Homeಥೂತ್ತೇರಿಹಂದಿಗಳನ್ನು ಕಂಡರೆ ನಾಯಿ ಬೊಗಳುವುದು ಸಹಜ

ಹಂದಿಗಳನ್ನು ಕಂಡರೆ ನಾಯಿ ಬೊಗಳುವುದು ಸಹಜ

- Advertisement -
- Advertisement -

ನಮ್ಮ ಸಿದ್ದೇಶ್ವರ ಸ್ವಾಮಿಗಳು ಭಕ್ತರನ್ನು ಮೀರಿಸಿ ಮೋದಿಯವರನ್ನ ಹಿಗ್ಗಾಮುಗ್ಗ ಹೊಗಳಿದ ಒಂದು ಸಾಲನ್ನು ತೆಗೆದು ನಾವು ಟಿಕೀಸಿದ್ದಕ್ಕೆ ಸಿದ್ದೇಶ್ವರ ಸ್ವಾಮಿ ಮಠೋಪಜೀವಿಗಳು ನಮ್ಮನ್ನ ಹಂದಿಗೆ ಹೋಲಿಸಿವೆ. ಇದು ನಮಗೆ ಅವಮಾನಕರವಲ್ಲ, ಯಾಕೆಂದರೆ ಪರಮಾತ್ಮನೆ ಒಮ್ಮೆ ವರಾಹ ಅವತಾರವೆತ್ತಿದ್ದ ಎನ್ನುತ್ತಾರಲ್ಲಾ. ಅಂತಹ ಮಹಾತ್ಮನಿಗೆ ಹೋಲಿಸಿದ್ದು ಸರಿ. ಯಾಕೆಂದರೆ ಹಂದಿಯಿದ್ದರೆ ಕೇರಿ ಚಂದ ಎಂದು ಹಳ್ಳಿಯ ಕಡೆ ಗಾದೆಯಿದೆ. ಕೇರಿ ಸ್ವಚ್ಛ ಮಾಡಲು ಬಂದ ಹಂದಿಯನ್ನ ನೋಡಿ ನಾಯಿಗಳು ಬೊಗಳುತ್ತವೆ, ಅದರಲ್ಲೂ ಮಠೋಪ ಜೀವಿ ಶ್ವಾನಗಳು ದೊಡ್ಡ ಗಂಟಲಲ್ಲಿ ಬೊಗಳುತ್ತವೆ. ಏಕೆಂದರೆ ತಮ್ಮ ದನಿ ಮಠದ ಮಾಲೀಕರಿಗೆ ತಿಳಿಯಬೇಕೆಂಬುದೇ ಅವುಗಳ ಇಂಗಿತವಾಗಿರುತ್ತದೆ. ನಾವು ಕೂಡ ಸಿದ್ದೇಶ್ವರ ಸ್ವಾಮಿಗ: ಅಭಿಮಾನಿಗಳೆ. ಆದರೆ,
ಈಗ ಅಭಿಮಾನಕ್ಕೆ ಕುಂದುಂಟಾಗಿದೆ, ಯಾಕೆಂದರೆ ಸಿದ್ದೇಶ್ವರ ಶ್ರೀಗಳು ಮೋದಿ ಹೊಗಳುವುದರಲ್ಲಿ ಚಕ್ರವರ್ತಿ ಸೂಲಿಬೆಲೆ ಸೈಡ್ ಹೊಡೆದಿದ್ದಾರೆ. ನಮ್ಮ ಮಾತಂತಿರಲಿ. ಕರ್ನಾಟಕದ ಸಾವಿರಾರು ಸ್ವಾಮಿಗಳು ಸಿದ್ದೇಶ್ವರ ಸ್ವಾಮಿ ಮಾತಿಗೆ ದಂಗುಬಡಿದುಹೋಗಿದ್ದಾರೆ. ಏಕೆಂದರೆ ಅವರಾಡಿರುವ ಮಾತು ಹಾಗಿವೆ, “ಮೋದಿ ಅತ್ಯಂತ ಜನಪ್ರಿಯ ಪ್ರಧಾನಿ. ಅವರನ್ನು ನೋಡುವುದೇ ನಮ್ಮ ಸೌಭಾಗ್ಯ. ಅವರು ಬರುತ್ತಾರೆ ಎಂದರೆ ನಿಮಗೆಷ್ಟು ಸಂತೋಷವಾಗಿದೆಯೊ ಅಷ್ಟೇ ಸಂತೋಷ ನಮಗೂ ಆಗಿದೆ. ಇಂತಹ ಬಲ್ಲ ಪ್ರಧಾನಿ ನಮ್ಮ ದೇಶಕ್ಕೆ ದೊರೆತದ್ದು ನಮ್ಮ ಸುದೈವ, ದಿನದ ಎಲ್ಲ ತಾಸುಗಳನ್ನು ಜನರ ಚಿಂತನೆಗೆ ಬಳಸಿ ದೇಶವನ್ನು ಅಭಿವೃದ್ಧಿಯೆಡೆಗೆ ಕೊಂಡೊಯ್ಯುತ್ತಿರುವ ಈ ನಮ್ಮ ಪ್ರಧಾನಿಯನ್ನ ಜಗತ್ತೇ ಪ್ರೀತಿಸುತ್ತಿದೆ” ಎಂದರಲ್ಲದೆ, “ಅವರು ಜೇಬನ್ನು ತುಂಬಿಸುವ ಬಗ್ಗೆ ಯೋಚಿಸದೆ ಜನರ ಹೃದಯವನ್ನು ತುಂಬಿದ್ದಾರೆ” ಎಂಬ ಭಾಷಣ ದೇಶದಲ್ಲೇ ದಾಖಲಾಗಿದೆಯಂತಲ್ಲಾ, ಥೂತ್ತೇರಿ.

ಶ್ರೀ ಸಿದ್ದೇಶ್ವರ ಸ್ವಾಮಿಗಳು ಹೇಳಿದಂತೆ ಪ್ರಧಾನಿಯ ಜುಬ್ಬಕ್ಕೆ ಜೇಬುಗಳಿದ್ದರೂ ಅವು ಖಾಲಿ ಇರಬಹುದು, ಆದರೆ ಅವರನ್ನು ಪ್ರಧಾನಿ ಮಾಡಿದವರ ಜೇಬು ತುಂಬಿತುಳುಕುತ್ತಿರುವುದು ದಿವ್ಯದೃಷ್ಟಿಯ ಸಿದ್ದೇಶ್ವರರಿಗೆ ಅರಿವಾಗಬೇಕಿತ್ತು. ಅಂತಾರಾಷ್ಟ್ರೀಯ ಮಟ್ಟದ ಕ್ಯಾರವಾನ್ ಪತ್ರಿಕೆ ಮೂವತ್ತು ಪುಟದಲ್ಲಿ ರಫೇಲ್ ಹಗರಣ ಬರೆದ ಲೇಖನವನ್ನು ಸಿದ್ದೇಶ್ವರರು ಓದಬೇಕಿತ್ತು. ಓದದಿರುವುದು ಅಪರಾಧವಲ್ಲ, ಏಕೆಂದರೆ ಎಲ್ಲಾ ಪತ್ರಿಕೆಯನ್ನು ಓದಲಾಗುವುದಿಲ್ಲ. ಜೊತೆಗೆ ಬಿಜೆಪಿಗಳನ್ನ ಹೊಗಳುವ ಬಿಜೆಪಿ ಪತ್ರಿಕೆಗಳನ್ನ ಓದಿದರೆ ಏನೂ ಸಿಗುವುದಿಲ್ಲ. ಆದರೆ ಸಿದ್ದೇಶ್ವರ ಶ್ರೀಗಳು ನಿಂತು ಮಾತನಾಡುತ್ತಿದ್ದ ಜಾಗ ನಲವತ್ತು ಪರಸೆಂಟಿನ ಜಾಗ. ಮೋದಿಯವರದ್ದೇ ಸರಕಾರ ಕರ್ನಾಟಕದಲ್ಲಿದ್ದು ಅದು ಸಿದ್ದರಾಮಯ್ಯನ ಸರಕಾರದ ಕಾಲದಲ್ಲಿದ್ದ ಹತ್ತು ಪರಸೆಂಟು ಕಮಿಷನ್ನನ್ನು ನಲವತ್ತು ಪರಸೆಂಟಿಗೆ ತಲುಪಿ, ಅದನ್ನ ಕೊಡಲಾಗದವನೊಬ್ಬ ಆತ್ಮಹತ್ಯೆಗೆ ಶರಣಾಗಿ, ಬಿಜೆಪಿಯ ದೊಡ್ಡಗಂಟಲ ರಾಜಕಾರಣಿಯೊಬ್ಬ ರಾಜಿನಾಮೆ ನೀಡಿದ್ದು ಪ್ರಧಾನಿಗಾಗಲಿ ಸಿದ್ದೇಶ್ವರರಿಗಾಗಲಿ ಗೊತ್ತಿಲ್ಲದ ಸಂಗತಿಗಳಲ್ಲ. ಸದಾ ಮಠದೂಳಗಿದ್ದು ಮುಂದಿನ ಸಭೆಗೆ ಮನಮುಟ್ಟುವಂತಹ ಭಾಷಣ ತಯಾರಿಸಿಕೊಂಡು ಹೋಗಿ ಜನರನ್ನ ಮರುಳ ಮಾಡುವ ಸಿದ್ದೇಶ್ವರರು ಈ ದೇಶವನ್ನಾಳುವತ್ತಿರುವ ಮೋದಿಯವರ ಆಡಳಿತ ವೈಖರಿಯನ್ನ ಗಮನಿಸಿ ಮಾತನಾಡಬೇಕಿತ್ತು. ಈಗ ಎಲ್ಲರಿಗೂ ತಿಳಿದಿರುವ ಸಂಗತಿಯ ಪ್ರಕಾರ ಬಸವಣ್ಣ ವೈದಿಕ ಧರ್ಮದ ಕಂದಾಚಾರದ ಶೋಷಣೆಯಿಂದ ಸಿಡಿದು ಬಂದು ವಚನ ದೀವಿಗೆ ಕೊಟ್ಟವರು. ಆ ವಚನ ಸಂಪ್ರದಾಯ ಬಂಡಾಯದಿಂದ ಕೂಡಿವೆ. ಆದರೆ ಸಿದ್ದೇಶ್ವರರು ಎಂದೂ ಬಂಡಾಯದ ಮಾತನಾಡಿದವರಲ್ಲ. ಯಥಾಸ್ಥಿತಿಯ ಅನಾವರಣ ಮಾಡಿ ಅನಂದಪಟ್ಟವರು. ಆದ್ದರಿಂದ ಅವರ ಮೋದಿಯ ಅಂಧಾಭಿಮಾನದ ಮಾತುಗಳಿಗೆ ತಲೆಕೆಡಿಸಿಕೊಳ್ಳ ಬೇಡಿರೆಂದು ಸಾಧಾರಣ ಸ್ವಾಮಿಗಳ ಸೂಚನೆಯಾಗಿದೆಯಲ್ಲಾ, ಥೂತ್ತೇರಿ.
ಇದನ್ನೂ ಓದಿ: ಜೈ ಸಿದ್ದೇಶ್ವರ ಸ್ವಾಮಿ

ಕರ್ನಾಟಕದಲ್ಲಿ ಮುಂಗಾರಿನ ದೆಸೆಯಿಂದ ಅತಿವೃಷ್ಟಿ ಸಂಭವಿಸಿದೆ. ಸಮುದ್ರ ಕಡಲನ್ನ ಕೊರೆಯುತ್ತಿದೆ. ಒಮ್ಮೆ ಸಮುದ್ರಕ್ಕೆ ಜಾರಿದ ಮಣ್ಣು ಮರಳಿ ಬರಲಾರದು. ಮಳೆಯಿಂದ ಸಂತ್ರಸ್ತರಾದವರು ಮಳೆ ದೂರುತ್ತಾರೆಯೇ ಹೊರತು ನಮಗ್ಯಾರಾದರೂ ಇದ್ದಾರೆ ಎಂದು ಭಾವಿಸುವುದಿಲ್ಲ. ಇಂತಹ ಭಾವನೆ ಬರಬೇಕಾದರೆ ಆಳುವ ಸರಕಾರ ಸತ್ತು ಹೋಗಿರಬಹುದು. ಸರಕಾರವನ್ನು ಎಚ್ಚರಿಸಿ ಸಂತ್ರಸ್ತರಿಗೆ ಸಹಾಯ ಮಾಡಬಹುದಾದ ನಮ್ಮ ದೃಶ್ಯಮಾಧ್ಯಮಗಳು ಹೆಗಲ ಮೇಲೆ ಕ್ಯಾಮರಾ ಹೊತ್ತು ಪವಿತ್ರ ಲೋಕೇಶ್ ಮತ್ತು ನರೇಶ್ ಯಾವ ಲಾಡ್ಜಿನಲ್ಲಿದ್ದಾರೆ ಎಂದು ಹುಡುಕತೊಡಗಿದರಂತಲ್ಲಾ. ಕಡೆಗೂ ಪವಿತ್ರ ಮತ್ತು ನರೇಶ್ ಮೈಸೂರಿನ ಲಾಡ್ಜ್‌ವೊಂದರಲ್ಲಿ ಇದ್ದದ್ದನ್ನ ಏನೋ ಬಹಳ ವೀಶೆಷವೆಂಬಂತೆ ಇಡೀ ಭಾನುವಾರ ಪ್ರಸಾರ ಮಾಡಿದರಂತಲ್ಲಾ. ಈ ಪೈಕಿ ಪವರ್ ಟಿವಿಯ ಸಂಸ್ಥಾಪಕನೇ ಬಂದು ಕುಳಿತುಕೊಂಡು ಚರ್ಚಿಸಿದ ಕಾರ್ಯಕ್ರಮ ಬಿತ್ತರಿಸುವ ಜವಾಬ್ದಾರಿ ಹೊತ್ತಿಕೊಂಡಿದ್ದು ನೋಡಿದರೆ, ಇವರು ತಲುಪಿರುವ ಗಟಾರ ಇನ್ನೆಂತಹದ್ದಿರಬಹುದೆಂದು ನೋಡುಗರೇ ಅಚ್ಚರಿ ಪಡತೊಡಗಿದ್ದಾರಂತಲ್ಲ. ಮೀಡಿಯಾದವರ ಹೊಟ್ಟೆ ತುಂಬಿಸುವ ಕನ್ನಡದ ಜನ ಸುಮ್ಮನಿದ್ದರೆ ಈ ಮೀಡಿಯಾದವರು ಪ್ರತಿಯೊಬ್ಬರ ಖಾಸಗಿ ಕೋಣೆಗೆ ಕ್ಯಾಮರ ಹೊತ್ತು ಬರುವ ದಿನ ದೂರವಿಲ್ಲವಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಮೋಟಮ್ಮಾ ಕಾಂಗ್ರೆಸಿಗಲ್ಲಾದವಳು..

ನುರಿತ ರಾಜಕಾರಣಿ ರಾಜಣ್ಣ ದೇವೇಗೌಡರ ವಿಷಯದಲ್ಲಿ ಹಗುರವಾಗಿ ಮಾತನಾಡಿದ್ದಾರೆ. ಸಾರ್ವಜನಿಕರಿಗೆ ರಂಜನೆಯೊದಗಿಸಲು ಮಾತನಾಡಿದರೆ ಕಾರ್ಯಕರ್ತರಿಗಿಂತಲೂ, ವಾರಸುದಾರರಿಗೆ ನೋವಾಗುತ್ತದೆ. ಮಾನ್ಯ ದೇವೇಗೌಡರು ಸೊಪ್ಪು ಸಾರು ಮುದ್ದೆ ಅವಲಂಬಿಸಿ ನಿರೋಗಿಗಳಾಗಿ ನೂರರ ಗಡಿಯಕಡೆ ಹೊರಟಿದ್ದಾರೆ. ಇದು ಹೆಮ್ಮೆಯ ಸಂಗತಿ ಇಂತಿರುವಾಗ ದೇವೇಗೌಡರೀಗ ಇಬ್ಬರನ್ನು ಆಶ್ರಯಿಸಿ ನಡೆಯುತ್ತಾರೆ, ಮುಂದೆ ನಾಲ್ಕು ಜನ ಬೇಕಾಗಬಹುದು ಎಂಬುದು ಅನಾಗರಿಕ ಮಾತೆಂದು ಕಾಂಗೈನವರೇ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ದೇವೇಗೌಡರ ಮಗ ಮತ್ತು ಮೊಮ್ಮಗನ ಪ್ರತಿಕ್ರಿಯೆ ಕುತೂಹಲಕಾರಿ. ರಾಜಣ್ಣನ ಮಾತು ಸಿದ್ದರಾಮಯ್ಯನ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದರೆ, ಪ್ರಜ್ವಲ ರೇವಣ್ಣ ಆ ರಾಜಣ್ಣನಿಗೆ ಜನರೆ ಹುಚ್ಚುನಾಯಿಗೆ ಹೊಡೆದಂತೆ ಹೊಡೆಯುತ್ತಾರೆ ಎಂದುಬಿಟ್ಟಿದ್ದಾರಲ್ಲಾ. ಹೀಗೆ ಪ್ರತಿಕ್ರಿಯಿಸುವ ಮುನ್ನ ದೇವೇಗೌಡರು ಟೀಕಿಸಿದ ಎದುರಾಳಿಗಳಿಗೆ ಹೇಗೆ ಉತ್ತರ ಕೊಡುತ್ತಿದ್ದರು ಎಂಬುದನ್ನು ಮಗ ಮೊಮ್ಮಗ ಗ್ರಹಿಸಬೇಕಿತ್ತು. ಹಿಂದೊಮ್ಮೆ ಪಟೇಲರು ಮತ್ತು ಹೆಗಡೆ ಹಾಸನದಲ್ಲಿ ಸಭೆ ಮಾಡುತ್ತಿದ್ದಾಗ ಕಲ್ಲು ಬೀರಿ ಓಡಿಸಲಾಯ್ತು. ಸಿಟ್ಟುಗೊಂಡ ಪಟೇಲರು “ಈ ದೇವೆಗೌಡ ದಾವಣಗೆರೆಗೆ ಬರ್ಲಿ, ಕಾಲು ಮುರಿದು ಕಳುಸ್ತಿನಿ” ಅಂದರು.

ಅದಕ್ಕೆ ದೇವೇಗೌಡರು “ಪಟೇಲರು ನನ್ನ ಗೆಳೆಯರು, ನನ್ನ ಕಾಲು ಮುರಿದಾಗ ಅವರು ಸುಮ್ಮನಿದ್ದಾರೆಯೇ, ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಾರೆ” ಎಂದರು. ಅಲ್ಲಿಗೆ ಎಲ್ಲವೂ ಶಮನವಾಯ್ತು. ಹಾಗೆ ನೋಡಿದರೆ ಸೇಡಿನ ಮಾತುಗಳು, ಹಲ್ಲೆ ಮಾತುಗಳು ಈ ಬಿಜೆಪಿಗಳು ಉದ್ಭವಿಸಿದ ಮೇಲೆ ಜಾಸ್ತಿಯಾದವಂತಲ್ಲಾ. ಇದರ ಉದ್ಘಾಟಕರು ಈಶ್ವರಪ್ಪನಾದರೆ ಮುಂದುವರೆಸಿಕೊಂಡು ಹೋಗುತ್ತಿರುವವರ ಪೈಕಿ ಸಿ.ಟಿ ರವಿ, ಪ್ರತಾಪ ಸಿಮ್ಮ, ರೇಣುಕಾಚಾರಿ ಇನ್ನ ಮುಂತಾದವುಗಳಿವೆಯಂತಲ್ಲಾ, ಥೂತ್ತೇರಿ.

ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...