Homeಮುಖಪುಟನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ

ನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ

- Advertisement -
- Advertisement -

ದೇಶದ್ರೋಹ, ರಾಷ್ಟ್ರದ್ರೋಹ ಇದು ನಿತ್ಯ ಕೇಳುತ್ತಿರುವಂತಹ ಸುದ್ದಿ. ದೇಶದ್ರೋಹ ಅಂದರೇನು? ದೇಶದ್ರೋಹ ಎನ್ನುವಂತಹದ್ದು ಮೊದಲು ರಾಜದ್ರೋಹ ಎಂದಿತ್ತು. ದೇಶದೆಲ್ಲೆಡೆ ವ್ಯತಿರಿಕ್ತವಾಗಿ ಬೆಳೆಯುತ್ತಿದ್ದ ಚಳವಳಿಗಳನ್ನು ಹತ್ತಿಕ್ಕಲು ಬ್ರಿಟಿಷರು 1879ರಲ್ಲಿ ತಂದ ಕಾನೂನೇ ರಾಜದ್ರೋಹದ ಕಾನೂನು. ಅದರಡಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಎಲ್ಲಾ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರನ್ನು ಜೈಲಿಗೆ ಹಾಕಿದರು.. ಬ್ರಿಟಿಷರ ರಾಜದ್ರೋಹದ ಕಾನೂನಿನಡಿಯಲ್ಲಿ ಚರ್ಚಿತವಾದ 2 ಪ್ರಕರಣಗಳೆಂದರೆ ಒಂದು ಬಾಲಗಂಗಾಧರ ತಿಲಕರ ಪ್ರಕರಣ, ಇನ್ನೊಂದು ಮಹಾತ್ಮ ಗಾಂಧಿಯವರ ಪ್ರಕರಣಗಳು.

ಮಹಾತ್ಮ ಗಾಂಧೀಜಿಯವರ ಪ್ರಕರಣ, ಅವರು ಬರೆದು ಪ್ರಕಟಿಸಿದ ಮೂರು ಲೇಖನಗಳ ವಿರುದ್ಧ ಬ್ರಿಟಿಷ್ ಸರ್ಕಾರ ರಾಜದ್ರೋಹದ ಪ್ರಕರಣ ದಾಖಲಿಸಿತ್ತು. ನ್ಯಾಯಾಲಯದಲ್ಲಿ ವಾದ ಮಂಡಿಸಿದ ಗಾಂಧೀಜಿ, ನ್ಯಾಯಾಧೀಶರಾಗಿ ನಿಮಗೆ 2 ಅವಕಾಶವಿದೆ. ನೀವು ನ್ಯಾಯ ನೀಡುತ್ತೀರೋ, ಕಾನೂನು ಮಾತನಾಡುತ್ತೀರೋ? ನೀವು ಕಾನೂನು ಬಗ್ಗೆ ಮಾತನಾಡುತ್ತೀರಿ ಅಂತಾದರೆ ನಿಮ್ಮ ಕಾನೂನಿನ ಕೆಳಗೆ ನಾನು ಅಪರಾಧಿ. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಬ್ರಿಟಿಷ್ ಸರ್ಕಾರ ತೊಲಗಲೇಬೇಕು ಎಂದು ನಾನು ಬರೆದ ಪ್ರತಿಯೊಂದು ಅಕ್ಷರ ಸಹ ಸತ್ಯ. ಅದನ್ನು ತಪ್ಪು ಎಂದು ಹೇಳಲು ನಾನು ತಯಾರಿಲ್ಲ. ನೀವು ಅದಕ್ಕೆ ಅತ್ಯುಗ್ರವಾದ ಶಿಕ್ಷೆ ನೀಡಿ. ನೀವು ನ್ಯಾಯದ ಬಗ್ಗೆ ಮಾತನಾಡುತ್ತೀರಿ ಎಂದಾದರೆ ನೀವು ಈ ಕೆಲಸಕ್ಕೆ ರಾಜಿನಾಮೆ ಕೊಟ್ಟು ಹೋಗಿ. ಯಾಕೆಂದರೆ ನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ ಎಂದು ಹೇಳುತ್ತಾರೆ.. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಕಾನೂನೇ ರಾಜದ್ರೋಹದ ಕಾನೂನು..

ನಮಗೆ ಸ್ವಾತಂತ್ರ್ಯ ಸಿಕ್ಕಮೇಲೆ, ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಮೇಲೆ ರಾಜದ್ರೋಹ ಉಳಿಯಲು ಸಾಧ್ಯವಿಲ್ಲ ಎನ್ನುವ ಚರ್ಚೆ ಬಂತು. ಇಂತಹ ಘಟನೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮೊದಲುಗೊಂಡು ಬಾಂಬೆ ಹೈಕೋರ್ಟ್ ಆದಿಯಾಗಿ ಎಲ್ಲಾ ಕೋರ್ಟ್‍ಗಳು ಕೂಡಾ ರಾಜದ್ರೋಹದ ಕಾನೂನು ಉಳಿಯಲು ಸಾಧ್ಯವಿಲ್ಲ, ಅದು ಹೋಗಲೇಬೇಕು. ಯಾಕೆಂದರೆ ಮೂಲಭೂತ ಹಕ್ಕಾದ ಅಭಿವ್ಯಕ್ತಿ ಸ್ವಾತಂತ್ರ್ಯ ಇದ್ದಲ್ಲಿ ರಾಜದ್ರೋಹದ ಕಾನೂನಿಗೆ ಅವಕಾಶ ಇಲ್ಲ ಎಂದು ಅಭಿಪ್ರಾಯಪಟ್ಟವು.. ಎಲ್ಲಾ ತೀರ್ಪುಗಳ ನಡುವೆಯೂ ಸೆಡಿಷನ್ ಕಾನೂನು ಉಳಿದುಕೊಂಡುಬರಲು ಕಾರಣವೇನೆಂದರೆ ಆಗಿದ್ದಂತಹ ರಾಜಕೀಯ ತಳಮಳದ ಸ್ಥಿತಿ, ವಿಭಜನೆ. ದೇಶದಲ್ಲಿ ಇದ್ದ ಅತಂತ್ರ ಸ್ಥಿತಿಯಿಂದ ಅದನ್ನು ಹಾಗೆಯೇ ಉಳಿಸಿಕೊಳ್ಳಲಾಯಿತು.

ದೇಶದ್ರೋಹ ಕಾನೂನಿನಲ್ಲಿ ಎರಡು ಭಾಗವಿದೆ. ಒಂದು ರಾಷ್ಟ್ರದ ಬಗ್ಗೆ ದ್ವೇಷ ಇರುವಂತಹದ್ದು ಎರಡನೇಯದ್ದು ರಾಷ್ಟ್ರದ ಸರ್ಕಾರದ ನೀತಿಯನ್ನು ವಿರೋಧಿಸುವಂತಹದ್ದು. ಈ ಕಾನೂನಿಗೆ ಸಂಬಂಧಿಸಿದಂತೆ ಮುಖ್ಯವಾದ ತೀರ್ಪು ಬಂದಿದ್ದು ಕೇದಾರನಾಥ ಪ್ರಕರಣದಲ್ಲಿ. 1962 ರಲ್ಲಿ ಬಂದ ಈ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‍ನ ಸಂವಿಧಾನ ಪೀಠ ಹೇಳಿದ್ದು ‘ಸರ್ಕಾರವನ್ನು ಇಲ್ಲದಾಗಿಸುವಾಗ, ಈ ದೇಶದ ಐಕ್ಯತೆ ಮತ್ತು ಸಾರ್ವಭೌಮತೆಯ ಪ್ರಶ್ನೆ ಬಂದಾಗ ಅದು ದೇಶದ್ರೋಹ ಆಗುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಸ್ವೇಚ್ಛೆಗೂ ಒಂದು ಮಿತಿಯಿದೆ. ಈ ಸಂದರ್ಭದಲ್ಲಿ ರಾಷ್ಟ್ರದ್ರೋಹದ ಕಾನೂನು ಸಿಂಧುವಾಗುತ್ತದೆ’.

2ನೇ ಭಾಗದಲ್ಲಿ ಸರ್ಕಾರದ ನೀತಿಯ ವಿರುದ್ಧ ಯಾವುದೇ ಪ್ರತಿರೋಧ, ವಿಮರ್ಶೆ, ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ದೇಶದ್ರೋಹ ಆಗುವುದಿಲ್ಲ. ದೇಶದ ವ್ಯವಸ್ಥೆಯನ್ನೇ ಕಿತ್ತೊಗೆಯುವ ಹೇಳಿಕೆ ಬಂದಾಗ ಮಾತ್ರ ದೇಶದ್ರೋಹ ಆಗುತ್ತದೆ. ಇದರ ನಂತರ ಸಾಕಷ್ಟು ತೀರ್ಪುಗಳು ಬಂದಿದೆ. ಅದರಲ್ಲಿ ಮುಖ್ಯವಾದುದು “ಬಲವಂತ್ ಸಿಂಗ್” ತೀರ್ಪು. ಇದರಲ್ಲಿ ಖಾಲಿಸ್ಥಾನ್ ಜಿಂದಾಬಾದ್ ಎನ್ನುವ ಹೇಳಿಕೆಯನ್ನಿಟ್ಟುಕೊಂಡು ಹೊಸ ರಾಷ್ಟ್ರದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಲಾಯಿತು. ಆದರೆ ಸುಪ್ರೀಂ ಇದು ದೇಶದ್ರೋಹ ಆಗುವುದಿಲ್ಲ ಎಂದು ತೀರ್ಪು ನೀಡಿತು.

ದೇಶದ ವ್ಯವಸ್ಥೆ ಬದಲಾಯಿಸುವ ಬಗ್ಗೆ ಹೇಳುವುದಿಲ್ಲವೊ ಅದು ದೇಶದ್ರೋಹವಲ್ಲ. ದುರಂತವೆಂದರೆ 1962ರ ನಂತರ ಬಂದ ಎಲ್ಲಾ ರಾಜಕೀಯ ಪಕ್ಷಗಳು ಈ ಕಾನೂನನ್ನು ದುರುಪಯೋಗಪಡಿಸಿಕೊಂಡಿವೆ. ತಮ್ಮ ವಿರುದ್ಧ ಯಾರು ಮಾತನಾಡಿದರೂ ದೇಶದ್ರೋಹದ ಕಾನೂನು ಉಪಯೋಗಿಸಿ ಮೊಕದ್ದಮೆ ದಾಖಲುಮಾಡಿ ಅವರನ್ನು ಜೈಲಿಗೆ ಹಾಕಲಾಗುತ್ತಿದೆ. ಈ ಪ್ರವೃತ್ತಿ ಈಗ ಇನ್ನು ಹೆಚ್ಚಾಗಿದೆ.

ದುರಂತವೆಂದರೆ ಒಂದು ಚಿಕ್ಕ ನಾಟಕದಲ್ಲಿ ಬರೆದ “ಚಪ್ಪಲಿಯಲ್ಲಿ ಹೊಡೆಯಿರಿ” ಎಂಬ ವಾಕ್ಯದ ಕಾರಣಕ್ಕೆ ದೇಶದ್ರೋಹದ ಪ್ರಕರಣ ಬೀದರಿನಲ್ಲಿ ತಾಯಿ ಮತ್ತು ಶಿಕ್ಷಕಿಯ ಮೇಲೆ ದಾಖಲಾಗಿರುತ್ತದೆ. “ಫ್ರೀ ಕಾಶ್ಮೀರ” ಎಂಬ ಪೋಸ್ಟರ್ ಹಿಡಿದ ಹುಡುಗಿಯ ಮೇಲೆ ಮೊಕದ್ದಮೆ ದಾಖಲಾಗುತ್ತದೆ. ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದಾರೆ ಎಂದು ಹುಡುಗಿಯನ್ನು ದೇಶದ್ರೋಹದ ಮೇಲೆ ಜೈಲಿಗೆ ಅಟ್ಟಲಾಗುತ್ತದೆ. ಈ ದೇಶದ್ರೋಹದ ಕಲ್ಪನೆಯನ್ನು ತುಂಬಾ ಜಾಳಾಗಿ ಸರ್ಕಾರ ತನ್ನ ವಿರುದ್ಧ ಮಾತನಾಡುವ ಪ್ರತಿಯೊಬ್ಬರ ವಿರುದ್ಧ ಪ್ರಯೋಗ ಮಾಡುತ್ತಿದೆ. ಇದು ಕಳೆದ ಐವತ್ತೇಳು ವರ್ಷದ ಇತಿಹಾಸದಲ್ಲಿ ಬಂದಿರುವ ತೀರ್ಪುಗಳಿಗೆ ತೀರಾ ವ್ಯತಿರಿಕ್ತವಾಗಿದೆ.

ದೇಶದ್ರೋಹದ ಕಾನೂನನ್ನು ವಿಮರ್ಶೆ ಅಂದರೆ ಪ್ರಸ್ತುತತೆಯನ್ನು ನೋಡಬೇಕಾದ ಅವಶ್ಯಕತೆ ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದೆ. ಜೊತೆಗೆ ಪ್ರಪಂಚದ ಸಾಕಷ್ಟು ದೇಶಗಳಲ್ಲಿ ದೇಶದ್ರೋಹದ ಕಾನೂನನ್ನು ತೆಗೆದುಹಾಕಲಾಗಿದೆ ಅನ್ನುವುದನ್ನು ನಾವು ಮರೆಯಬಾರದು..
ನಮಗೆ ಎಪ್ಪತ್ತು ವರ್ಷದಲ್ಲಿ ಪ್ರಜಾಪ್ರಭುತ್ವದ ಭದ್ರವಾದ ತಳಹದಿಯನ್ನು ಪಡೆಯಲು ಸಾಧ್ಯವಾಗಿದೆ. ಈ ಬಗ್ಗೆ ಅನುಮಾನಗಳು ಇಲ್ಲ. ನಮ್ಮಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ, ನಮ್ಮಲ್ಲಿ ಪ್ರತಿರೋಧ ಇದೆ. ಚುನಾಯಿತ ಸರ್ಕಾರಗಳೇ ಅಧಿಕಾರ ನಡೆಸುತ್ತಿವೆ ಇದು ಇರಬೇಕಾದರೆ ಅಭಿವ್ಯಕ್ತಿ ಸ್ವಾತಂತ್ರ್ಯ ತುಂಬಾ ಪ್ರಮುಖವಾಗಿದೆ. ಸರ್ಕಾರದ ಕಾನೂನನ್ನು ಪ್ರಜಾಪ್ರಭುತ್ವದ ರೀತಿಯಲ್ಲಿ ವಿರೋಧಿಸುವ ಹಕ್ಕಿರುತ್ತದೆ ಅಲ್ಲಿ ದೇಶದ್ರೋಹದ ಕಾನೂನಿಗೆ ಅವಕಾಶ ಇರುವುದಿಲ್ಲ. ದೇಶದ್ರೋಹವನ್ನು ಹೊರತುಪಡಿಸಿ ಸಾಕಷ್ಟು ಕಾನೂನು ನಮ್ಮ ಭಾರತೀಯ ದಂಡ ಸಂಹಿತೆಯಲ್ಲಿ ಇದೆ ಅದರ್ರ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆ ಕೊಡಬಹುದು.

ನಮ್ಮಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಂಡಿದೆ ಎಂದು ಒಪ್ಪುವುದೇ ಆದರೆ ಅಲ್ಲಿ ದೇಶದ್ರೋಹದ ಕಾನೂನು ಇರಲು ಅವಕಾಶವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...