Homeಮುಖಪುಟರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

- Advertisement -
- Advertisement -

ರಾಷ್ಟ್ರಗೀತೆ ಹಾಡುತ್ತಿರುವ ಸಮಯದಲ್ಲಿ ಎದ್ದು ನಿಲ್ಲದಿರುವುದು ಅಥವಾ ಹಾಡದಿರುವುದು, ಅಗೌರವ ಮತ್ತು ಮೂಲಭೂತ ಕರ್ತವ್ಯಗಳನ್ನು ಪಾಲಿಸುವಲ್ಲಿನ ವಿಫಲತೆ ಆಗಿದೆ ಹೊರತು, ಅದು ಅಪರಾಧವಲ್ಲ ಎಂದು ಜಮ್ಮು ಕಾಶ್ಮೀರ ಹೈಕೋರ್ಟ್‌ ಶುಕ್ರವಾರ ತೀರ್ಪು ನೀಡಿದೆ.

“ಭಾರತೀಯ ರಾಷ್ಟ್ರಗೀತೆಗೆ ಅಗೌರವ ತೋರುವುದು ಅಪರಾಧವಲ್ಲ. ಒಬ್ಬ ವ್ಯಕ್ತಿಯ ನಡವಳಿಕೆಯಿಂದ ಭಾರತೀಯ ರಾಷ್ಟ್ರಗೀತೆಯ ಹಾಡಿಗೆ ತಡೆಯಾದರೆ ಅಥವಾ ಗಾಯನದಲ್ಲಿ ತೊಡಗಿರುವ ಯಾವುದೇ ಸಭೆಗೆ ತೊಂದರೆಯಾಗುವುದಾದರೆ, ಅದು ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ ಕಾಯ್ದೆಯ ಸೆಕ್ಷನ್ 3’ ರ ಪ್ರಕಾರ ದಂಡನೀಯವಾಗಿದೆ” ಜಮ್ಮುಕಾಶ್ಮೀರ ಹೈಕೋರ್ಟ್‌‌ ನ್ಯಾಯಮೂರ್ತಿ‌ ಸಂಜೀವ್ ಕುಮಾರ್ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

ನ್ಯಾಯಾಲಯವು, “ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಥವಾ ಎದ್ದುನಿಂತರೂ ರಾಷ್ಟ್ರಗೀತೆ ಹಾಡುತ್ತಿರುವವ ಜೊತೆಗೂಡಿ ಹಾಡದಿರುವುದು ರಾಷ್ಟ್ರಗೀತೆಗೆ ಮಾಡುತ್ತಿರುವ ಅಗೌರವ ಮತ್ತು ಭಾರತದ ಸಂವಿಧಾನದ ಭಾಗ 4ಎ ಯಲ್ಲಿ ಹೇಳಲಾದ ಮೂಲಭೂತ ಕರ್ತವ್ಯ ಪಾಲಿಸುವಲ್ಲಿನ ವಿಫಲತೆಯಾಗಬಹುದೆ ವಿನಃ ಸೆಕ್ಷನ್ 3 ರ ಅಡಿಯಲ್ಲಿ ವ್ಯಾಖ್ಯಾನಿಸಲಾದ ಅಪರಾಧವಲ್ಲ” ಎಂದು ಹೇಳಿದೆ.

ಜಮ್ಮುವಿನ ಬಾನಿಯಲ್ಲಿರುವ ಸರ್ಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ತೌಸೀಫ್‌ ಅಹ್ಮದ್ ಭಟ್ ಅವರ ವಿರುದ್ದ ರಾಷ್ಟ್ರಗೀತೆಗೆ ಅವಮಾನಿಸಿದ ಆರೋಪದ ಮೇಲೆ ಪೊಲೀಸರು 2018 ರ ಸೆಪ್ಟೆಂಬರ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ ಕಾಯ್ದೆಯ ಸೆಕ್ಷನ್ 3’ ರ ಅಡಿಯಲ್ಲಿ ತನ್ನ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಪ್ರಶ್ನಿಸಿ, ಭಟ್ ಸಲ್ಲಿಸಿದ್ದ ರಿಟ್ ಅರ್ಜಿಯ ಕುರಿತು ಹೈಕೋರ್ಟ್‌‌‌ ಈ ತೀರ್ಪು ನೀಡಿದೆ.

ಭಟ್, ತಾನು ರಾಷ್ಟ್ರಗೀತೆ ಹಾಡುವುದನ್ನು ತಡೆಯುವುದೋ ಅಥವಾ ಗಾಯನದಲ್ಲಿ ತೊಡಗಿರುವ ಸಭೆಗೆ ತೊಂದರೆ ಉಂಟುಮಾಡಿದ್ದೇನೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದ್ದರಿಂದ ತಾನು ಕಾಯಿದೆಯ ಸೆಕ್ಷನ್ 3 ರ ಅಡಿಯಲ್ಲಿ ಯಾವುದೆ ಅಪರಾಧವನ್ನು ಮಾಡಿಲ್ಲ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...