Homeಮುಖಪುಟರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಪರಾಧವಲ್ಲ: ಹೈಕೋರ್ಟ್‌

- Advertisement -
- Advertisement -

ರಾಷ್ಟ್ರಗೀತೆ ಹಾಡುತ್ತಿರುವ ಸಮಯದಲ್ಲಿ ಎದ್ದು ನಿಲ್ಲದಿರುವುದು ಅಥವಾ ಹಾಡದಿರುವುದು, ಅಗೌರವ ಮತ್ತು ಮೂಲಭೂತ ಕರ್ತವ್ಯಗಳನ್ನು ಪಾಲಿಸುವಲ್ಲಿನ ವಿಫಲತೆ ಆಗಿದೆ ಹೊರತು, ಅದು ಅಪರಾಧವಲ್ಲ ಎಂದು ಜಮ್ಮು ಕಾಶ್ಮೀರ ಹೈಕೋರ್ಟ್‌ ಶುಕ್ರವಾರ ತೀರ್ಪು ನೀಡಿದೆ.

“ಭಾರತೀಯ ರಾಷ್ಟ್ರಗೀತೆಗೆ ಅಗೌರವ ತೋರುವುದು ಅಪರಾಧವಲ್ಲ. ಒಬ್ಬ ವ್ಯಕ್ತಿಯ ನಡವಳಿಕೆಯಿಂದ ಭಾರತೀಯ ರಾಷ್ಟ್ರಗೀತೆಯ ಹಾಡಿಗೆ ತಡೆಯಾದರೆ ಅಥವಾ ಗಾಯನದಲ್ಲಿ ತೊಡಗಿರುವ ಯಾವುದೇ ಸಭೆಗೆ ತೊಂದರೆಯಾಗುವುದಾದರೆ, ಅದು ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ ಕಾಯ್ದೆಯ ಸೆಕ್ಷನ್ 3’ ರ ಪ್ರಕಾರ ದಂಡನೀಯವಾಗಿದೆ” ಜಮ್ಮುಕಾಶ್ಮೀರ ಹೈಕೋರ್ಟ್‌‌ ನ್ಯಾಯಮೂರ್ತಿ‌ ಸಂಜೀವ್ ಕುಮಾರ್ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಗೀತೆ ಹಾಡುವಂತೆ ಪೊಲೀಸರ ಸಮ್ಮುಖದಲ್ಲೇ ಹಿಂಸೆಗೊಳಗಾದ ವ್ಯಕ್ತಿ ಸಾವು

ನ್ಯಾಯಾಲಯವು, “ರಾಷ್ಟ್ರಗೀತೆ ಹಾಡುತ್ತಿರುವಾಗ ಎದ್ದು ನಿಲ್ಲದಿರುವುದು ಅಥವಾ ಎದ್ದುನಿಂತರೂ ರಾಷ್ಟ್ರಗೀತೆ ಹಾಡುತ್ತಿರುವವ ಜೊತೆಗೂಡಿ ಹಾಡದಿರುವುದು ರಾಷ್ಟ್ರಗೀತೆಗೆ ಮಾಡುತ್ತಿರುವ ಅಗೌರವ ಮತ್ತು ಭಾರತದ ಸಂವಿಧಾನದ ಭಾಗ 4ಎ ಯಲ್ಲಿ ಹೇಳಲಾದ ಮೂಲಭೂತ ಕರ್ತವ್ಯ ಪಾಲಿಸುವಲ್ಲಿನ ವಿಫಲತೆಯಾಗಬಹುದೆ ವಿನಃ ಸೆಕ್ಷನ್ 3 ರ ಅಡಿಯಲ್ಲಿ ವ್ಯಾಖ್ಯಾನಿಸಲಾದ ಅಪರಾಧವಲ್ಲ” ಎಂದು ಹೇಳಿದೆ.

ಜಮ್ಮುವಿನ ಬಾನಿಯಲ್ಲಿರುವ ಸರ್ಕಾರಿ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ತೌಸೀಫ್‌ ಅಹ್ಮದ್ ಭಟ್ ಅವರ ವಿರುದ್ದ ರಾಷ್ಟ್ರಗೀತೆಗೆ ಅವಮಾನಿಸಿದ ಆರೋಪದ ಮೇಲೆ ಪೊಲೀಸರು 2018 ರ ಸೆಪ್ಟೆಂಬರ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ ಕಾಯ್ದೆಯ ಸೆಕ್ಷನ್ 3’ ರ ಅಡಿಯಲ್ಲಿ ತನ್ನ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಪ್ರಶ್ನಿಸಿ, ಭಟ್ ಸಲ್ಲಿಸಿದ್ದ ರಿಟ್ ಅರ್ಜಿಯ ಕುರಿತು ಹೈಕೋರ್ಟ್‌‌‌ ಈ ತೀರ್ಪು ನೀಡಿದೆ.

ಭಟ್, ತಾನು ರಾಷ್ಟ್ರಗೀತೆ ಹಾಡುವುದನ್ನು ತಡೆಯುವುದೋ ಅಥವಾ ಗಾಯನದಲ್ಲಿ ತೊಡಗಿರುವ ಸಭೆಗೆ ತೊಂದರೆ ಉಂಟುಮಾಡಿದ್ದೇನೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದ್ದರಿಂದ ತಾನು ಕಾಯಿದೆಯ ಸೆಕ್ಷನ್ 3 ರ ಅಡಿಯಲ್ಲಿ ಯಾವುದೆ ಅಪರಾಧವನ್ನು ಮಾಡಿಲ್ಲ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....