Homeಥೂತ್ತೇರಿಹಂದಿಗಳನ್ನು ಕಂಡರೆ ನಾಯಿ ಬೊಗಳುವುದು ಸಹಜ

ಹಂದಿಗಳನ್ನು ಕಂಡರೆ ನಾಯಿ ಬೊಗಳುವುದು ಸಹಜ

- Advertisement -
- Advertisement -

ನಮ್ಮ ಸಿದ್ದೇಶ್ವರ ಸ್ವಾಮಿಗಳು ಭಕ್ತರನ್ನು ಮೀರಿಸಿ ಮೋದಿಯವರನ್ನ ಹಿಗ್ಗಾಮುಗ್ಗ ಹೊಗಳಿದ ಒಂದು ಸಾಲನ್ನು ತೆಗೆದು ನಾವು ಟಿಕೀಸಿದ್ದಕ್ಕೆ ಸಿದ್ದೇಶ್ವರ ಸ್ವಾಮಿ ಮಠೋಪಜೀವಿಗಳು ನಮ್ಮನ್ನ ಹಂದಿಗೆ ಹೋಲಿಸಿವೆ. ಇದು ನಮಗೆ ಅವಮಾನಕರವಲ್ಲ, ಯಾಕೆಂದರೆ ಪರಮಾತ್ಮನೆ ಒಮ್ಮೆ ವರಾಹ ಅವತಾರವೆತ್ತಿದ್ದ ಎನ್ನುತ್ತಾರಲ್ಲಾ. ಅಂತಹ ಮಹಾತ್ಮನಿಗೆ ಹೋಲಿಸಿದ್ದು ಸರಿ. ಯಾಕೆಂದರೆ ಹಂದಿಯಿದ್ದರೆ ಕೇರಿ ಚಂದ ಎಂದು ಹಳ್ಳಿಯ ಕಡೆ ಗಾದೆಯಿದೆ. ಕೇರಿ ಸ್ವಚ್ಛ ಮಾಡಲು ಬಂದ ಹಂದಿಯನ್ನ ನೋಡಿ ನಾಯಿಗಳು ಬೊಗಳುತ್ತವೆ, ಅದರಲ್ಲೂ ಮಠೋಪ ಜೀವಿ ಶ್ವಾನಗಳು ದೊಡ್ಡ ಗಂಟಲಲ್ಲಿ ಬೊಗಳುತ್ತವೆ. ಏಕೆಂದರೆ ತಮ್ಮ ದನಿ ಮಠದ ಮಾಲೀಕರಿಗೆ ತಿಳಿಯಬೇಕೆಂಬುದೇ ಅವುಗಳ ಇಂಗಿತವಾಗಿರುತ್ತದೆ. ನಾವು ಕೂಡ ಸಿದ್ದೇಶ್ವರ ಸ್ವಾಮಿಗ: ಅಭಿಮಾನಿಗಳೆ. ಆದರೆ,
ಈಗ ಅಭಿಮಾನಕ್ಕೆ ಕುಂದುಂಟಾಗಿದೆ, ಯಾಕೆಂದರೆ ಸಿದ್ದೇಶ್ವರ ಶ್ರೀಗಳು ಮೋದಿ ಹೊಗಳುವುದರಲ್ಲಿ ಚಕ್ರವರ್ತಿ ಸೂಲಿಬೆಲೆ ಸೈಡ್ ಹೊಡೆದಿದ್ದಾರೆ. ನಮ್ಮ ಮಾತಂತಿರಲಿ. ಕರ್ನಾಟಕದ ಸಾವಿರಾರು ಸ್ವಾಮಿಗಳು ಸಿದ್ದೇಶ್ವರ ಸ್ವಾಮಿ ಮಾತಿಗೆ ದಂಗುಬಡಿದುಹೋಗಿದ್ದಾರೆ. ಏಕೆಂದರೆ ಅವರಾಡಿರುವ ಮಾತು ಹಾಗಿವೆ, “ಮೋದಿ ಅತ್ಯಂತ ಜನಪ್ರಿಯ ಪ್ರಧಾನಿ. ಅವರನ್ನು ನೋಡುವುದೇ ನಮ್ಮ ಸೌಭಾಗ್ಯ. ಅವರು ಬರುತ್ತಾರೆ ಎಂದರೆ ನಿಮಗೆಷ್ಟು ಸಂತೋಷವಾಗಿದೆಯೊ ಅಷ್ಟೇ ಸಂತೋಷ ನಮಗೂ ಆಗಿದೆ. ಇಂತಹ ಬಲ್ಲ ಪ್ರಧಾನಿ ನಮ್ಮ ದೇಶಕ್ಕೆ ದೊರೆತದ್ದು ನಮ್ಮ ಸುದೈವ, ದಿನದ ಎಲ್ಲ ತಾಸುಗಳನ್ನು ಜನರ ಚಿಂತನೆಗೆ ಬಳಸಿ ದೇಶವನ್ನು ಅಭಿವೃದ್ಧಿಯೆಡೆಗೆ ಕೊಂಡೊಯ್ಯುತ್ತಿರುವ ಈ ನಮ್ಮ ಪ್ರಧಾನಿಯನ್ನ ಜಗತ್ತೇ ಪ್ರೀತಿಸುತ್ತಿದೆ” ಎಂದರಲ್ಲದೆ, “ಅವರು ಜೇಬನ್ನು ತುಂಬಿಸುವ ಬಗ್ಗೆ ಯೋಚಿಸದೆ ಜನರ ಹೃದಯವನ್ನು ತುಂಬಿದ್ದಾರೆ” ಎಂಬ ಭಾಷಣ ದೇಶದಲ್ಲೇ ದಾಖಲಾಗಿದೆಯಂತಲ್ಲಾ, ಥೂತ್ತೇರಿ.

ಶ್ರೀ ಸಿದ್ದೇಶ್ವರ ಸ್ವಾಮಿಗಳು ಹೇಳಿದಂತೆ ಪ್ರಧಾನಿಯ ಜುಬ್ಬಕ್ಕೆ ಜೇಬುಗಳಿದ್ದರೂ ಅವು ಖಾಲಿ ಇರಬಹುದು, ಆದರೆ ಅವರನ್ನು ಪ್ರಧಾನಿ ಮಾಡಿದವರ ಜೇಬು ತುಂಬಿತುಳುಕುತ್ತಿರುವುದು ದಿವ್ಯದೃಷ್ಟಿಯ ಸಿದ್ದೇಶ್ವರರಿಗೆ ಅರಿವಾಗಬೇಕಿತ್ತು. ಅಂತಾರಾಷ್ಟ್ರೀಯ ಮಟ್ಟದ ಕ್ಯಾರವಾನ್ ಪತ್ರಿಕೆ ಮೂವತ್ತು ಪುಟದಲ್ಲಿ ರಫೇಲ್ ಹಗರಣ ಬರೆದ ಲೇಖನವನ್ನು ಸಿದ್ದೇಶ್ವರರು ಓದಬೇಕಿತ್ತು. ಓದದಿರುವುದು ಅಪರಾಧವಲ್ಲ, ಏಕೆಂದರೆ ಎಲ್ಲಾ ಪತ್ರಿಕೆಯನ್ನು ಓದಲಾಗುವುದಿಲ್ಲ. ಜೊತೆಗೆ ಬಿಜೆಪಿಗಳನ್ನ ಹೊಗಳುವ ಬಿಜೆಪಿ ಪತ್ರಿಕೆಗಳನ್ನ ಓದಿದರೆ ಏನೂ ಸಿಗುವುದಿಲ್ಲ. ಆದರೆ ಸಿದ್ದೇಶ್ವರ ಶ್ರೀಗಳು ನಿಂತು ಮಾತನಾಡುತ್ತಿದ್ದ ಜಾಗ ನಲವತ್ತು ಪರಸೆಂಟಿನ ಜಾಗ. ಮೋದಿಯವರದ್ದೇ ಸರಕಾರ ಕರ್ನಾಟಕದಲ್ಲಿದ್ದು ಅದು ಸಿದ್ದರಾಮಯ್ಯನ ಸರಕಾರದ ಕಾಲದಲ್ಲಿದ್ದ ಹತ್ತು ಪರಸೆಂಟು ಕಮಿಷನ್ನನ್ನು ನಲವತ್ತು ಪರಸೆಂಟಿಗೆ ತಲುಪಿ, ಅದನ್ನ ಕೊಡಲಾಗದವನೊಬ್ಬ ಆತ್ಮಹತ್ಯೆಗೆ ಶರಣಾಗಿ, ಬಿಜೆಪಿಯ ದೊಡ್ಡಗಂಟಲ ರಾಜಕಾರಣಿಯೊಬ್ಬ ರಾಜಿನಾಮೆ ನೀಡಿದ್ದು ಪ್ರಧಾನಿಗಾಗಲಿ ಸಿದ್ದೇಶ್ವರರಿಗಾಗಲಿ ಗೊತ್ತಿಲ್ಲದ ಸಂಗತಿಗಳಲ್ಲ. ಸದಾ ಮಠದೂಳಗಿದ್ದು ಮುಂದಿನ ಸಭೆಗೆ ಮನಮುಟ್ಟುವಂತಹ ಭಾಷಣ ತಯಾರಿಸಿಕೊಂಡು ಹೋಗಿ ಜನರನ್ನ ಮರುಳ ಮಾಡುವ ಸಿದ್ದೇಶ್ವರರು ಈ ದೇಶವನ್ನಾಳುವತ್ತಿರುವ ಮೋದಿಯವರ ಆಡಳಿತ ವೈಖರಿಯನ್ನ ಗಮನಿಸಿ ಮಾತನಾಡಬೇಕಿತ್ತು. ಈಗ ಎಲ್ಲರಿಗೂ ತಿಳಿದಿರುವ ಸಂಗತಿಯ ಪ್ರಕಾರ ಬಸವಣ್ಣ ವೈದಿಕ ಧರ್ಮದ ಕಂದಾಚಾರದ ಶೋಷಣೆಯಿಂದ ಸಿಡಿದು ಬಂದು ವಚನ ದೀವಿಗೆ ಕೊಟ್ಟವರು. ಆ ವಚನ ಸಂಪ್ರದಾಯ ಬಂಡಾಯದಿಂದ ಕೂಡಿವೆ. ಆದರೆ ಸಿದ್ದೇಶ್ವರರು ಎಂದೂ ಬಂಡಾಯದ ಮಾತನಾಡಿದವರಲ್ಲ. ಯಥಾಸ್ಥಿತಿಯ ಅನಾವರಣ ಮಾಡಿ ಅನಂದಪಟ್ಟವರು. ಆದ್ದರಿಂದ ಅವರ ಮೋದಿಯ ಅಂಧಾಭಿಮಾನದ ಮಾತುಗಳಿಗೆ ತಲೆಕೆಡಿಸಿಕೊಳ್ಳ ಬೇಡಿರೆಂದು ಸಾಧಾರಣ ಸ್ವಾಮಿಗಳ ಸೂಚನೆಯಾಗಿದೆಯಲ್ಲಾ, ಥೂತ್ತೇರಿ.
ಇದನ್ನೂ ಓದಿ: ಜೈ ಸಿದ್ದೇಶ್ವರ ಸ್ವಾಮಿ

ಕರ್ನಾಟಕದಲ್ಲಿ ಮುಂಗಾರಿನ ದೆಸೆಯಿಂದ ಅತಿವೃಷ್ಟಿ ಸಂಭವಿಸಿದೆ. ಸಮುದ್ರ ಕಡಲನ್ನ ಕೊರೆಯುತ್ತಿದೆ. ಒಮ್ಮೆ ಸಮುದ್ರಕ್ಕೆ ಜಾರಿದ ಮಣ್ಣು ಮರಳಿ ಬರಲಾರದು. ಮಳೆಯಿಂದ ಸಂತ್ರಸ್ತರಾದವರು ಮಳೆ ದೂರುತ್ತಾರೆಯೇ ಹೊರತು ನಮಗ್ಯಾರಾದರೂ ಇದ್ದಾರೆ ಎಂದು ಭಾವಿಸುವುದಿಲ್ಲ. ಇಂತಹ ಭಾವನೆ ಬರಬೇಕಾದರೆ ಆಳುವ ಸರಕಾರ ಸತ್ತು ಹೋಗಿರಬಹುದು. ಸರಕಾರವನ್ನು ಎಚ್ಚರಿಸಿ ಸಂತ್ರಸ್ತರಿಗೆ ಸಹಾಯ ಮಾಡಬಹುದಾದ ನಮ್ಮ ದೃಶ್ಯಮಾಧ್ಯಮಗಳು ಹೆಗಲ ಮೇಲೆ ಕ್ಯಾಮರಾ ಹೊತ್ತು ಪವಿತ್ರ ಲೋಕೇಶ್ ಮತ್ತು ನರೇಶ್ ಯಾವ ಲಾಡ್ಜಿನಲ್ಲಿದ್ದಾರೆ ಎಂದು ಹುಡುಕತೊಡಗಿದರಂತಲ್ಲಾ. ಕಡೆಗೂ ಪವಿತ್ರ ಮತ್ತು ನರೇಶ್ ಮೈಸೂರಿನ ಲಾಡ್ಜ್‌ವೊಂದರಲ್ಲಿ ಇದ್ದದ್ದನ್ನ ಏನೋ ಬಹಳ ವೀಶೆಷವೆಂಬಂತೆ ಇಡೀ ಭಾನುವಾರ ಪ್ರಸಾರ ಮಾಡಿದರಂತಲ್ಲಾ. ಈ ಪೈಕಿ ಪವರ್ ಟಿವಿಯ ಸಂಸ್ಥಾಪಕನೇ ಬಂದು ಕುಳಿತುಕೊಂಡು ಚರ್ಚಿಸಿದ ಕಾರ್ಯಕ್ರಮ ಬಿತ್ತರಿಸುವ ಜವಾಬ್ದಾರಿ ಹೊತ್ತಿಕೊಂಡಿದ್ದು ನೋಡಿದರೆ, ಇವರು ತಲುಪಿರುವ ಗಟಾರ ಇನ್ನೆಂತಹದ್ದಿರಬಹುದೆಂದು ನೋಡುಗರೇ ಅಚ್ಚರಿ ಪಡತೊಡಗಿದ್ದಾರಂತಲ್ಲ. ಮೀಡಿಯಾದವರ ಹೊಟ್ಟೆ ತುಂಬಿಸುವ ಕನ್ನಡದ ಜನ ಸುಮ್ಮನಿದ್ದರೆ ಈ ಮೀಡಿಯಾದವರು ಪ್ರತಿಯೊಬ್ಬರ ಖಾಸಗಿ ಕೋಣೆಗೆ ಕ್ಯಾಮರ ಹೊತ್ತು ಬರುವ ದಿನ ದೂರವಿಲ್ಲವಂತಲ್ಲಾ, ಥೂತ್ತೇರಿ.

ಇದನ್ನೂ ಓದಿ: ಮೋಟಮ್ಮಾ ಕಾಂಗ್ರೆಸಿಗಲ್ಲಾದವಳು..

ನುರಿತ ರಾಜಕಾರಣಿ ರಾಜಣ್ಣ ದೇವೇಗೌಡರ ವಿಷಯದಲ್ಲಿ ಹಗುರವಾಗಿ ಮಾತನಾಡಿದ್ದಾರೆ. ಸಾರ್ವಜನಿಕರಿಗೆ ರಂಜನೆಯೊದಗಿಸಲು ಮಾತನಾಡಿದರೆ ಕಾರ್ಯಕರ್ತರಿಗಿಂತಲೂ, ವಾರಸುದಾರರಿಗೆ ನೋವಾಗುತ್ತದೆ. ಮಾನ್ಯ ದೇವೇಗೌಡರು ಸೊಪ್ಪು ಸಾರು ಮುದ್ದೆ ಅವಲಂಬಿಸಿ ನಿರೋಗಿಗಳಾಗಿ ನೂರರ ಗಡಿಯಕಡೆ ಹೊರಟಿದ್ದಾರೆ. ಇದು ಹೆಮ್ಮೆಯ ಸಂಗತಿ ಇಂತಿರುವಾಗ ದೇವೇಗೌಡರೀಗ ಇಬ್ಬರನ್ನು ಆಶ್ರಯಿಸಿ ನಡೆಯುತ್ತಾರೆ, ಮುಂದೆ ನಾಲ್ಕು ಜನ ಬೇಕಾಗಬಹುದು ಎಂಬುದು ಅನಾಗರಿಕ ಮಾತೆಂದು ಕಾಂಗೈನವರೇ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ದೇವೇಗೌಡರ ಮಗ ಮತ್ತು ಮೊಮ್ಮಗನ ಪ್ರತಿಕ್ರಿಯೆ ಕುತೂಹಲಕಾರಿ. ರಾಜಣ್ಣನ ಮಾತು ಸಿದ್ದರಾಮಯ್ಯನ ಸಭೆಯಲ್ಲಿ ಚರ್ಚೆಯಾಗಿದೆ ಎಂದು ಕುಮಾರಸ್ವಾಮಿ ಪ್ರತಿಕ್ರಿಯಿಸಿದರೆ, ಪ್ರಜ್ವಲ ರೇವಣ್ಣ ಆ ರಾಜಣ್ಣನಿಗೆ ಜನರೆ ಹುಚ್ಚುನಾಯಿಗೆ ಹೊಡೆದಂತೆ ಹೊಡೆಯುತ್ತಾರೆ ಎಂದುಬಿಟ್ಟಿದ್ದಾರಲ್ಲಾ. ಹೀಗೆ ಪ್ರತಿಕ್ರಿಯಿಸುವ ಮುನ್ನ ದೇವೇಗೌಡರು ಟೀಕಿಸಿದ ಎದುರಾಳಿಗಳಿಗೆ ಹೇಗೆ ಉತ್ತರ ಕೊಡುತ್ತಿದ್ದರು ಎಂಬುದನ್ನು ಮಗ ಮೊಮ್ಮಗ ಗ್ರಹಿಸಬೇಕಿತ್ತು. ಹಿಂದೊಮ್ಮೆ ಪಟೇಲರು ಮತ್ತು ಹೆಗಡೆ ಹಾಸನದಲ್ಲಿ ಸಭೆ ಮಾಡುತ್ತಿದ್ದಾಗ ಕಲ್ಲು ಬೀರಿ ಓಡಿಸಲಾಯ್ತು. ಸಿಟ್ಟುಗೊಂಡ ಪಟೇಲರು “ಈ ದೇವೆಗೌಡ ದಾವಣಗೆರೆಗೆ ಬರ್ಲಿ, ಕಾಲು ಮುರಿದು ಕಳುಸ್ತಿನಿ” ಅಂದರು.

ಅದಕ್ಕೆ ದೇವೇಗೌಡರು “ಪಟೇಲರು ನನ್ನ ಗೆಳೆಯರು, ನನ್ನ ಕಾಲು ಮುರಿದಾಗ ಅವರು ಸುಮ್ಮನಿದ್ದಾರೆಯೇ, ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುತ್ತಾರೆ” ಎಂದರು. ಅಲ್ಲಿಗೆ ಎಲ್ಲವೂ ಶಮನವಾಯ್ತು. ಹಾಗೆ ನೋಡಿದರೆ ಸೇಡಿನ ಮಾತುಗಳು, ಹಲ್ಲೆ ಮಾತುಗಳು ಈ ಬಿಜೆಪಿಗಳು ಉದ್ಭವಿಸಿದ ಮೇಲೆ ಜಾಸ್ತಿಯಾದವಂತಲ್ಲಾ. ಇದರ ಉದ್ಘಾಟಕರು ಈಶ್ವರಪ್ಪನಾದರೆ ಮುಂದುವರೆಸಿಕೊಂಡು ಹೋಗುತ್ತಿರುವವರ ಪೈಕಿ ಸಿ.ಟಿ ರವಿ, ಪ್ರತಾಪ ಸಿಮ್ಮ, ರೇಣುಕಾಚಾರಿ ಇನ್ನ ಮುಂತಾದವುಗಳಿವೆಯಂತಲ್ಲಾ, ಥೂತ್ತೇರಿ.

ಯಾಹೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...