Homeಮುಖಪುಟನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ

ನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ

- Advertisement -
- Advertisement -

ದೇಶದ್ರೋಹ, ರಾಷ್ಟ್ರದ್ರೋಹ ಇದು ನಿತ್ಯ ಕೇಳುತ್ತಿರುವಂತಹ ಸುದ್ದಿ. ದೇಶದ್ರೋಹ ಅಂದರೇನು? ದೇಶದ್ರೋಹ ಎನ್ನುವಂತಹದ್ದು ಮೊದಲು ರಾಜದ್ರೋಹ ಎಂದಿತ್ತು. ದೇಶದೆಲ್ಲೆಡೆ ವ್ಯತಿರಿಕ್ತವಾಗಿ ಬೆಳೆಯುತ್ತಿದ್ದ ಚಳವಳಿಗಳನ್ನು ಹತ್ತಿಕ್ಕಲು ಬ್ರಿಟಿಷರು 1879ರಲ್ಲಿ ತಂದ ಕಾನೂನೇ ರಾಜದ್ರೋಹದ ಕಾನೂನು. ಅದರಡಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಎಲ್ಲಾ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರನ್ನು ಜೈಲಿಗೆ ಹಾಕಿದರು.. ಬ್ರಿಟಿಷರ ರಾಜದ್ರೋಹದ ಕಾನೂನಿನಡಿಯಲ್ಲಿ ಚರ್ಚಿತವಾದ 2 ಪ್ರಕರಣಗಳೆಂದರೆ ಒಂದು ಬಾಲಗಂಗಾಧರ ತಿಲಕರ ಪ್ರಕರಣ, ಇನ್ನೊಂದು ಮಹಾತ್ಮ ಗಾಂಧಿಯವರ ಪ್ರಕರಣಗಳು.

ಮಹಾತ್ಮ ಗಾಂಧೀಜಿಯವರ ಪ್ರಕರಣ, ಅವರು ಬರೆದು ಪ್ರಕಟಿಸಿದ ಮೂರು ಲೇಖನಗಳ ವಿರುದ್ಧ ಬ್ರಿಟಿಷ್ ಸರ್ಕಾರ ರಾಜದ್ರೋಹದ ಪ್ರಕರಣ ದಾಖಲಿಸಿತ್ತು. ನ್ಯಾಯಾಲಯದಲ್ಲಿ ವಾದ ಮಂಡಿಸಿದ ಗಾಂಧೀಜಿ, ನ್ಯಾಯಾಧೀಶರಾಗಿ ನಿಮಗೆ 2 ಅವಕಾಶವಿದೆ. ನೀವು ನ್ಯಾಯ ನೀಡುತ್ತೀರೋ, ಕಾನೂನು ಮಾತನಾಡುತ್ತೀರೋ? ನೀವು ಕಾನೂನು ಬಗ್ಗೆ ಮಾತನಾಡುತ್ತೀರಿ ಅಂತಾದರೆ ನಿಮ್ಮ ಕಾನೂನಿನ ಕೆಳಗೆ ನಾನು ಅಪರಾಧಿ. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಬ್ರಿಟಿಷ್ ಸರ್ಕಾರ ತೊಲಗಲೇಬೇಕು ಎಂದು ನಾನು ಬರೆದ ಪ್ರತಿಯೊಂದು ಅಕ್ಷರ ಸಹ ಸತ್ಯ. ಅದನ್ನು ತಪ್ಪು ಎಂದು ಹೇಳಲು ನಾನು ತಯಾರಿಲ್ಲ. ನೀವು ಅದಕ್ಕೆ ಅತ್ಯುಗ್ರವಾದ ಶಿಕ್ಷೆ ನೀಡಿ. ನೀವು ನ್ಯಾಯದ ಬಗ್ಗೆ ಮಾತನಾಡುತ್ತೀರಿ ಎಂದಾದರೆ ನೀವು ಈ ಕೆಲಸಕ್ಕೆ ರಾಜಿನಾಮೆ ಕೊಟ್ಟು ಹೋಗಿ. ಯಾಕೆಂದರೆ ನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ ಎಂದು ಹೇಳುತ್ತಾರೆ.. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಕಾನೂನೇ ರಾಜದ್ರೋಹದ ಕಾನೂನು..

ನಮಗೆ ಸ್ವಾತಂತ್ರ್ಯ ಸಿಕ್ಕಮೇಲೆ, ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಮೇಲೆ ರಾಜದ್ರೋಹ ಉಳಿಯಲು ಸಾಧ್ಯವಿಲ್ಲ ಎನ್ನುವ ಚರ್ಚೆ ಬಂತು. ಇಂತಹ ಘಟನೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮೊದಲುಗೊಂಡು ಬಾಂಬೆ ಹೈಕೋರ್ಟ್ ಆದಿಯಾಗಿ ಎಲ್ಲಾ ಕೋರ್ಟ್‍ಗಳು ಕೂಡಾ ರಾಜದ್ರೋಹದ ಕಾನೂನು ಉಳಿಯಲು ಸಾಧ್ಯವಿಲ್ಲ, ಅದು ಹೋಗಲೇಬೇಕು. ಯಾಕೆಂದರೆ ಮೂಲಭೂತ ಹಕ್ಕಾದ ಅಭಿವ್ಯಕ್ತಿ ಸ್ವಾತಂತ್ರ್ಯ ಇದ್ದಲ್ಲಿ ರಾಜದ್ರೋಹದ ಕಾನೂನಿಗೆ ಅವಕಾಶ ಇಲ್ಲ ಎಂದು ಅಭಿಪ್ರಾಯಪಟ್ಟವು.. ಎಲ್ಲಾ ತೀರ್ಪುಗಳ ನಡುವೆಯೂ ಸೆಡಿಷನ್ ಕಾನೂನು ಉಳಿದುಕೊಂಡುಬರಲು ಕಾರಣವೇನೆಂದರೆ ಆಗಿದ್ದಂತಹ ರಾಜಕೀಯ ತಳಮಳದ ಸ್ಥಿತಿ, ವಿಭಜನೆ. ದೇಶದಲ್ಲಿ ಇದ್ದ ಅತಂತ್ರ ಸ್ಥಿತಿಯಿಂದ ಅದನ್ನು ಹಾಗೆಯೇ ಉಳಿಸಿಕೊಳ್ಳಲಾಯಿತು.

ದೇಶದ್ರೋಹ ಕಾನೂನಿನಲ್ಲಿ ಎರಡು ಭಾಗವಿದೆ. ಒಂದು ರಾಷ್ಟ್ರದ ಬಗ್ಗೆ ದ್ವೇಷ ಇರುವಂತಹದ್ದು ಎರಡನೇಯದ್ದು ರಾಷ್ಟ್ರದ ಸರ್ಕಾರದ ನೀತಿಯನ್ನು ವಿರೋಧಿಸುವಂತಹದ್ದು. ಈ ಕಾನೂನಿಗೆ ಸಂಬಂಧಿಸಿದಂತೆ ಮುಖ್ಯವಾದ ತೀರ್ಪು ಬಂದಿದ್ದು ಕೇದಾರನಾಥ ಪ್ರಕರಣದಲ್ಲಿ. 1962 ರಲ್ಲಿ ಬಂದ ಈ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‍ನ ಸಂವಿಧಾನ ಪೀಠ ಹೇಳಿದ್ದು ‘ಸರ್ಕಾರವನ್ನು ಇಲ್ಲದಾಗಿಸುವಾಗ, ಈ ದೇಶದ ಐಕ್ಯತೆ ಮತ್ತು ಸಾರ್ವಭೌಮತೆಯ ಪ್ರಶ್ನೆ ಬಂದಾಗ ಅದು ದೇಶದ್ರೋಹ ಆಗುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಸ್ವೇಚ್ಛೆಗೂ ಒಂದು ಮಿತಿಯಿದೆ. ಈ ಸಂದರ್ಭದಲ್ಲಿ ರಾಷ್ಟ್ರದ್ರೋಹದ ಕಾನೂನು ಸಿಂಧುವಾಗುತ್ತದೆ’.

2ನೇ ಭಾಗದಲ್ಲಿ ಸರ್ಕಾರದ ನೀತಿಯ ವಿರುದ್ಧ ಯಾವುದೇ ಪ್ರತಿರೋಧ, ವಿಮರ್ಶೆ, ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ದೇಶದ್ರೋಹ ಆಗುವುದಿಲ್ಲ. ದೇಶದ ವ್ಯವಸ್ಥೆಯನ್ನೇ ಕಿತ್ತೊಗೆಯುವ ಹೇಳಿಕೆ ಬಂದಾಗ ಮಾತ್ರ ದೇಶದ್ರೋಹ ಆಗುತ್ತದೆ. ಇದರ ನಂತರ ಸಾಕಷ್ಟು ತೀರ್ಪುಗಳು ಬಂದಿದೆ. ಅದರಲ್ಲಿ ಮುಖ್ಯವಾದುದು “ಬಲವಂತ್ ಸಿಂಗ್” ತೀರ್ಪು. ಇದರಲ್ಲಿ ಖಾಲಿಸ್ಥಾನ್ ಜಿಂದಾಬಾದ್ ಎನ್ನುವ ಹೇಳಿಕೆಯನ್ನಿಟ್ಟುಕೊಂಡು ಹೊಸ ರಾಷ್ಟ್ರದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಲಾಯಿತು. ಆದರೆ ಸುಪ್ರೀಂ ಇದು ದೇಶದ್ರೋಹ ಆಗುವುದಿಲ್ಲ ಎಂದು ತೀರ್ಪು ನೀಡಿತು.

ದೇಶದ ವ್ಯವಸ್ಥೆ ಬದಲಾಯಿಸುವ ಬಗ್ಗೆ ಹೇಳುವುದಿಲ್ಲವೊ ಅದು ದೇಶದ್ರೋಹವಲ್ಲ. ದುರಂತವೆಂದರೆ 1962ರ ನಂತರ ಬಂದ ಎಲ್ಲಾ ರಾಜಕೀಯ ಪಕ್ಷಗಳು ಈ ಕಾನೂನನ್ನು ದುರುಪಯೋಗಪಡಿಸಿಕೊಂಡಿವೆ. ತಮ್ಮ ವಿರುದ್ಧ ಯಾರು ಮಾತನಾಡಿದರೂ ದೇಶದ್ರೋಹದ ಕಾನೂನು ಉಪಯೋಗಿಸಿ ಮೊಕದ್ದಮೆ ದಾಖಲುಮಾಡಿ ಅವರನ್ನು ಜೈಲಿಗೆ ಹಾಕಲಾಗುತ್ತಿದೆ. ಈ ಪ್ರವೃತ್ತಿ ಈಗ ಇನ್ನು ಹೆಚ್ಚಾಗಿದೆ.

ದುರಂತವೆಂದರೆ ಒಂದು ಚಿಕ್ಕ ನಾಟಕದಲ್ಲಿ ಬರೆದ “ಚಪ್ಪಲಿಯಲ್ಲಿ ಹೊಡೆಯಿರಿ” ಎಂಬ ವಾಕ್ಯದ ಕಾರಣಕ್ಕೆ ದೇಶದ್ರೋಹದ ಪ್ರಕರಣ ಬೀದರಿನಲ್ಲಿ ತಾಯಿ ಮತ್ತು ಶಿಕ್ಷಕಿಯ ಮೇಲೆ ದಾಖಲಾಗಿರುತ್ತದೆ. “ಫ್ರೀ ಕಾಶ್ಮೀರ” ಎಂಬ ಪೋಸ್ಟರ್ ಹಿಡಿದ ಹುಡುಗಿಯ ಮೇಲೆ ಮೊಕದ್ದಮೆ ದಾಖಲಾಗುತ್ತದೆ. ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದಾರೆ ಎಂದು ಹುಡುಗಿಯನ್ನು ದೇಶದ್ರೋಹದ ಮೇಲೆ ಜೈಲಿಗೆ ಅಟ್ಟಲಾಗುತ್ತದೆ. ಈ ದೇಶದ್ರೋಹದ ಕಲ್ಪನೆಯನ್ನು ತುಂಬಾ ಜಾಳಾಗಿ ಸರ್ಕಾರ ತನ್ನ ವಿರುದ್ಧ ಮಾತನಾಡುವ ಪ್ರತಿಯೊಬ್ಬರ ವಿರುದ್ಧ ಪ್ರಯೋಗ ಮಾಡುತ್ತಿದೆ. ಇದು ಕಳೆದ ಐವತ್ತೇಳು ವರ್ಷದ ಇತಿಹಾಸದಲ್ಲಿ ಬಂದಿರುವ ತೀರ್ಪುಗಳಿಗೆ ತೀರಾ ವ್ಯತಿರಿಕ್ತವಾಗಿದೆ.

ದೇಶದ್ರೋಹದ ಕಾನೂನನ್ನು ವಿಮರ್ಶೆ ಅಂದರೆ ಪ್ರಸ್ತುತತೆಯನ್ನು ನೋಡಬೇಕಾದ ಅವಶ್ಯಕತೆ ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದೆ. ಜೊತೆಗೆ ಪ್ರಪಂಚದ ಸಾಕಷ್ಟು ದೇಶಗಳಲ್ಲಿ ದೇಶದ್ರೋಹದ ಕಾನೂನನ್ನು ತೆಗೆದುಹಾಕಲಾಗಿದೆ ಅನ್ನುವುದನ್ನು ನಾವು ಮರೆಯಬಾರದು..
ನಮಗೆ ಎಪ್ಪತ್ತು ವರ್ಷದಲ್ಲಿ ಪ್ರಜಾಪ್ರಭುತ್ವದ ಭದ್ರವಾದ ತಳಹದಿಯನ್ನು ಪಡೆಯಲು ಸಾಧ್ಯವಾಗಿದೆ. ಈ ಬಗ್ಗೆ ಅನುಮಾನಗಳು ಇಲ್ಲ. ನಮ್ಮಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ, ನಮ್ಮಲ್ಲಿ ಪ್ರತಿರೋಧ ಇದೆ. ಚುನಾಯಿತ ಸರ್ಕಾರಗಳೇ ಅಧಿಕಾರ ನಡೆಸುತ್ತಿವೆ ಇದು ಇರಬೇಕಾದರೆ ಅಭಿವ್ಯಕ್ತಿ ಸ್ವಾತಂತ್ರ್ಯ ತುಂಬಾ ಪ್ರಮುಖವಾಗಿದೆ. ಸರ್ಕಾರದ ಕಾನೂನನ್ನು ಪ್ರಜಾಪ್ರಭುತ್ವದ ರೀತಿಯಲ್ಲಿ ವಿರೋಧಿಸುವ ಹಕ್ಕಿರುತ್ತದೆ ಅಲ್ಲಿ ದೇಶದ್ರೋಹದ ಕಾನೂನಿಗೆ ಅವಕಾಶ ಇರುವುದಿಲ್ಲ. ದೇಶದ್ರೋಹವನ್ನು ಹೊರತುಪಡಿಸಿ ಸಾಕಷ್ಟು ಕಾನೂನು ನಮ್ಮ ಭಾರತೀಯ ದಂಡ ಸಂಹಿತೆಯಲ್ಲಿ ಇದೆ ಅದರ್ರ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆ ಕೊಡಬಹುದು.

ನಮ್ಮಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಂಡಿದೆ ಎಂದು ಒಪ್ಪುವುದೇ ಆದರೆ ಅಲ್ಲಿ ದೇಶದ್ರೋಹದ ಕಾನೂನು ಇರಲು ಅವಕಾಶವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...