Homeಮುಖಪುಟನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ

ನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ

- Advertisement -
- Advertisement -

ದೇಶದ್ರೋಹ, ರಾಷ್ಟ್ರದ್ರೋಹ ಇದು ನಿತ್ಯ ಕೇಳುತ್ತಿರುವಂತಹ ಸುದ್ದಿ. ದೇಶದ್ರೋಹ ಅಂದರೇನು? ದೇಶದ್ರೋಹ ಎನ್ನುವಂತಹದ್ದು ಮೊದಲು ರಾಜದ್ರೋಹ ಎಂದಿತ್ತು. ದೇಶದೆಲ್ಲೆಡೆ ವ್ಯತಿರಿಕ್ತವಾಗಿ ಬೆಳೆಯುತ್ತಿದ್ದ ಚಳವಳಿಗಳನ್ನು ಹತ್ತಿಕ್ಕಲು ಬ್ರಿಟಿಷರು 1879ರಲ್ಲಿ ತಂದ ಕಾನೂನೇ ರಾಜದ್ರೋಹದ ಕಾನೂನು. ಅದರಡಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಎಲ್ಲಾ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರನ್ನು ಜೈಲಿಗೆ ಹಾಕಿದರು.. ಬ್ರಿಟಿಷರ ರಾಜದ್ರೋಹದ ಕಾನೂನಿನಡಿಯಲ್ಲಿ ಚರ್ಚಿತವಾದ 2 ಪ್ರಕರಣಗಳೆಂದರೆ ಒಂದು ಬಾಲಗಂಗಾಧರ ತಿಲಕರ ಪ್ರಕರಣ, ಇನ್ನೊಂದು ಮಹಾತ್ಮ ಗಾಂಧಿಯವರ ಪ್ರಕರಣಗಳು.

ಮಹಾತ್ಮ ಗಾಂಧೀಜಿಯವರ ಪ್ರಕರಣ, ಅವರು ಬರೆದು ಪ್ರಕಟಿಸಿದ ಮೂರು ಲೇಖನಗಳ ವಿರುದ್ಧ ಬ್ರಿಟಿಷ್ ಸರ್ಕಾರ ರಾಜದ್ರೋಹದ ಪ್ರಕರಣ ದಾಖಲಿಸಿತ್ತು. ನ್ಯಾಯಾಲಯದಲ್ಲಿ ವಾದ ಮಂಡಿಸಿದ ಗಾಂಧೀಜಿ, ನ್ಯಾಯಾಧೀಶರಾಗಿ ನಿಮಗೆ 2 ಅವಕಾಶವಿದೆ. ನೀವು ನ್ಯಾಯ ನೀಡುತ್ತೀರೋ, ಕಾನೂನು ಮಾತನಾಡುತ್ತೀರೋ? ನೀವು ಕಾನೂನು ಬಗ್ಗೆ ಮಾತನಾಡುತ್ತೀರಿ ಅಂತಾದರೆ ನಿಮ್ಮ ಕಾನೂನಿನ ಕೆಳಗೆ ನಾನು ಅಪರಾಧಿ. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಬ್ರಿಟಿಷ್ ಸರ್ಕಾರ ತೊಲಗಲೇಬೇಕು ಎಂದು ನಾನು ಬರೆದ ಪ್ರತಿಯೊಂದು ಅಕ್ಷರ ಸಹ ಸತ್ಯ. ಅದನ್ನು ತಪ್ಪು ಎಂದು ಹೇಳಲು ನಾನು ತಯಾರಿಲ್ಲ. ನೀವು ಅದಕ್ಕೆ ಅತ್ಯುಗ್ರವಾದ ಶಿಕ್ಷೆ ನೀಡಿ. ನೀವು ನ್ಯಾಯದ ಬಗ್ಗೆ ಮಾತನಾಡುತ್ತೀರಿ ಎಂದಾದರೆ ನೀವು ಈ ಕೆಲಸಕ್ಕೆ ರಾಜಿನಾಮೆ ಕೊಟ್ಟು ಹೋಗಿ. ಯಾಕೆಂದರೆ ನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ ಎಂದು ಹೇಳುತ್ತಾರೆ.. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಕಾನೂನೇ ರಾಜದ್ರೋಹದ ಕಾನೂನು..

ನಮಗೆ ಸ್ವಾತಂತ್ರ್ಯ ಸಿಕ್ಕಮೇಲೆ, ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಮೇಲೆ ರಾಜದ್ರೋಹ ಉಳಿಯಲು ಸಾಧ್ಯವಿಲ್ಲ ಎನ್ನುವ ಚರ್ಚೆ ಬಂತು. ಇಂತಹ ಘಟನೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮೊದಲುಗೊಂಡು ಬಾಂಬೆ ಹೈಕೋರ್ಟ್ ಆದಿಯಾಗಿ ಎಲ್ಲಾ ಕೋರ್ಟ್‍ಗಳು ಕೂಡಾ ರಾಜದ್ರೋಹದ ಕಾನೂನು ಉಳಿಯಲು ಸಾಧ್ಯವಿಲ್ಲ, ಅದು ಹೋಗಲೇಬೇಕು. ಯಾಕೆಂದರೆ ಮೂಲಭೂತ ಹಕ್ಕಾದ ಅಭಿವ್ಯಕ್ತಿ ಸ್ವಾತಂತ್ರ್ಯ ಇದ್ದಲ್ಲಿ ರಾಜದ್ರೋಹದ ಕಾನೂನಿಗೆ ಅವಕಾಶ ಇಲ್ಲ ಎಂದು ಅಭಿಪ್ರಾಯಪಟ್ಟವು.. ಎಲ್ಲಾ ತೀರ್ಪುಗಳ ನಡುವೆಯೂ ಸೆಡಿಷನ್ ಕಾನೂನು ಉಳಿದುಕೊಂಡುಬರಲು ಕಾರಣವೇನೆಂದರೆ ಆಗಿದ್ದಂತಹ ರಾಜಕೀಯ ತಳಮಳದ ಸ್ಥಿತಿ, ವಿಭಜನೆ. ದೇಶದಲ್ಲಿ ಇದ್ದ ಅತಂತ್ರ ಸ್ಥಿತಿಯಿಂದ ಅದನ್ನು ಹಾಗೆಯೇ ಉಳಿಸಿಕೊಳ್ಳಲಾಯಿತು.

ದೇಶದ್ರೋಹ ಕಾನೂನಿನಲ್ಲಿ ಎರಡು ಭಾಗವಿದೆ. ಒಂದು ರಾಷ್ಟ್ರದ ಬಗ್ಗೆ ದ್ವೇಷ ಇರುವಂತಹದ್ದು ಎರಡನೇಯದ್ದು ರಾಷ್ಟ್ರದ ಸರ್ಕಾರದ ನೀತಿಯನ್ನು ವಿರೋಧಿಸುವಂತಹದ್ದು. ಈ ಕಾನೂನಿಗೆ ಸಂಬಂಧಿಸಿದಂತೆ ಮುಖ್ಯವಾದ ತೀರ್ಪು ಬಂದಿದ್ದು ಕೇದಾರನಾಥ ಪ್ರಕರಣದಲ್ಲಿ. 1962 ರಲ್ಲಿ ಬಂದ ಈ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‍ನ ಸಂವಿಧಾನ ಪೀಠ ಹೇಳಿದ್ದು ‘ಸರ್ಕಾರವನ್ನು ಇಲ್ಲದಾಗಿಸುವಾಗ, ಈ ದೇಶದ ಐಕ್ಯತೆ ಮತ್ತು ಸಾರ್ವಭೌಮತೆಯ ಪ್ರಶ್ನೆ ಬಂದಾಗ ಅದು ದೇಶದ್ರೋಹ ಆಗುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಸ್ವೇಚ್ಛೆಗೂ ಒಂದು ಮಿತಿಯಿದೆ. ಈ ಸಂದರ್ಭದಲ್ಲಿ ರಾಷ್ಟ್ರದ್ರೋಹದ ಕಾನೂನು ಸಿಂಧುವಾಗುತ್ತದೆ’.

2ನೇ ಭಾಗದಲ್ಲಿ ಸರ್ಕಾರದ ನೀತಿಯ ವಿರುದ್ಧ ಯಾವುದೇ ಪ್ರತಿರೋಧ, ವಿಮರ್ಶೆ, ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ದೇಶದ್ರೋಹ ಆಗುವುದಿಲ್ಲ. ದೇಶದ ವ್ಯವಸ್ಥೆಯನ್ನೇ ಕಿತ್ತೊಗೆಯುವ ಹೇಳಿಕೆ ಬಂದಾಗ ಮಾತ್ರ ದೇಶದ್ರೋಹ ಆಗುತ್ತದೆ. ಇದರ ನಂತರ ಸಾಕಷ್ಟು ತೀರ್ಪುಗಳು ಬಂದಿದೆ. ಅದರಲ್ಲಿ ಮುಖ್ಯವಾದುದು “ಬಲವಂತ್ ಸಿಂಗ್” ತೀರ್ಪು. ಇದರಲ್ಲಿ ಖಾಲಿಸ್ಥಾನ್ ಜಿಂದಾಬಾದ್ ಎನ್ನುವ ಹೇಳಿಕೆಯನ್ನಿಟ್ಟುಕೊಂಡು ಹೊಸ ರಾಷ್ಟ್ರದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಲಾಯಿತು. ಆದರೆ ಸುಪ್ರೀಂ ಇದು ದೇಶದ್ರೋಹ ಆಗುವುದಿಲ್ಲ ಎಂದು ತೀರ್ಪು ನೀಡಿತು.

ದೇಶದ ವ್ಯವಸ್ಥೆ ಬದಲಾಯಿಸುವ ಬಗ್ಗೆ ಹೇಳುವುದಿಲ್ಲವೊ ಅದು ದೇಶದ್ರೋಹವಲ್ಲ. ದುರಂತವೆಂದರೆ 1962ರ ನಂತರ ಬಂದ ಎಲ್ಲಾ ರಾಜಕೀಯ ಪಕ್ಷಗಳು ಈ ಕಾನೂನನ್ನು ದುರುಪಯೋಗಪಡಿಸಿಕೊಂಡಿವೆ. ತಮ್ಮ ವಿರುದ್ಧ ಯಾರು ಮಾತನಾಡಿದರೂ ದೇಶದ್ರೋಹದ ಕಾನೂನು ಉಪಯೋಗಿಸಿ ಮೊಕದ್ದಮೆ ದಾಖಲುಮಾಡಿ ಅವರನ್ನು ಜೈಲಿಗೆ ಹಾಕಲಾಗುತ್ತಿದೆ. ಈ ಪ್ರವೃತ್ತಿ ಈಗ ಇನ್ನು ಹೆಚ್ಚಾಗಿದೆ.

ದುರಂತವೆಂದರೆ ಒಂದು ಚಿಕ್ಕ ನಾಟಕದಲ್ಲಿ ಬರೆದ “ಚಪ್ಪಲಿಯಲ್ಲಿ ಹೊಡೆಯಿರಿ” ಎಂಬ ವಾಕ್ಯದ ಕಾರಣಕ್ಕೆ ದೇಶದ್ರೋಹದ ಪ್ರಕರಣ ಬೀದರಿನಲ್ಲಿ ತಾಯಿ ಮತ್ತು ಶಿಕ್ಷಕಿಯ ಮೇಲೆ ದಾಖಲಾಗಿರುತ್ತದೆ. “ಫ್ರೀ ಕಾಶ್ಮೀರ” ಎಂಬ ಪೋಸ್ಟರ್ ಹಿಡಿದ ಹುಡುಗಿಯ ಮೇಲೆ ಮೊಕದ್ದಮೆ ದಾಖಲಾಗುತ್ತದೆ. ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದಾರೆ ಎಂದು ಹುಡುಗಿಯನ್ನು ದೇಶದ್ರೋಹದ ಮೇಲೆ ಜೈಲಿಗೆ ಅಟ್ಟಲಾಗುತ್ತದೆ. ಈ ದೇಶದ್ರೋಹದ ಕಲ್ಪನೆಯನ್ನು ತುಂಬಾ ಜಾಳಾಗಿ ಸರ್ಕಾರ ತನ್ನ ವಿರುದ್ಧ ಮಾತನಾಡುವ ಪ್ರತಿಯೊಬ್ಬರ ವಿರುದ್ಧ ಪ್ರಯೋಗ ಮಾಡುತ್ತಿದೆ. ಇದು ಕಳೆದ ಐವತ್ತೇಳು ವರ್ಷದ ಇತಿಹಾಸದಲ್ಲಿ ಬಂದಿರುವ ತೀರ್ಪುಗಳಿಗೆ ತೀರಾ ವ್ಯತಿರಿಕ್ತವಾಗಿದೆ.

ದೇಶದ್ರೋಹದ ಕಾನೂನನ್ನು ವಿಮರ್ಶೆ ಅಂದರೆ ಪ್ರಸ್ತುತತೆಯನ್ನು ನೋಡಬೇಕಾದ ಅವಶ್ಯಕತೆ ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದೆ. ಜೊತೆಗೆ ಪ್ರಪಂಚದ ಸಾಕಷ್ಟು ದೇಶಗಳಲ್ಲಿ ದೇಶದ್ರೋಹದ ಕಾನೂನನ್ನು ತೆಗೆದುಹಾಕಲಾಗಿದೆ ಅನ್ನುವುದನ್ನು ನಾವು ಮರೆಯಬಾರದು..
ನಮಗೆ ಎಪ್ಪತ್ತು ವರ್ಷದಲ್ಲಿ ಪ್ರಜಾಪ್ರಭುತ್ವದ ಭದ್ರವಾದ ತಳಹದಿಯನ್ನು ಪಡೆಯಲು ಸಾಧ್ಯವಾಗಿದೆ. ಈ ಬಗ್ಗೆ ಅನುಮಾನಗಳು ಇಲ್ಲ. ನಮ್ಮಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ, ನಮ್ಮಲ್ಲಿ ಪ್ರತಿರೋಧ ಇದೆ. ಚುನಾಯಿತ ಸರ್ಕಾರಗಳೇ ಅಧಿಕಾರ ನಡೆಸುತ್ತಿವೆ ಇದು ಇರಬೇಕಾದರೆ ಅಭಿವ್ಯಕ್ತಿ ಸ್ವಾತಂತ್ರ್ಯ ತುಂಬಾ ಪ್ರಮುಖವಾಗಿದೆ. ಸರ್ಕಾರದ ಕಾನೂನನ್ನು ಪ್ರಜಾಪ್ರಭುತ್ವದ ರೀತಿಯಲ್ಲಿ ವಿರೋಧಿಸುವ ಹಕ್ಕಿರುತ್ತದೆ ಅಲ್ಲಿ ದೇಶದ್ರೋಹದ ಕಾನೂನಿಗೆ ಅವಕಾಶ ಇರುವುದಿಲ್ಲ. ದೇಶದ್ರೋಹವನ್ನು ಹೊರತುಪಡಿಸಿ ಸಾಕಷ್ಟು ಕಾನೂನು ನಮ್ಮ ಭಾರತೀಯ ದಂಡ ಸಂಹಿತೆಯಲ್ಲಿ ಇದೆ ಅದರ್ರ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆ ಕೊಡಬಹುದು.

ನಮ್ಮಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಂಡಿದೆ ಎಂದು ಒಪ್ಪುವುದೇ ಆದರೆ ಅಲ್ಲಿ ದೇಶದ್ರೋಹದ ಕಾನೂನು ಇರಲು ಅವಕಾಶವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...