Homeಮುಖಪುಟಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಕಾರ್ಮಿಕರು ಇನ್ನು ಮುಂದೆ 12 ಗಂಟೆ ದುಡಿಯಬೇಕೆಂಬುದು ಸರಿಯಾದ ನಿರ್ಧಾರವಲ್ಲ

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ.

- Advertisement -
- Advertisement -

ದೇಶದಲ್ಲಿ ಕಾರ್ಮಿಕರು ಇನ್ನುಮುಂದೆ 12 ಗಂಟೆ ಕೆಲಸ ಮಾಡಬೇಕು. ಕೇಂದ್ರ ಸರ್ಕಾರ ಇಂಥದ್ದೊಂದು ನಿಯಮ ರೂಪಿಸಿದ್ದು ಗುಜರಾತ್ ಸರ್ಕಾರ ಇದನ್ನು ಯಥಾವತ್ತಾಗಿ ಜಾರಿಗೆ ತಂದಿದೆ. ಇದುವರೆಗೆ ಎಂಟು ಗಂಟೆ ದುಡಿಯುತ್ತಿದ್ದ ಕಾರ್ಮಿಕರು ಈಗ 12 ಗಂಟೆಗಳು ಕೆಲಸದ ಸ್ಥಳದಲ್ಲೇ ಉಳಿಯುವ ಪರಿಸ್ಥಿತಿ ಬರಲಿದೆ. ಅಂದರೆ ಕಾರ್ಮಿಕರು ಮತ್ತೆ ನಾಲ್ಕು ಗಂಟೆ ಹೆಚ್ಚುವರಿ ಕೆಲಸ ಮಾಡಬೇಕಾಗಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಹೊಸ ನಿಯಮ ಜಾರಿಗೆ ಬಂದರೆ ಮಾಲಿಕರ ಆದಾಯ, ಲಾಭಾಂಶ ಹೆಚ್ಚಳಕ್ಕೆ ದಾರಿಯಾಗಲಿದೆ ಮತ್ತು ಕಾರ್ಮಿಕರು ಮಾನಸಿಕ, ದೈಹಿಕ ಒತ್ತಡಗಳಿಗೆ ಸಿಲುಕಿ ಆರೋಗ್ಯ ಕ್ಷೀಣವಾಗುವ ಸಾಧ್ಯತೆ ಹೆಚ್ಚಾಗಿದೆ.

ಕೈಗಾರಿಕೆಗಳು ಆರಂಭವಾದ ದಿನಗಳಲ್ಲಿ ಕಾರ್ಮಿಕರು ಜೀತದಾಳುಗಳಂತೆ, ಪಶುಗಳಂತೆ ದುಡಿಯುತ್ತಿದ್ದರು. ಕೆಲಸ ಮಾಡುವ ಸ್ಥಳದಲ್ಲಿ ಅವರಿಗೆ ಯಾವುದೇ ಸೌಲಭ್ಯಗಳು ಇರಲಿಲ್ಲ. ಹೋರಾಟಗಳು ತೀವ್ರಗೊಂಡ ಬಳಿಕ ವಿಶ್ವದಲ್ಲಿ ಸೂಕ್ತ ವ್ಯವಸ್ಥೆ ಜಾರಿಗೆ ಬಂತು. ಪರಿಣಾಮ ಕಾರ್ಮಿಕರು ಎಂಟು ದುಡಿಯಲು ಅವಕಾಶವಾಯಿತು. ಇದೇವೇಳೆ ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆಯ ಒಡಂಬಡಿಕೆಗೆ ಹಲವು ದೇಶಗಳು ಸಹಿ ಹಾಕಿದವು. ಅದರಲ್ಲಿ ಭಾರತವೂ ಒಂದು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಹೊಸ ಕಾನೂನು ತಂದು ಐಎಲ್ಒ  ಒಡಂಬಡಿಕೆಯನ್ನು ಉಲ್ಲಂಘಿಸಿದೆ. ಈ ಮೂಲಕ ದೇಶದಲ್ಲಿ ನಿರುದ್ಯೋಗದ ಹೆಚ್ಚಳಕ್ಕೆ ಮಾರ್ಗ ಕಲ್ಪಿಸಿದೆ. ನಿರುದ್ಯೋಗಿಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿರುವ ಹೊತ್ತಿನಲ್ಲಿ ಇಂಥ ಮಾರಕವಾದ ಕಾನೂನು ತಂದು ಕೇಂದ್ರ ಸರ್ಕಾರ ಬಂಡವಾಳಿಗರ ಪರ ತಾನಿದ್ದೇನೆ ಎಂಬುದನ್ನು  ಸಾಬೀತುಪಡಿಸಿದೆ.

ಐಎಲ್ಓ ತೀರ್ಮಾನದಂತೆ ದಿನಕ್ಕೆ ಎಂಟು ಗಂಟೆ, ವಾರಕ್ಕೆ 48 ಗಂಟೆ ಕಾರ್ಮಿಕರು ಕೆಲಸ ಮಾಡಬೇಕೆಂಬ ನಿಯಮವಿದೆ. ಇದನ್ನು ಕೇಂದ್ರ ಸರ್ಕಾರ ಧಿಕ್ಕರಿಸಿದೆ. ಉಳ್ಳವರ ಪರ ನಿಂತುಕೊಂಡಿದೆ. ಮಾಲಿಕರಿಗೆ ಲಾಭ ಮಾಡಿಕೊಡುವ ಉದ್ದೇಶ ಕೆಲಸದ ಅವಧಿ ಹೆಚ್ಚಳ ಮಾಡಿರುವುದರ ಹಿಂದೆ ಅಡಗಿದೆ. ಕಾರ್ಮಿಕರಿಗೆ ಸಂಬಳ ಕಡಿಮೆ ಮಾಡುವ ಹುನ್ನಾರವೂ ಇದೆ. ಕೆಲಸದ ಅವಧಿ ಕಡಿಮೆ ಮಾಡಬೇಕೇ ವಿನಃ ಹೆಚ್ಚಳ ಮಾಡುವುದು ಸರ್ವಸಮ್ಮತವಲ್ಲ. ಕೇಂದ್ರದ ಈ ಕ್ರಮದಿಂದ ಹಲವರು ಉದ್ಯೋಗ ಕಳೆದುಕೊಳ್ಳುತ್ತಾರೆ. ನಿರುದ್ಯೋಗಿಗಳ ಸಂಖ್ಯೆ ಅಧಿಕವಾಗುತ್ತದೆ. ಹಾಗಾಗಿ ಸರ್ಕಾರ ಈಗಿರುವ ಪಾಳಿಯ ಅವಧಿಯನ್ನು ಕಡಿಮೆ ಮಾಢಬೇಕು. ಒಂದು ಪಾಳಿ 4 ರಿಂದ 6 ಗಂಟೆಗೆ ಇಳಿಸಿದರೆ ಎಲ್ಲರಿಗೂ ಉದ್ಯೋಗ ದೊರೆಯುತ್ತದೆ. ಪಾಳಿಗಳೂ ಹೆಚ್ಚಿ ಉತ್ಪಾದನೆ ದ್ವಿಗುಣವಾಗುತ್ತದೆ. ಆದರೆ ಕೇಂದ್ರ ಸರ್ಕಾರಕ್ಕೆ ಕಾರ್ಮಿಕರ ಹಿತಕ್ಕಿಂದ ಮಾಲಿಕರಿಗೆ ಸಹಕರಿಸುವುದು ಮುಖ್ಯವಾಗಿದೆ ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ನಾನುಗೌರಿ.ಕಾಂಗೆ ತಿಳಿಸಿದರು.

ಕಾರ್ಮಿಕ ಸಂಘಟನೆಗಳ ವ್ಯಾಪಕ ವಿರೋಧದ ನಡುವೆಯೇ ಗುಜರಾತ್ ಸರ್ಕಾರ ಕಾರ್ಮಿಕರನ್ನು 12 ಗಂಟೆ ದುಡಿಸಿಕೊಳ್ಳುತ್ತಿದ್ದು ಕೇಂದ್ರ ಸರ್ಕಾರದ ಕಾನೂನನ್ನು ದೇಶದಲ್ಲೇ ಮೊದಲು ಜಾರಿಗೆ ತಂದ ರಾಜ್ಯವಾಗಿದೆ.  ಬಿಜೆಪಿ ಸರ್ಕಾರದ ರಾಜ್ಯಗಳಲ್ಲಿ ಕೇಂದ್ರದ ಕಾನೂನು ಯಥಾವತ್ತು ಜಾರಿಯಾಗಲಿದೆ. ರಾಜ್ಯ ಸರ್ಕಾರಗಳಿಗೆ ಕೇಂದ್ರದ ನಿಯಮವನ್ನು ನಿರಾಕರಿಸುವ ಅಧಿಕಾರವಿದೆ. ಆದರೂ ರಾಜ್ಯದಲ್ಲಿ ಈ ಕಾನೂನು ಜಾರಿಗೊಂಡರೆ ಪ್ರತಿಯೊಬ್ಬ ಕಾರ್ಮಿಕರು 12 ಗಂಟೆ ದುಡಿಯುವುದು ಕಡ್ಡಾಯವಾಗಲಿದೆ. ಕೆಲಸದ ಅವಧಿ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ಕಾರ್ಮಿಕರು ಅದರಲ್ಲೂ ಮಹಿಳಾ ಕಾರ್ಮಿಕರು ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ.  24 ಗಂಟೆಗೆ ಮೂರು ಪಾಳಿಗಳಿದ್ದವು ಇನ್ನು ಮುಂದೆ ಎರಡೇ ಪಾಳಿಯಾಗಲಿವೆ. ಕುಟುಂಬದೊಂದಿಗೆ ಕಾರ್ಮಿಕರು ಕಾಲ ಕಳೆಯುವುದು ತಪ್ಪಲಿದ್ದು ಮಾನಸಿಕ ಖಿನ್ನತೆಗೆ ಒಳಗಾಗಲಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದನ್ನೇ ಲಾಭ ಮಾಢಿಕೊಂಡು ಹೋರಾಟಗಳನ್ನು ರೂಪಿಸಲು ಆಗದಂತಹ ಪರಿಸ್ಥಿತಿಯಲ್ಲಿ ಇಂಥದ್ದೊಂದು ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಕೇಂದ್ರದ ಅವೈಜ್ಞಾನಿಕ ತೀರ್ಮಾನದಿಂದ ಶೇಕಡ 40ರಷ್ಟು ಉದ್ಯೋಗಗಳಿಗೆ ಕತ್ತರಿ ಬೀಳಲಿದೆ. ದೊಡ್ಡ ಪ್ರಮಾಣದ ನಿರುದ್ಯೋಗಕ್ಕೆ ಭಾಷ್ಯ ಬರೆಯಲಿದೆ. ಸಮಾಜದಲ್ಲಿ ಅಸಮತೋಲನ ಉಂಟಾಗಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಲು ಕಾರಣವಾಗಿದೆ ಎಂಬ ಆತಂಕ ವ್ಯಕ್ತವಾಗಿದೆ. ದೇಶದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುವ ಕಾರ್ಮಿಕರಿಗೆ ಕೇಂದ್ರದ ತೀರ್ಮಾನ ಮರಣಶಾಸನವಾಗಿದೆ. ಮೊದಲ ಅವಧಿಯಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 12 ಗಂಟೆ ಕೆಲಸದ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಇದಕ್ಕೆ ವಿರೋಧ ವ್ಯಕ್ತವಾಗಿದ್ದರಿಂದ ವಾಪಸ್ ಪಡೆದಿದ್ದನ್ನು ಇಲ್ಲಿ ಸ್ಮರಿಸಬಹುದು. ಈಗಲೂ ಕೇಂದ್ರ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕಿದೆ.


ಇದನ್ನೂ ಓದಿ: ಕಾರ್ಮಿಕರಿಗೆ ವೇತನ ಸಹಿತ ಕೆಲಸದ ಭದ್ರತೆ ಆದೇಶವನ್ನು ಸರ್ಕಾರ ಎರಡೇ ದಿನದಲ್ಲಿ ಹಿಂಪಡೆದದ್ದು ಏಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...