Homeಮುಖಪುಟನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ

ನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ

- Advertisement -
- Advertisement -

ದೇಶದ್ರೋಹ, ರಾಷ್ಟ್ರದ್ರೋಹ ಇದು ನಿತ್ಯ ಕೇಳುತ್ತಿರುವಂತಹ ಸುದ್ದಿ. ದೇಶದ್ರೋಹ ಅಂದರೇನು? ದೇಶದ್ರೋಹ ಎನ್ನುವಂತಹದ್ದು ಮೊದಲು ರಾಜದ್ರೋಹ ಎಂದಿತ್ತು. ದೇಶದೆಲ್ಲೆಡೆ ವ್ಯತಿರಿಕ್ತವಾಗಿ ಬೆಳೆಯುತ್ತಿದ್ದ ಚಳವಳಿಗಳನ್ನು ಹತ್ತಿಕ್ಕಲು ಬ್ರಿಟಿಷರು 1879ರಲ್ಲಿ ತಂದ ಕಾನೂನೇ ರಾಜದ್ರೋಹದ ಕಾನೂನು. ಅದರಡಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಎಲ್ಲಾ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರನ್ನು ಜೈಲಿಗೆ ಹಾಕಿದರು.. ಬ್ರಿಟಿಷರ ರಾಜದ್ರೋಹದ ಕಾನೂನಿನಡಿಯಲ್ಲಿ ಚರ್ಚಿತವಾದ 2 ಪ್ರಕರಣಗಳೆಂದರೆ ಒಂದು ಬಾಲಗಂಗಾಧರ ತಿಲಕರ ಪ್ರಕರಣ, ಇನ್ನೊಂದು ಮಹಾತ್ಮ ಗಾಂಧಿಯವರ ಪ್ರಕರಣಗಳು.

ಮಹಾತ್ಮ ಗಾಂಧೀಜಿಯವರ ಪ್ರಕರಣ, ಅವರು ಬರೆದು ಪ್ರಕಟಿಸಿದ ಮೂರು ಲೇಖನಗಳ ವಿರುದ್ಧ ಬ್ರಿಟಿಷ್ ಸರ್ಕಾರ ರಾಜದ್ರೋಹದ ಪ್ರಕರಣ ದಾಖಲಿಸಿತ್ತು. ನ್ಯಾಯಾಲಯದಲ್ಲಿ ವಾದ ಮಂಡಿಸಿದ ಗಾಂಧೀಜಿ, ನ್ಯಾಯಾಧೀಶರಾಗಿ ನಿಮಗೆ 2 ಅವಕಾಶವಿದೆ. ನೀವು ನ್ಯಾಯ ನೀಡುತ್ತೀರೋ, ಕಾನೂನು ಮಾತನಾಡುತ್ತೀರೋ? ನೀವು ಕಾನೂನು ಬಗ್ಗೆ ಮಾತನಾಡುತ್ತೀರಿ ಅಂತಾದರೆ ನಿಮ್ಮ ಕಾನೂನಿನ ಕೆಳಗೆ ನಾನು ಅಪರಾಧಿ. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಬ್ರಿಟಿಷ್ ಸರ್ಕಾರ ತೊಲಗಲೇಬೇಕು ಎಂದು ನಾನು ಬರೆದ ಪ್ರತಿಯೊಂದು ಅಕ್ಷರ ಸಹ ಸತ್ಯ. ಅದನ್ನು ತಪ್ಪು ಎಂದು ಹೇಳಲು ನಾನು ತಯಾರಿಲ್ಲ. ನೀವು ಅದಕ್ಕೆ ಅತ್ಯುಗ್ರವಾದ ಶಿಕ್ಷೆ ನೀಡಿ. ನೀವು ನ್ಯಾಯದ ಬಗ್ಗೆ ಮಾತನಾಡುತ್ತೀರಿ ಎಂದಾದರೆ ನೀವು ಈ ಕೆಲಸಕ್ಕೆ ರಾಜಿನಾಮೆ ಕೊಟ್ಟು ಹೋಗಿ. ಯಾಕೆಂದರೆ ನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ ಎಂದು ಹೇಳುತ್ತಾರೆ.. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಕಾನೂನೇ ರಾಜದ್ರೋಹದ ಕಾನೂನು..

ನಮಗೆ ಸ್ವಾತಂತ್ರ್ಯ ಸಿಕ್ಕಮೇಲೆ, ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಮೇಲೆ ರಾಜದ್ರೋಹ ಉಳಿಯಲು ಸಾಧ್ಯವಿಲ್ಲ ಎನ್ನುವ ಚರ್ಚೆ ಬಂತು. ಇಂತಹ ಘಟನೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮೊದಲುಗೊಂಡು ಬಾಂಬೆ ಹೈಕೋರ್ಟ್ ಆದಿಯಾಗಿ ಎಲ್ಲಾ ಕೋರ್ಟ್‍ಗಳು ಕೂಡಾ ರಾಜದ್ರೋಹದ ಕಾನೂನು ಉಳಿಯಲು ಸಾಧ್ಯವಿಲ್ಲ, ಅದು ಹೋಗಲೇಬೇಕು. ಯಾಕೆಂದರೆ ಮೂಲಭೂತ ಹಕ್ಕಾದ ಅಭಿವ್ಯಕ್ತಿ ಸ್ವಾತಂತ್ರ್ಯ ಇದ್ದಲ್ಲಿ ರಾಜದ್ರೋಹದ ಕಾನೂನಿಗೆ ಅವಕಾಶ ಇಲ್ಲ ಎಂದು ಅಭಿಪ್ರಾಯಪಟ್ಟವು.. ಎಲ್ಲಾ ತೀರ್ಪುಗಳ ನಡುವೆಯೂ ಸೆಡಿಷನ್ ಕಾನೂನು ಉಳಿದುಕೊಂಡುಬರಲು ಕಾರಣವೇನೆಂದರೆ ಆಗಿದ್ದಂತಹ ರಾಜಕೀಯ ತಳಮಳದ ಸ್ಥಿತಿ, ವಿಭಜನೆ. ದೇಶದಲ್ಲಿ ಇದ್ದ ಅತಂತ್ರ ಸ್ಥಿತಿಯಿಂದ ಅದನ್ನು ಹಾಗೆಯೇ ಉಳಿಸಿಕೊಳ್ಳಲಾಯಿತು.

ದೇಶದ್ರೋಹ ಕಾನೂನಿನಲ್ಲಿ ಎರಡು ಭಾಗವಿದೆ. ಒಂದು ರಾಷ್ಟ್ರದ ಬಗ್ಗೆ ದ್ವೇಷ ಇರುವಂತಹದ್ದು ಎರಡನೇಯದ್ದು ರಾಷ್ಟ್ರದ ಸರ್ಕಾರದ ನೀತಿಯನ್ನು ವಿರೋಧಿಸುವಂತಹದ್ದು. ಈ ಕಾನೂನಿಗೆ ಸಂಬಂಧಿಸಿದಂತೆ ಮುಖ್ಯವಾದ ತೀರ್ಪು ಬಂದಿದ್ದು ಕೇದಾರನಾಥ ಪ್ರಕರಣದಲ್ಲಿ. 1962 ರಲ್ಲಿ ಬಂದ ಈ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‍ನ ಸಂವಿಧಾನ ಪೀಠ ಹೇಳಿದ್ದು ‘ಸರ್ಕಾರವನ್ನು ಇಲ್ಲದಾಗಿಸುವಾಗ, ಈ ದೇಶದ ಐಕ್ಯತೆ ಮತ್ತು ಸಾರ್ವಭೌಮತೆಯ ಪ್ರಶ್ನೆ ಬಂದಾಗ ಅದು ದೇಶದ್ರೋಹ ಆಗುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಸ್ವೇಚ್ಛೆಗೂ ಒಂದು ಮಿತಿಯಿದೆ. ಈ ಸಂದರ್ಭದಲ್ಲಿ ರಾಷ್ಟ್ರದ್ರೋಹದ ಕಾನೂನು ಸಿಂಧುವಾಗುತ್ತದೆ’.

2ನೇ ಭಾಗದಲ್ಲಿ ಸರ್ಕಾರದ ನೀತಿಯ ವಿರುದ್ಧ ಯಾವುದೇ ಪ್ರತಿರೋಧ, ವಿಮರ್ಶೆ, ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ದೇಶದ್ರೋಹ ಆಗುವುದಿಲ್ಲ. ದೇಶದ ವ್ಯವಸ್ಥೆಯನ್ನೇ ಕಿತ್ತೊಗೆಯುವ ಹೇಳಿಕೆ ಬಂದಾಗ ಮಾತ್ರ ದೇಶದ್ರೋಹ ಆಗುತ್ತದೆ. ಇದರ ನಂತರ ಸಾಕಷ್ಟು ತೀರ್ಪುಗಳು ಬಂದಿದೆ. ಅದರಲ್ಲಿ ಮುಖ್ಯವಾದುದು “ಬಲವಂತ್ ಸಿಂಗ್” ತೀರ್ಪು. ಇದರಲ್ಲಿ ಖಾಲಿಸ್ಥಾನ್ ಜಿಂದಾಬಾದ್ ಎನ್ನುವ ಹೇಳಿಕೆಯನ್ನಿಟ್ಟುಕೊಂಡು ಹೊಸ ರಾಷ್ಟ್ರದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಲಾಯಿತು. ಆದರೆ ಸುಪ್ರೀಂ ಇದು ದೇಶದ್ರೋಹ ಆಗುವುದಿಲ್ಲ ಎಂದು ತೀರ್ಪು ನೀಡಿತು.

ದೇಶದ ವ್ಯವಸ್ಥೆ ಬದಲಾಯಿಸುವ ಬಗ್ಗೆ ಹೇಳುವುದಿಲ್ಲವೊ ಅದು ದೇಶದ್ರೋಹವಲ್ಲ. ದುರಂತವೆಂದರೆ 1962ರ ನಂತರ ಬಂದ ಎಲ್ಲಾ ರಾಜಕೀಯ ಪಕ್ಷಗಳು ಈ ಕಾನೂನನ್ನು ದುರುಪಯೋಗಪಡಿಸಿಕೊಂಡಿವೆ. ತಮ್ಮ ವಿರುದ್ಧ ಯಾರು ಮಾತನಾಡಿದರೂ ದೇಶದ್ರೋಹದ ಕಾನೂನು ಉಪಯೋಗಿಸಿ ಮೊಕದ್ದಮೆ ದಾಖಲುಮಾಡಿ ಅವರನ್ನು ಜೈಲಿಗೆ ಹಾಕಲಾಗುತ್ತಿದೆ. ಈ ಪ್ರವೃತ್ತಿ ಈಗ ಇನ್ನು ಹೆಚ್ಚಾಗಿದೆ.

ದುರಂತವೆಂದರೆ ಒಂದು ಚಿಕ್ಕ ನಾಟಕದಲ್ಲಿ ಬರೆದ “ಚಪ್ಪಲಿಯಲ್ಲಿ ಹೊಡೆಯಿರಿ” ಎಂಬ ವಾಕ್ಯದ ಕಾರಣಕ್ಕೆ ದೇಶದ್ರೋಹದ ಪ್ರಕರಣ ಬೀದರಿನಲ್ಲಿ ತಾಯಿ ಮತ್ತು ಶಿಕ್ಷಕಿಯ ಮೇಲೆ ದಾಖಲಾಗಿರುತ್ತದೆ. “ಫ್ರೀ ಕಾಶ್ಮೀರ” ಎಂಬ ಪೋಸ್ಟರ್ ಹಿಡಿದ ಹುಡುಗಿಯ ಮೇಲೆ ಮೊಕದ್ದಮೆ ದಾಖಲಾಗುತ್ತದೆ. ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದಾರೆ ಎಂದು ಹುಡುಗಿಯನ್ನು ದೇಶದ್ರೋಹದ ಮೇಲೆ ಜೈಲಿಗೆ ಅಟ್ಟಲಾಗುತ್ತದೆ. ಈ ದೇಶದ್ರೋಹದ ಕಲ್ಪನೆಯನ್ನು ತುಂಬಾ ಜಾಳಾಗಿ ಸರ್ಕಾರ ತನ್ನ ವಿರುದ್ಧ ಮಾತನಾಡುವ ಪ್ರತಿಯೊಬ್ಬರ ವಿರುದ್ಧ ಪ್ರಯೋಗ ಮಾಡುತ್ತಿದೆ. ಇದು ಕಳೆದ ಐವತ್ತೇಳು ವರ್ಷದ ಇತಿಹಾಸದಲ್ಲಿ ಬಂದಿರುವ ತೀರ್ಪುಗಳಿಗೆ ತೀರಾ ವ್ಯತಿರಿಕ್ತವಾಗಿದೆ.

ದೇಶದ್ರೋಹದ ಕಾನೂನನ್ನು ವಿಮರ್ಶೆ ಅಂದರೆ ಪ್ರಸ್ತುತತೆಯನ್ನು ನೋಡಬೇಕಾದ ಅವಶ್ಯಕತೆ ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದೆ. ಜೊತೆಗೆ ಪ್ರಪಂಚದ ಸಾಕಷ್ಟು ದೇಶಗಳಲ್ಲಿ ದೇಶದ್ರೋಹದ ಕಾನೂನನ್ನು ತೆಗೆದುಹಾಕಲಾಗಿದೆ ಅನ್ನುವುದನ್ನು ನಾವು ಮರೆಯಬಾರದು..
ನಮಗೆ ಎಪ್ಪತ್ತು ವರ್ಷದಲ್ಲಿ ಪ್ರಜಾಪ್ರಭುತ್ವದ ಭದ್ರವಾದ ತಳಹದಿಯನ್ನು ಪಡೆಯಲು ಸಾಧ್ಯವಾಗಿದೆ. ಈ ಬಗ್ಗೆ ಅನುಮಾನಗಳು ಇಲ್ಲ. ನಮ್ಮಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ, ನಮ್ಮಲ್ಲಿ ಪ್ರತಿರೋಧ ಇದೆ. ಚುನಾಯಿತ ಸರ್ಕಾರಗಳೇ ಅಧಿಕಾರ ನಡೆಸುತ್ತಿವೆ ಇದು ಇರಬೇಕಾದರೆ ಅಭಿವ್ಯಕ್ತಿ ಸ್ವಾತಂತ್ರ್ಯ ತುಂಬಾ ಪ್ರಮುಖವಾಗಿದೆ. ಸರ್ಕಾರದ ಕಾನೂನನ್ನು ಪ್ರಜಾಪ್ರಭುತ್ವದ ರೀತಿಯಲ್ಲಿ ವಿರೋಧಿಸುವ ಹಕ್ಕಿರುತ್ತದೆ ಅಲ್ಲಿ ದೇಶದ್ರೋಹದ ಕಾನೂನಿಗೆ ಅವಕಾಶ ಇರುವುದಿಲ್ಲ. ದೇಶದ್ರೋಹವನ್ನು ಹೊರತುಪಡಿಸಿ ಸಾಕಷ್ಟು ಕಾನೂನು ನಮ್ಮ ಭಾರತೀಯ ದಂಡ ಸಂಹಿತೆಯಲ್ಲಿ ಇದೆ ಅದರ್ರ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆ ಕೊಡಬಹುದು.

ನಮ್ಮಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಂಡಿದೆ ಎಂದು ಒಪ್ಪುವುದೇ ಆದರೆ ಅಲ್ಲಿ ದೇಶದ್ರೋಹದ ಕಾನೂನು ಇರಲು ಅವಕಾಶವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...