೆಂಬರ್‌ನಿಂದ ದೆಹಲಿಯ ವಿವಿಧ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ:  ಸೋಂಕಿನಿಂದ ತತ್ತರಿಸಿರುವ ರಾಜ್ಯಗಳಿಗೆ ನೆರವಿನ ಹಸ್ತ ಬೇಕಿದೆ, ಬುರುಡೆ ಮಾತಲ್ಲ: ಪ್ರಧಾನಿಗೆ ಸಿದ್ದರಾಮಯ್ಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...