Homeಮುಖಪುಟ144 ಸೆಕ್ಷನ್‌ ಹಾಕಿ ಬೀದಿಗೆ ಬಂದವರನ್ನೆಲ್ಲಾ ಪೊಲೀಸರು ಹೊಡೆಯೋದು ಸರಿಯಲ್ಲ: ಸಿದ್ದರಾಮಯ್ಯ

144 ಸೆಕ್ಷನ್‌ ಹಾಕಿ ಬೀದಿಗೆ ಬಂದವರನ್ನೆಲ್ಲಾ ಪೊಲೀಸರು ಹೊಡೆಯೋದು ಸರಿಯಲ್ಲ: ಸಿದ್ದರಾಮಯ್ಯ

- Advertisement -
- Advertisement -

144 ಸೆಕ್ಷನ್‌ ಹಾಕಿ ಬೀದಿಗೆ ಬಂದವರನ್ನೆಲ್ಲಾ ಪೊಲೀಸರು ಹೊಡೆಯೋದು ಸರಿಯಲ್ಲ, ಜನರ ಮೇಲೆ ಲಾಠಿ ಚಾರ್ಜ್ ಮಾಡೋದು ಸರಿಯಲ್ಲ. ಹಬ್ಬ ಇದೆ, ಅಗತ್ಯ ವಸ್ತುಗಳನ್ನ ಮಾರಾಟ ಮಾಡಲು ಮತ್ತು ಖರೀದಿ ಮಾಡಲು ಅವಕಾಶ ಕೊಡದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯನವರು, ನಾನು‌ ಪೊಲೀಸ್ ಆಯುಕ್ತರ ಜೊತೆ ಮಾತಾಡಿದ್ದೇನೆ ಎಂದಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ದೇಶದಲ್ಲಿ ಹಾಗೂ ರಾಜ್ಯದಲ್ಲಿ ವೇಗವಾಗಿ ಹರಡುತ್ತಿರುವ ಕಾರಣ ವಿಧಾನಸಭೆ ಅಧಿವೇಶನ ಮುಂದೂಡಬೇಕು, ಸದನ ನಡೆಸುವುದು ಸಾದುವಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪರೀಕ್ಷಾ ಕೇಂದ್ರಗಳನ್ನ ತೆರೆದಿಲ್ಲ.. ಕ್ವಾರಂಟೈನ್ ಕೇಂದ್ರಗಳನ್ನು ತೆರೆದೇ ಇಲ್ಲ. ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ನಡುವೆ ಹೊಂದಾಣಿಕೆ ಇಲ್ಲ. ಕೊರೊನಾ ನಿಯಂತ್ರಣ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕ್ವಾರಂಟೈನ್ ಮಾಡೋ ಕೆಲಸವನ್ನ ಪೊಲೀಸ್ ಇಲಾಖೆಗೆ ನೀಡಿದ್ರೆ ಹೇಗೆ? ಪೊಲೀಸ್ ಇಲಾಖೆ ಇದನ್ನೆಲ್ಲಾ ಮಾಡೊಕ್ಕಾಗುತ್ತಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂಸತ್ತನ್ನು ಮುಂದೂಡಿದ್ದಾರೆ. ಹಾಗಾಗಿ ಇಲ್ಲಿಯೂ ಮುಂದೂಡಿ ಅಂತಾ ಸದನ ಸಲಹಾ ಸಮಿತಿಲಿ ಹೇಳಿದ್ದೇವೆ ಆದರೆ ಇದೇ 27,28ರವರೆಗೂ ನಡೆಸಬೇಕು ಅಂತಾ ಸರ್ಕಾರ ವಾದಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲೂ ಕೊರೊನಾ ವ್ಯಾಪಕವಾಗಿ ಹಬ್ತಾ ಇದೆ. ಸಾಮಾಜಿಕ ಕಳಕಳಿಯೂ ಬಹಳ‌ಮುಖ್ಯ. ಆದ್ದರಿಂದ ಬಜೆಟ್ ಮೇಲೆ ಚರ್ಚೆ ಆಗದಿದ್ದರೂ ಪರವಾಗಿಲ್ಲ. ಒಪ್ಪಿಗೆ ನೀಡ್ತೇವೆ, ಎಲ್ಲದಕ್ಕೂ ಸಹಕಾರ ಕೊಡ್ತೇವೆ ಎಂದು ತಿಳಿಸಿದ್ದಾರೆ.

ಫೈನಾನ್ಸ್ ಬಿಲ್ ಬಿಟ್ಟು ಯಾವ ಬಿಲ್ ನ್ನು ಎತ್ತಿಕೊಳ್ಳೋದು ಬೇಡ ಅಂತಾನೂ ಹೇಳಿದ್ವಿ. ಪಂಚಾಯತ್ ರಾಜ್ ವ್ಯವಸ್ಥೆಯನ್ನ ದುರ್ಬಲ ಮಾಡಲು ಒಂದು ವಿಧೇಯಕ ತಂದ್ರು. ಅಂತಹ ಬಿಲ್ ಗಳ ಬಗ್ಗೆ ಚರ್ಚೆ ಆಗ್ಲಿ ಅನ್ನೊದು ನಮ್ಮ ವಾದ. ಹಾಗಾಗಿ ಹಣಕಾಸು‌ ಬಿಲ್ ಬಿಟ್ಟು ಬೇರಾವ ಬಿಲ್ ತರೋದು ಬೇಡ ಅಂತಾ ಹೇಳಿದ್ವಿ. ಸಿಎಂಗೆ ನಾವು ಇಷ್ಟೊಂದು ಸಪೋರ್ಡ್ ಮಾಡಿದ್ದೀವಿ. ಸದನ ಮುಂದೂಡಿ ಅಂತಾ ಹೇಳಿದ್ದಿವಿ. ಹಣಕಾಸು ಬಿಲ್ ಗೆ ಒಪ್ಪಿಗೆ ನೀಡ್ತಿವಿ ಅಂದಿದ್ದೀವಿ. ಅಗತ್ಯ ಬಿದ್ರೆ ಸುಗ್ರೀವಾಜ್ಞೆ ಹೊರಡಿಸಿ ಅಂತಾ ಹೇಳಿದ್ದೀವಿ, ಸಿಎಂ ಕೂಡ ಇದಕ್ಕೆ ಒಪ್ಪಿದ್ರು. ಇಷ್ಟೆಲ್ಲಾ ಆದ್ಮೇಲೆಯೂ ಕಲಾಪ ಆರಂಭವಾಗುತ್ತಿದ್ದಂತೆ ಕಾನೂನು ಸಚಿವರು ಸದನದ ಮುಂದೆ ಬಿಲ್ ತಂದೇ ಬಿಟ್ರು. ನಾವು ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ವಿ. ಮಾನಗೆಟ್ಟ ಸರ್ಕಾರ ಇದು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಹಣಕಾಸು ಸ್ಥಿತಿ ದಿವಾಳಿಯಾಗಿದೆ. ಜನ ನಮಗೆ‌ ಫುಲ್ ಮೆಜಾರಿಟಿ ಕೊಟ್ಟಿದ್ದಾರೆ ಅಂತಾ ಅನ್ಕೊಂಡಿದ್ದಾರೆ. ಈ ಎಲ್ಲ ಕಾರಣಗಳಿಂದ ನಾವು ಕಲಾಪವನ್ನ ಬಹಿಷ್ಕರಿಸಿದ್ದೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...