Homeಕರ್ನಾಟಕಕನಕಪುರದಲ್ಲಿ ಯೇಸುಕ್ತಿಸ್ತನ ಪ್ರತಿಮೆ ವಿವಾದ: ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ, ಆತ್ಮತೃಪ್ತಿಗಾಗಿ - ಡಿ.ಕೆ ಶಿವಕುಮಾರ್‌

ಕನಕಪುರದಲ್ಲಿ ಯೇಸುಕ್ತಿಸ್ತನ ಪ್ರತಿಮೆ ವಿವಾದ: ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ, ಆತ್ಮತೃಪ್ತಿಗಾಗಿ – ಡಿ.ಕೆ ಶಿವಕುಮಾರ್‌

- Advertisement -
- Advertisement -

ತಮ್ಮ ಕ್ಷೇತ್ರದಲ್ಲಿ ಜೀಸಸ್ ಪ್ರತಿಮೆಗೆ ಪ್ರಾಯೋಜಕತ್ವ ನೀಡಿದ ವಿಚಾರದಲ್ಲಿನ ಹಲವಾರು ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನ ಡಿ.ಕೆ.ಶಿವಕುಮಾರ್ “ಸ್ಥಳೀಯರಿಗೆ ನೀಡಿದ ಭರವಸೆಯನ್ನು ಈಡೇರಿಸುತ್ತಿದ್ದೇನೆ ಅಷ್ಟೇ ಎಂದಿದ್ದಾರೆ”.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಿಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಶ್ವದಲ್ಲಿಯೇ ಅತಿ ಎತ್ತರದ 114 ಅಡಿಯ ಏಕಶಿಲೆ ಯೇಸುಕ್ರಿಸ್ತರ ಪ್ರತಿಮೆ ನಿರ್ಮಾಣದ ಶಿಲಾನ್ಯಾಸವನ್ನು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕ್ರಿಸ್ಮಸ್ ಶುಭದಿನವಾದ ಬುಧವಾರ ನೆರವೇರಿಸಿದ್ದರು.

ಯೇಸುಕ್ರಿಸ್ತ ಪ್ರತಿಮೆ ನಿರ್ಮಾಣವಾಗುತ್ತಿರುವ ಕಪಾಲಿಬೆಟ್ಟದ ಹತ್ತು ಎಕರೆ ಜಾಗವನ್ನು ಕೊಂಡುಕೊಂಡು ಪ್ರತಿಮೆ ನಿರ್ಮಾಣ ಟ್ರಸ್ಟ್ ನವರಿಗೆ ಸಂಬಂಧಪಟ್ಟ ದಾಖಲೆಪತ್ರಗಳನ್ನು ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಇದೇ ಸಂದರ್ಭದಲ್ಲಿ ಹಸ್ತಾಂತರಿಸಿದ್ದರು.

ಹಾರೋಬೆಲೆ ಗ್ರಾಮದಲ್ಲಿ ಶೇಕಡಾ 99 ರಷ್ಟು ಮಂದಿ ಕ್ರೈಸ್ತ ಸಮುದಾಯದವರಿದ್ದು, ಈ ಪ್ರದೇಶದಲ್ಲಿ ಕ್ರಿಸ್ತನ ಪ್ರತಿಮೆ ಇಲ್ಲದಿರುವುದರಿಂದ ಜನರು ಹಾರೋಬೆಲೆಯಲ್ಲಿ ಯೇಸುಕ್ರಿಸ್ತನ ಪ್ರತಿಮೆ ಬೇಕು ಎಂದು ಕೇಳಿದ್ದರು. ನಾನು ಸಹಾಯ ಮಾಡುತ್ತೇನೆ ಎಂದು ನಾನು ಭರವಸೆ ನೀಡಿದ್ದೆ ಮತ್ತು ನಾನು ನನ್ನ ಕೆಲಸವನ್ನು ಮಾಡಿದ್ದೇನೆ. ಅದು ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ ಜೀವನದಲ್ಲಿ ಆತ್ಮ ತೃಪ್ತಿಗಾಗಿ ಕೆಲವು ಕೆಲಸಗಳನ್ನು ಮಾಡುತ್ತೇನೆ ಎಂದು ಶಿವಕುಮಾರ್‌ ಹೇಳಿದ್ದಾರೆ. ಅಲ್ಲದೇ ಭೂಮಿ ಅವರಿಗೆ ಸೇರದ ಹೊರತು ಯಾವುದೇ ಪ್ರತಿಮೆಯನ್ನು ನಿರ್ಮಿಸದಂತೆ ಸ್ಥಳೀಯರಿಗೆ ತಿಳಿಸಿದ್ದೇನೆ ಎಂದು ಸಹ ಹೇಳಿದ್ದಾರೆ.

“ನಾನು ಗ್ರಾಮೀಣ ಕ್ಷೇತ್ರದಿಂದ ಬಂದಿದ್ದೇನೆ, ಅಲ್ಲಿ ಜನರು ನನಗೆ ಪ್ರೀತಿ ಮತ್ತು ಶಕ್ತಿಯನ್ನು ನೀಡಿದ್ದಾರೆ. ನನ್ನ ಕ್ಷೇತ್ರದಲ್ಲಿ ನಾನು ನೂರಾರು ದೇವಾಲಯಗಳನ್ನು ನಿರ್ಮಿಸಿದ್ದೇನೆ. ಮೂರು ಸ್ಥಳಗಳಲ್ಲಿ 30 ಎಕರೆಗೂ ಹೆಚ್ಚು ಆಸ್ತಿಯನ್ನು ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿದೆ. ನಾನು ಖರೀದಿಸಿದ ಆಸ್ತಿಗಳಲ್ಲಿ ಕೆಲವನ್ನು ವಿವಿಧ ಸಂಸ್ಥೆಗಳಿಗೆ ದಾನ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಪ್ರತಿಮೆ ನಿರ್ಮಾಣದ ಬಗ್ಗೆ ಕುರಿತು ಡಿ.ಕೆ ಶಿವಕುಮಾರ್‌ ನಡೆಯನ್ನು ಆಡಳಿತಾರೂಢ BJP ಬಿಜೆಪಿ ಟೀಕಿಸಿದೆ. ಪ್ರತಿಮೆಗೆ ಸಂಬಂಧಿಸಿದ ಜಮೀನು ಶಿವಕುಮಾರ್‌ ಒಡೆತನದಲ್ಲಿಲ್ಲ ಎಂದು ರಾಜ್ಯ ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಆ ಭೂಮಿ ಸಮುದಾಯದ ಬಳಕೆಗಾಗಿ ಹುಲ್ಲುಗಾವಲು ಭೂಮಿಯಾಗಿರಬೇಕು ಇದು ರಾಜ್ಯ ಸರ್ಕಾರದ ಒಡೆತನದಲ್ಲಿದೆ ಎಂದು ಅವರು ಹೇಳಿದರು.

“ಇದು ಶಿವಕುಮಾರ್ ಅವರ ಆಸ್ತಿಯಲ್ಲ. ಇದು ಸರ್ಕಾರಿ ಗೋಮಾಳ ಭೂಮಿ. ಅವರು (ಶಿವಕುಮಾರ್) ಅವರು ಯಾವ ಅರ್ಥದಲ್ಲಿ ಖರೀದಿಸಿ ಕೊಟ್ಟಿದ್ದಾರೆಂದು ಹೇಳಿದ್ದಾರೆಂದು ನನಗೆ ತಿಳಿದಿಲ್ಲ. ಅದನ್ನು ಯಾರಿಗೂ ದಾನ ಮಾಡಲು ಸಾಧ್ಯವಿಲ್ಲ. ನಾನು ರಾಮನಗರ ಜಿಲ್ಲಾಧಿಕಾರಿಗಳ ವರದಿ ಕೇಳಿದ್ದೇನೆ” ಎಂದು ಆರ್‌ ಅಶೋಕ್‌ ಹೇಳಿದ್ದಾರೆ.

ಮೈಸೂರಿನ ಮತ್ತೊಬ್ಬ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಪ್ರತಿಮೆ ನಿರ್ಮಾಣದ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ್ದಾರೆ. ಸಿದ್ದಗಂಗ, ಸುತ್ತೂರು ಮತ್ತು ಆದಿಚುಂಚನಗಿರಿ ಮುಂತಾದ ಮಠಗಳ ದರ್ಶಕರನ್ನು ಮರೆತಿದ್ದೀರಾ ಎಂದು ಅವರು ಟ್ವೀಟ್ ನಲ್ಲಿ ಶಿವಕುಮಾರ್ ಅವರನ್ನು ಕೇಳಿದ್ದಾರೆ. “ಶಿವಕುಮಾರ ಸ್ವಾಮೀಜಿ (ಸಿದ್ದಗಂಗ ಮಠ) ಅವರ ಶಾಸನವನ್ನು ನಿರ್ಮಿಸುವುದು ಕಪಲಿಬೆಟ್ಟದ ಕಿರೀಟದಂತೆಯೇ ಇರುತ್ತಿತ್ತು ಅಲ್ಲವೇ?”. ಎಂದು ವ್ಯಂಗ್ಯವಾಡಿದ್ದಾರೆ.

ತನ್ನ ವಿರುದ್ಧದ ಟೀಕೆಗಳು ನನ್ನ ಜಾತ್ಯತೀತ ದೃಷ್ಟಿಕೋನದ ಬಗ್ಗೆ ಅವರಿಗಿರುವ ಅಸೂಯೆಯನ್ನು ತೋರಿಸುತ್ತದೆ ಎಂದು ಶಿವಕುಮಾರ್ ಹೇಳಿದ್ದಾರೆ. “ಎಚ್‌.ಡಿ ಕುಮಾರಸ್ವಾಮಿ ಸರ್ಕಾರವು ಭೂಮಿಯನ್ನು ನೀಡಿದ್ದು ಮತ್ತು ಅದಕ್ಕಾಗಿ ನಾನು ಹಣವನ್ನು ಪಾವತಿಸಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...