Homeಕರ್ನಾಟಕಕನಕಪುರದಲ್ಲಿ ಯೇಸುಕ್ತಿಸ್ತನ ಪ್ರತಿಮೆ ವಿವಾದ: ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ, ಆತ್ಮತೃಪ್ತಿಗಾಗಿ - ಡಿ.ಕೆ ಶಿವಕುಮಾರ್‌

ಕನಕಪುರದಲ್ಲಿ ಯೇಸುಕ್ತಿಸ್ತನ ಪ್ರತಿಮೆ ವಿವಾದ: ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ, ಆತ್ಮತೃಪ್ತಿಗಾಗಿ – ಡಿ.ಕೆ ಶಿವಕುಮಾರ್‌

- Advertisement -
- Advertisement -

ತಮ್ಮ ಕ್ಷೇತ್ರದಲ್ಲಿ ಜೀಸಸ್ ಪ್ರತಿಮೆಗೆ ಪ್ರಾಯೋಜಕತ್ವ ನೀಡಿದ ವಿಚಾರದಲ್ಲಿನ ಹಲವಾರು ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನ ಡಿ.ಕೆ.ಶಿವಕುಮಾರ್ “ಸ್ಥಳೀಯರಿಗೆ ನೀಡಿದ ಭರವಸೆಯನ್ನು ಈಡೇರಿಸುತ್ತಿದ್ದೇನೆ ಅಷ್ಟೇ ಎಂದಿದ್ದಾರೆ”.

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲಿಬೆಟ್ಟದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಶ್ವದಲ್ಲಿಯೇ ಅತಿ ಎತ್ತರದ 114 ಅಡಿಯ ಏಕಶಿಲೆ ಯೇಸುಕ್ರಿಸ್ತರ ಪ್ರತಿಮೆ ನಿರ್ಮಾಣದ ಶಿಲಾನ್ಯಾಸವನ್ನು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಕ್ರಿಸ್ಮಸ್ ಶುಭದಿನವಾದ ಬುಧವಾರ ನೆರವೇರಿಸಿದ್ದರು.

ಯೇಸುಕ್ರಿಸ್ತ ಪ್ರತಿಮೆ ನಿರ್ಮಾಣವಾಗುತ್ತಿರುವ ಕಪಾಲಿಬೆಟ್ಟದ ಹತ್ತು ಎಕರೆ ಜಾಗವನ್ನು ಕೊಂಡುಕೊಂಡು ಪ್ರತಿಮೆ ನಿರ್ಮಾಣ ಟ್ರಸ್ಟ್ ನವರಿಗೆ ಸಂಬಂಧಪಟ್ಟ ದಾಖಲೆಪತ್ರಗಳನ್ನು ಶಿವಕುಮಾರ್ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಇದೇ ಸಂದರ್ಭದಲ್ಲಿ ಹಸ್ತಾಂತರಿಸಿದ್ದರು.

ಹಾರೋಬೆಲೆ ಗ್ರಾಮದಲ್ಲಿ ಶೇಕಡಾ 99 ರಷ್ಟು ಮಂದಿ ಕ್ರೈಸ್ತ ಸಮುದಾಯದವರಿದ್ದು, ಈ ಪ್ರದೇಶದಲ್ಲಿ ಕ್ರಿಸ್ತನ ಪ್ರತಿಮೆ ಇಲ್ಲದಿರುವುದರಿಂದ ಜನರು ಹಾರೋಬೆಲೆಯಲ್ಲಿ ಯೇಸುಕ್ರಿಸ್ತನ ಪ್ರತಿಮೆ ಬೇಕು ಎಂದು ಕೇಳಿದ್ದರು. ನಾನು ಸಹಾಯ ಮಾಡುತ್ತೇನೆ ಎಂದು ನಾನು ಭರವಸೆ ನೀಡಿದ್ದೆ ಮತ್ತು ನಾನು ನನ್ನ ಕೆಲಸವನ್ನು ಮಾಡಿದ್ದೇನೆ. ಅದು ರಾಜಕೀಯ ಅಥವಾ ಅಧಿಕಾರಕ್ಕಾಗಿ ಅಲ್ಲ ಜೀವನದಲ್ಲಿ ಆತ್ಮ ತೃಪ್ತಿಗಾಗಿ ಕೆಲವು ಕೆಲಸಗಳನ್ನು ಮಾಡುತ್ತೇನೆ ಎಂದು ಶಿವಕುಮಾರ್‌ ಹೇಳಿದ್ದಾರೆ. ಅಲ್ಲದೇ ಭೂಮಿ ಅವರಿಗೆ ಸೇರದ ಹೊರತು ಯಾವುದೇ ಪ್ರತಿಮೆಯನ್ನು ನಿರ್ಮಿಸದಂತೆ ಸ್ಥಳೀಯರಿಗೆ ತಿಳಿಸಿದ್ದೇನೆ ಎಂದು ಸಹ ಹೇಳಿದ್ದಾರೆ.

“ನಾನು ಗ್ರಾಮೀಣ ಕ್ಷೇತ್ರದಿಂದ ಬಂದಿದ್ದೇನೆ, ಅಲ್ಲಿ ಜನರು ನನಗೆ ಪ್ರೀತಿ ಮತ್ತು ಶಕ್ತಿಯನ್ನು ನೀಡಿದ್ದಾರೆ. ನನ್ನ ಕ್ಷೇತ್ರದಲ್ಲಿ ನಾನು ನೂರಾರು ದೇವಾಲಯಗಳನ್ನು ನಿರ್ಮಿಸಿದ್ದೇನೆ. ಮೂರು ಸ್ಥಳಗಳಲ್ಲಿ 30 ಎಕರೆಗೂ ಹೆಚ್ಚು ಆಸ್ತಿಯನ್ನು ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ನೀಡಲಾಗಿದೆ. ನಾನು ಖರೀದಿಸಿದ ಆಸ್ತಿಗಳಲ್ಲಿ ಕೆಲವನ್ನು ವಿವಿಧ ಸಂಸ್ಥೆಗಳಿಗೆ ದಾನ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಪ್ರತಿಮೆ ನಿರ್ಮಾಣದ ಬಗ್ಗೆ ಕುರಿತು ಡಿ.ಕೆ ಶಿವಕುಮಾರ್‌ ನಡೆಯನ್ನು ಆಡಳಿತಾರೂಢ BJP ಬಿಜೆಪಿ ಟೀಕಿಸಿದೆ. ಪ್ರತಿಮೆಗೆ ಸಂಬಂಧಿಸಿದ ಜಮೀನು ಶಿವಕುಮಾರ್‌ ಒಡೆತನದಲ್ಲಿಲ್ಲ ಎಂದು ರಾಜ್ಯ ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಆ ಭೂಮಿ ಸಮುದಾಯದ ಬಳಕೆಗಾಗಿ ಹುಲ್ಲುಗಾವಲು ಭೂಮಿಯಾಗಿರಬೇಕು ಇದು ರಾಜ್ಯ ಸರ್ಕಾರದ ಒಡೆತನದಲ್ಲಿದೆ ಎಂದು ಅವರು ಹೇಳಿದರು.

“ಇದು ಶಿವಕುಮಾರ್ ಅವರ ಆಸ್ತಿಯಲ್ಲ. ಇದು ಸರ್ಕಾರಿ ಗೋಮಾಳ ಭೂಮಿ. ಅವರು (ಶಿವಕುಮಾರ್) ಅವರು ಯಾವ ಅರ್ಥದಲ್ಲಿ ಖರೀದಿಸಿ ಕೊಟ್ಟಿದ್ದಾರೆಂದು ಹೇಳಿದ್ದಾರೆಂದು ನನಗೆ ತಿಳಿದಿಲ್ಲ. ಅದನ್ನು ಯಾರಿಗೂ ದಾನ ಮಾಡಲು ಸಾಧ್ಯವಿಲ್ಲ. ನಾನು ರಾಮನಗರ ಜಿಲ್ಲಾಧಿಕಾರಿಗಳ ವರದಿ ಕೇಳಿದ್ದೇನೆ” ಎಂದು ಆರ್‌ ಅಶೋಕ್‌ ಹೇಳಿದ್ದಾರೆ.

ಮೈಸೂರಿನ ಮತ್ತೊಬ್ಬ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಪ್ರತಿಮೆ ನಿರ್ಮಾಣದ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ್ದಾರೆ. ಸಿದ್ದಗಂಗ, ಸುತ್ತೂರು ಮತ್ತು ಆದಿಚುಂಚನಗಿರಿ ಮುಂತಾದ ಮಠಗಳ ದರ್ಶಕರನ್ನು ಮರೆತಿದ್ದೀರಾ ಎಂದು ಅವರು ಟ್ವೀಟ್ ನಲ್ಲಿ ಶಿವಕುಮಾರ್ ಅವರನ್ನು ಕೇಳಿದ್ದಾರೆ. “ಶಿವಕುಮಾರ ಸ್ವಾಮೀಜಿ (ಸಿದ್ದಗಂಗ ಮಠ) ಅವರ ಶಾಸನವನ್ನು ನಿರ್ಮಿಸುವುದು ಕಪಲಿಬೆಟ್ಟದ ಕಿರೀಟದಂತೆಯೇ ಇರುತ್ತಿತ್ತು ಅಲ್ಲವೇ?”. ಎಂದು ವ್ಯಂಗ್ಯವಾಡಿದ್ದಾರೆ.

ತನ್ನ ವಿರುದ್ಧದ ಟೀಕೆಗಳು ನನ್ನ ಜಾತ್ಯತೀತ ದೃಷ್ಟಿಕೋನದ ಬಗ್ಗೆ ಅವರಿಗಿರುವ ಅಸೂಯೆಯನ್ನು ತೋರಿಸುತ್ತದೆ ಎಂದು ಶಿವಕುಮಾರ್ ಹೇಳಿದ್ದಾರೆ. “ಎಚ್‌.ಡಿ ಕುಮಾರಸ್ವಾಮಿ ಸರ್ಕಾರವು ಭೂಮಿಯನ್ನು ನೀಡಿದ್ದು ಮತ್ತು ಅದಕ್ಕಾಗಿ ನಾನು ಹಣವನ್ನು ಪಾವತಿಸಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...