Homeಮುಖಪುಟಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ.

- Advertisement -
- Advertisement -

ದೇಶದಲ್ಲಿ ಕಾರ್ಮಿಕರು ಇನ್ನುಮುಂದೆ 12 ಗಂಟೆ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ಇಂಥದ್ದೊಂದು ನಿಯಮ ರೂಪಿಸಿದ್ದು ಗುಜರಾತ್ ಸರ್ಕಾರ ಇದನ್ನು ಯಥಾವತ್ತಾಗಿ ಜಾರಿಗೆ ತಂದಿದೆ. ಇದುವರೆಗೆ ಎಂಟು ಗಂಟೆ ದುಡಿಯುತ್ತಿದ್ದ ಕಾರ್ಮಿಕರು ಈಗ 12 ಗಂಟೆಗಳು ಕೆಲಸದ ಸ್ಥಳದಲ್ಲೇ ಉಳಿಯುವ ಪರಿಸ್ಥಿತಿ ಬರಲಿದೆ. ಅಂದರೆ ಕಾರ್ಮಿಕರು ಮತ್ತೆ ನಾಲ್ಕು ಗಂಟೆ ಹೆಚ್ಚುವರಿ ಕೆಲಸ ಮಾಡಬೇಕಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೊಸ ನಿಯಮ ಜಾರಿಗೆ ಬಂದರೆ ಮಾಲಿಕರ ಆದಾಯ, ಲಾಭಾಂಶ ಹೆಚ್ಚಳಕ್ಕೆ ದಾರಿಯಾಗಲಿದೆ ಮತ್ತು ಕಾರ್ಮಿಕರು ಮಾನಸಿಕ, ದೈಹಿಕ ಒತ್ತಡಗಳಿಗೆ ಸಿಲುಕಿ ಆರೋಗ್ಯ ಕ್ಷೀಣವಾಗುವ ಸಾಧ್ಯತೆ ಹೆಚ್ಚಾಗಿದೆ.

ಕೈಗಾರಿಕೆಗಳು ಆರಂಭವಾದ ದಿನಗಳಲ್ಲಿ ಕಾರ್ಮಿಕರು ಜೀತದಾಳುಗಳಂತೆ, ಪಶುಗಳಂತೆ ದುಡಿಯುತ್ತಿದ್ದರು. ಕೆಲಸ ಮಾಡುವ ಸ್ಥಳದಲ್ಲಿ ಅವರಿಗೆ ಯಾವುದೇ ಸೌಲಭ್ಯಗಳು ಇರಲಿಲ್ಲ. ಹೋರಾಟಗಳು ತೀವ್ರಗೊಂಡ ಬಳಿಕ ವಿಶ್ವದಲ್ಲಿ ಸೂಕ್ತ ವ್ಯವಸ್ಥೆ ಜಾರಿಗೆ ಬಂತು. ಪರಿಣಾಮ ಕಾರ್ಮಿಕರು ಎಂಟು ದುಡಿಯಲು ಅವಕಾಶವಾಯಿತು. ಇದೇವೇಳೆ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ಒಡಂಬಡಿಕೆಗೆ ಹಲವು ದೇಶಗಳು ಸಹಿ ಹಾಕಿದವು. ಅದರಲ್ಲಿ ಭಾರತವೂ ಒಂದು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಹೊಸ ಕಾನೂನು ತಂದು ಐಎಲ್ಒ  ಒಡಂಬಡಿಕೆಯನ್ನು ಉಲ್ಲಂಘಿಸಿದೆ. ಈ ಮೂಲಕ ದೇಶದಲ್ಲಿ ನಿರುದ್ಯೋಗದ ಹೆಚ್ಚಳಕ್ಕೆ ಮಾರ್ಗ ಕಲ್ಪಿಸಿದೆ. ನಿರುದ್ಯೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿರುವ ಹೊತ್ತಿನಲ್ಲಿ ಇಂಥ ಮಾರಕವಾದ ಕಾನೂನು ತಂದು ಕೇಂದ್ರ ಸರ್ಕಾರ ಬಂಡವಾಳಿಗರ ಪರ ತಾನಿದ್ದೇನೆ ಎಂಬುದನ್ನು  ಸಾಬೀತುಪಡಿಸಿದೆ.

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ. ಕಾರ್ಮಿಕರಿಗೆ ಸಂಬಳ ಕಡಿಮೆ ಮಾಡುವ ಹುನ್ನಾರವೂ ಇದೆ. ಕೆಲಸದ ಅವಧಿ ಕಡಿಮೆ ಮಾಡಬೇಕೇ ವಿನಃ ಹೆಚ್ಚಳ ಮಾಡುವುದು ಸರ್ವಸಮ್ಮತವಲ್ಲ. ಕೇಂದ್ರದ ಈ ಕ್ರಮದಿಂದ ಹಲವರು ಉದ್ಯೋಗ ಕಳೆದುಕೊಳ್ಳುತ್ತಾರೆ. ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗುತ್ತದೆ. ಹಾಗಾಗಿ ಸರ್ಕಾರ ಈಗಿರುವ ಪಾಳಿಯ ಅವಧಿಯನ್ನು ಕಡಿಮೆ ಮಾಢಬೇಕು. ಒಂದು ಪಾಳಿ 4 ರಿಂದ 6 ಗಂಟೆಗೆ ಇಳಿಸಿದರೆ ಎಲ್ಲರಿಗೂ ಉದ್ಯೋಗ ದೊರೆಯುತ್ತದೆ. ಪಾಳಿಗಳೂ ಹೆಚ್ಚಿ ಉತ್ಪಾದನೆ ದ್ವಿಗುಣವಾಗುತ್ತದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಾರ್ಮಿಕರ ಹಿತಕ್ಕಿಂದ ಮಾಲಿಕರಿಗೆ ಸಹಕರಿಸುವುದು ಮುಖ್ಯವಾಗಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ನಾನುಗೌರಿ.ಕಾಂಗೆ ತಿಳಿಸಿದರು.

ಕಾರ್ಮಿಕ ಸಂಘಟನೆಗಳ ವ್ಯಾಪಕ ವಿರೋಧದ ನಡುವೆಯೇ ಗುಜರಾತ್ ಸರ್ಕಾರ ಕಾರ್ಮಿಕರನ್ನು 12 ಗಂಟೆ ದುಡಿಸಿಕೊಳ್ಳುತ್ತಿದ್ದು ಕೇಂದ್ರ ಸರ್ಕಾರದ ಕಾನೂನನ್ನು ದೇಶದಲ್ಲೇ ಮೊದಲು ಜಾರಿಗೆ ತಂದ ರಾಜ್ಯವಾಗಿದೆ.  ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಕೇಂದ್ರದ ಕಾನೂನು ಯಥಾವತ್ತು ಜಾರಿಯಾಗಲಿದೆ. ರಾಜ್ಯ ಸರ್ಕಾರಗಳಿಗೆ ಕೇಂದ್ರದ ನಿಯಮವನ್ನು ನಿರಾಕರಿಸುವ ಅಧಿಕಾರವಿದೆ. ಆದರೂ ರಾಜ್ಯದಲ್ಲಿ ಈ ಕಾನೂನು ಜಾರಿಗೊಂಡರೆ ಪ್ರತಿಯೊಬ್ಬ ಕಾರ್ಮಿಕರು 12 ಗಂಟೆ ದುಡಿಯುವುದು ಕಡ್ಡಾಯವಾಗಲಿದೆ. ಕೆಲಸದ ಅವಧಿ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಕಾರ್ಮಿಕರು ಅದರಲ್ಲೂ ಮಹಿಳಾ ಕಾರ್ಮಿಕರು ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ.  24 ಗಂಟೆಗೆ ಮೂರು ಪಾಳಿಗಳಿದ್ದವು ಇನ್ನು ಮುಂದೆ ಎರಡೇ ಪಾಳಿಯಾಗಲಿವೆ. ಕುಟುಂಬದೊಂದಿಗೆ ಕಾರ್ಮಿಕರು ಕಾಲ ಕಳೆಯುವುದು ತಪ್ಪಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಲಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದನ್ನೇ ಲಾಭ ಮಾಢಿಕೊಂಡು ಹೋರಾಟಗಳನ್ನು ರೂಪಿಸಲು ಆಗದಂತಹ ಪರಿಸ್ಥಿತಿಯಲ್ಲಿ ಇಂಥದ್ದೊಂದು ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಕೇಂದ್ರದ ಅವೈಜ್ಞಾನಿಕ ತೀರ್ಮಾನದಿಂದ ಶೇಕಡ 40ರಷ್ಟು ಉದ್ಯೋಗಗಳಿಗೆ ಕತ್ತರಿ ಬೀಳಲಿದೆ. ದೊಡ್ಡ ಪ್ರಮಾಣದ ನಿರುದ್ಯೋಗಕ್ಕೆ ಭಾಷ್ಯ ಬರೆಯಲಿದೆ. ಸಮಾಜದಲ್ಲಿ ಅಸಮತೋಲನ ಉಂಟಾಗಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಲು ಕಾರಣವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ. ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುವ ಕಾರ್ಮಿಕರಿಗೆ ಕೇಂದ್ರದ ತೀರ್ಮಾನ ಮರಣಶಾಸನವಾಗಿದೆ. ಮೊದಲ ಅವಧಿಯಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 12 ಗಂಟೆ ಕೆಲಸದ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಇದಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ವಾಪಸ್ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು. ಈಗಲೂ ಕೇಂದ್ರ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕಿದೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...