Homeಮುಖಪುಟಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮ: ರಾಹುಲ್ ಗಾಂಧಿ

ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮ: ರಾಹುಲ್ ಗಾಂಧಿ

- Advertisement -
- Advertisement -

ಅಯೋಧ್ಯೆಯ ರಾಮ ಜನ್ಮಭೂಮಿ ಟ್ರಸ್ಟ್ ಖರೀದಿಸಿದ ಭೂಮಿಯಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಸೋಮವಾರ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಶ್ರೀರಾಮನ ಹೆಸರಲ್ಲಿ ಮೋಸ ಮಾಡುವುದು ಅಧರ್ಮವಾಗಿದೆ ಎಂದು ಹೇಳಿದ್ದಾರೆ.

ಆಮ್‍ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‍ ಮತ್ತು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್‍ ಪಾಂಡೆ ಭಾನುವಾರ ಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ ರಾಮ ಜನ್ಮಭೂಮಿ ಟ್ರಸ್ಟ್‌ ಭೂ ದಂಧೆ ನಡೆಸುತ್ತಿದೆ ಎಂದು ದಾಖಲೆ ಸಮೇತ ಆರೋಪ ಮಾಡಿದ್ದರು.

ಇದನ್ನೂ ಓದಿ: ರಾಮ ಜನ್ಮಭೂಮಿ ಟ್ರಸ್ಟ್‌‌ನಿಂದ ಭೂ ದಂಧೆ: ರಾಮನ ಹೆಸರಲ್ಲಿ ಲೂಟಿ; ದಾಖಲೆ ಬಿಡುಗಡೆ

ಇಂದು ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, “ಶ್ರೀರಾಮ ಎಂದರೆ ನ್ಯಾಯ, ಸತ್ಯ, ಧರ್ಮ ಆಗಿದೆ. ಅವನ ಹೆಸರಲ್ಲಿ ಮೋಸ ಮಾಡುವುದು ಅಧರ್ಮವಾಗಿದೆ” ಎಂದು ಬರೆದಿರುವ ಅವರು “ರಾಮ ಮಂದಿರ ಹಗರಣ” ಎಂಬ ಹ್ಯಾಶ್‌ಟ್ಯಾಗ್‌ ಬಳಸಿದ್ದಾರೆ.

2 ಕೋಟಿ ರೂ. ಗೆ ಒಂದು ಜಮೀನು ಖರೀದಿ ಮಾಡಿ, ಕೇವಲ 5 ನಿಮಿಷಗಳ ಅಂತರದಲ್ಲಿ ರಾಮಜನ್ಮಭೂಮಿ ಟ್ರಸ್ಟ್‌‌ ಅದೇ ಜಮೀನನ್ನು 18.5 ಕೋಟಿ ರೂ.ಗಳಿಗೆ ಖರೀದಿಸಿದೆ ಎಂದು ಸಂಜಯ್‍ಸಿಂಗ್‍ ದಾಖಲೆಗಳ ಸಮೇತ ಅಪಾದನೆ ಮಾಡಿದ್ದಾರೆ.

ಅಯೋಧ್ಯೆಯ ರಾಮ ಮಂದಿರಕ್ಕೆ ಭೂಮಿ ಖರೀದಿಸುವಾಗ ಕೋಟ್ಯಂತರ ಮೊತ್ತದ ಆರ್ಥಿಕ ಅಕ್ರಮಗಳು ನಡೆದಿವೆ ಎಂದು ಸಮಾಜವಾದಿ ಪಕ್ಷದ ಮಾಜಿ ಶಾಸಕ ಪವನ್ ಪಾಂಡೆ ಕೂಡ ಭಾನುವಾರ ಆರೋಪಿಸಿದ್ದಾರೆ. ಏಕಕಾಲದಲ್ಲಿ ನಡೆದ ಪತ್ರಿಕಾಗೋಷ್ಠಿಗಳಲ್ಲಿ, (ಲಕ್ನೋದಲ್ಲಿ ಸಂಜಯ ಸಿಂಗ್ ಮತ್ತು ಅಯೋಧ್ಯೆಯಲ್ಲಿ ಪವನ್‍ ಪಾಂಡೆ) ಎರಡು ಭೂ ಖರೀದಿ ಒಪ್ಪಂದಗಳ ಪ್ರತಿಗಳನ್ನು ಮಾಧ್ಯಮಗಳಿಗೆ ನೀಡಲಾಗಿದೆ.

ಸಧ್ಯಕ್ಕೆ ಪ್ರಕರಣದ ವಿವಾದ ಹೆಚ್ಚುತ್ತಿದ್ದು ಬಿಜೆಪಿಯ ಮಾಜಿ ಮಿತ್ರ ಪ್ರಕ್ಷವಾಗಿರುವ ಶಿವಸೇನೆ ಕೂಡಾ ಇದರ ಬಗ್ಗೆ ಸ್ಪಷ್ಟನೆ ಕೋರಿದೆ. ಶಿವಸೇನೆ ಸಂಸದ ಸಂಜಯ್ ರಾವತ್‌, “ರಾಮ ಮತ್ತು ರಾಮ ಮಂದಿರದ ಹೋರಾಟವು ನಮಗೆ ನಂಬಿಕೆಯ ವಿಷಯವಾಗಿದೆ. ಕೆಲವರಿಗೆ ಇದು ರಾಜಕೀಯ ವಿಷಯ. ಮಂದಿರದ ನಿರ್ಮಾಣಕ್ಕಾಗಿ ರಚಿಸಲಾದ ಟ್ರಸ್ಟ್‌ ತಮ್ಮ ಮೇಲಿನ ಆರೋಪಗಳು ನಿಜವೋ ಸುಳ್ಳೋ ಎಂದು ಸ್ಪಷ್ಟಪಡಿಸಬೇಕು ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಟ್ರಸ್ಟ್‌ ಭೂ ದಂಧೆ – ಅಧರ್ಮ, ಪಾಪ ಮತ್ತು ಭಕ್ತರ ನಂಬಿಕೆಗೆ ಅಪಮಾನ: ಪ್ರಿಯಾಂಕ ಗಾಂಧಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...