Homeರಾಷ್ಟ್ರೀಯಜನರಿಗೆ ಏನು ತಿನ್ನಬೇಕು ಎಂದು ಹೇಳುವುದು ಸರ್ಕಾರದ ಕೆಲಸವಲ್ಲ; ಪ್ರತಿಯೊಬ್ಬ ಪ್ರಜೆಗೂ ಅವರವರ ಇಷ್ಟದ ಆಹಾರವನ್ನು...

ಜನರಿಗೆ ಏನು ತಿನ್ನಬೇಕು ಎಂದು ಹೇಳುವುದು ಸರ್ಕಾರದ ಕೆಲಸವಲ್ಲ; ಪ್ರತಿಯೊಬ್ಬ ಪ್ರಜೆಗೂ ಅವರವರ ಇಷ್ಟದ ಆಹಾರವನ್ನು ತಿನ್ನುವ ಸ್ವಾತಂತ್ರ್ಯವಿದೆ: ಕೇಂದ್ರ ಬಿಜೆಪಿ ಸಚಿವ

- Advertisement -
- Advertisement -

ಜನರು ಯಾವ ಆಹಾರವನ್ನು ತಿನ್ನಬೇಕು ಎಂದು ಹೇಳುವುದು ಸರ್ಕಾರದ ಕೆಲಸವಲ್ಲ, ದೇಶದ ಪ್ರತಿಯೊಬ್ಬ ಪ್ರಜೆಗೂ ಅವರವರ ಇಷ್ಟದ ಆಹಾರವನ್ನು ತಿನ್ನುವ ಸ್ವಾತಂತ್ರ್ಯವಿದೆ ಎಂದು ಒಕ್ಕೂಟ ಸರ್ಕಾರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ದೇಶಗಳಾದ್ಯಂತ ಹೆಚ್ಚುತ್ತಿರುವ ಧಾರ್ಮಿಕ ಗಲಭೆಗಳ ನಡುವೆ ಮಾತನಾಡಿರುವ ಅಬ್ಬಾಸ್‌ ನಖ್ವಿ, “ಧಾರ್ಮಿಕ ಸಮುದಾಯಗಳ ನಡುವೆ ಅಸಹಿಷ್ಣುತೆ ಬೆಳೆಯುತ್ತಿಲ್ಲ ಮತ್ತು ಜನರಿಗೆ ತಮ್ಮ ನಂಬಿಕೆಯ ಆಚರಣೆಯನ್ನು ಆಚರಿಸಲು ಸ್ವಾತಂತ್ರ್ಯ ಇದೆ” ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಹನುಮ ಜಯಂತಿಯ ಮೆರವಣಿಗೆಯಲ್ಲಿ ಕೋಮು ಘರ್ಷಣೆಗಳು ಭುಗಿಲೆದ್ದ ನಂತರ ಅವರು ಈ ಹೇಳಿಕೆ ನೀಡಿದ್ದು ಮಹತ್ವವನ್ನು ಪಡೆದುಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಯನ್ನು ಅರಗಿಸಿಕೊಳ್ಳಲು ಸಾಧ್ಯವಾಗದವರು ಭಾರತದ ಅಂತರ್ಗತ ಸಂಸ್ಕೃತಿ ಮತ್ತು ಬದ್ಧತೆಯನ್ನು ದೂಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಬ್ಬಾಸ್‌ ನಖ್ವಿ ಎಕನಾಮಿಕ್ ಟೈಮ್ಸ್‌ ಜೊತೆಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಜನರು ಯಾವ ಆಹಾರ ತಿನ್ನಬೇಕು ಎಂದು ಹೇಳುವುದು ಸರ್ಕಾರದ ಕೆಲಸವಲ್ಲ, ದೇಶದಲ್ಲಿ ಪ್ರತಿಯೊಬ್ಬ ಪ್ರಜೆಗೂ ಅವರವರ ಇಷ್ಟದ ಆಹಾರವನ್ನು ತಿನ್ನುವ ಸ್ವಾತಂತ್ರ್ಯವಿದೆ ಎಂದು ನಖ್ವಿ ಹೇಳಿದ್ದಾರೆ.

ಇದನ್ನೂ ಓದಿ: ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ರಾಮನವಮಿಯ ದಿನ ಹಾಸ್ಟೇಲ್‌ನಲ್ಲಿ ಮಾಂಸಾಹಾರ ಮಾಡಿದ್ದಕ್ಕಾಗಿ ಜೆಎನ್‌ಯುವಿನಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿ ಹಿಂಸಾಚಾರ ನಡೆಸಿದ್ದರು. ಈ ದಾಳಿಯಲ್ಲಿ ಹಲವಾರು ವಿದ್ಯಾರ್ಥಿಗಳು ಮಾರಣಾಂತಿಕವಾಗಿ ಗಾಯಗೊಂಡಿದ್ದರು.

ದೆಹಲಿಯಲ್ಲಿ ನಡೆದ ಘರ್ಷಣೆಯಲ್ಲಿ ಆರು ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಕಳೆದ ವಾರಗಳಲ್ಲಿ ಹಲವು ರಾಜ್ಯಗಳಲ್ಲಿ ಇದೇ ರೀತಿಯ ಘಟನೆಗಳು ನಡೆದಿವೆ.

ರಾಜ್ಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಹೇರಲಾಗಿರುವ ಹಿಜಾಬ್ ನಿಷೇಧದ ವಿವಾದದ ಪ್ರಶ್ನೆಗೆ ಉತ್ತರಿಸಿರುವ ನಖ್ವಿ, “ಭಾರತದಲ್ಲಿ ಹಿಜಾಬ್ ಮೇಲೆ ಯಾವುದೇ ನಿಷೇಧವಿಲ್ಲ. ಪ್ರತಿಯೊಂದು ಕಾಲೇಜಿನಲ್ಲಿ ಡ್ರೆಸ್ ಕೋಡ್, ಶಿಸ್ತುಗಳಿವೆ. ಅದನ್ನು ಸ್ವೀಕರಿಸಲು ಅಥವಾ ಇಷ್ಟಪಡಲು ಸಾಧ್ಯವಾಗದವರು ಬೇರೆ ಸಂಸ್ಥೆಯನ್ನು ಆಯ್ಕೆ ಮಾಡಬಹುದು” ಎಂದು ಸಚಿವರು ಹೇಳಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...