Homeಮುಖಪುಟಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ.

- Advertisement -
- Advertisement -

ದೇಶದಲ್ಲಿ ಕಾರ್ಮಿಕರು ಇನ್ನುಮುಂದೆ 12 ಗಂಟೆ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ಇಂಥದ್ದೊಂದು ನಿಯಮ ರೂಪಿಸಿದ್ದು ಗುಜರಾತ್ ಸರ್ಕಾರ ಇದನ್ನು ಯಥಾವತ್ತಾಗಿ ಜಾರಿಗೆ ತಂದಿದೆ. ಇದುವರೆಗೆ ಎಂಟು ಗಂಟೆ ದುಡಿಯುತ್ತಿದ್ದ ಕಾರ್ಮಿಕರು ಈಗ 12 ಗಂಟೆಗಳು ಕೆಲಸದ ಸ್ಥಳದಲ್ಲೇ ಉಳಿಯುವ ಪರಿಸ್ಥಿತಿ ಬರಲಿದೆ. ಅಂದರೆ ಕಾರ್ಮಿಕರು ಮತ್ತೆ ನಾಲ್ಕು ಗಂಟೆ ಹೆಚ್ಚುವರಿ ಕೆಲಸ ಮಾಡಬೇಕಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೊಸ ನಿಯಮ ಜಾರಿಗೆ ಬಂದರೆ ಮಾಲಿಕರ ಆದಾಯ, ಲಾಭಾಂಶ ಹೆಚ್ಚಳಕ್ಕೆ ದಾರಿಯಾಗಲಿದೆ ಮತ್ತು ಕಾರ್ಮಿಕರು ಮಾನಸಿಕ, ದೈಹಿಕ ಒತ್ತಡಗಳಿಗೆ ಸಿಲುಕಿ ಆರೋಗ್ಯ ಕ್ಷೀಣವಾಗುವ ಸಾಧ್ಯತೆ ಹೆಚ್ಚಾಗಿದೆ.

ಕೈಗಾರಿಕೆಗಳು ಆರಂಭವಾದ ದಿನಗಳಲ್ಲಿ ಕಾರ್ಮಿಕರು ಜೀತದಾಳುಗಳಂತೆ, ಪಶುಗಳಂತೆ ದುಡಿಯುತ್ತಿದ್ದರು. ಕೆಲಸ ಮಾಡುವ ಸ್ಥಳದಲ್ಲಿ ಅವರಿಗೆ ಯಾವುದೇ ಸೌಲಭ್ಯಗಳು ಇರಲಿಲ್ಲ. ಹೋರಾಟಗಳು ತೀವ್ರಗೊಂಡ ಬಳಿಕ ವಿಶ್ವದಲ್ಲಿ ಸೂಕ್ತ ವ್ಯವಸ್ಥೆ ಜಾರಿಗೆ ಬಂತು. ಪರಿಣಾಮ ಕಾರ್ಮಿಕರು ಎಂಟು ದುಡಿಯಲು ಅವಕಾಶವಾಯಿತು. ಇದೇವೇಳೆ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ಒಡಂಬಡಿಕೆಗೆ ಹಲವು ದೇಶಗಳು ಸಹಿ ಹಾಕಿದವು. ಅದರಲ್ಲಿ ಭಾರತವೂ ಒಂದು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಹೊಸ ಕಾನೂನು ತಂದು ಐಎಲ್ಒ  ಒಡಂಬಡಿಕೆಯನ್ನು ಉಲ್ಲಂಘಿಸಿದೆ. ಈ ಮೂಲಕ ದೇಶದಲ್ಲಿ ನಿರುದ್ಯೋಗದ ಹೆಚ್ಚಳಕ್ಕೆ ಮಾರ್ಗ ಕಲ್ಪಿಸಿದೆ. ನಿರುದ್ಯೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿರುವ ಹೊತ್ತಿನಲ್ಲಿ ಇಂಥ ಮಾರಕವಾದ ಕಾನೂನು ತಂದು ಕೇಂದ್ರ ಸರ್ಕಾರ ಬಂಡವಾಳಿಗರ ಪರ ತಾನಿದ್ದೇನೆ ಎಂಬುದನ್ನು  ಸಾಬೀತುಪಡಿಸಿದೆ.

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ. ಕಾರ್ಮಿಕರಿಗೆ ಸಂಬಳ ಕಡಿಮೆ ಮಾಡುವ ಹುನ್ನಾರವೂ ಇದೆ. ಕೆಲಸದ ಅವಧಿ ಕಡಿಮೆ ಮಾಡಬೇಕೇ ವಿನಃ ಹೆಚ್ಚಳ ಮಾಡುವುದು ಸರ್ವಸಮ್ಮತವಲ್ಲ. ಕೇಂದ್ರದ ಈ ಕ್ರಮದಿಂದ ಹಲವರು ಉದ್ಯೋಗ ಕಳೆದುಕೊಳ್ಳುತ್ತಾರೆ. ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗುತ್ತದೆ. ಹಾಗಾಗಿ ಸರ್ಕಾರ ಈಗಿರುವ ಪಾಳಿಯ ಅವಧಿಯನ್ನು ಕಡಿಮೆ ಮಾಢಬೇಕು. ಒಂದು ಪಾಳಿ 4 ರಿಂದ 6 ಗಂಟೆಗೆ ಇಳಿಸಿದರೆ ಎಲ್ಲರಿಗೂ ಉದ್ಯೋಗ ದೊರೆಯುತ್ತದೆ. ಪಾಳಿಗಳೂ ಹೆಚ್ಚಿ ಉತ್ಪಾದನೆ ದ್ವಿಗುಣವಾಗುತ್ತದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಾರ್ಮಿಕರ ಹಿತಕ್ಕಿಂದ ಮಾಲಿಕರಿಗೆ ಸಹಕರಿಸುವುದು ಮುಖ್ಯವಾಗಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ನಾನುಗೌರಿ.ಕಾಂಗೆ ತಿಳಿಸಿದರು.

ಕಾರ್ಮಿಕ ಸಂಘಟನೆಗಳ ವ್ಯಾಪಕ ವಿರೋಧದ ನಡುವೆಯೇ ಗುಜರಾತ್ ಸರ್ಕಾರ ಕಾರ್ಮಿಕರನ್ನು 12 ಗಂಟೆ ದುಡಿಸಿಕೊಳ್ಳುತ್ತಿದ್ದು ಕೇಂದ್ರ ಸರ್ಕಾರದ ಕಾನೂನನ್ನು ದೇಶದಲ್ಲೇ ಮೊದಲು ಜಾರಿಗೆ ತಂದ ರಾಜ್ಯವಾಗಿದೆ.  ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಕೇಂದ್ರದ ಕಾನೂನು ಯಥಾವತ್ತು ಜಾರಿಯಾಗಲಿದೆ. ರಾಜ್ಯ ಸರ್ಕಾರಗಳಿಗೆ ಕೇಂದ್ರದ ನಿಯಮವನ್ನು ನಿರಾಕರಿಸುವ ಅಧಿಕಾರವಿದೆ. ಆದರೂ ರಾಜ್ಯದಲ್ಲಿ ಈ ಕಾನೂನು ಜಾರಿಗೊಂಡರೆ ಪ್ರತಿಯೊಬ್ಬ ಕಾರ್ಮಿಕರು 12 ಗಂಟೆ ದುಡಿಯುವುದು ಕಡ್ಡಾಯವಾಗಲಿದೆ. ಕೆಲಸದ ಅವಧಿ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಕಾರ್ಮಿಕರು ಅದರಲ್ಲೂ ಮಹಿಳಾ ಕಾರ್ಮಿಕರು ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ.  24 ಗಂಟೆಗೆ ಮೂರು ಪಾಳಿಗಳಿದ್ದವು ಇನ್ನು ಮುಂದೆ ಎರಡೇ ಪಾಳಿಯಾಗಲಿವೆ. ಕುಟುಂಬದೊಂದಿಗೆ ಕಾರ್ಮಿಕರು ಕಾಲ ಕಳೆಯುವುದು ತಪ್ಪಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಲಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದನ್ನೇ ಲಾಭ ಮಾಢಿಕೊಂಡು ಹೋರಾಟಗಳನ್ನು ರೂಪಿಸಲು ಆಗದಂತಹ ಪರಿಸ್ಥಿತಿಯಲ್ಲಿ ಇಂಥದ್ದೊಂದು ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಕೇಂದ್ರದ ಅವೈಜ್ಞಾನಿಕ ತೀರ್ಮಾನದಿಂದ ಶೇಕಡ 40ರಷ್ಟು ಉದ್ಯೋಗಗಳಿಗೆ ಕತ್ತರಿ ಬೀಳಲಿದೆ. ದೊಡ್ಡ ಪ್ರಮಾಣದ ನಿರುದ್ಯೋಗಕ್ಕೆ ಭಾಷ್ಯ ಬರೆಯಲಿದೆ. ಸಮಾಜದಲ್ಲಿ ಅಸಮತೋಲನ ಉಂಟಾಗಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಲು ಕಾರಣವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ. ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುವ ಕಾರ್ಮಿಕರಿಗೆ ಕೇಂದ್ರದ ತೀರ್ಮಾನ ಮರಣಶಾಸನವಾಗಿದೆ. ಮೊದಲ ಅವಧಿಯಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 12 ಗಂಟೆ ಕೆಲಸದ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಇದಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ವಾಪಸ್ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು. ಈಗಲೂ ಕೇಂದ್ರ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕಿದೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...