Homeಕರ್ನಾಟಕ‘ಅನ್ಯಾಯವಾಗಿದೆ’: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಕವಿತಾ ರೆಡ್ಡಿ ಅಸಮಾಧಾನ

‘ಅನ್ಯಾಯವಾಗಿದೆ’: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಕವಿತಾ ರೆಡ್ಡಿ ಅಸಮಾಧಾನ

- Advertisement -
- Advertisement -

ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರ ವ್ಯಕ್ತಪಡಿಸಿರುವ ಕರ್ನಾಟಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕವಿತಾ ರೆಡ್ಡಿ, “ಅನ್ಯಾಯವಾಗಿದೆ” ಎಂದಿದ್ದಾರೆ.

ಟಿಕೆಟ್ ಕೈತಪ್ಪಿದರೂ ಕೂಡ ಸೈದ್ಧಾಂತಿಕ ಹೋರಾಟಕ್ಕೆ ಪಕ್ಷದ ನಾಯಕತ್ವದೊಂದಿಗೆ ನಿಲ್ಲುತ್ತೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯು ತನ್ನ ಮೂರನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿತು. ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಉಮಾಪತಿ ಶ್ರೀನಿವಾಸಗೌಡ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

“2018ರಲ್ಲೂ ನನಗೆ ಟಿಕೆಟ್ ನಿರಾಕರಿಸಲಾಗಿತ್ತು. ಆ ಸಮಯದಲ್ಲಿ ಜಾತಿ ಸಂಯೋಜನೆಯ ಕಾರಣವನ್ನು ಪಕ್ಷದ ನಾಯಕರು ನೀಡಿದ್ದರು. ನಂತರದಲ್ಲಿ ನನಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದರು. ಕ್ಷೇತ್ರದಲ್ಲಿ 15 ವರ್ಷ ಕೆಲಸ ಮಾಡಿದವರಿಗೆ ಘೋರ ಅನ್ಯಾಯವಾಗಿದೆ” ಎಂದು ಕವಿತಾ ಅವರು ತಿಳಿಸಿರುವುದಾಗಿ ‘ಡೆಕ್ಕನ್‌ ಹೆರಾಲ್ಡ್’ ವರದಿ ಮಾಡಿದೆ.

“ಹೋರಾಟ ಮುಂದುವರಿಸಿದ್ದೇನೆ. ಕೊನೆಯ ಗಳಿಗೆಯವರೆಗೂ ಟಿಕೆಟ್ ದೊರಕುವ ಭರವಸೆಯಲ್ಲಿದ್ದೇನೆ” ಎಂದಿದ್ದಾರೆ. ರಾಜಕೀಯ ಪಕ್ಷಗಳಲ್ಲಿ ಮಹಿಳಾ ಪ್ರಾತಿನಿಧ್ಯದ ಕೊರತೆ ಇರುವುದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 109 ಮಹಿಳೆಯರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂದು ವರದಿಯಾಗಿದೆ. “ಪುರುಷರ ಅಧೀನದಲ್ಲಿರುವ ಮಹಿಳೆಯರಿಗೆ ಅವಕಾಶ ಕಲ್ಪಿಸಲು ಸ್ವತಂತ್ರ ಮಹಿಳೆಯರನ್ನು ಬದಿಗಿಟ್ಟಿರುವುದು ದುರದೃಷ್ಟಕರ. ಅವರು ಗೆಲ್ಲುವ ಬಗ್ಗೆ ಮಾತನಾಡುತ್ತಾರೆ, ಆದರೆ ಅದನ್ನು ಯಾರು ನಿರ್ಧರಿಸುತ್ತಾರೆ” ಎಂದು  ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್ ಸೇರ್ಪಡೆ

ಅಭ್ಯರ್ಥಿಗಳನ್ನು ಗುರುತಿಸುವ ಪ್ರಕ್ರಿಯೆಗಳನ್ನು ಪ್ರಶ್ನಿಸಿದ ಕವಿತಾ, ತಮ್ಮ ಪಕ್ಷದ ದೊಡ್ಡ ಹೋರಾಟಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. “ಸಿದ್ಧಾಂತ ಮುಖ್ಯ – ನಾನು ತುಂಬಾ ನಿರಾಶೆಗೊಂಡಿದ್ದೇನೆ, ಆದರೆ ನಾನು ಮೌನವಾಗಿ ಮತ್ತು ಬಿಜೆಪಿ ವಿರುದ್ಧ ಹೋರಾಡಬೇಕಾಗಿದೆ” ಎಂದಿದ್ದಾರೆ.

ಬೊಮ್ಮನಹಳ್ಳಿಯಲ್ಲಿ ಮೂರು ಬಾರಿ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿರುವ ಎಂ.ಸತೀಶ್ ರೆಡ್ಡಿ ಸತತ ನಾಲ್ಕನೇ ಅವಧಿಗೆ ಕಣದಲ್ಲಿದ್ದಾರೆ. ಕ್ಷೇತ್ರದ ತೀವ್ರ ಮೂಲಸೌಕರ್ಯ ಮತ್ತು ಸಮಸ್ಯೆಗಳನ್ನು ಪರಿಹರಿಸುವ ಅಗತ್ಯವನ್ನು ಕವಿತಾ ಪ್ರಸ್ತಾಪಿಸಿದ್ದಾರೆ. “ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರಕ್ಕಾಗಿ ದಾವಣಗೆರೆ ಮತ್ತು ಹುಬ್ಬಳ್ಳಿ-ಧಾರವಾಡಕ್ಕೂ ಪ್ರಯಾಣಿಸುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...