Homeಮುಖಪುಟನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ

ನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ

- Advertisement -
- Advertisement -

ದೇಶದ್ರೋಹ, ರಾಷ್ಟ್ರದ್ರೋಹ ಇದು ನಿತ್ಯ ಕೇಳುತ್ತಿರುವಂತಹ ಸುದ್ದಿ. ದೇಶದ್ರೋಹ ಅಂದರೇನು? ದೇಶದ್ರೋಹ ಎನ್ನುವಂತಹದ್ದು ಮೊದಲು ರಾಜದ್ರೋಹ ಎಂದಿತ್ತು. ದೇಶದೆಲ್ಲೆಡೆ ವ್ಯತಿರಿಕ್ತವಾಗಿ ಬೆಳೆಯುತ್ತಿದ್ದ ಚಳವಳಿಗಳನ್ನು ಹತ್ತಿಕ್ಕಲು ಬ್ರಿಟಿಷರು 1879ರಲ್ಲಿ ತಂದ ಕಾನೂನೇ ರಾಜದ್ರೋಹದ ಕಾನೂನು. ಅದರಡಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡ ಎಲ್ಲಾ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರನ್ನು ಜೈಲಿಗೆ ಹಾಕಿದರು.. ಬ್ರಿಟಿಷರ ರಾಜದ್ರೋಹದ ಕಾನೂನಿನಡಿಯಲ್ಲಿ ಚರ್ಚಿತವಾದ 2 ಪ್ರಕರಣಗಳೆಂದರೆ ಒಂದು ಬಾಲಗಂಗಾಧರ ತಿಲಕರ ಪ್ರಕರಣ, ಇನ್ನೊಂದು ಮಹಾತ್ಮ ಗಾಂಧಿಯವರ ಪ್ರಕರಣಗಳು.

ಮಹಾತ್ಮ ಗಾಂಧೀಜಿಯವರ ಪ್ರಕರಣ, ಅವರು ಬರೆದು ಪ್ರಕಟಿಸಿದ ಮೂರು ಲೇಖನಗಳ ವಿರುದ್ಧ ಬ್ರಿಟಿಷ್ ಸರ್ಕಾರ ರಾಜದ್ರೋಹದ ಪ್ರಕರಣ ದಾಖಲಿಸಿತ್ತು. ನ್ಯಾಯಾಲಯದಲ್ಲಿ ವಾದ ಮಂಡಿಸಿದ ಗಾಂಧೀಜಿ, ನ್ಯಾಯಾಧೀಶರಾಗಿ ನಿಮಗೆ 2 ಅವಕಾಶವಿದೆ. ನೀವು ನ್ಯಾಯ ನೀಡುತ್ತೀರೋ, ಕಾನೂನು ಮಾತನಾಡುತ್ತೀರೋ? ನೀವು ಕಾನೂನು ಬಗ್ಗೆ ಮಾತನಾಡುತ್ತೀರಿ ಅಂತಾದರೆ ನಿಮ್ಮ ಕಾನೂನಿನ ಕೆಳಗೆ ನಾನು ಅಪರಾಧಿ. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಬ್ರಿಟಿಷ್ ಸರ್ಕಾರ ತೊಲಗಲೇಬೇಕು ಎಂದು ನಾನು ಬರೆದ ಪ್ರತಿಯೊಂದು ಅಕ್ಷರ ಸಹ ಸತ್ಯ. ಅದನ್ನು ತಪ್ಪು ಎಂದು ಹೇಳಲು ನಾನು ತಯಾರಿಲ್ಲ. ನೀವು ಅದಕ್ಕೆ ಅತ್ಯುಗ್ರವಾದ ಶಿಕ್ಷೆ ನೀಡಿ. ನೀವು ನ್ಯಾಯದ ಬಗ್ಗೆ ಮಾತನಾಡುತ್ತೀರಿ ಎಂದಾದರೆ ನೀವು ಈ ಕೆಲಸಕ್ಕೆ ರಾಜಿನಾಮೆ ಕೊಟ್ಟು ಹೋಗಿ. ಯಾಕೆಂದರೆ ನ್ಯಾಯ ಮತ್ತು ರಾಜದ್ರೋಹ ಜೊತೆಜೊತೆಗೆ ಹೋಗಲು ಸಾಧ್ಯವಿಲ್ಲ್ಲ ಎಂದು ಹೇಳುತ್ತಾರೆ.. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಕಾನೂನೇ ರಾಜದ್ರೋಹದ ಕಾನೂನು..

ನಮಗೆ ಸ್ವಾತಂತ್ರ್ಯ ಸಿಕ್ಕಮೇಲೆ, ಅಭಿವ್ಯಕ್ತಿ ಸ್ವಾತಂತ್ರ್ಯ ಕೊಟ್ಟಮೇಲೆ ರಾಜದ್ರೋಹ ಉಳಿಯಲು ಸಾಧ್ಯವಿಲ್ಲ ಎನ್ನುವ ಚರ್ಚೆ ಬಂತು. ಇಂತಹ ಘಟನೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮೊದಲುಗೊಂಡು ಬಾಂಬೆ ಹೈಕೋರ್ಟ್ ಆದಿಯಾಗಿ ಎಲ್ಲಾ ಕೋರ್ಟ್‍ಗಳು ಕೂಡಾ ರಾಜದ್ರೋಹದ ಕಾನೂನು ಉಳಿಯಲು ಸಾಧ್ಯವಿಲ್ಲ, ಅದು ಹೋಗಲೇಬೇಕು. ಯಾಕೆಂದರೆ ಮೂಲಭೂತ ಹಕ್ಕಾದ ಅಭಿವ್ಯಕ್ತಿ ಸ್ವಾತಂತ್ರ್ಯ ಇದ್ದಲ್ಲಿ ರಾಜದ್ರೋಹದ ಕಾನೂನಿಗೆ ಅವಕಾಶ ಇಲ್ಲ ಎಂದು ಅಭಿಪ್ರಾಯಪಟ್ಟವು.. ಎಲ್ಲಾ ತೀರ್ಪುಗಳ ನಡುವೆಯೂ ಸೆಡಿಷನ್ ಕಾನೂನು ಉಳಿದುಕೊಂಡುಬರಲು ಕಾರಣವೇನೆಂದರೆ ಆಗಿದ್ದಂತಹ ರಾಜಕೀಯ ತಳಮಳದ ಸ್ಥಿತಿ, ವಿಭಜನೆ. ದೇಶದಲ್ಲಿ ಇದ್ದ ಅತಂತ್ರ ಸ್ಥಿತಿಯಿಂದ ಅದನ್ನು ಹಾಗೆಯೇ ಉಳಿಸಿಕೊಳ್ಳಲಾಯಿತು.

ದೇಶದ್ರೋಹ ಕಾನೂನಿನಲ್ಲಿ ಎರಡು ಭಾಗವಿದೆ. ಒಂದು ರಾಷ್ಟ್ರದ ಬಗ್ಗೆ ದ್ವೇಷ ಇರುವಂತಹದ್ದು ಎರಡನೇಯದ್ದು ರಾಷ್ಟ್ರದ ಸರ್ಕಾರದ ನೀತಿಯನ್ನು ವಿರೋಧಿಸುವಂತಹದ್ದು. ಈ ಕಾನೂನಿಗೆ ಸಂಬಂಧಿಸಿದಂತೆ ಮುಖ್ಯವಾದ ತೀರ್ಪು ಬಂದಿದ್ದು ಕೇದಾರನಾಥ ಪ್ರಕರಣದಲ್ಲಿ. 1962 ರಲ್ಲಿ ಬಂದ ಈ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‍ನ ಸಂವಿಧಾನ ಪೀಠ ಹೇಳಿದ್ದು ‘ಸರ್ಕಾರವನ್ನು ಇಲ್ಲದಾಗಿಸುವಾಗ, ಈ ದೇಶದ ಐಕ್ಯತೆ ಮತ್ತು ಸಾರ್ವಭೌಮತೆಯ ಪ್ರಶ್ನೆ ಬಂದಾಗ ಅದು ದೇಶದ್ರೋಹ ಆಗುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಸ್ವೇಚ್ಛೆಗೂ ಒಂದು ಮಿತಿಯಿದೆ. ಈ ಸಂದರ್ಭದಲ್ಲಿ ರಾಷ್ಟ್ರದ್ರೋಹದ ಕಾನೂನು ಸಿಂಧುವಾಗುತ್ತದೆ’.

2ನೇ ಭಾಗದಲ್ಲಿ ಸರ್ಕಾರದ ನೀತಿಯ ವಿರುದ್ಧ ಯಾವುದೇ ಪ್ರತಿರೋಧ, ವಿಮರ್ಶೆ, ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ದೇಶದ್ರೋಹ ಆಗುವುದಿಲ್ಲ. ದೇಶದ ವ್ಯವಸ್ಥೆಯನ್ನೇ ಕಿತ್ತೊಗೆಯುವ ಹೇಳಿಕೆ ಬಂದಾಗ ಮಾತ್ರ ದೇಶದ್ರೋಹ ಆಗುತ್ತದೆ. ಇದರ ನಂತರ ಸಾಕಷ್ಟು ತೀರ್ಪುಗಳು ಬಂದಿದೆ. ಅದರಲ್ಲಿ ಮುಖ್ಯವಾದುದು “ಬಲವಂತ್ ಸಿಂಗ್” ತೀರ್ಪು. ಇದರಲ್ಲಿ ಖಾಲಿಸ್ಥಾನ್ ಜಿಂದಾಬಾದ್ ಎನ್ನುವ ಹೇಳಿಕೆಯನ್ನಿಟ್ಟುಕೊಂಡು ಹೊಸ ರಾಷ್ಟ್ರದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಲಾಯಿತು. ಆದರೆ ಸುಪ್ರೀಂ ಇದು ದೇಶದ್ರೋಹ ಆಗುವುದಿಲ್ಲ ಎಂದು ತೀರ್ಪು ನೀಡಿತು.

ದೇಶದ ವ್ಯವಸ್ಥೆ ಬದಲಾಯಿಸುವ ಬಗ್ಗೆ ಹೇಳುವುದಿಲ್ಲವೊ ಅದು ದೇಶದ್ರೋಹವಲ್ಲ. ದುರಂತವೆಂದರೆ 1962ರ ನಂತರ ಬಂದ ಎಲ್ಲಾ ರಾಜಕೀಯ ಪಕ್ಷಗಳು ಈ ಕಾನೂನನ್ನು ದುರುಪಯೋಗಪಡಿಸಿಕೊಂಡಿವೆ. ತಮ್ಮ ವಿರುದ್ಧ ಯಾರು ಮಾತನಾಡಿದರೂ ದೇಶದ್ರೋಹದ ಕಾನೂನು ಉಪಯೋಗಿಸಿ ಮೊಕದ್ದಮೆ ದಾಖಲುಮಾಡಿ ಅವರನ್ನು ಜೈಲಿಗೆ ಹಾಕಲಾಗುತ್ತಿದೆ. ಈ ಪ್ರವೃತ್ತಿ ಈಗ ಇನ್ನು ಹೆಚ್ಚಾಗಿದೆ.

ದುರಂತವೆಂದರೆ ಒಂದು ಚಿಕ್ಕ ನಾಟಕದಲ್ಲಿ ಬರೆದ “ಚಪ್ಪಲಿಯಲ್ಲಿ ಹೊಡೆಯಿರಿ” ಎಂಬ ವಾಕ್ಯದ ಕಾರಣಕ್ಕೆ ದೇಶದ್ರೋಹದ ಪ್ರಕರಣ ಬೀದರಿನಲ್ಲಿ ತಾಯಿ ಮತ್ತು ಶಿಕ್ಷಕಿಯ ಮೇಲೆ ದಾಖಲಾಗಿರುತ್ತದೆ. “ಫ್ರೀ ಕಾಶ್ಮೀರ” ಎಂಬ ಪೋಸ್ಟರ್ ಹಿಡಿದ ಹುಡುಗಿಯ ಮೇಲೆ ಮೊಕದ್ದಮೆ ದಾಖಲಾಗುತ್ತದೆ. ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದಾರೆ ಎಂದು ಹುಡುಗಿಯನ್ನು ದೇಶದ್ರೋಹದ ಮೇಲೆ ಜೈಲಿಗೆ ಅಟ್ಟಲಾಗುತ್ತದೆ. ಈ ದೇಶದ್ರೋಹದ ಕಲ್ಪನೆಯನ್ನು ತುಂಬಾ ಜಾಳಾಗಿ ಸರ್ಕಾರ ತನ್ನ ವಿರುದ್ಧ ಮಾತನಾಡುವ ಪ್ರತಿಯೊಬ್ಬರ ವಿರುದ್ಧ ಪ್ರಯೋಗ ಮಾಡುತ್ತಿದೆ. ಇದು ಕಳೆದ ಐವತ್ತೇಳು ವರ್ಷದ ಇತಿಹಾಸದಲ್ಲಿ ಬಂದಿರುವ ತೀರ್ಪುಗಳಿಗೆ ತೀರಾ ವ್ಯತಿರಿಕ್ತವಾಗಿದೆ.

ದೇಶದ್ರೋಹದ ಕಾನೂನನ್ನು ವಿಮರ್ಶೆ ಅಂದರೆ ಪ್ರಸ್ತುತತೆಯನ್ನು ನೋಡಬೇಕಾದ ಅವಶ್ಯಕತೆ ಹಿಂದೆಂದಿಗಿಂತಲೂ ಇಂದು ಹೆಚ್ಚಾಗಿದೆ. ಜೊತೆಗೆ ಪ್ರಪಂಚದ ಸಾಕಷ್ಟು ದೇಶಗಳಲ್ಲಿ ದೇಶದ್ರೋಹದ ಕಾನೂನನ್ನು ತೆಗೆದುಹಾಕಲಾಗಿದೆ ಅನ್ನುವುದನ್ನು ನಾವು ಮರೆಯಬಾರದು..
ನಮಗೆ ಎಪ್ಪತ್ತು ವರ್ಷದಲ್ಲಿ ಪ್ರಜಾಪ್ರಭುತ್ವದ ಭದ್ರವಾದ ತಳಹದಿಯನ್ನು ಪಡೆಯಲು ಸಾಧ್ಯವಾಗಿದೆ. ಈ ಬಗ್ಗೆ ಅನುಮಾನಗಳು ಇಲ್ಲ. ನಮ್ಮಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ, ನಮ್ಮಲ್ಲಿ ಪ್ರತಿರೋಧ ಇದೆ. ಚುನಾಯಿತ ಸರ್ಕಾರಗಳೇ ಅಧಿಕಾರ ನಡೆಸುತ್ತಿವೆ ಇದು ಇರಬೇಕಾದರೆ ಅಭಿವ್ಯಕ್ತಿ ಸ್ವಾತಂತ್ರ್ಯ ತುಂಬಾ ಪ್ರಮುಖವಾಗಿದೆ. ಸರ್ಕಾರದ ಕಾನೂನನ್ನು ಪ್ರಜಾಪ್ರಭುತ್ವದ ರೀತಿಯಲ್ಲಿ ವಿರೋಧಿಸುವ ಹಕ್ಕಿರುತ್ತದೆ ಅಲ್ಲಿ ದೇಶದ್ರೋಹದ ಕಾನೂನಿಗೆ ಅವಕಾಶ ಇರುವುದಿಲ್ಲ. ದೇಶದ್ರೋಹವನ್ನು ಹೊರತುಪಡಿಸಿ ಸಾಕಷ್ಟು ಕಾನೂನು ನಮ್ಮ ಭಾರತೀಯ ದಂಡ ಸಂಹಿತೆಯಲ್ಲಿ ಇದೆ ಅದರ್ರ ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆ ಕೊಡಬಹುದು.

ನಮ್ಮಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಂಡಿದೆ ಎಂದು ಒಪ್ಪುವುದೇ ಆದರೆ ಅಲ್ಲಿ ದೇಶದ್ರೋಹದ ಕಾನೂನು ಇರಲು ಅವಕಾಶವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...