Homeಮುಖಪುಟಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ.

- Advertisement -
- Advertisement -

ದೇಶದಲ್ಲಿ ಕಾರ್ಮಿಕರು ಇನ್ನುಮುಂದೆ 12 ಗಂಟೆ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ಇಂಥದ್ದೊಂದು ನಿಯಮ ರೂಪಿಸಿದ್ದು ಗುಜರಾತ್ ಸರ್ಕಾರ ಇದನ್ನು ಯಥಾವತ್ತಾಗಿ ಜಾರಿಗೆ ತಂದಿದೆ. ಇದುವರೆಗೆ ಎಂಟು ಗಂಟೆ ದುಡಿಯುತ್ತಿದ್ದ ಕಾರ್ಮಿಕರು ಈಗ 12 ಗಂಟೆಗಳು ಕೆಲಸದ ಸ್ಥಳದಲ್ಲೇ ಉಳಿಯುವ ಪರಿಸ್ಥಿತಿ ಬರಲಿದೆ. ಅಂದರೆ ಕಾರ್ಮಿಕರು ಮತ್ತೆ ನಾಲ್ಕು ಗಂಟೆ ಹೆಚ್ಚುವರಿ ಕೆಲಸ ಮಾಡಬೇಕಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೊಸ ನಿಯಮ ಜಾರಿಗೆ ಬಂದರೆ ಮಾಲಿಕರ ಆದಾಯ, ಲಾಭಾಂಶ ಹೆಚ್ಚಳಕ್ಕೆ ದಾರಿಯಾಗಲಿದೆ ಮತ್ತು ಕಾರ್ಮಿಕರು ಮಾನಸಿಕ, ದೈಹಿಕ ಒತ್ತಡಗಳಿಗೆ ಸಿಲುಕಿ ಆರೋಗ್ಯ ಕ್ಷೀಣವಾಗುವ ಸಾಧ್ಯತೆ ಹೆಚ್ಚಾಗಿದೆ.

ಕೈಗಾರಿಕೆಗಳು ಆರಂಭವಾದ ದಿನಗಳಲ್ಲಿ ಕಾರ್ಮಿಕರು ಜೀತದಾಳುಗಳಂತೆ, ಪಶುಗಳಂತೆ ದುಡಿಯುತ್ತಿದ್ದರು. ಕೆಲಸ ಮಾಡುವ ಸ್ಥಳದಲ್ಲಿ ಅವರಿಗೆ ಯಾವುದೇ ಸೌಲಭ್ಯಗಳು ಇರಲಿಲ್ಲ. ಹೋರಾಟಗಳು ತೀವ್ರಗೊಂಡ ಬಳಿಕ ವಿಶ್ವದಲ್ಲಿ ಸೂಕ್ತ ವ್ಯವಸ್ಥೆ ಜಾರಿಗೆ ಬಂತು. ಪರಿಣಾಮ ಕಾರ್ಮಿಕರು ಎಂಟು ದುಡಿಯಲು ಅವಕಾಶವಾಯಿತು. ಇದೇವೇಳೆ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ಒಡಂಬಡಿಕೆಗೆ ಹಲವು ದೇಶಗಳು ಸಹಿ ಹಾಕಿದವು. ಅದರಲ್ಲಿ ಭಾರತವೂ ಒಂದು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಹೊಸ ಕಾನೂನು ತಂದು ಐಎಲ್ಒ  ಒಡಂಬಡಿಕೆಯನ್ನು ಉಲ್ಲಂಘಿಸಿದೆ. ಈ ಮೂಲಕ ದೇಶದಲ್ಲಿ ನಿರುದ್ಯೋಗದ ಹೆಚ್ಚಳಕ್ಕೆ ಮಾರ್ಗ ಕಲ್ಪಿಸಿದೆ. ನಿರುದ್ಯೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿರುವ ಹೊತ್ತಿನಲ್ಲಿ ಇಂಥ ಮಾರಕವಾದ ಕಾನೂನು ತಂದು ಕೇಂದ್ರ ಸರ್ಕಾರ ಬಂಡವಾಳಿಗರ ಪರ ತಾನಿದ್ದೇನೆ ಎಂಬುದನ್ನು  ಸಾಬೀತುಪಡಿಸಿದೆ.

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ. ಕಾರ್ಮಿಕರಿಗೆ ಸಂಬಳ ಕಡಿಮೆ ಮಾಡುವ ಹುನ್ನಾರವೂ ಇದೆ. ಕೆಲಸದ ಅವಧಿ ಕಡಿಮೆ ಮಾಡಬೇಕೇ ವಿನಃ ಹೆಚ್ಚಳ ಮಾಡುವುದು ಸರ್ವಸಮ್ಮತವಲ್ಲ. ಕೇಂದ್ರದ ಈ ಕ್ರಮದಿಂದ ಹಲವರು ಉದ್ಯೋಗ ಕಳೆದುಕೊಳ್ಳುತ್ತಾರೆ. ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗುತ್ತದೆ. ಹಾಗಾಗಿ ಸರ್ಕಾರ ಈಗಿರುವ ಪಾಳಿಯ ಅವಧಿಯನ್ನು ಕಡಿಮೆ ಮಾಢಬೇಕು. ಒಂದು ಪಾಳಿ 4 ರಿಂದ 6 ಗಂಟೆಗೆ ಇಳಿಸಿದರೆ ಎಲ್ಲರಿಗೂ ಉದ್ಯೋಗ ದೊರೆಯುತ್ತದೆ. ಪಾಳಿಗಳೂ ಹೆಚ್ಚಿ ಉತ್ಪಾದನೆ ದ್ವಿಗುಣವಾಗುತ್ತದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಾರ್ಮಿಕರ ಹಿತಕ್ಕಿಂದ ಮಾಲಿಕರಿಗೆ ಸಹಕರಿಸುವುದು ಮುಖ್ಯವಾಗಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ನಾನುಗೌರಿ.ಕಾಂಗೆ ತಿಳಿಸಿದರು.

ಕಾರ್ಮಿಕ ಸಂಘಟನೆಗಳ ವ್ಯಾಪಕ ವಿರೋಧದ ನಡುವೆಯೇ ಗುಜರಾತ್ ಸರ್ಕಾರ ಕಾರ್ಮಿಕರನ್ನು 12 ಗಂಟೆ ದುಡಿಸಿಕೊಳ್ಳುತ್ತಿದ್ದು ಕೇಂದ್ರ ಸರ್ಕಾರದ ಕಾನೂನನ್ನು ದೇಶದಲ್ಲೇ ಮೊದಲು ಜಾರಿಗೆ ತಂದ ರಾಜ್ಯವಾಗಿದೆ.  ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಕೇಂದ್ರದ ಕಾನೂನು ಯಥಾವತ್ತು ಜಾರಿಯಾಗಲಿದೆ. ರಾಜ್ಯ ಸರ್ಕಾರಗಳಿಗೆ ಕೇಂದ್ರದ ನಿಯಮವನ್ನು ನಿರಾಕರಿಸುವ ಅಧಿಕಾರವಿದೆ. ಆದರೂ ರಾಜ್ಯದಲ್ಲಿ ಈ ಕಾನೂನು ಜಾರಿಗೊಂಡರೆ ಪ್ರತಿಯೊಬ್ಬ ಕಾರ್ಮಿಕರು 12 ಗಂಟೆ ದುಡಿಯುವುದು ಕಡ್ಡಾಯವಾಗಲಿದೆ. ಕೆಲಸದ ಅವಧಿ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಕಾರ್ಮಿಕರು ಅದರಲ್ಲೂ ಮಹಿಳಾ ಕಾರ್ಮಿಕರು ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ.  24 ಗಂಟೆಗೆ ಮೂರು ಪಾಳಿಗಳಿದ್ದವು ಇನ್ನು ಮುಂದೆ ಎರಡೇ ಪಾಳಿಯಾಗಲಿವೆ. ಕುಟುಂಬದೊಂದಿಗೆ ಕಾರ್ಮಿಕರು ಕಾಲ ಕಳೆಯುವುದು ತಪ್ಪಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಲಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದನ್ನೇ ಲಾಭ ಮಾಢಿಕೊಂಡು ಹೋರಾಟಗಳನ್ನು ರೂಪಿಸಲು ಆಗದಂತಹ ಪರಿಸ್ಥಿತಿಯಲ್ಲಿ ಇಂಥದ್ದೊಂದು ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಕೇಂದ್ರದ ಅವೈಜ್ಞಾನಿಕ ತೀರ್ಮಾನದಿಂದ ಶೇಕಡ 40ರಷ್ಟು ಉದ್ಯೋಗಗಳಿಗೆ ಕತ್ತರಿ ಬೀಳಲಿದೆ. ದೊಡ್ಡ ಪ್ರಮಾಣದ ನಿರುದ್ಯೋಗಕ್ಕೆ ಭಾಷ್ಯ ಬರೆಯಲಿದೆ. ಸಮಾಜದಲ್ಲಿ ಅಸಮತೋಲನ ಉಂಟಾಗಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಲು ಕಾರಣವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ. ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುವ ಕಾರ್ಮಿಕರಿಗೆ ಕೇಂದ್ರದ ತೀರ್ಮಾನ ಮರಣಶಾಸನವಾಗಿದೆ. ಮೊದಲ ಅವಧಿಯಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 12 ಗಂಟೆ ಕೆಲಸದ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಇದಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ವಾಪಸ್ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು. ಈಗಲೂ ಕೇಂದ್ರ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕಿದೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...