Homeಮುಖಪುಟಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ.

- Advertisement -
- Advertisement -

ದೇಶದಲ್ಲಿ ಕಾರ್ಮಿಕರು ಇನ್ನುಮುಂದೆ 12 ಗಂಟೆ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ಇಂಥದ್ದೊಂದು ನಿಯಮ ರೂಪಿಸಿದ್ದು ಗುಜರಾತ್ ಸರ್ಕಾರ ಇದನ್ನು ಯಥಾವತ್ತಾಗಿ ಜಾರಿಗೆ ತಂದಿದೆ. ಇದುವರೆಗೆ ಎಂಟು ಗಂಟೆ ದುಡಿಯುತ್ತಿದ್ದ ಕಾರ್ಮಿಕರು ಈಗ 12 ಗಂಟೆಗಳು ಕೆಲಸದ ಸ್ಥಳದಲ್ಲೇ ಉಳಿಯುವ ಪರಿಸ್ಥಿತಿ ಬರಲಿದೆ. ಅಂದರೆ ಕಾರ್ಮಿಕರು ಮತ್ತೆ ನಾಲ್ಕು ಗಂಟೆ ಹೆಚ್ಚುವರಿ ಕೆಲಸ ಮಾಡಬೇಕಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೊಸ ನಿಯಮ ಜಾರಿಗೆ ಬಂದರೆ ಮಾಲಿಕರ ಆದಾಯ, ಲಾಭಾಂಶ ಹೆಚ್ಚಳಕ್ಕೆ ದಾರಿಯಾಗಲಿದೆ ಮತ್ತು ಕಾರ್ಮಿಕರು ಮಾನಸಿಕ, ದೈಹಿಕ ಒತ್ತಡಗಳಿಗೆ ಸಿಲುಕಿ ಆರೋಗ್ಯ ಕ್ಷೀಣವಾಗುವ ಸಾಧ್ಯತೆ ಹೆಚ್ಚಾಗಿದೆ.

ಕೈಗಾರಿಕೆಗಳು ಆರಂಭವಾದ ದಿನಗಳಲ್ಲಿ ಕಾರ್ಮಿಕರು ಜೀತದಾಳುಗಳಂತೆ, ಪಶುಗಳಂತೆ ದುಡಿಯುತ್ತಿದ್ದರು. ಕೆಲಸ ಮಾಡುವ ಸ್ಥಳದಲ್ಲಿ ಅವರಿಗೆ ಯಾವುದೇ ಸೌಲಭ್ಯಗಳು ಇರಲಿಲ್ಲ. ಹೋರಾಟಗಳು ತೀವ್ರಗೊಂಡ ಬಳಿಕ ವಿಶ್ವದಲ್ಲಿ ಸೂಕ್ತ ವ್ಯವಸ್ಥೆ ಜಾರಿಗೆ ಬಂತು. ಪರಿಣಾಮ ಕಾರ್ಮಿಕರು ಎಂಟು ದುಡಿಯಲು ಅವಕಾಶವಾಯಿತು. ಇದೇವೇಳೆ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ಒಡಂಬಡಿಕೆಗೆ ಹಲವು ದೇಶಗಳು ಸಹಿ ಹಾಕಿದವು. ಅದರಲ್ಲಿ ಭಾರತವೂ ಒಂದು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಹೊಸ ಕಾನೂನು ತಂದು ಐಎಲ್ಒ  ಒಡಂಬಡಿಕೆಯನ್ನು ಉಲ್ಲಂಘಿಸಿದೆ. ಈ ಮೂಲಕ ದೇಶದಲ್ಲಿ ನಿರುದ್ಯೋಗದ ಹೆಚ್ಚಳಕ್ಕೆ ಮಾರ್ಗ ಕಲ್ಪಿಸಿದೆ. ನಿರುದ್ಯೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿರುವ ಹೊತ್ತಿನಲ್ಲಿ ಇಂಥ ಮಾರಕವಾದ ಕಾನೂನು ತಂದು ಕೇಂದ್ರ ಸರ್ಕಾರ ಬಂಡವಾಳಿಗರ ಪರ ತಾನಿದ್ದೇನೆ ಎಂಬುದನ್ನು  ಸಾಬೀತುಪಡಿಸಿದೆ.

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ. ಕಾರ್ಮಿಕರಿಗೆ ಸಂಬಳ ಕಡಿಮೆ ಮಾಡುವ ಹುನ್ನಾರವೂ ಇದೆ. ಕೆಲಸದ ಅವಧಿ ಕಡಿಮೆ ಮಾಡಬೇಕೇ ವಿನಃ ಹೆಚ್ಚಳ ಮಾಡುವುದು ಸರ್ವಸಮ್ಮತವಲ್ಲ. ಕೇಂದ್ರದ ಈ ಕ್ರಮದಿಂದ ಹಲವರು ಉದ್ಯೋಗ ಕಳೆದುಕೊಳ್ಳುತ್ತಾರೆ. ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗುತ್ತದೆ. ಹಾಗಾಗಿ ಸರ್ಕಾರ ಈಗಿರುವ ಪಾಳಿಯ ಅವಧಿಯನ್ನು ಕಡಿಮೆ ಮಾಢಬೇಕು. ಒಂದು ಪಾಳಿ 4 ರಿಂದ 6 ಗಂಟೆಗೆ ಇಳಿಸಿದರೆ ಎಲ್ಲರಿಗೂ ಉದ್ಯೋಗ ದೊರೆಯುತ್ತದೆ. ಪಾಳಿಗಳೂ ಹೆಚ್ಚಿ ಉತ್ಪಾದನೆ ದ್ವಿಗುಣವಾಗುತ್ತದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಾರ್ಮಿಕರ ಹಿತಕ್ಕಿಂದ ಮಾಲಿಕರಿಗೆ ಸಹಕರಿಸುವುದು ಮುಖ್ಯವಾಗಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ನಾನುಗೌರಿ.ಕಾಂಗೆ ತಿಳಿಸಿದರು.

ಕಾರ್ಮಿಕ ಸಂಘಟನೆಗಳ ವ್ಯಾಪಕ ವಿರೋಧದ ನಡುವೆಯೇ ಗುಜರಾತ್ ಸರ್ಕಾರ ಕಾರ್ಮಿಕರನ್ನು 12 ಗಂಟೆ ದುಡಿಸಿಕೊಳ್ಳುತ್ತಿದ್ದು ಕೇಂದ್ರ ಸರ್ಕಾರದ ಕಾನೂನನ್ನು ದೇಶದಲ್ಲೇ ಮೊದಲು ಜಾರಿಗೆ ತಂದ ರಾಜ್ಯವಾಗಿದೆ.  ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಕೇಂದ್ರದ ಕಾನೂನು ಯಥಾವತ್ತು ಜಾರಿಯಾಗಲಿದೆ. ರಾಜ್ಯ ಸರ್ಕಾರಗಳಿಗೆ ಕೇಂದ್ರದ ನಿಯಮವನ್ನು ನಿರಾಕರಿಸುವ ಅಧಿಕಾರವಿದೆ. ಆದರೂ ರಾಜ್ಯದಲ್ಲಿ ಈ ಕಾನೂನು ಜಾರಿಗೊಂಡರೆ ಪ್ರತಿಯೊಬ್ಬ ಕಾರ್ಮಿಕರು 12 ಗಂಟೆ ದುಡಿಯುವುದು ಕಡ್ಡಾಯವಾಗಲಿದೆ. ಕೆಲಸದ ಅವಧಿ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಕಾರ್ಮಿಕರು ಅದರಲ್ಲೂ ಮಹಿಳಾ ಕಾರ್ಮಿಕರು ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ.  24 ಗಂಟೆಗೆ ಮೂರು ಪಾಳಿಗಳಿದ್ದವು ಇನ್ನು ಮುಂದೆ ಎರಡೇ ಪಾಳಿಯಾಗಲಿವೆ. ಕುಟುಂಬದೊಂದಿಗೆ ಕಾರ್ಮಿಕರು ಕಾಲ ಕಳೆಯುವುದು ತಪ್ಪಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಲಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದನ್ನೇ ಲಾಭ ಮಾಢಿಕೊಂಡು ಹೋರಾಟಗಳನ್ನು ರೂಪಿಸಲು ಆಗದಂತಹ ಪರಿಸ್ಥಿತಿಯಲ್ಲಿ ಇಂಥದ್ದೊಂದು ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಕೇಂದ್ರದ ಅವೈಜ್ಞಾನಿಕ ತೀರ್ಮಾನದಿಂದ ಶೇಕಡ 40ರಷ್ಟು ಉದ್ಯೋಗಗಳಿಗೆ ಕತ್ತರಿ ಬೀಳಲಿದೆ. ದೊಡ್ಡ ಪ್ರಮಾಣದ ನಿರುದ್ಯೋಗಕ್ಕೆ ಭಾಷ್ಯ ಬರೆಯಲಿದೆ. ಸಮಾಜದಲ್ಲಿ ಅಸಮತೋಲನ ಉಂಟಾಗಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಲು ಕಾರಣವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ. ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುವ ಕಾರ್ಮಿಕರಿಗೆ ಕೇಂದ್ರದ ತೀರ್ಮಾನ ಮರಣಶಾಸನವಾಗಿದೆ. ಮೊದಲ ಅವಧಿಯಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 12 ಗಂಟೆ ಕೆಲಸದ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಇದಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ವಾಪಸ್ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು. ಈಗಲೂ ಕೇಂದ್ರ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕಿದೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...