HomeUncategorizedಇಂದಿನ ಕ್ರೂರ ಪರಿಸ್ಥಿತಿಯ ಎದುರು ಇಂದಿರಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಪಿಕ್ನಿಕ್‌ಗೆ ಸಮ...!

ಇಂದಿನ ಕ್ರೂರ ಪರಿಸ್ಥಿತಿಯ ಎದುರು ಇಂದಿರಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿ ಪಿಕ್ನಿಕ್‌ಗೆ ಸಮ…!

- Advertisement -
- Advertisement -

ಜಾಣ ಮೌನಕ್ಕಿದು ಸಮಯವಲ್ಲ. ದಮನಿತರು ದನಿಯೆತ್ತದಿರುವುದು ದಮನಕಾರಿಯ ಧೈರ್ಯವನ್ನು ಹೆಚ್ಚಿಸುತ್ತದೆ. ಮೌನ ಸಲ್ಲದು ಎಂಬ ಮಾತು ಎಷ್ಟು ಮುಖ್ಯವೋ, ಹಿಂಸೆ ಸರ್ವಥಾ ಸಲ್ಲದು ಎಂಬ ವಿವೇಕವೂ ಅಷ್ಟೇ ಮುಖ್ಯ. ಮಾತಾಡದೆ ಹೋಗಿದ್ದರೆ ಇಂದಿರಾ ಹೇರಿದ್ದ ತುರ್ತುಪರಿಸ್ಥಿತಿ ಅಷ್ಟು ಲಗುಬಗೆಯಲ್ಲಿ ತೊಲಗುತ್ತಿರಲಿಲ್ಲ. ನೆನಪಿಡೋಣ, ಈಗ ದೇಶದ ಕೈಕಾಲುಗಳ ಕಟ್ಟಿ ಹಾಕಿ ಬಾಯಿಗೆ ಬೀಗ ಜಡಿಯಲು ಮುಂದಾಗಿರುವ ಪ್ರಭುಗಳೂ ಆಗ ತುರ್ತುಪರಿಸ್ಥಿತಿ ವಿರುದ್ಧ ಮಾತಾಡಿದ್ದರು… ಸರ್ವಾಧಿಕಾರದ ವಿರುದ್ಧ ಪ್ರಜೆಗಳ ಎಚ್ಚರಿಸಲು ‘ಕಹಳೆ’, ’ದುಂದುಭಿ’ ಮುಂತಾದ ಭೂಗತ ಪತ್ರಿಕೆಗಳನ್ನು ಹೊರತಂದಿದ್ದರು. ಇತಿಹಾಸದ ಈ ಭಾಗವನ್ನು ಮರೆತಂತೆ ನಟಿಸತೊಡಗಿದ್ದಾರೆ ಅವರು.

ನಿರಂತರ ಎಚ್ಚರವೇ ಜೀವಂತ ಜನತಂತ್ರಕ್ಕೆ ನಾವು ತೆರಬೇಕಾದ ಬೆಲೆ. ಇತಿಹಾಸ ಮರುಕಳಿಸುತ್ತದೆ ಎಂಬ ಮಾತಿದೆ. ವಿವೇಕದ ಮಾತುಗಳು ಹುಸಿಯಾಗುವುದಿಲ್ಲ. ಇತಿಹಾಸ ದಿಟವಾಗಿಯೂ ಮರುಕಳಿಸಿದೆ. ಆದರೆ ನಾಜೀ ಜರ್ಮನಿಯ ಇತಿಹಾಸ ಭಾರತದ ಭೂಪ್ರದೇಶದಲ್ಲಿ ಮರುಕಳಿಸಿದೆ. ಇದರ ಮುಂದೆ ಇಂದಿರಾ ಗಾಂಧೀ ಅವರು ಹೇರಿದ್ದ ಕರಾಳ ತುರ್ತುಪರಿಸ್ಥಿತಿ ಕೇವಲ ವನವಿಹಾರ ಸಮಾನ. ಡಿಸೆಂಬರ್ 21-22ರಂದು ಮೈಸೂರಿನಲ್ಲಿ ಮಾಧ್ಯಮ ಮತ್ತು ಜನತಂತ್ರ ಕುರಿತ ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಮಹಾತ್ಮಾ ಗಾಂಧೀಯವರ ಮೊಮ್ಮಗ ರಾಜಮೋಹನಗಾಂಧೀ ಅವರು ಬಳಸಿದ ಪದವಿದು – ‘ವನವಿಹಾರ’. Emergency was just a picnic before what is happening to the Country now ಎಂಬುದಾಗಿ ಅವರು ಉದ್ಗರಿಸಿದ್ದುಂಟು.

ಸತ್ತು ಹೋಗಿದೆಯೆಂದೇ ಭಾವಿಸಲಾಗಿದ್ದ ವಿದ್ಯಾರ್ಥಿ ಚಳವಳಿ ಗರಿಕೆಯಂತೆ ಮೊಳೆತು ಚಿಗುರಿದೆ. ದೇಶದ ಮೂಲೆ ಮೂಲೆಗಳಲ್ಲಿ ವ್ಯಾಪಿಸಿ ಹಸಿರೊಡೆದಿದೆ. ಜೆ.ಪಿ.ಆಂದೋಲನದಲ್ಲಿ ಬೆರೆತು ಭುಗಿಲೆದ್ದಿದ್ದ ಅಂದಿನ ಆ ಶಕ್ತಿಶಾಲಿ ವಿದ್ಯಾರ್ಥಿ ಚಳವಳಿಯಲ್ಲಿ ಇಂದಿನ ಪ್ರಭುಗಳಲ್ಲಿ ಅನೇಕರೂ ಮತ್ತು ಪರಿವಾರದ ಸಂಘಟನೆಗಳೂ ಭಾಗವಹಿಸಿದ್ದವು. ದೇಶವನ್ನು ದಾಸ್ಯದ ನೊಗದಿಂದ ಬಿಡಿಸಬೇಕೆಂದು ಘರ್ಜಿಸಿದ್ದವು. ಪ್ರಜೆಗಳು ಬಂದರು ಸಿಂಹಾಸನ ಖಾಲಿ ಮಾಡಿರಿ ಎಂಬ ಕವಿ ರಾಮಧಾರಿ ಸಿಂಗ್ ದಿನಕರ್ ಅವರ ಕ್ರಾಂತಿಗೀತೆಗೆ ದನಿಗೂಡಿಸಿ ಹಾಡಿದ್ದವು. ಇಂದು ಆ ಅವೇ ಶಕ್ತಿಗಳು-ಸಂಘಟನೆಗಳು ಸಿಂಹಾಸನ ಏರಿ ಕುಳಿತಿವೆ. ಪ್ರಜೆಗಳನ್ನು ಧಿಕ್ಕರಿಸಿವೆ. ದೇಶದ ಕೊರಳು ಮತ್ತೊಂದು ಬಗೆಯ ದಾಸ್ಯದ ನೊಗಕ್ಕೆ ಹೂಡಲ್ಪಡುತ್ತಿದೆ. ವಿದ್ಯಾರ್ಥಿ ಚಳವಳಿಗೆ ದೇಶದ್ರೋಹದ ಹೆಸರಿಡಲಾಗುತ್ತಿದೆ. ಸುಳ್ಳು ಸುದ್ದಿಗಳು ಮತ್ತು ಮಿಥ್ಯಾಪ್ರಚಾರದ ವಾಟ್ಸ್ಯಾಪ್ ಯೂನಿವರ್ಸಿಟಿಗಳನ್ನು ಕಟ್ಟಿ ನಿಲ್ಲಿಸಲಾಗುತ್ತಿದೆ. ಅರಿವಿನ ಮತ್ತು ಸಮಾನತೆಯ ಬೆಳಕನ್ನು ಹಂಚುವ ನಿಜದ ವಿಶ್ವವಿದ್ಯಾಲಯಗಳನ್ನು ಕೆಡವುವ ಕಾರಸ್ಥಾನ ಜರುಗಿದೆ.

ದಮನದ ವಿರುದ್ಧ ಅನ್ಯಾಯಕ್ಕೆ ಎದುರಾಗಿ ವಿದ್ಯಾರ್ಥಿಶಕ್ತಿ ತೋರತೊಡಗಿರುವ ಸಾತ್ವಿಕ ಕೆಚ್ಚು ವಿವೇಕದ ದೊಂದಿಯನ್ನು ಸಮಾಜಶಕ್ತಿ ಎತ್ತಿ ಹಿಡಿಯಬೇಕಿದೆ. ತಡಮಾಡಿದರೆ ಸರದಿಯ ಪ್ರಕಾರ ಕಾಲಬುಡಕ್ಕೆ ಬಂದೀತು… ಬಲು ತುಟ್ಟಿಯಾಗಿ ಪರಿಣಮೀಸೀತು… ಮತ್ತು…ದುರಿತ ಕಾಲದ ಬಹುಜನ ಭಾರತ ಓದಿಕೊಳ್ಳಬೇಕಿರುವ ಕೆಲ ಕವಿತೆಗಳು ಇಲ್ಲಿವೆ…

ಆಡು, ಮಾತಾಡು
ತುಟಿಗಳಿಗೆ ಅಂಕೆ ಇಲ್ಲ
ಆಡು, ಮಾತಾಡು
ನಾಲಗೆ ಇನ್ನೂ ನಿನ್ನದೇ
ಆಡು, ಮಾತಾಡು,
ದೇಹ ನಿನ್ನ ಸ್ವಂತದ್ದು
ಆಡು, ಮಾತಾಡು,
ಜೀವ ಹಾರಿ ಹೋಗಿಲ್ಲ
ಹಾಡು ಮಾತಾಡು

ನೋಡು, ಕಮ್ಮಾರನ ಕುಲುಮೆಯಲಿ
ಭುಗಿಲೆದ್ದಿದೆ ಜ್ವಾಲೆ, ಕೆಂಪೇರಿದೆ ಲೋಹ,
ಸಡಿಲಾಗುತ್ತಿದೆ ಬೀಗಗಳ ಬಾಯಿ
ಮುರಿಯುತ್ತಿದೆ ಸರಪಳಿಗಳ ಕೀಲು.
ದೇಹ ನಾಲಗೆ ಸತ್ತು ಹೋಗುವ ಮುಂಚಿನ
ಈ ಎರಡು ಗಳಿಗೆಯೇ ಸಾಕು
ಆಡು, ಮಾತಾಡು

ಸತ್ಯ ಇನ್ನೂ ಉಸಿರಾಡುತಿದೆ
ಆಡು, ಮಾತಾಡು
ಹೇಳಲೇಬೇಕಾದ್ದು, ಹೇಳಿಯೇಬಿಡು
ಆಡು ಮಾತಾಡು.
(ಫೈಜ್ ಅಹ್ಮದ್ ಫೈಜ್- ಅನುವಾದ- ಬಾಗೇಶ್ರೀ)

ಗಂಟೆ
ಫೋನಿನ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಬಾಗಿಲ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಅಲಾರಂ ಗಂಟೆ ಮೊಳಗಿತು
ನಾನೆಂದೆ- ನಾನು ಇಲ್ಲ ಕಣ್ರೀ
ಮತ್ತು ಮಗ್ಗುಲು ಬದಲಿಸಿ ನಿದ್ದೆ ಹೋದೆ.

ಒಂದು ದಿನ
ಮರಣದ ಗಂಟೆ ಮೊಳಗಿತು…
ಗಡಿಬಿಡಿ ಮಾಡಿ ಎದ್ದು ಕುಳಿತೆ
ನಾನಿರುವೆ.. ನಾನಿರುವೆ.. ನಾನಿರುವೆ..
ಮರಣ ಹೇಳಿತು-
ನಿದ್ದೆ ಹೋಗಯ್ಯಾ ಈಗ ಮಗ್ಗಲು ಬದಲಿಸಿ
(ಜ್ಞಾನಪೀಠ ಪ್ರಶಸ್ತಿ ವಿಜೇತ ಕವಿ ಕುಂವರ್ ನಾರಾಯಣ್)

ಅವರು ಮೊದಲು ಬಂದದ್ದು..
ಅವರು ಮೊದಲು ಬಂದದ್ದು ಕಮ್ಯೂನಿಸ್ಟರ ಎತ್ತಿ ಹಾಕಿಕೊಳ್ಳಲು
ಮತ್ತು ನಾನು ತುಟಿ ತೆರೆಯಲಿಲ್ಲ
ಯಾಕೆಂದ್ರೆ ನಾನು ಕಮ್ಯೂನಿಸ್ಟ್ ಆಗಿರಲಿಲ್ಲ

ನಂತರ ಅವರು ಬಂದರು ಸಮಾಜವಾದಿಗಳ ಎತ್ತಿ ಹಾಕಿಕೊಂಡು ಹೋಗಲು
ಮತ್ತು ನಾನು ಪ್ರತಿಭಟಿಸಲಿಲ್ಲ
ಯಾಕೆಂದ್ರೆ ನಾನು ಸಮಾಜವಾದಿ ಆಗಿರಲಿಲ್ಲ,

ಆನಂತರ ಅವರು ಬಂದರು ಕಾರ್ಮಿಕ ನಾಯಕರನ್ನು ಹಿಡಿದೊಯ್ಯಲು
ಮತ್ತು ನಾನು ಬಾಯಿ ಹೊಲಿದುಕೊಂಡಿದ್ದೆ
ಯಾಕೆಂದ್ರೆ ನಾನು ಕಾರ್ಮಿಕ ನಾಯಕನಾಗಿರಲಿಲ್ಲ

ತದನಂತರವೂ ಅವರು ಬಂದರು ಯಹೂದಿಗಳನ್ನು ಎಳೆದೊಯ್ಯಲು
ಮತ್ತು ಆಗಲೂ ನಾನು ದನಿ ಎತ್ತಲಿಲ್ಲ
ಯಾಕೆಂದ್ರೆ ನಾನು ಯಹೂದಿಯೇನೂ ಆಗಿರಲಿಲ್ಲ

ತರುವಾಯ ಅವರು ಬಂದೇ ಬಂದರು…
ನನ್ನನ್ನು ಕೈದು ಮಾಡಲು
ಮತ್ತು ಆಗ ಯಾರೂ ಉಳಿದಿರಲಿಲ್ಲ
ಕೊರಳೆತ್ತಲು, ನನ್ನ ಸಲುವಾಗಿ.
(- ಮಾರ್ಟಿನ್ ನಿಮೋಲರ್, ಹಿಟ್ಲರನ ಅಭಿಮಾನಿಯಾಗಿದ್ದು ವಿರೋಧಿಯಾಗಿ ಪರಿವರ್ತನೆಗೊಂಡ ಪಾದ್ರಿ )

ರೊಟ್ಟಿ ಮತ್ತು ಸಂಸತ್ತು
ಒಬ್ಬ ಮನುಷ್ಯ
ರೊಟ್ಟಿ ಬೇಯಿಸ್ತಾನೆ,
ಒಬ್ಬ ಮನುಷ್ಯ ರೊಟ್ಟಿ ತಿಂತಾನೆ
ಮೂರನೆಯ ಮನುಷ್ಯನೂ ಒಬ್ಬನಿದ್ದಾನೆ
ಅವನು ರೊಟ್ಟಿಯನ್ನು ಬೇಯಿಸುವುದೂ ಇಲ್ಲ ತಿನ್ನುವುದೂ ಇಲ್ಲ
ಅವನು ಕೇವಲ ರೊಟ್ಟಿಯೊಂದಿಗೆ ಆಟ ಆಡ್ತಾನೆ
ಯಾರು ಈ ಮೂರನೆಯ ಮನುಷ್ಯ?
ನನ್ನ ದೇಶದ ಸಂಸದ ಮೌನ ಧರಿಸಿದ್ದಾನೆ.
(-ಧೂಮಿಲ್)

ಅವರು ಭಯಪಡುತ್ತಾರೆ
ಅವರು ಭಯಪಡುತ್ತಾರೆ
ಯಾವುದರ ಬಗ್ಗೆ ಅವರಿಗೆ ಭಯ ಅವರಿಗೆ
ಧನ ದೌಲತ್ತು
ಸಿಡುಗುಂಡು, ಸುಡುಮದ್ದು, ಪೊಲೀಸ್ ಫೌಜು ಸರ್ವಸ್ವ ಇದ್ದಾಗ್ಯೂ
ಅವರು ಭಯ ಪಡುತ್ತಾರೆ
ಯಾಕೆಂದ್ರೆ ಒಂದಲ್ಲ ಒಂದು ದಿನ
ಹತಾರುಗಳಿರದ ಬರಿಗೈಗಳ ದೀನ ದರಿದ್ರ ಜನ
ಅವರನ್ನು ಕಂಡು
ಭಯಪಡುವುದ
ನಿಲ್ಲಿಸಿಬಿಡುತ್ತಾರೆ
(ಗೋರಖನಾಥ ಪಾಂಡೆ)

ಮುರಿದು ಸುರಿಯಲಿ ಸಾವಿರ ಸಿಡಿಲುಗಳು

ಬಡಿದು ಬೀಸಲಿ ಲಕ್ಷ ಬಿರುಗಾಳಿಗಳು

ಅರಳಿಯೇ ಅರಳಲಿವೆ ಅರಳಬೇಕಿರುವ ಹೂವುಗಳು

(ಸಾಹಿರ್ ಲೂಧಿಯಾನ್ವಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...