Homeಮುಖಪುಟಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ.

- Advertisement -
- Advertisement -

ದೇಶದಲ್ಲಿ ಕಾರ್ಮಿಕರು ಇನ್ನುಮುಂದೆ 12 ಗಂಟೆ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ಇಂಥದ್ದೊಂದು ನಿಯಮ ರೂಪಿಸಿದ್ದು ಗುಜರಾತ್ ಸರ್ಕಾರ ಇದನ್ನು ಯಥಾವತ್ತಾಗಿ ಜಾರಿಗೆ ತಂದಿದೆ. ಇದುವರೆಗೆ ಎಂಟು ಗಂಟೆ ದುಡಿಯುತ್ತಿದ್ದ ಕಾರ್ಮಿಕರು ಈಗ 12 ಗಂಟೆಗಳು ಕೆಲಸದ ಸ್ಥಳದಲ್ಲೇ ಉಳಿಯುವ ಪರಿಸ್ಥಿತಿ ಬರಲಿದೆ. ಅಂದರೆ ಕಾರ್ಮಿಕರು ಮತ್ತೆ ನಾಲ್ಕು ಗಂಟೆ ಹೆಚ್ಚುವರಿ ಕೆಲಸ ಮಾಡಬೇಕಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೊಸ ನಿಯಮ ಜಾರಿಗೆ ಬಂದರೆ ಮಾಲಿಕರ ಆದಾಯ, ಲಾಭಾಂಶ ಹೆಚ್ಚಳಕ್ಕೆ ದಾರಿಯಾಗಲಿದೆ ಮತ್ತು ಕಾರ್ಮಿಕರು ಮಾನಸಿಕ, ದೈಹಿಕ ಒತ್ತಡಗಳಿಗೆ ಸಿಲುಕಿ ಆರೋಗ್ಯ ಕ್ಷೀಣವಾಗುವ ಸಾಧ್ಯತೆ ಹೆಚ್ಚಾಗಿದೆ.

ಕೈಗಾರಿಕೆಗಳು ಆರಂಭವಾದ ದಿನಗಳಲ್ಲಿ ಕಾರ್ಮಿಕರು ಜೀತದಾಳುಗಳಂತೆ, ಪಶುಗಳಂತೆ ದುಡಿಯುತ್ತಿದ್ದರು. ಕೆಲಸ ಮಾಡುವ ಸ್ಥಳದಲ್ಲಿ ಅವರಿಗೆ ಯಾವುದೇ ಸೌಲಭ್ಯಗಳು ಇರಲಿಲ್ಲ. ಹೋರಾಟಗಳು ತೀವ್ರಗೊಂಡ ಬಳಿಕ ವಿಶ್ವದಲ್ಲಿ ಸೂಕ್ತ ವ್ಯವಸ್ಥೆ ಜಾರಿಗೆ ಬಂತು. ಪರಿಣಾಮ ಕಾರ್ಮಿಕರು ಎಂಟು ದುಡಿಯಲು ಅವಕಾಶವಾಯಿತು. ಇದೇವೇಳೆ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ಒಡಂಬಡಿಕೆಗೆ ಹಲವು ದೇಶಗಳು ಸಹಿ ಹಾಕಿದವು. ಅದರಲ್ಲಿ ಭಾರತವೂ ಒಂದು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಹೊಸ ಕಾನೂನು ತಂದು ಐಎಲ್ಒ  ಒಡಂಬಡಿಕೆಯನ್ನು ಉಲ್ಲಂಘಿಸಿದೆ. ಈ ಮೂಲಕ ದೇಶದಲ್ಲಿ ನಿರುದ್ಯೋಗದ ಹೆಚ್ಚಳಕ್ಕೆ ಮಾರ್ಗ ಕಲ್ಪಿಸಿದೆ. ನಿರುದ್ಯೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿರುವ ಹೊತ್ತಿನಲ್ಲಿ ಇಂಥ ಮಾರಕವಾದ ಕಾನೂನು ತಂದು ಕೇಂದ್ರ ಸರ್ಕಾರ ಬಂಡವಾಳಿಗರ ಪರ ತಾನಿದ್ದೇನೆ ಎಂಬುದನ್ನು  ಸಾಬೀತುಪಡಿಸಿದೆ.

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ. ಕಾರ್ಮಿಕರಿಗೆ ಸಂಬಳ ಕಡಿಮೆ ಮಾಡುವ ಹುನ್ನಾರವೂ ಇದೆ. ಕೆಲಸದ ಅವಧಿ ಕಡಿಮೆ ಮಾಡಬೇಕೇ ವಿನಃ ಹೆಚ್ಚಳ ಮಾಡುವುದು ಸರ್ವಸಮ್ಮತವಲ್ಲ. ಕೇಂದ್ರದ ಈ ಕ್ರಮದಿಂದ ಹಲವರು ಉದ್ಯೋಗ ಕಳೆದುಕೊಳ್ಳುತ್ತಾರೆ. ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗುತ್ತದೆ. ಹಾಗಾಗಿ ಸರ್ಕಾರ ಈಗಿರುವ ಪಾಳಿಯ ಅವಧಿಯನ್ನು ಕಡಿಮೆ ಮಾಢಬೇಕು. ಒಂದು ಪಾಳಿ 4 ರಿಂದ 6 ಗಂಟೆಗೆ ಇಳಿಸಿದರೆ ಎಲ್ಲರಿಗೂ ಉದ್ಯೋಗ ದೊರೆಯುತ್ತದೆ. ಪಾಳಿಗಳೂ ಹೆಚ್ಚಿ ಉತ್ಪಾದನೆ ದ್ವಿಗುಣವಾಗುತ್ತದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಾರ್ಮಿಕರ ಹಿತಕ್ಕಿಂದ ಮಾಲಿಕರಿಗೆ ಸಹಕರಿಸುವುದು ಮುಖ್ಯವಾಗಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ನಾನುಗೌರಿ.ಕಾಂಗೆ ತಿಳಿಸಿದರು.

ಕಾರ್ಮಿಕ ಸಂಘಟನೆಗಳ ವ್ಯಾಪಕ ವಿರೋಧದ ನಡುವೆಯೇ ಗುಜರಾತ್ ಸರ್ಕಾರ ಕಾರ್ಮಿಕರನ್ನು 12 ಗಂಟೆ ದುಡಿಸಿಕೊಳ್ಳುತ್ತಿದ್ದು ಕೇಂದ್ರ ಸರ್ಕಾರದ ಕಾನೂನನ್ನು ದೇಶದಲ್ಲೇ ಮೊದಲು ಜಾರಿಗೆ ತಂದ ರಾಜ್ಯವಾಗಿದೆ.  ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಕೇಂದ್ರದ ಕಾನೂನು ಯಥಾವತ್ತು ಜಾರಿಯಾಗಲಿದೆ. ರಾಜ್ಯ ಸರ್ಕಾರಗಳಿಗೆ ಕೇಂದ್ರದ ನಿಯಮವನ್ನು ನಿರಾಕರಿಸುವ ಅಧಿಕಾರವಿದೆ. ಆದರೂ ರಾಜ್ಯದಲ್ಲಿ ಈ ಕಾನೂನು ಜಾರಿಗೊಂಡರೆ ಪ್ರತಿಯೊಬ್ಬ ಕಾರ್ಮಿಕರು 12 ಗಂಟೆ ದುಡಿಯುವುದು ಕಡ್ಡಾಯವಾಗಲಿದೆ. ಕೆಲಸದ ಅವಧಿ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಕಾರ್ಮಿಕರು ಅದರಲ್ಲೂ ಮಹಿಳಾ ಕಾರ್ಮಿಕರು ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ.  24 ಗಂಟೆಗೆ ಮೂರು ಪಾಳಿಗಳಿದ್ದವು ಇನ್ನು ಮುಂದೆ ಎರಡೇ ಪಾಳಿಯಾಗಲಿವೆ. ಕುಟುಂಬದೊಂದಿಗೆ ಕಾರ್ಮಿಕರು ಕಾಲ ಕಳೆಯುವುದು ತಪ್ಪಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಲಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದನ್ನೇ ಲಾಭ ಮಾಢಿಕೊಂಡು ಹೋರಾಟಗಳನ್ನು ರೂಪಿಸಲು ಆಗದಂತಹ ಪರಿಸ್ಥಿತಿಯಲ್ಲಿ ಇಂಥದ್ದೊಂದು ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಕೇಂದ್ರದ ಅವೈಜ್ಞಾನಿಕ ತೀರ್ಮಾನದಿಂದ ಶೇಕಡ 40ರಷ್ಟು ಉದ್ಯೋಗಗಳಿಗೆ ಕತ್ತರಿ ಬೀಳಲಿದೆ. ದೊಡ್ಡ ಪ್ರಮಾಣದ ನಿರುದ್ಯೋಗಕ್ಕೆ ಭಾಷ್ಯ ಬರೆಯಲಿದೆ. ಸಮಾಜದಲ್ಲಿ ಅಸಮತೋಲನ ಉಂಟಾಗಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಲು ಕಾರಣವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ. ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುವ ಕಾರ್ಮಿಕರಿಗೆ ಕೇಂದ್ರದ ತೀರ್ಮಾನ ಮರಣಶಾಸನವಾಗಿದೆ. ಮೊದಲ ಅವಧಿಯಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 12 ಗಂಟೆ ಕೆಲಸದ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಇದಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ವಾಪಸ್ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು. ಈಗಲೂ ಕೇಂದ್ರ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕಿದೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...