Homeಕರ್ನಾಟಕ'ಇಷ್ಟೊಂದು ಮಂದಿ ಶೇ.100 ಅಂಕ ಗಳಿಸುವುದು ಅಸಾಧ್ಯ..'; ನೀಟ್ ಫಲಿತಾಂಶದ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ ಸಿದ್ದರಾಮಯ್ಯ

‘ಇಷ್ಟೊಂದು ಮಂದಿ ಶೇ.100 ಅಂಕ ಗಳಿಸುವುದು ಅಸಾಧ್ಯ..’; ನೀಟ್ ಫಲಿತಾಂಶದ ಕುರಿತು ಆಶ್ಚರ್ಯ ವ್ಯಕ್ತಪಡಿಸಿದ ಸಿದ್ದರಾಮಯ್ಯ

- Advertisement -
- Advertisement -

ಹರಿಯಾಣದ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕ ಗಳಿಸಿರುವ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಫಲಿತಾಂಶದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನೀಟ್ (NEET) ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು‌ ಬಂದಿದೆ. ಆದರೆ, ಈ ಹಿಂದೆ ಬಂದ ಟಾಪರ್‌ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ. 2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು, 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ 67 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ” ಎಂದು ವಿವರಿಸಿದ್ದಾರೆ.

“ನೀಟ್‌ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕ ಗಳಿಸುವುದು ಅಸಾಧ್ಯವೇ ಸರಿ. ಇದು ಕಾಕತಾಳೀಯವೋ ಅಥವಾ ಹೊಸ ಪ್ರಯೋಗವೋ? ಇದನ್ನು ಮೋದಿ ಸರ್ಕಾರವೇ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

“ನೀಟ್‌ನ 67 ಟಾಪರ್‌ಗಳಲ್ಲಿ 44 ಮಂದಿ ‘ಗ್ರೇಸ್‌ಮಾರ್ಕ್‌’ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ. ಗ್ರೇಸ್ ಅಂಕಗಳ ಆಧಾರದ ಮೇಲೆ ಇಷ್ಟೊಂದು ಪರೀಕ್ಷಾರ್ಥಿಗಳು ಟಾಪರ್‌ಗಳಾದಾಗ, ‘ಮಾರ್ಕಿಂಗ್ ಪ್ರಕ್ರಿಯೆ’ ಮತ್ತು ‘ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತು ಸಿಂಧುತ್ವ’ದ ಮೇಲೆ ಪ್ರಶ್ನೆ ಹುಟ್ಟುಹಾಕುವುದಿಲ್ಲವೆ? ಇನ್ನೊಂದು ಅಚ್ಚರಿಯ ವಿಷಯವೇನೆಂದರೆ 62 ರಿಂದ 69 ರವರೆಗಿನ ಸರಣಿ ಸಂಖ್ಯೆಗಳೊಂದಿಗೆ ನೀಟ್‌ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಒಂದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರು. ಈ ಪೈಕಿ 6 ಜನರು 720/720 ಅಂಕಗಳೊಂದಿಗೆ ನೀಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು 718 ಮತ್ತು 719 ಅಂಕಗಳನ್ನು 2 ಮಂದಿ ಪಡೆದಿದ್ದಾರೆ” ಎಂದು ಹೇಳಿದ್ದಾರೆ.

“ಮೇಲ್ನೋಟಕ್ಕೆ ಪರೀಕ್ಷಾ ಅಕ್ರಮ ನಡೆದಿರುವುದು ಕಂಡುಬಂದರೂ ಎನ್‌ಟಿಎ ಮತ್ತು ಮೋದಿ ಸರ್ಕಾರ ಈ ಫಲಿತಾಂಶವನ್ನು ಸಮರ್ಥಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಸೋಲಿನಿಂದಲೂ ಪಾಠ ಕಲಿತಂತೆ ಕಾಣುತ್ತಿಲ್ಲ” ಎಂದಿದ್ದಾರೆ.

“ಫರಿದಾಬಾದ್‌ನ ನೀಟ್‌ ಪರೀಕ್ಷಾ ಕೇಂದ್ರದಲ್ಲಿ ತಪ್ಪು ಪತ್ರಿಕೆಯನ್ನು ವಿತರಿಸಲಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು 45 ನಿಮಿಷಗಳನ್ನು ಕಳೆದುಕೊಳ್ಳವಂತಾಯಿತು. ಹಾಗಾಗಿ ಈ ಸಮಯಕ್ಕೆ ಪ್ರತಿಯಾಗಿ ಎನ್‌ಟಿಎ ಈ ಕೇಂದ್ರದ ಅಭ್ಯರ್ಥಿಗಳಿಗೆ ‘ಗ್ರೇಸ್‌ಮಾರ್ಕ್‌’ ನೀಡಿದೆ. ಇದು ನೂರು ಪ್ರತಿಶತ ಅಂಕ ಗಳಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಸಮಜಾಯಿಷಿ ನೀಡುತ್ತಿದೆ” ಎಂದು ಹೇಳಿದ್ದಾರೆ.

“ಎನ್‌ಟಿಎ ಪ್ರಾಸ್ಪೆಕ್ಟಸ್, ನೀಟ್ ಬ್ರೋಷರ್ ಮತ್ತು ಸರ್ಕಾರಿ ಸೂಚನೆಗಳಲ್ಲಿ ಈ ರೀತಿಯಲ್ಲಿ ಗ್ರೇಸ್ ಅಂಕಗಳನ್ನು ನೀಡುವ ಅವಕಾಶ ಇರುವ ಕುರಿತು ಯಾವುದೇ ಮಾಹಿತಿ ಇಲ್ಲ. ಹಾಗಾದರೆ ಈ ಗ್ರೇಸ್ ಮಾರ್ಕ್‌ಗಳನ್ನು ಯಾವ ಆಧಾರದ ಮೇಲೆ ನೀಡಲಾಗಿದೆ? ಈ ಬಗ್ಗೆ ಮೋದಿ ಸರ್ಕಾರದಿಂದ ಸಾರ್ವಜನಿಕ ಸೂಚನೆ ಅಥವಾ ಜಾಹೀರಾತು ನೀಡಲಾಗಿದೆಯೇ? ಬೇರೆ ಯಾವುದಾದರೂ ಕೇಂದ್ರದಲ್ಲಿ ಇದೇ ರೀತಿ ಗ್ರೇಸ್ ಮಾರ್ಕ್ಸ್ ನೀಡಲಾಗಿದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ನೀಡಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“2019 ರಿಂದ 2023 ರವರೆಗೆ, ನೀಟ್‌ ಪರೀಕ್ಷೆಯಲ್ಲಿ 600 ಅಂಕಗಳನ್ನು ಗಳಿಸಿದವರು ಕೈಗೆಟುಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸುಲಭವಾಗಿ ಪ್ರವೇಶ ಪಡೆದಿದ್ದರು. ಈ ವರ್ಷ ನೀಟ್ ಪರೀಕ್ಷೆಯ ಅಂಕಮಿತಿಯು 137 ಅಂಕಗಳಿಂದ 164 ಕ್ಕೆ ಏರಿಕೆಯಾಗಿದೆ. ಈ ಬಾರಿ 660 ಅಂಕ ಗಳಿಸಿದ ಅಭ್ಯರ್ಥಿಗಳು ಮಾತ್ರ ಕೈಗೆಟಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು. ನೀಟ್ ಪರೀಕ್ಷೆಗೆ ಹಾಜರಾಗಿರುವ 24 ಲಕ್ಷಕ್ಕೂ ಹೆಚ್ಚು ಯುವಕರು ಬಹುತೇಕ ಬಡ-ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರು. ವೈದ್ಯರಾಗುವ ಹಂಬಲ ಹೊಂದಿದವರು. ಆದರೆ ಈ ಪರೀಕ್ಷಾ ಗೊಂದಲದಿಂದಾಗಿ ಲಕ್ಷಾಂತರ ಯುವಕರ ಕನಸುಗಳು ನುಚ್ಚುನೂರಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿಗದಿತ ವೇಳಾಪಟ್ಟಿಯಂತೆ ನೀಟ್ ಪರೀಕ್ಷೆಯನ್ನು ಮೇ 5, 2024 ರಂದು ನಡೆಸಲಾಯಿತು ಮತ್ತು ಅದರ ಫಲಿತಾಂಶವನ್ನು ಜೂನ್ 14, 2024 ರಂದು ಪ್ರಕಟವಾಗಬೇಕಿತ್ತು. ಆದರೆ, ಇದ್ದಕ್ಕಿದ್ದಂತೆ ಫಲಿತಾಂಶವನ್ನು ಜೂನ್ 4, 2024 ರಂದು ಪ್ರಕಟಿಸಲಾಯಿತು. ಇದೇ ದಿನ ದೇಶದ ಸಂಸತ್ ಚುನಾವಣೆಯ ಫಲಿತಾಂಶ ಬಂದಿದ್ದು, ಇಡೀ ದೇಶವೇ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಕೇಳುವುದರಲ್ಲಿ ನಿರತವಾಗಿತ್ತು. ಈ ಗದ್ದಲದಲ್ಲಿ ನೀಟ್‌ ಫಲಿತಾಂಶವನ್ನು ತರಾತುರಿಯಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಯ ಅಕ್ರಮಗಳನ್ನು ಮುಚ್ಚಿಹಾಕಬಹುದು ಎಂಬ ಕಾರಣಕ್ಕಾಗಿಯೇ? ಅಲ್ಲದಿದ್ದರೆ ತರಾತುರಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು ಯಾಕೆ” ಎಂದು ಅವರು ಪ್ರಶ್ನಿಸಿದ್ದಾರೆ.

“ಕೇಂದ್ರ ಸರ್ಕಾರ ಮತ್ತು ಎನ್‌ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ ಬಗೀಶಾ ತಿವಾರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬರೀ ವಿವಾದಗಳಿಂದಲೇ ತುಂಬಿರುವ ಮತ್ತು ಯುವಜನರು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವ ಎನ್‌ಟಿಎಯ ನೀಟ್ ಪರೀಕ್ಷಾ ವ್ಯವಸ್ಥೆ ನಿಜಕ್ಕೂ ಎಂತಹದ್ದು ಎಂಬ ಪ್ರಶ್ನೆ ಕಾಡಲಾರಂಭಿಸಿದೆ” ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

“ನರೇಂದ್ರ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ಮತ್ತಷ್ಟು ಯುವಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಪರೀಕ್ಷಾ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ನೊಂದ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸುತ್ತೇನೆ” ಎಂದು ಸಿಎಂ ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ‘ತಮಿಳುನಾಡಿನಲ್ಲಿ ನೀಟ್ ಪರೀಕ್ಷೆ ರದ್ದುಗೊಳಿಸಿ..’; ಡಿಎಂಕೆ, ಎಐಎಡಿಎಂಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...