Homeಮುಖಪುಟಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ.

- Advertisement -
- Advertisement -

ದೇಶದಲ್ಲಿ ಕಾರ್ಮಿಕರು ಇನ್ನುಮುಂದೆ 12 ಗಂಟೆ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ಇಂಥದ್ದೊಂದು ನಿಯಮ ರೂಪಿಸಿದ್ದು ಗುಜರಾತ್ ಸರ್ಕಾರ ಇದನ್ನು ಯಥಾವತ್ತಾಗಿ ಜಾರಿಗೆ ತಂದಿದೆ. ಇದುವರೆಗೆ ಎಂಟು ಗಂಟೆ ದುಡಿಯುತ್ತಿದ್ದ ಕಾರ್ಮಿಕರು ಈಗ 12 ಗಂಟೆಗಳು ಕೆಲಸದ ಸ್ಥಳದಲ್ಲೇ ಉಳಿಯುವ ಪರಿಸ್ಥಿತಿ ಬರಲಿದೆ. ಅಂದರೆ ಕಾರ್ಮಿಕರು ಮತ್ತೆ ನಾಲ್ಕು ಗಂಟೆ ಹೆಚ್ಚುವರಿ ಕೆಲಸ ಮಾಡಬೇಕಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೊಸ ನಿಯಮ ಜಾರಿಗೆ ಬಂದರೆ ಮಾಲಿಕರ ಆದಾಯ, ಲಾಭಾಂಶ ಹೆಚ್ಚಳಕ್ಕೆ ದಾರಿಯಾಗಲಿದೆ ಮತ್ತು ಕಾರ್ಮಿಕರು ಮಾನಸಿಕ, ದೈಹಿಕ ಒತ್ತಡಗಳಿಗೆ ಸಿಲುಕಿ ಆರೋಗ್ಯ ಕ್ಷೀಣವಾಗುವ ಸಾಧ್ಯತೆ ಹೆಚ್ಚಾಗಿದೆ.

ಕೈಗಾರಿಕೆಗಳು ಆರಂಭವಾದ ದಿನಗಳಲ್ಲಿ ಕಾರ್ಮಿಕರು ಜೀತದಾಳುಗಳಂತೆ, ಪಶುಗಳಂತೆ ದುಡಿಯುತ್ತಿದ್ದರು. ಕೆಲಸ ಮಾಡುವ ಸ್ಥಳದಲ್ಲಿ ಅವರಿಗೆ ಯಾವುದೇ ಸೌಲಭ್ಯಗಳು ಇರಲಿಲ್ಲ. ಹೋರಾಟಗಳು ತೀವ್ರಗೊಂಡ ಬಳಿಕ ವಿಶ್ವದಲ್ಲಿ ಸೂಕ್ತ ವ್ಯವಸ್ಥೆ ಜಾರಿಗೆ ಬಂತು. ಪರಿಣಾಮ ಕಾರ್ಮಿಕರು ಎಂಟು ದುಡಿಯಲು ಅವಕಾಶವಾಯಿತು. ಇದೇವೇಳೆ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ಒಡಂಬಡಿಕೆಗೆ ಹಲವು ದೇಶಗಳು ಸಹಿ ಹಾಕಿದವು. ಅದರಲ್ಲಿ ಭಾರತವೂ ಒಂದು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಹೊಸ ಕಾನೂನು ತಂದು ಐಎಲ್ಒ  ಒಡಂಬಡಿಕೆಯನ್ನು ಉಲ್ಲಂಘಿಸಿದೆ. ಈ ಮೂಲಕ ದೇಶದಲ್ಲಿ ನಿರುದ್ಯೋಗದ ಹೆಚ್ಚಳಕ್ಕೆ ಮಾರ್ಗ ಕಲ್ಪಿಸಿದೆ. ನಿರುದ್ಯೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿರುವ ಹೊತ್ತಿನಲ್ಲಿ ಇಂಥ ಮಾರಕವಾದ ಕಾನೂನು ತಂದು ಕೇಂದ್ರ ಸರ್ಕಾರ ಬಂಡವಾಳಿಗರ ಪರ ತಾನಿದ್ದೇನೆ ಎಂಬುದನ್ನು  ಸಾಬೀತುಪಡಿಸಿದೆ.

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ. ಕಾರ್ಮಿಕರಿಗೆ ಸಂಬಳ ಕಡಿಮೆ ಮಾಡುವ ಹುನ್ನಾರವೂ ಇದೆ. ಕೆಲಸದ ಅವಧಿ ಕಡಿಮೆ ಮಾಡಬೇಕೇ ವಿನಃ ಹೆಚ್ಚಳ ಮಾಡುವುದು ಸರ್ವಸಮ್ಮತವಲ್ಲ. ಕೇಂದ್ರದ ಈ ಕ್ರಮದಿಂದ ಹಲವರು ಉದ್ಯೋಗ ಕಳೆದುಕೊಳ್ಳುತ್ತಾರೆ. ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗುತ್ತದೆ. ಹಾಗಾಗಿ ಸರ್ಕಾರ ಈಗಿರುವ ಪಾಳಿಯ ಅವಧಿಯನ್ನು ಕಡಿಮೆ ಮಾಢಬೇಕು. ಒಂದು ಪಾಳಿ 4 ರಿಂದ 6 ಗಂಟೆಗೆ ಇಳಿಸಿದರೆ ಎಲ್ಲರಿಗೂ ಉದ್ಯೋಗ ದೊರೆಯುತ್ತದೆ. ಪಾಳಿಗಳೂ ಹೆಚ್ಚಿ ಉತ್ಪಾದನೆ ದ್ವಿಗುಣವಾಗುತ್ತದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಾರ್ಮಿಕರ ಹಿತಕ್ಕಿಂದ ಮಾಲಿಕರಿಗೆ ಸಹಕರಿಸುವುದು ಮುಖ್ಯವಾಗಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ನಾನುಗೌರಿ.ಕಾಂಗೆ ತಿಳಿಸಿದರು.

ಕಾರ್ಮಿಕ ಸಂಘಟನೆಗಳ ವ್ಯಾಪಕ ವಿರೋಧದ ನಡುವೆಯೇ ಗುಜರಾತ್ ಸರ್ಕಾರ ಕಾರ್ಮಿಕರನ್ನು 12 ಗಂಟೆ ದುಡಿಸಿಕೊಳ್ಳುತ್ತಿದ್ದು ಕೇಂದ್ರ ಸರ್ಕಾರದ ಕಾನೂನನ್ನು ದೇಶದಲ್ಲೇ ಮೊದಲು ಜಾರಿಗೆ ತಂದ ರಾಜ್ಯವಾಗಿದೆ.  ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಕೇಂದ್ರದ ಕಾನೂನು ಯಥಾವತ್ತು ಜಾರಿಯಾಗಲಿದೆ. ರಾಜ್ಯ ಸರ್ಕಾರಗಳಿಗೆ ಕೇಂದ್ರದ ನಿಯಮವನ್ನು ನಿರಾಕರಿಸುವ ಅಧಿಕಾರವಿದೆ. ಆದರೂ ರಾಜ್ಯದಲ್ಲಿ ಈ ಕಾನೂನು ಜಾರಿಗೊಂಡರೆ ಪ್ರತಿಯೊಬ್ಬ ಕಾರ್ಮಿಕರು 12 ಗಂಟೆ ದುಡಿಯುವುದು ಕಡ್ಡಾಯವಾಗಲಿದೆ. ಕೆಲಸದ ಅವಧಿ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಕಾರ್ಮಿಕರು ಅದರಲ್ಲೂ ಮಹಿಳಾ ಕಾರ್ಮಿಕರು ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ.  24 ಗಂಟೆಗೆ ಮೂರು ಪಾಳಿಗಳಿದ್ದವು ಇನ್ನು ಮುಂದೆ ಎರಡೇ ಪಾಳಿಯಾಗಲಿವೆ. ಕುಟುಂಬದೊಂದಿಗೆ ಕಾರ್ಮಿಕರು ಕಾಲ ಕಳೆಯುವುದು ತಪ್ಪಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಲಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದನ್ನೇ ಲಾಭ ಮಾಢಿಕೊಂಡು ಹೋರಾಟಗಳನ್ನು ರೂಪಿಸಲು ಆಗದಂತಹ ಪರಿಸ್ಥಿತಿಯಲ್ಲಿ ಇಂಥದ್ದೊಂದು ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಕೇಂದ್ರದ ಅವೈಜ್ಞಾನಿಕ ತೀರ್ಮಾನದಿಂದ ಶೇಕಡ 40ರಷ್ಟು ಉದ್ಯೋಗಗಳಿಗೆ ಕತ್ತರಿ ಬೀಳಲಿದೆ. ದೊಡ್ಡ ಪ್ರಮಾಣದ ನಿರುದ್ಯೋಗಕ್ಕೆ ಭಾಷ್ಯ ಬರೆಯಲಿದೆ. ಸಮಾಜದಲ್ಲಿ ಅಸಮತೋಲನ ಉಂಟಾಗಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಲು ಕಾರಣವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ. ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುವ ಕಾರ್ಮಿಕರಿಗೆ ಕೇಂದ್ರದ ತೀರ್ಮಾನ ಮರಣಶಾಸನವಾಗಿದೆ. ಮೊದಲ ಅವಧಿಯಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 12 ಗಂಟೆ ಕೆಲಸದ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಇದಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ವಾಪಸ್ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು. ಈಗಲೂ ಕೇಂದ್ರ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕಿದೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....